Homeಮುಖಪುಟ2017 ರ ನಂತರದ ಎಲ್ಲಾ ಮಾಸಿಕ ವರದಿಯನ್ನು ತೆಗೆದು ಹಾಕಿದ ರಕ್ಷಣಾ ಸಚಿವಾಲಯ!

2017 ರ ನಂತರದ ಎಲ್ಲಾ ಮಾಸಿಕ ವರದಿಯನ್ನು ತೆಗೆದು ಹಾಕಿದ ರಕ್ಷಣಾ ಸಚಿವಾಲಯ!

ಈ ಹಿಂದೆ ಜೂನ್ 2020 ರ ವರದಿಯನ್ನು ಆಗಸ್ಟ್‌ನಲ್ಲಿ ಕಿತ್ತು ಹಾಕಲಾಗಿತ್ತು, ಅದರಲ್ಲಿ ಮೇ 2020 ರ ನಂತರ ವಾಸ್ತವಿಕ ಗಡಿ ನಿಯಂತ್ರಣ ರೇಖೆಯ ಸಮೀಪದ ಗಲ್ವಾನ್ ಕಣಿವೆಯಲ್ಲಿ ಚೀನೀಯರ ಆಕ್ರಮಣ ಹೆಚ್ಚಾಗುತ್ತಿದೆ ಎಂದು ಉಲ್ಲೇಖಿಸಲಾಗಿತ್ತು.

- Advertisement -
- Advertisement -

ರಕ್ಷಣಾ ಸಚಿವಾಲಯದ 2017 ರ ನಂತರದ ಎಲ್ಲಾ ಮಾಸಿಕ ವರದಿಗಳನ್ನು ವೆಬ್‍ಸೈಟ್‍ನಿಂದ ತೆಗೆದು ಹಾಕಿದೆ ಎಂದು ವರದಿಯಾಗಿದೆ. ಈ ಹಿಂದೆ ಸಚಿವಾಲಯವು ಲಡಾಖ್‍ನಲ್ಲಿ ಚೀನಾದ ಆಕ್ರಮಣದ ಬಗ್ಗೆ ಸೂಚಿಸಿದ್ದ ಮಾಸಿಕ ವರದಿಯನ್ನು ತನ್ನ ವೆಬ್ ಸೈಟ್‍ನಿಂದ ತೆಗೆದು ಹಾಕಿತ್ತು.

ಇದೇಗ ಡಿಲೀಟ್ ಮಾಡಿರುವ ವರದಿಯಲ್ಲಿ 2017 ಡೋಕ್ಲಾಂ ಬಿಕ್ಕಟ್ಟಿನ ವರದಿಗಳೂ ಸೇರಿದೆ. ಇದರಲ್ಲಿ ಭಾರತ-ಚೀನಾ ಸೇನಾ ಪಡೆಗಳ ನಡುವಿನ ಉದ್ವಿಗ್ನತೆಯನ್ನು ಉಲ್ಲೇಖಿಸಿರಲಿಲ್ಲ. ಈ ವರದಿಗಳನ್ನು ಯಾಕೆ ತೆಗೆದು ಹಾಕಲಾಗಿದೆಯೆಂದು ರಕ್ಷಣಾ ಸಚಿವಾಲಯ ಅಧೀಕೃತವಾಗಿ ಹೇಳದಿದ್ದರೂ ಹಳೆಯ ವರದಿಗಳು ಈ ತಿಂಗಳ ಒಳಗೆ ಮತ್ತೆ ವೆಬ್‌ಸೈಟ್‍ನಲ್ಲಿ ಕಾಣಿಸಬಹುದು ಎಂದು ಸಚಿವಾಲಯದ ಮೂಲಗಳನ್ನು ಉಲ್ಲೇಖಿಸಿ ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಇದನ್ನೂ ಓದಿ:ಚೀನಾ ಭಾರತದ ಭೂಪ್ರದೇಶ ಅತಿಕ್ರಮಿಸಿದೆಯೆಂದು ಒಪ್ಪಿಕೊಂಡ ರಕ್ಷಣಾ ಸಚಿವಾಲಯ: ದಾಖಲೆ ಡಿಲಿಟ್!

ವರದಿಗಳನ್ನು ಹೆಚ್ಚು ವಿಸ್ತೃತ ಹಾಗೂ ಸಮಗ್ರಗೊಳಿಸುವ ಉದ್ದೇಶದಿಂದ ಹೀಗೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆಯಾದರೂ ಈ ವರದಿಗಳು ಪ್ರಮುಖ ಘಟನಾವಳಿಗಳಾದ ಬಾಲಾಕೋಟ್ ವಾಯುದಾಳಿ, ಭಾರತ-ಪಾಕಿಸ್ತಾನದ ನಡುವೆ ನಂತರ ಉಂಟಾದ ಸಂಘರ್ಷಮಯ ವಾತಾವರಣ ಹಾಗೂ ಡೋಕ್ಲಾಂ ಸ್ಥಿತಿಯ ಕುರಿತು ಮೌನ ವಹಿಸಿವೆ.

ಈ ಹಿಂದೆ ಜೂನ್ 2020 ರ ವರದಿಯನ್ನು ಆಗಸ್ಟ್‌ನಲ್ಲಿ ಕಿತ್ತು ಹಾಕಲಾಗಿತ್ತು. ಆ ವರದಿಯಲ್ಲಿ ಮೇ 2020 ರ ನಂತರ ವಾಸ್ತವಿಕ ಗಡಿ ನಿಯಂತ್ರಣ ರೇಖೆಯ ಸಮೀಪದ ಗಲ್ವಾನ್ ಕಣಿವೆಯಲ್ಲಿ ಚೀನೀಯರ ಆಕ್ರಮಣ ಹೆಚ್ಚಾಗುತ್ತಿದೆ ಎಂದು ಉಲ್ಲೇಖಿಸಲಾಗಿತ್ತು. ಚೀನಾದೊಂದಿಗಿನ ನಿಲುವಿನ ಬಗ್ಗೆ ತೀವ್ರವಾಗಿ ಟೀಕಿಸುತ್ತಿದ್ದ ರಾಹುಲ್ ಗಾಂಧಿ ಡಿಲಿಟ್ ಮಾಡಿರುವ ವರದಿಯನ್ನು ಸೂಚಿಸಿ ಪ್ರಧಾನಿ ಯಾಕೆ ಸುಳ್ಳು ಹೇಳುತ್ತದ್ದಾರೆ ಎಂದು ಪ್ರಶ್ನಿಸಿದ್ದರು.

ಇದನ್ನೂ ಓದಿ:1962 ರ ನಂತರ ಇದೇ ಮೊದಲ ಬಾರಿಗೆ ಲಡಾಖ್‌ ಪರಿಸ್ಥಿತಿ ಅತ್ಯಂತ ಗಂಭೀರವಾಗಿದೆ; ಒಪ್ಪಿಕೊಂಡ ವಿದೇಶಾಂಗ ಸಚಿವ

ವಿಡಿಯೋ:

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...