Homeಕರ್ನಾಟಕ’ತಾನೂ ಕೃಷಿಕ’ ಎಂದು ಫೋಟೊ ಫೋಸು ನೀಡಿ ಹಾಸ್ಯಕ್ಕೊಳಗಾದ ಕೃಷಿ ಸಚಿವ ಬಿ.ಸಿ. ಪಾಟಿಲ್!

’ತಾನೂ ಕೃಷಿಕ’ ಎಂದು ಫೋಟೊ ಫೋಸು ನೀಡಿ ಹಾಸ್ಯಕ್ಕೊಳಗಾದ ಕೃಷಿ ಸಚಿವ ಬಿ.ಸಿ. ಪಾಟಿಲ್!

- Advertisement -
- Advertisement -

ರಾಜ್ಯದ ಕೃಷಿ ಸಚಿವ ಬಿ.ಸಿ. ಪಾಟಿಲ್‌ ಮತ್ತು ತೋಟಗಾರಿಕೆ ಸಚಿವ ನಾರಾಯಣಗೌಡ ಇಬ್ಬರೂ ಜೊತೆ ಸೇರಿ ರೈತರಂತೆ ಜಮೀನಿಗಿಳಿದು ಕೃಷಿ ಕೆಲಸದಲ್ಲಿ ಭಾಗಿಯಾಗಿ, ಇಬ್ಬರೂ ಜಮೀನಲ್ಲಿ ಟ್ರ್ಯಾಕ್ಟ ರ್ ಚಾಲನೆ ಮಾಡಿದ್ದರು. ಇದೆಲ್ಲವನ್ನೂ ಮೀರಿಸುವಂತೆ ಸಚಿವ ಬಿ.ಸಿ. ಪಾಟೀಲ್ ‘ತಾನೂ ಕೃಷಿಕ’ ಎಂದು ತೋರಿಸಿಕೊಳ್ಳಲು‌ ತೆನೆಯೊಡೆದು ವಡೆಯಾಗಿದ್ದ ಭತ್ತದ ಗದ್ದೆಗೆ ಗೊಬ್ಬರ ಹಾಕಿದ್ದು, ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್‌ ಆಗುತ್ತಿದ್ದಾರೆ.

ಕೃಷಿ ಸಚಿವ ಬಿ.ಸಿ. ಪಾಟಿಲ್ “ರೈತರೊಂದಿಗೊಂದು ದಿನ” ಎಂಬ ವಿನೂತನ ಕಾರ್ಯಕ್ರಮ ಆರಂಭಿಸಿದ್ದು, ಇದಕ್ಕಾಗಿ ಮಂಡ್ಯ ಜಿಲ್ಲೆಯ ಮಡುವಿನ ಕೋಡಿ ಹಳ್ಳಿಯಲ್ಲಿ ಒಂದು ದಿನ ಕಳೆದಿದ್ದರು. ಈ ವೇಳೆ ಅಲ್ಲಿ ರೈತರಂತೆ ತಲೆಗೆ ಹಸಿರು ಪೇಟ ಸುತ್ತಿಕೊಂಡು, ರೈತರೊಬ್ಬರ ಗದ್ದೆಗಿಳಿದು ಗೊಬ್ಬರ ಹಾಕಿದ್ದಾರೆ.

ಇದನ್ನೂ ಓದಿ: ’ರೈತರೊಂದಿಗೊಂದು ದಿನ’ ಎನ್ನುತ್ತಿದ್ದಾರೆ ಕೃಷಿ ಸಚಿವ ಬಿ.ಸಿ.ಪಾಟೀಲ್!

ಆದರೆ ಇದೀಗ ಈ ಪೋಟೋ ವೈರಲಾಗಿದ್ದು, ನೆಟ್ಟಿಗರು ಫೋಟೋದಲ್ಲಿರುವ ಭತ್ತದ ಗದ್ದೆಯಲ್ಲಿನ ಭತ್ತವು ಕಟಾವಿಗೆ ಬಂದ ಭತ್ತವಾಗಿದೆ ಎಂದು ಗಮನಸೆಳೆದಿದ್ದಾರೆ. ಇದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು ವ್ಯಾಪಕ ಟ್ರೋಲ್‌ಗೆ ಒಳಗಾಗಿದ್ದಾರೆ.

ಭತ್ತದ ಬೆಳೆ ಹೊಡೆ ಕಡೆದು ಭತ್ತ ಕಟ್ಟುವ ಸಮಯದಲ್ಲಿ ಬೆಳೆಗೆ ಯಾವುದೇ ಗೊಬ್ಬರ ಹಾಕುವುದಿಲ್ಲ‌. ಈ ಬಗ್ಗೆ ಜ್ಞಾನವಿರದ ಇಬ್ಬರು ಸಚಿವರು ಮಾತ್ರ ತಾವು ‘ಕೃಷಿಕ’ ಅಥವಾ ರೈತರ ಮಕ್ಕಳು, ತಮಗೂ ಕೃಷಿ ಬಗ್ಗೆ ಜ್ಞಾನವಿದೆ. ನಾವು ಕೃಷಿ ಕೆಲಸ ಮಾಡುತ್ತೇವೆ ಎಂಬುದನ್ನು ನಿರೂಪಿಸಿಲು ಹೋಗಿ ಎಡವಟ್ಟು ಮಾಡಿಕೊಂಡಿದ್ದಾರೆ‌.

ಇವರ ಮೂರ್ಖತನದ ಫೋಟೋವನ್ನು ಜೆಡಿಎಸ್ ಕಾರ್ಯಕರ್ತರು ಸಾಮಾಜಿಕ ಜಾಲತಾಣ ಫೇಸ್ಬುಕ್ ನಲ್ಲಿ ಹಾಕಿ ವ್ಯಂಗ್ಯ ಮಾಡಿದ್ದಾರೆ.

ಇದನ್ನೂ ಓದಿ: ರೈತರನ್ನು ಸಭೆಗೆ ಕರೆದ ಕೇಂದ್ರದ ಕೃಷಿ ಸಚಿವರೇ ನಾಪತ್ತೆ: ಮಸೂದೆ ಹರಿದು ರೈತರ ಆಕ್ರೋಶ!

ಹೊಡೆ ಕಡೆಯುತ್ತಿರುವ ಭತ್ತಕ್ಕೆ ಗೊಬ್ಬರ ಹಾಕ್ತಿರೋ ಇಬ್ಬರು ಸಚಿವರಿಗೆ ಉತ್ತಮ ರೈತ ಪ್ರಶಸ್ತಿ ಕೊಡಬೇಕು ಎಂದಿರುವ ನೆಟ್ಟಿಗರು, ಹೊಡೆ ಕಡೆಯುತ್ತಿರುವ ಭತ್ತದ ಗದ್ದೆಗೆ ಗೊಬ್ಬರ ಹಾಕಿ ಫೋಟೋಗೆ ಫೋಸು ನೀಡಿರುವ ಇವರಿಬ್ಬರಿಗೂ ಕೃಷಿ ಬಗ್ಗೆ ಸಾಮಾನ್ಯ ಜ್ಞಾನ ಇಲ್ಲವೆಂಬದನ್ನು ತಾವೇ ನಿರೂಪಿಸಿಕೊಂಡಿದ್ದಾರೆ ಎಂದು ಹಾಸ್ಯ ಮಾಡಿದ್ದಾರೆ.ಇದನ್ನೂ ಓದಿ: ಬೆಂಬಲ ಬೆಲೆ ಹಿಂದೆಯೂ ಇರಲಿಲ್ಲ, ಈಗಲೂ ಕೊಡಲು ಸಾಧ್ಯವಿಲ್ಲ: ಕೇಂದ್ರ ಕೃಷಿ ಸಚಿವ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮಂಡ್ಯದಲ್ಲಿ ಕಾಯ್ರಕ್ರಮ ಮಾಡಿದ್ರೆ ಉತ್ತರ ಕರ್ನಾಟಕ ರೈತರು ಹೇಗ ತಿಳ್ಕೊಬೇಕೋ ??

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...