Homeಕರ್ನಾಟಕಪುನೀತ್ ಕೆರೆಹಳ್ಳಿ ಮಾಡಿದ ಅವಾಂತರಗಳಿವು; ಕಡಿವಾಣ ಹಾಕದೆ ಸುಮ್ಮನೆ ಬಿಟ್ಟಿದ್ದೇಕೆ?

ಪುನೀತ್ ಕೆರೆಹಳ್ಳಿ ಮಾಡಿದ ಅವಾಂತರಗಳಿವು; ಕಡಿವಾಣ ಹಾಕದೆ ಸುಮ್ಮನೆ ಬಿಟ್ಟಿದ್ದೇಕೆ?

- Advertisement -
- Advertisement -

ಸಾಮಾಜಿಕ ಮಾಧ್ಯಮಗಳ ಮೂಲಕ ಪ್ರಚಾರಕ್ಕೆ ಬಂದವರಲ್ಲಿ ಪುನೀತ್‌ ಕೆರೆಹಳ್ಳಿ ಕೂಡ ಒಬ್ಬ. ಕಾರಿನಲ್ಲಿ ಕೂತು ಕಾಂಗ್ರೆಸ್‌ ನಾಯಕರನ್ನು ಏಕವಚನದಲ್ಲಿ ನಿಂದಿಸುತ್ತಾ, ಬಾಯಿಗೆ ಬಂದಂತೆ ಮಾತನಾಡುತ್ತಾ ಪ್ರಚಾರ ಪಡೆದ ಈ ಪುನೀತ್ ಮೂಲತಃ ಹಾಸನ ಜಿಲ್ಲೆಯವನು.

ತಾನು ಹಿಂದುತ್ವ ಬೆಂಬಲಿಗ, ಸಂಘಪರಿವಾರದ ಕಾರ್ಯಕರ್ತ ಎಂದು ಹೇಳಿಕೊಂಡು ಮುಂಚೂಣಿಗೆ ಬಂದ ಈತ ಮಾಡಿದ ಅವಾಂತರಗಳಿಗೆ ಲೆಕ್ಕವಿಲ್ಲ. ಇಂತಹ ಫ್ರಿಂಜ್‌ಗಳ ವಿರುದ್ಧ ಕಾನೂನು ಕ್ರಮ ಜರುಗಿಸದೆ ಬಿಟ್ಟಿದ್ದೇ ತಪ್ಪಾಯಿತೆಂಬುದು ಜನರ ಮಾತು. ಈಗ ಅಮಾಯಕ ಮುಸ್ಲಿಂ ವ್ಯಕ್ತಿಯೊಬ್ಬನ ಹತ್ಯೆಯಲ್ಲಿ ಪುನೀತ್‌ ಕೆರೆಹಳ್ಳಿ ಆರೋಪಿಯಾಗಿದ್ದಾನೆ.

ಪುನೀತ್‌ ಕೆರೆಹಳ್ಳಿ ಮೊದಮೊದಲು ಕಾರಿನಲ್ಲಿ ಕೂತು ಅರಚುತ್ತಿದ್ದನು. ಆಮೇಲೆ ಬಿಜೆಪಿ ನಾಯಕರೊಂದಿಗೆ ಗುರುಸಿಕೊಳ್ಳಲು ಆರಂಭಿಸಿದನು. ಮುಸ್ಲಿಂ ಸಮುದಾಯದ ವಿರುದ್ಧ ದ್ವೇಷ ಕಾರುತ್ತಾ ಪ್ರಚಾರ ಪಡೆದನು. “ಈತನಿಗೆ ಒಂದಿಷ್ಟು ಮಂದಿ ಗೂಗಲ್ ಪೇ, ಪೋನ್‌ ಪೇ ಮೂಲಕ ಧನಸಹಾಯ ಮಾಡಿ ಪ್ರೋತ್ಸಾಹಿಸಿದ್ದರಿಂದಲೇ ಕೋಮುದ್ವೇಷದ ಮಾತುಗಳನ್ನು ಹೆಚ್ಚಿಸಿಕೊಂಡ” ಎಂಬ ಆರೋಪಗಳಿವೆ. ಪುನೀತ್ ಕೆರೆಹಳ್ಳಿಯ ಇತಿಹಾಸ ಕೆದಕಿದರೆ ಆತ ಮಾಡಿರುವ ಅವಾಂತರಗಳು ಒಂದೊಂದಾಗಿ ಬಿಚ್ಚಿಕೊಳ್ಳುತ್ತವೆ.

ವೇಶ್ಯಾವಾಟಿಕೆಯಲ್ಲಿ ಕೆರೆಹಳ್ಳಿ ಹೆಸರು: 2013ರಲ್ಲಿಯೇ ಪುನಿತ್ ಕೆರೆಹಳ್ಳಿಯ ಹೆಸರು ವೇಶ್ಯಾವಾಟಿಕೆ ಪ್ರಕರಣವೊಂದರಲ್ಲಿ ಸಿಲುಕಿದೆ ಎಂಬುದು ಕಳೆದ ವರ್ಷ ಬಯಲಾಗಿತ್ತು. ಭರತ್ ಶೆಟ್ಟಿ ಎಂಬವರೊಂದಿಗೆ ಪುನೀತ್‌ ನಡೆಸಿದ್ದ ಸಂಭಾಷಣೆಯ ಆಡಿಯೊ ವೈರಲ್ ಆಗಿತ್ತು. 2013ರಲ್ಲಿ ದಾಖಲಾಗಿರುವ ಪ್ರಕರಣ ಇದಾಗಿದ್ದು, 2016ರಲ್ಲಿ ಹೋರಾಟಕ್ಕೆ ನಾನು ಬಂದಿದ್ದೇನೆ ಎಂದು ಪುನೀತ್ ಹೇಳಿಕೊಂಡಿದ್ದ.

ವೇಶ್ಯಾವಾಟಿಕೆಯ ಸಂಬಂಧ ಸುದ್ದಿ ಹರಿದಾಡಿದ್ದಾಗ ಪುನೀತ್‌ಗೆ ಆತನ ಸ್ನೇಹಿತನೊಬ್ಬ ಬುದ್ಧಿವಾದ ಹೇಳಿದ್ದ. ಆದರೆ ಆತನನ್ನೇ ಕೊಲೆ ಮಾಡಲು ಯತ್ನಿಸಿದ ಆರೋಪದ ಮೇಲೆ ಕೆರೆಹಳ್ಳಿ ವಿರುದ್ಧ ಮಳವಳ್ಳಿ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಬೇಗೂರು ಕೆರೆಗೆ ಕೋಮುವಾದದ ಬಣ್ಣ: ನ್ಯಾಯಾಲಯದ ಆದೇಶಗಳನ್ನು ಧಿಕ್ಕರಿಸಿ 2021ರ ಆಗಸ್ಟ್ 11ರಂದು ಬೇಗೂರು ಕೆರೆಯಲ್ಲಿ ಶಿವನ ಪ್ರತಿಮೆಯನ್ನು ಅನಾವರಣಗೊಳಿಸಿದ ಆರೋಪದ ಮೇಲೆ ಪುನಿತ್‌ ಕೆರೆಹಳ್ಳಿ ಮತ್ತು ಇತರರ ಮೇಲೆ ಪ್ರಕರಣ ದಾಖಲಾಗಿತ್ತು.

ಬಿಬಿಎಂಪಿಯು ಬೆಂಗಳೂರಿನ ಬೇಗೂರು ಕೆರೆಯ ಮಧ್ಯದಲ್ಲಿ ಪ್ರತಿಮೆಯನ್ನು ನಿರ್ಮಿಸುತ್ತಿರುವುದಕ್ಕೆ ಹೈಕೋರ್ಟ್ 2019 ರ ಆಗಸ್ಟ್‌ನಲ್ಲಿ ತಡೆ ನೀಡಿತ್ತು. ಕೆರೆಯ ಗಾತ್ರವನ್ನು ಕಡಿಮೆ ಮಾಡಲು ಮತ್ತು ಅದರಲ್ಲಿ ದ್ವೀಪಗಳನ್ನು ಮಾಡಲು ಬಿಬಿಎಂಪಿಗೆ ಅಧಿಕಾರವಿಲ್ಲ ಎಂದು ಅದು ಹೇಳಿತ್ತು. ಆದರೆ ಆಗಸ್ಟ್ 1 ರಿಂದ, ಬಿಜೆಪಿ ಬೆಂಬಲಿತ ಸಂಘಪರಿವಾದ ಕಾರ್ಯಕರ್ತರು, ಹೈಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿರುವ ‘ಪರಿಸರ ಉಳಿವಿನ ಪ್ರಕರಣವನ್ನು’ ಕೋಮುವಾದಿಕರಣಗೊಳಿಸಲು ನೋಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟರ್‌ಗಳನ್ನು ಹಂಚಿಕೊಂಡಿದ್ದರು.

ಶ್ರೀರಂಗಪಟ್ಟಣದಲ್ಲಿ ಕೋಮುದ್ವೇಷ ಹಬ್ಬಿಸಲು ಯತ್ನ: ಶ್ರೀರಂಗಪಟ್ಟಣದ ಜಾಮಿಯ ಮಸೀದಿ ಮೊದಲ ದೇವಾಲಯವಾಗಿತ್ತು ಎಂದು ವಿವಾದ ಸೃಷ್ಟಿಸಲು ಯತ್ನಿಸಿದವರಲ್ಲಿ ಕೆರೆಹಳ್ಳಿ ಕೂಡ ಒಬ್ಬ. ಇತಿಹಾಸವನ್ನು ಸರಿಯಾಗಿ ತಿಳಿಯದೆ ಗೊಂದಲ ಸೃಷ್ಟಿಸಿ, ಶಾಂತಿಯುತವಾಗಿರುವ ಶ್ರೀರಂಗಪಟ್ಟಣದಲ್ಲಿ ಬೆಂಕಿ ಹಚ್ಚಲು ಕೆರೆಹಳ್ಳಿಯಂತಹ ಫ್ರಿಂಜ್‌ಗಳು ಯತ್ನಿಸಿದ್ದರು. (ವಿವಾದದ ಕುರಿತು ಓದಲು ಇಲ್ಲಿ ಕ್ಲಿಕ್ ಮಾಡಿರಿ)

ಟಿಪ್ಪು ಪ್ಲೆಕ್ಸ್‌ ಹರಿದು ರಾದ್ಧಾಂತ: ಸಂವಿಧಾನ ಬಾಹಿರ ಕೃತ್ಯಗಳಲ್ಲಿ ಸಕ್ರಿಯವಾಗಿರುವ ಕೆರೆಹಳ್ಳಿ, 2022ರ ಆಗಸ್ಟ್‌ನಲ್ಲಿ ಟಿಪ್ಪು ಪ್ಲೆಕ್ಸ್ ಹರಿದು ರಾದ್ಧಾಂತ ಮಾಡಿದ್ದನು. ಕಾಂಗ್ರೆಸ್ ಪಕ್ಷದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಸ್ವಾತಂತ್ರ್ಯ ನಡಿಗೆ ಕಾರ್ಯಕ್ರಮದ ಭಾಗವಾಗಿ ಬೆಂಗಳೂರಿನಲ್ಲಿ ಅಳವಡಿಸಿದ್ದ ಟಿಪ್ಪು ಸುಲ್ತಾನ್ ಬ್ಯಾನರ್ ಹರಿದು ಕೋಮು ಸೌಹಾರ್ದತೆಗೆ ಧಕ್ಕೆ ತಂದಿದ್ದಕ್ಕೆ ಪುನೀತ್ ಕೆರೆಹಳ್ಳಿ ಸೇರಿ ಮೂವರನ್ನು ಪೊಲೀಸರು ಬಂಧಿಸಿದ್ದರು.

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಸ್ವಾತಂತ್ರ್ಯ ನಡಿಗೆ ಕಾರ್ಯಕ್ರಮ ಹಮ್ಮಿಕೊಂಡಿದ್ದ ಕಾಂಗ್ರೆಸ್ ಪಕ್ಷವು, ಕಾರ್ಪೋರೇಷನ್, ಹಡ್ಸನ್ ಸರ್ಕಲ್, ನೃಪತುಂಗ ರಸ್ತೆ ಸೇರಿದಂತೆ ಹಲವೆಡೆ ಸ್ವಾತಂತ್ರ್ಯ ಹೋರಾಟಗಾರರ ಬ್ಯಾನರ್, ಫ್ಲೆಕ್ಸ್ ಹಾಕಿತ್ತು. ಮಹಾತ್ಮ ಗಾಂಧೀಜಿ, ನೆಹರೂ, ಟಿಪ್ಪು ಸುಲ್ತಾನ್, ಭಗತ್ ಸಿಂಗ್, ಅಂಬೇಡ್ಕರ್ ಸೇರಿದಂತೆ ಹಲವು ರಾಷ್ಟ್ರೀಯ ನಾಯಕರ ಫ್ಲೆಕ್ಸ್‌ಗಳು ರಾರಾಜಿಸುತ್ತಿದ್ದವು. ಶನಿವಾರ ರಾತ್ರಿ ಹಡ್ಸನ್ ವೃತ್ತಕ್ಕೆ ನುಗ್ಗಿದ್ದ ಪುನೀತ್ ಕೆರೆಹಳ್ಳಿ ಸೇರಿದಂತೆ ಹಲವರು ಟಿಪ್ಪು ಸುಲ್ತಾನ್ ಫ್ಲೆಕ್ಸ್ ಕಿತ್ತು ವಿಡಿಯೋ ಮಾಡಿ ಹಂಚಿಕೊಂಡಿದ್ದರು.

ಜಟ್ಕಾ ಕಟ್‌, ಹಲಾಲ್‌ ಕಟ್‌ ವಿವಾದ: ಶಾಂತಿಯುತವಾಗಿ ನಡೆಯುತ್ತಿದ್ದ ಹಬ್ಬಗಳಲ್ಲಿ ಗಲಭೆಗಳನ್ನು ಸೃಷ್ಟಿಸಲು ಯತ್ನಿಸಿದವರ ಪೈಕಿ ಪುನೀತ್‌ ಕೆರೆಹಳ್ಳಿಯೂ ಒಬ್ಬ. ಮುಸ್ಲಿಮರ ಬಳಿ ವ್ಯಾಪಾರ ಮಾಡಬೇಡಿ, ಮಾಂಸ ಖರೀದಿ ಮಾಡಬೇಡಿ ಎಂದು ಪ್ರಚಾರ ಮಾಡುತ್ತಾ ಕೋಮುದ್ವೇಷವನ್ನು ಹಬ್ಬಿಸಲು ಯುಗಾದಿ ಸಂದರ್ಭ ಬಂದಾಗಲೆಲ್ಲ ಪುನೀತ್ ಕೆರೆಹಳ್ಳಿ ಮತ್ತು ಸಂಗಡಿಗರು ನಿರಂತರ ಪ್ರಯತ್ನ ಮಾಡುತ್ತಾ ಬಂದಿದ್ದಾರೆ. ಇದಕ್ಕೆ ಸಾರ್ವಜನಿಕರು ವಿರೋಧವನ್ನೂ ವ್ಯಕ್ತಪಡಿಸುತ್ತಿದ್ದಾರೆ.

ಗೋರಕ್ಷಣೆ ಹೆಸರಲ್ಲಿ ದಾಂಧಲೆ: ರಾಷ್ಟ್ರ ರಕ್ಷಣಾ ಪಡೆ ಎಂಬ ಕೂಟವನ್ನು ರಚಿಸಿಕೊಂಡು ಗೋರಕ್ಷಣೆ ಮಾಡುತ್ತೇನೆ ಎಂದು ಸಕ್ರಿಯವಾಗಿರುವ ಕೆರೆಹಳ್ಳಿ ಮತ್ತು ಸಹಚರರು ಈಗ ಕೊಲೆ ಪ್ರಕರಣದಲ್ಲಿ ಸಿಲುಕಿಬಿದ್ದಿದ್ದಾರೆ. ಅಮಾಯಕ ವ್ಯಕ್ತಿಗೆ ಲಕ್ಷಾಂತರ ರೂಪಾಯಿ ಬೇಡಿಕೆಯನ್ನೂ ಇವರು ಇಟ್ಟಿದ್ದರು, ಕೊಡಲು ಒಪ್ಪದೇ ಇದ್ದಿದ್ದರಿಂದ ಕೊಲೆ ಮಾಡಿದ್ದಾರೆಂದು ಎಫ್‌ಐಆರ್‌ನಲ್ಲಿ ನಮೂದಿಸಲಾಗಿದೆ.

ರಾಜಸ್ಥಾನ- ಹರಿಯಾಣ ಗಡಿಯಲ್ಲಿ ಇಬ್ಬರು ಮುಸ್ಲಿಮರನ್ನು ಜೀವಂತವಾಗಿ ಸುಟ್ಟು ಹಾಕಿದ ಪ್ರಕರಣವನ್ನು ಈ ಘಟನೆ ನೆನಪಿಸಿದೆ. ಗೋವನ್ನು ಸಾಗಣೆ ಮಾಡುತ್ತಿದ್ದಾರೆಂದು ಆರೋಪಿಸಿ ಬಜರಂಗದಳದ ಮುಖಂಡರು ರಾಜಸ್ಥಾನ-ಹರಿಯಾಣ ಗಡಿಯಲ್ಲಿ ನಾಸಿರ್ ಮತ್ತು ಜುನೈದ್ ಅವರನ್ನು ಹತ್ಯೆ ಮಾಡಿದ್ದಾರೆಂಬುದು ಭಾರೀ ಚರ್ಚೆಯನ್ನು ಹುಟ್ಟು ಹಾಕಿದೆ. ಬಜರಂಗದಳದ ಮುಖಂಡನಾದ ಮೋನು ಮಾನೇಸರ್ ನೇತೃತ್ವದ ಗೋರಕ್ಷಣಾ ಪಡೆ, ಈ ರೀತಿಯ ಕಾನೂನು ಬಾಹಿರ ಕೃತ್ಯದಲ್ಲಿ ಭಾಗಿಯಾಗಿ ಅನೇಕ ವಿಡಿಯೊಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಅಪ್‌ಲೋಡ್ ಮಾಡುತ್ತಿತ್ತು. ಅದೇ ಮಾದರಿಯಲ್ಲಿ ಪುನಿತ್ ಕೆರೆಹಳ್ಳಿ ತನ್ನ ಫೇಸ್‌ಬುಕ್ ಖಾತೆಯಲ್ಲಿ ವಿಡಿಯೊಗಳನ್ನು ಅಪ್‌ಲೋಡ್ ಮಾಡುತ್ತ ಬಂದಿದ್ದಾನೆ. ನೈತಿಕ ಗೂಂಡಾಗಿರಿ ಮೆರೆಯುತ್ತಾ ಕಾನೂನು ಕೈಗೆತ್ತಿಕೊಂಡಿರುವುದು ಇಲ್ಲಿನ ವಿಡಿಯೊಗಳಿಂದ ಸ್ಪಷ್ಟವಾಗುತ್ತದೆ. ಪದೇ ಪದೇ ಪ್ರಕರಣಗಳನ್ನು ದಾಖಲಾಗುತ್ತಿದ್ದರೂ ಕಠಿಣ ಕ್ರಮಗಳನ್ನು ಜರುಗಿಸದ ಕಾರಣ ಮತ್ತೆ ಮತ್ತೆ ಪುನೀತ್ ಕೆರೆಹಳ್ಳಿ ಮತ್ತಷ್ಟು ಕ್ರೌರ್ಯಗಳನ್ನು ನಡೆಸುತ್ತಿದ್ದಾನೆಂಬ ಆರೋಪಗಳನ್ನು ಸುಲಭವಾಗಿ ತಳ್ಳಿಹಾಕಲು ಸಾಧ್ಯವಿಲ್ಲ.

ಆಡಳಿತರೂಢ ಬಿಜೆಪಿಯ ನಾಯಕರೊಂದಿಗೆ ಆತ ತೆಗೆಸಿಕೊಂಡಿರುವ ಫೋಟೋಗಳು ಹರಿದಾಡುತ್ತಿವೆ. ಪ್ರಭುತ್ವದ ಪೋಷಣೆ ತನಗಿದೆ ಎಂಬ ದಾಷ್ಟ್ಯವನ್ನು ಪುನೀತ್ ಕೆರೆಹಳ್ಳಿ ಥರದವರು ಮತ್ತೆ ಮತ್ತೆ ಪ್ರದರ್ಶಿಸುತ್ತಿದ್ದಾರೆಂಬುದು ಇದರಿಂದ ಸ್ಪಷ್ಟವಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...