Homeಮುಖಪುಟಸಾಧನೆಗಳ ಪಟ್ಟಿಯಲ್ಲಿ ಸಿಎಎ ಉಲ್ಲೇಖಿಸದ ಮಾಧ್ಯಮ ವಿಭಾಗವನ್ನು ಎತ್ತಂಗಡಿ ಮಾಡಿದ ಗೃಹ ಸಚಿವಾಲಯ!

ಸಾಧನೆಗಳ ಪಟ್ಟಿಯಲ್ಲಿ ಸಿಎಎ ಉಲ್ಲೇಖಿಸದ ಮಾಧ್ಯಮ ವಿಭಾಗವನ್ನು ಎತ್ತಂಗಡಿ ಮಾಡಿದ ಗೃಹ ಸಚಿವಾಲಯ!

- Advertisement -
- Advertisement -

ಕಳೆದ ಒಂದು ವರ್ಷದಲ್ಲಿ ನರೇಂದ್ರ ಮೋದಿ ಸರ್ಕಾರದ ಸಾಧನೆಗಳನ್ನು ಪ್ರದರ್ಶಿಸಲು ಸಿದ್ಧಪಡಿಸಿದ ಟಿಪ್ಪಣಿಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಉಲ್ಲೇಖಿಸದಿರುವುದರಿಂದ ಗೃಹ ಸಚಿವಾಲಯದ ಮಾಧ್ಯಮ ವಿಭಾಗವನ್ನು ಎತ್ತಂಗಡಿ ಮಾಡಲಾಗಿದೆ ಎಂದು ದಿ ಪ್ರಿಂಟ್‌ ವರದಿ ಮಾಡಿದೆ.

ಈಗಿರುವ ತಂಡವನ್ನು ವರ್ಗಾವಣೆ ಮಾಡಿ ಹೊಸ ತಂಡಕ್ಕೆ ಮಾಧ್ಯಮ ನಿರ್ವಹನೆ ಜವಾಬ್ದಾರಿ ನೀಡಲಾಗಿದೆ. ಇದೀಗ ಸೆಂಟ್ರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್‌ನ ವಕ್ತಾರರಾಗಿದ್ದ ನಿತಿನ್ ವಕಾಂಕರ್‌ರವರು ಡೈರೆಕ್ಟರ್ ಜನರಲ್-ಬ್ಯೂರೋ ಆಫ್ ಔಟ್‌ರೀಚ್ ಮತ್ತು ಕಮ್ಯುನಿಕೇಷನ್ಸ್‌ನ ನೇತೃತ್ವ ವಹಿಸಲಿದ್ದಾರೆ.

ಮೂಲಗಳ ಪ್ರಕಾರ ಸರ್ಕಾರವು ಮಾಧ್ಯಮ ವಿಭಾಗದ ಸರಣಿ ದೋಷಗಳಿಂದಾಗಿ ಅದರ ಬಗ್ಗೆ ತೀವ್ರ ಅತೃಪ್ತಿ ಹೊಂದಿತ್ತು. ಇದೀಗ ಅದಕ್ಕೆ ತೆರೆ ಎಳೆದಿದ್ದು ಹೊಸ ತಂಡವನ್ನು ಆ ಸ್ಥಾನಕ್ಕೆ ಆಯ್ಕೆ ಮಾಡಲಾಗಿದೆ.

ಮೇ 28 ರಂದು ಗೃಹ ಸಚಿವಾಲಯದ ಅಧಿಕೃತ ಫೇಸ್‌ಬುಕ್ ಪುಟದಲ್ಲಿ ಆಕಸ್ಮಿಕವಾಗಿ ವಿಸ್ಕಿ ತುಂಬಿದ ಎರಡು ರಾಯಲ್ ಸ್ಟಾಗ್ ಮದ್ಯದ ಬಾಟಲಿಗಳು, ಕನ್ನಡಕ ಮತ್ತು ಕೆಲವು ತಿಂಡಿಗಳನ್ನು ಹೊಂದಿರುವ ಟೇಬಲ್‌ನ ಫೋಟೋವನ್ನು ಅಪ್‌ಲೋಡ್ ಮಾಡಲಾಗಿತ್ತು. ಪಶ್ಚಿಮ ಬಂಗಾಳದಲ್ಲಿ ಅಪ್ಪಳಿಸಿದ್ದ ಅಂಫಾನ್ ಚಂಡಮಾರುತದ ನಂತರ ಸರ್ಕಾರದ ಪುನರ್ವಸತಿ ಪ್ರಯತ್ನಗಳನ್ನು ತೋರಿಸುವ ಪೋಸ್ಟ್‌ನಲ್ಲಿ ಈ ಫೋಟೊ ಸಹ ಸೇರಿಕೊಂಡಿತ್ತು.

ಆಕಸ್ಮಿಕವಾಗಿ ಈ ಪೋಸ್ಟ್ ಅನ್ನು ಅಪ್‌ಲೋಡ್ ಮಾಡಿದ ಕಿರಿಯ ಉದ್ಯೋಗಿಗೆ ಇದಕ್ಕಾಗಿ ಲಿಖಿತ ವಿವರಣೆಯನ್ನು ನೀಡುವಂತೆ ಕೇಳಲಾಗಿದ್ದರೂ, ಸಾಮಾಜಿಕ ಮಾಧ್ಯಮವನ್ನು ಸರಿಯಾಗಿ ಮೇಲ್ವಿಚಾರಣೆ ಮಾಡದಿದ್ದಕ್ಕಾಗಿ ಸರ್ಕಾರವು ಮಾಧ್ಯಮ ವಿಭಾಗವನ್ನು ಎತ್ತಂಗಡಿ ಮಾಡಿದೆ ಎಂದು ಮೂಲಗಳು ತಿಳಿಸಿವೆ.

ತತ್‌ಕ್ಷಣದ ಕಾರಣವಾಗಿ ಸರ್ಕಾರದ ಸಾಧನೆಗಳ ಪಟ್ಟಿಯಲ್ಲಿ ಸಿಎಎ ಬಿಟ್ಟು ಹೋಗಿರುವುದು ಸರ್ಕಾರವನ್ನು ಕೆರಳಿಸಿದ್ದು, ಮಾಧ್ಯಮ ವಿಭಾಗದ ಬದಲಾವಣೆ ಪ್ರಮುಖ ಕಾರಣ ಎನ್ನಲಾಗಿದೆ. ಈ ಮೊದಲೇ ಕೆಲವು ಆಂತರಿಕ ಸಮಸ್ಯೆಗಳು ಇದ್ದವು, ಆದರೆ ಸಾಧನೆಗಳ ಪಟ್ಟಿಯಲ್ಲಿ ಸಿಎಎ ಅನ್ನು ಉಲ್ಲೇಖಿಸದಿರುವುದು ಒಂದು ಪ್ರಮುಖ ಅಂಶವಾಗಿರಬಹುದು ಎಂದು ಮೂಲವೊಂದು ತಿಳಿಸಿದೆ.


ಇದನ್ನೂ ಓದಿ: ಮದ್ಯ ಬಾಟಲಿಗಳ ಚಿತ್ರ ಪೋಸ್ಟ್‌ ಮಾಡಿದ ಗೃಹ ಸಚಿವಾಲಯ: ಟ್ವಿಟ್ಟರ್‌ನಲ್ಲಿ ಟ್ರೋಲ್‌ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಆಡಳಿತಾರೂಢರ ಆಸ್ಥಾನದಲ್ಲಿ ಪುಂಗಿದಾಸರಿಗೆ ಮಾತ್ರ ಸ್ತಾನ. ಇದು ಇಂದಿನ ನೀತಿ.

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...