Homeಮುಖಪುಟ2017 ರ ನಂತರದ ಎಲ್ಲಾ ಮಾಸಿಕ ವರದಿಯನ್ನು ತೆಗೆದು ಹಾಕಿದ ರಕ್ಷಣಾ ಸಚಿವಾಲಯ!

2017 ರ ನಂತರದ ಎಲ್ಲಾ ಮಾಸಿಕ ವರದಿಯನ್ನು ತೆಗೆದು ಹಾಕಿದ ರಕ್ಷಣಾ ಸಚಿವಾಲಯ!

ಈ ಹಿಂದೆ ಜೂನ್ 2020 ರ ವರದಿಯನ್ನು ಆಗಸ್ಟ್‌ನಲ್ಲಿ ಕಿತ್ತು ಹಾಕಲಾಗಿತ್ತು, ಅದರಲ್ಲಿ ಮೇ 2020 ರ ನಂತರ ವಾಸ್ತವಿಕ ಗಡಿ ನಿಯಂತ್ರಣ ರೇಖೆಯ ಸಮೀಪದ ಗಲ್ವಾನ್ ಕಣಿವೆಯಲ್ಲಿ ಚೀನೀಯರ ಆಕ್ರಮಣ ಹೆಚ್ಚಾಗುತ್ತಿದೆ ಎಂದು ಉಲ್ಲೇಖಿಸಲಾಗಿತ್ತು.

- Advertisement -
- Advertisement -

ರಕ್ಷಣಾ ಸಚಿವಾಲಯದ 2017 ರ ನಂತರದ ಎಲ್ಲಾ ಮಾಸಿಕ ವರದಿಗಳನ್ನು ವೆಬ್‍ಸೈಟ್‍ನಿಂದ ತೆಗೆದು ಹಾಕಿದೆ ಎಂದು ವರದಿಯಾಗಿದೆ. ಈ ಹಿಂದೆ ಸಚಿವಾಲಯವು ಲಡಾಖ್‍ನಲ್ಲಿ ಚೀನಾದ ಆಕ್ರಮಣದ ಬಗ್ಗೆ ಸೂಚಿಸಿದ್ದ ಮಾಸಿಕ ವರದಿಯನ್ನು ತನ್ನ ವೆಬ್ ಸೈಟ್‍ನಿಂದ ತೆಗೆದು ಹಾಕಿತ್ತು.

ಇದೇಗ ಡಿಲೀಟ್ ಮಾಡಿರುವ ವರದಿಯಲ್ಲಿ 2017 ಡೋಕ್ಲಾಂ ಬಿಕ್ಕಟ್ಟಿನ ವರದಿಗಳೂ ಸೇರಿದೆ. ಇದರಲ್ಲಿ ಭಾರತ-ಚೀನಾ ಸೇನಾ ಪಡೆಗಳ ನಡುವಿನ ಉದ್ವಿಗ್ನತೆಯನ್ನು ಉಲ್ಲೇಖಿಸಿರಲಿಲ್ಲ. ಈ ವರದಿಗಳನ್ನು ಯಾಕೆ ತೆಗೆದು ಹಾಕಲಾಗಿದೆಯೆಂದು ರಕ್ಷಣಾ ಸಚಿವಾಲಯ ಅಧೀಕೃತವಾಗಿ ಹೇಳದಿದ್ದರೂ ಹಳೆಯ ವರದಿಗಳು ಈ ತಿಂಗಳ ಒಳಗೆ ಮತ್ತೆ ವೆಬ್‌ಸೈಟ್‍ನಲ್ಲಿ ಕಾಣಿಸಬಹುದು ಎಂದು ಸಚಿವಾಲಯದ ಮೂಲಗಳನ್ನು ಉಲ್ಲೇಖಿಸಿ ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಇದನ್ನೂ ಓದಿ:ಚೀನಾ ಭಾರತದ ಭೂಪ್ರದೇಶ ಅತಿಕ್ರಮಿಸಿದೆಯೆಂದು ಒಪ್ಪಿಕೊಂಡ ರಕ್ಷಣಾ ಸಚಿವಾಲಯ: ದಾಖಲೆ ಡಿಲಿಟ್!

ವರದಿಗಳನ್ನು ಹೆಚ್ಚು ವಿಸ್ತೃತ ಹಾಗೂ ಸಮಗ್ರಗೊಳಿಸುವ ಉದ್ದೇಶದಿಂದ ಹೀಗೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆಯಾದರೂ ಈ ವರದಿಗಳು ಪ್ರಮುಖ ಘಟನಾವಳಿಗಳಾದ ಬಾಲಾಕೋಟ್ ವಾಯುದಾಳಿ, ಭಾರತ-ಪಾಕಿಸ್ತಾನದ ನಡುವೆ ನಂತರ ಉಂಟಾದ ಸಂಘರ್ಷಮಯ ವಾತಾವರಣ ಹಾಗೂ ಡೋಕ್ಲಾಂ ಸ್ಥಿತಿಯ ಕುರಿತು ಮೌನ ವಹಿಸಿವೆ.

ಈ ಹಿಂದೆ ಜೂನ್ 2020 ರ ವರದಿಯನ್ನು ಆಗಸ್ಟ್‌ನಲ್ಲಿ ಕಿತ್ತು ಹಾಕಲಾಗಿತ್ತು. ಆ ವರದಿಯಲ್ಲಿ ಮೇ 2020 ರ ನಂತರ ವಾಸ್ತವಿಕ ಗಡಿ ನಿಯಂತ್ರಣ ರೇಖೆಯ ಸಮೀಪದ ಗಲ್ವಾನ್ ಕಣಿವೆಯಲ್ಲಿ ಚೀನೀಯರ ಆಕ್ರಮಣ ಹೆಚ್ಚಾಗುತ್ತಿದೆ ಎಂದು ಉಲ್ಲೇಖಿಸಲಾಗಿತ್ತು. ಚೀನಾದೊಂದಿಗಿನ ನಿಲುವಿನ ಬಗ್ಗೆ ತೀವ್ರವಾಗಿ ಟೀಕಿಸುತ್ತಿದ್ದ ರಾಹುಲ್ ಗಾಂಧಿ ಡಿಲಿಟ್ ಮಾಡಿರುವ ವರದಿಯನ್ನು ಸೂಚಿಸಿ ಪ್ರಧಾನಿ ಯಾಕೆ ಸುಳ್ಳು ಹೇಳುತ್ತದ್ದಾರೆ ಎಂದು ಪ್ರಶ್ನಿಸಿದ್ದರು.

ಇದನ್ನೂ ಓದಿ:1962 ರ ನಂತರ ಇದೇ ಮೊದಲ ಬಾರಿಗೆ ಲಡಾಖ್‌ ಪರಿಸ್ಥಿತಿ ಅತ್ಯಂತ ಗಂಭೀರವಾಗಿದೆ; ಒಪ್ಪಿಕೊಂಡ ವಿದೇಶಾಂಗ ಸಚಿವ

ವಿಡಿಯೋ:

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...