Homeಮುಖಪುಟ2017 ರ ನಂತರದ ಎಲ್ಲಾ ಮಾಸಿಕ ವರದಿಯನ್ನು ತೆಗೆದು ಹಾಕಿದ ರಕ್ಷಣಾ ಸಚಿವಾಲಯ!

2017 ರ ನಂತರದ ಎಲ್ಲಾ ಮಾಸಿಕ ವರದಿಯನ್ನು ತೆಗೆದು ಹಾಕಿದ ರಕ್ಷಣಾ ಸಚಿವಾಲಯ!

ಈ ಹಿಂದೆ ಜೂನ್ 2020 ರ ವರದಿಯನ್ನು ಆಗಸ್ಟ್‌ನಲ್ಲಿ ಕಿತ್ತು ಹಾಕಲಾಗಿತ್ತು, ಅದರಲ್ಲಿ ಮೇ 2020 ರ ನಂತರ ವಾಸ್ತವಿಕ ಗಡಿ ನಿಯಂತ್ರಣ ರೇಖೆಯ ಸಮೀಪದ ಗಲ್ವಾನ್ ಕಣಿವೆಯಲ್ಲಿ ಚೀನೀಯರ ಆಕ್ರಮಣ ಹೆಚ್ಚಾಗುತ್ತಿದೆ ಎಂದು ಉಲ್ಲೇಖಿಸಲಾಗಿತ್ತು.

- Advertisement -
- Advertisement -

ರಕ್ಷಣಾ ಸಚಿವಾಲಯದ 2017 ರ ನಂತರದ ಎಲ್ಲಾ ಮಾಸಿಕ ವರದಿಗಳನ್ನು ವೆಬ್‍ಸೈಟ್‍ನಿಂದ ತೆಗೆದು ಹಾಕಿದೆ ಎಂದು ವರದಿಯಾಗಿದೆ. ಈ ಹಿಂದೆ ಸಚಿವಾಲಯವು ಲಡಾಖ್‍ನಲ್ಲಿ ಚೀನಾದ ಆಕ್ರಮಣದ ಬಗ್ಗೆ ಸೂಚಿಸಿದ್ದ ಮಾಸಿಕ ವರದಿಯನ್ನು ತನ್ನ ವೆಬ್ ಸೈಟ್‍ನಿಂದ ತೆಗೆದು ಹಾಕಿತ್ತು.

ಇದೇಗ ಡಿಲೀಟ್ ಮಾಡಿರುವ ವರದಿಯಲ್ಲಿ 2017 ಡೋಕ್ಲಾಂ ಬಿಕ್ಕಟ್ಟಿನ ವರದಿಗಳೂ ಸೇರಿದೆ. ಇದರಲ್ಲಿ ಭಾರತ-ಚೀನಾ ಸೇನಾ ಪಡೆಗಳ ನಡುವಿನ ಉದ್ವಿಗ್ನತೆಯನ್ನು ಉಲ್ಲೇಖಿಸಿರಲಿಲ್ಲ. ಈ ವರದಿಗಳನ್ನು ಯಾಕೆ ತೆಗೆದು ಹಾಕಲಾಗಿದೆಯೆಂದು ರಕ್ಷಣಾ ಸಚಿವಾಲಯ ಅಧೀಕೃತವಾಗಿ ಹೇಳದಿದ್ದರೂ ಹಳೆಯ ವರದಿಗಳು ಈ ತಿಂಗಳ ಒಳಗೆ ಮತ್ತೆ ವೆಬ್‌ಸೈಟ್‍ನಲ್ಲಿ ಕಾಣಿಸಬಹುದು ಎಂದು ಸಚಿವಾಲಯದ ಮೂಲಗಳನ್ನು ಉಲ್ಲೇಖಿಸಿ ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಇದನ್ನೂ ಓದಿ:ಚೀನಾ ಭಾರತದ ಭೂಪ್ರದೇಶ ಅತಿಕ್ರಮಿಸಿದೆಯೆಂದು ಒಪ್ಪಿಕೊಂಡ ರಕ್ಷಣಾ ಸಚಿವಾಲಯ: ದಾಖಲೆ ಡಿಲಿಟ್!

ವರದಿಗಳನ್ನು ಹೆಚ್ಚು ವಿಸ್ತೃತ ಹಾಗೂ ಸಮಗ್ರಗೊಳಿಸುವ ಉದ್ದೇಶದಿಂದ ಹೀಗೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆಯಾದರೂ ಈ ವರದಿಗಳು ಪ್ರಮುಖ ಘಟನಾವಳಿಗಳಾದ ಬಾಲಾಕೋಟ್ ವಾಯುದಾಳಿ, ಭಾರತ-ಪಾಕಿಸ್ತಾನದ ನಡುವೆ ನಂತರ ಉಂಟಾದ ಸಂಘರ್ಷಮಯ ವಾತಾವರಣ ಹಾಗೂ ಡೋಕ್ಲಾಂ ಸ್ಥಿತಿಯ ಕುರಿತು ಮೌನ ವಹಿಸಿವೆ.

ಈ ಹಿಂದೆ ಜೂನ್ 2020 ರ ವರದಿಯನ್ನು ಆಗಸ್ಟ್‌ನಲ್ಲಿ ಕಿತ್ತು ಹಾಕಲಾಗಿತ್ತು. ಆ ವರದಿಯಲ್ಲಿ ಮೇ 2020 ರ ನಂತರ ವಾಸ್ತವಿಕ ಗಡಿ ನಿಯಂತ್ರಣ ರೇಖೆಯ ಸಮೀಪದ ಗಲ್ವಾನ್ ಕಣಿವೆಯಲ್ಲಿ ಚೀನೀಯರ ಆಕ್ರಮಣ ಹೆಚ್ಚಾಗುತ್ತಿದೆ ಎಂದು ಉಲ್ಲೇಖಿಸಲಾಗಿತ್ತು. ಚೀನಾದೊಂದಿಗಿನ ನಿಲುವಿನ ಬಗ್ಗೆ ತೀವ್ರವಾಗಿ ಟೀಕಿಸುತ್ತಿದ್ದ ರಾಹುಲ್ ಗಾಂಧಿ ಡಿಲಿಟ್ ಮಾಡಿರುವ ವರದಿಯನ್ನು ಸೂಚಿಸಿ ಪ್ರಧಾನಿ ಯಾಕೆ ಸುಳ್ಳು ಹೇಳುತ್ತದ್ದಾರೆ ಎಂದು ಪ್ರಶ್ನಿಸಿದ್ದರು.

ಇದನ್ನೂ ಓದಿ:1962 ರ ನಂತರ ಇದೇ ಮೊದಲ ಬಾರಿಗೆ ಲಡಾಖ್‌ ಪರಿಸ್ಥಿತಿ ಅತ್ಯಂತ ಗಂಭೀರವಾಗಿದೆ; ಒಪ್ಪಿಕೊಂಡ ವಿದೇಶಾಂಗ ಸಚಿವ

ವಿಡಿಯೋ:

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...