Homeಕರ್ನಾಟಕಪುನೀತ್ ಕೆರೆಹಳ್ಳಿ ಮಾಡಿದ ಅವಾಂತರಗಳಿವು; ಕಡಿವಾಣ ಹಾಕದೆ ಸುಮ್ಮನೆ ಬಿಟ್ಟಿದ್ದೇಕೆ?

ಪುನೀತ್ ಕೆರೆಹಳ್ಳಿ ಮಾಡಿದ ಅವಾಂತರಗಳಿವು; ಕಡಿವಾಣ ಹಾಕದೆ ಸುಮ್ಮನೆ ಬಿಟ್ಟಿದ್ದೇಕೆ?

- Advertisement -
- Advertisement -

ಸಾಮಾಜಿಕ ಮಾಧ್ಯಮಗಳ ಮೂಲಕ ಪ್ರಚಾರಕ್ಕೆ ಬಂದವರಲ್ಲಿ ಪುನೀತ್‌ ಕೆರೆಹಳ್ಳಿ ಕೂಡ ಒಬ್ಬ. ಕಾರಿನಲ್ಲಿ ಕೂತು ಕಾಂಗ್ರೆಸ್‌ ನಾಯಕರನ್ನು ಏಕವಚನದಲ್ಲಿ ನಿಂದಿಸುತ್ತಾ, ಬಾಯಿಗೆ ಬಂದಂತೆ ಮಾತನಾಡುತ್ತಾ ಪ್ರಚಾರ ಪಡೆದ ಈ ಪುನೀತ್ ಮೂಲತಃ ಹಾಸನ ಜಿಲ್ಲೆಯವನು.

ತಾನು ಹಿಂದುತ್ವ ಬೆಂಬಲಿಗ, ಸಂಘಪರಿವಾರದ ಕಾರ್ಯಕರ್ತ ಎಂದು ಹೇಳಿಕೊಂಡು ಮುಂಚೂಣಿಗೆ ಬಂದ ಈತ ಮಾಡಿದ ಅವಾಂತರಗಳಿಗೆ ಲೆಕ್ಕವಿಲ್ಲ. ಇಂತಹ ಫ್ರಿಂಜ್‌ಗಳ ವಿರುದ್ಧ ಕಾನೂನು ಕ್ರಮ ಜರುಗಿಸದೆ ಬಿಟ್ಟಿದ್ದೇ ತಪ್ಪಾಯಿತೆಂಬುದು ಜನರ ಮಾತು. ಈಗ ಅಮಾಯಕ ಮುಸ್ಲಿಂ ವ್ಯಕ್ತಿಯೊಬ್ಬನ ಹತ್ಯೆಯಲ್ಲಿ ಪುನೀತ್‌ ಕೆರೆಹಳ್ಳಿ ಆರೋಪಿಯಾಗಿದ್ದಾನೆ.

ಪುನೀತ್‌ ಕೆರೆಹಳ್ಳಿ ಮೊದಮೊದಲು ಕಾರಿನಲ್ಲಿ ಕೂತು ಅರಚುತ್ತಿದ್ದನು. ಆಮೇಲೆ ಬಿಜೆಪಿ ನಾಯಕರೊಂದಿಗೆ ಗುರುಸಿಕೊಳ್ಳಲು ಆರಂಭಿಸಿದನು. ಮುಸ್ಲಿಂ ಸಮುದಾಯದ ವಿರುದ್ಧ ದ್ವೇಷ ಕಾರುತ್ತಾ ಪ್ರಚಾರ ಪಡೆದನು. “ಈತನಿಗೆ ಒಂದಿಷ್ಟು ಮಂದಿ ಗೂಗಲ್ ಪೇ, ಪೋನ್‌ ಪೇ ಮೂಲಕ ಧನಸಹಾಯ ಮಾಡಿ ಪ್ರೋತ್ಸಾಹಿಸಿದ್ದರಿಂದಲೇ ಕೋಮುದ್ವೇಷದ ಮಾತುಗಳನ್ನು ಹೆಚ್ಚಿಸಿಕೊಂಡ” ಎಂಬ ಆರೋಪಗಳಿವೆ. ಪುನೀತ್ ಕೆರೆಹಳ್ಳಿಯ ಇತಿಹಾಸ ಕೆದಕಿದರೆ ಆತ ಮಾಡಿರುವ ಅವಾಂತರಗಳು ಒಂದೊಂದಾಗಿ ಬಿಚ್ಚಿಕೊಳ್ಳುತ್ತವೆ.

ವೇಶ್ಯಾವಾಟಿಕೆಯಲ್ಲಿ ಕೆರೆಹಳ್ಳಿ ಹೆಸರು: 2013ರಲ್ಲಿಯೇ ಪುನಿತ್ ಕೆರೆಹಳ್ಳಿಯ ಹೆಸರು ವೇಶ್ಯಾವಾಟಿಕೆ ಪ್ರಕರಣವೊಂದರಲ್ಲಿ ಸಿಲುಕಿದೆ ಎಂಬುದು ಕಳೆದ ವರ್ಷ ಬಯಲಾಗಿತ್ತು. ಭರತ್ ಶೆಟ್ಟಿ ಎಂಬವರೊಂದಿಗೆ ಪುನೀತ್‌ ನಡೆಸಿದ್ದ ಸಂಭಾಷಣೆಯ ಆಡಿಯೊ ವೈರಲ್ ಆಗಿತ್ತು. 2013ರಲ್ಲಿ ದಾಖಲಾಗಿರುವ ಪ್ರಕರಣ ಇದಾಗಿದ್ದು, 2016ರಲ್ಲಿ ಹೋರಾಟಕ್ಕೆ ನಾನು ಬಂದಿದ್ದೇನೆ ಎಂದು ಪುನೀತ್ ಹೇಳಿಕೊಂಡಿದ್ದ.

ವೇಶ್ಯಾವಾಟಿಕೆಯ ಸಂಬಂಧ ಸುದ್ದಿ ಹರಿದಾಡಿದ್ದಾಗ ಪುನೀತ್‌ಗೆ ಆತನ ಸ್ನೇಹಿತನೊಬ್ಬ ಬುದ್ಧಿವಾದ ಹೇಳಿದ್ದ. ಆದರೆ ಆತನನ್ನೇ ಕೊಲೆ ಮಾಡಲು ಯತ್ನಿಸಿದ ಆರೋಪದ ಮೇಲೆ ಕೆರೆಹಳ್ಳಿ ವಿರುದ್ಧ ಮಳವಳ್ಳಿ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಬೇಗೂರು ಕೆರೆಗೆ ಕೋಮುವಾದದ ಬಣ್ಣ: ನ್ಯಾಯಾಲಯದ ಆದೇಶಗಳನ್ನು ಧಿಕ್ಕರಿಸಿ 2021ರ ಆಗಸ್ಟ್ 11ರಂದು ಬೇಗೂರು ಕೆರೆಯಲ್ಲಿ ಶಿವನ ಪ್ರತಿಮೆಯನ್ನು ಅನಾವರಣಗೊಳಿಸಿದ ಆರೋಪದ ಮೇಲೆ ಪುನಿತ್‌ ಕೆರೆಹಳ್ಳಿ ಮತ್ತು ಇತರರ ಮೇಲೆ ಪ್ರಕರಣ ದಾಖಲಾಗಿತ್ತು.

ಬಿಬಿಎಂಪಿಯು ಬೆಂಗಳೂರಿನ ಬೇಗೂರು ಕೆರೆಯ ಮಧ್ಯದಲ್ಲಿ ಪ್ರತಿಮೆಯನ್ನು ನಿರ್ಮಿಸುತ್ತಿರುವುದಕ್ಕೆ ಹೈಕೋರ್ಟ್ 2019 ರ ಆಗಸ್ಟ್‌ನಲ್ಲಿ ತಡೆ ನೀಡಿತ್ತು. ಕೆರೆಯ ಗಾತ್ರವನ್ನು ಕಡಿಮೆ ಮಾಡಲು ಮತ್ತು ಅದರಲ್ಲಿ ದ್ವೀಪಗಳನ್ನು ಮಾಡಲು ಬಿಬಿಎಂಪಿಗೆ ಅಧಿಕಾರವಿಲ್ಲ ಎಂದು ಅದು ಹೇಳಿತ್ತು. ಆದರೆ ಆಗಸ್ಟ್ 1 ರಿಂದ, ಬಿಜೆಪಿ ಬೆಂಬಲಿತ ಸಂಘಪರಿವಾದ ಕಾರ್ಯಕರ್ತರು, ಹೈಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿರುವ ‘ಪರಿಸರ ಉಳಿವಿನ ಪ್ರಕರಣವನ್ನು’ ಕೋಮುವಾದಿಕರಣಗೊಳಿಸಲು ನೋಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟರ್‌ಗಳನ್ನು ಹಂಚಿಕೊಂಡಿದ್ದರು.

ಶ್ರೀರಂಗಪಟ್ಟಣದಲ್ಲಿ ಕೋಮುದ್ವೇಷ ಹಬ್ಬಿಸಲು ಯತ್ನ: ಶ್ರೀರಂಗಪಟ್ಟಣದ ಜಾಮಿಯ ಮಸೀದಿ ಮೊದಲ ದೇವಾಲಯವಾಗಿತ್ತು ಎಂದು ವಿವಾದ ಸೃಷ್ಟಿಸಲು ಯತ್ನಿಸಿದವರಲ್ಲಿ ಕೆರೆಹಳ್ಳಿ ಕೂಡ ಒಬ್ಬ. ಇತಿಹಾಸವನ್ನು ಸರಿಯಾಗಿ ತಿಳಿಯದೆ ಗೊಂದಲ ಸೃಷ್ಟಿಸಿ, ಶಾಂತಿಯುತವಾಗಿರುವ ಶ್ರೀರಂಗಪಟ್ಟಣದಲ್ಲಿ ಬೆಂಕಿ ಹಚ್ಚಲು ಕೆರೆಹಳ್ಳಿಯಂತಹ ಫ್ರಿಂಜ್‌ಗಳು ಯತ್ನಿಸಿದ್ದರು. (ವಿವಾದದ ಕುರಿತು ಓದಲು ಇಲ್ಲಿ ಕ್ಲಿಕ್ ಮಾಡಿರಿ)

ಟಿಪ್ಪು ಪ್ಲೆಕ್ಸ್‌ ಹರಿದು ರಾದ್ಧಾಂತ: ಸಂವಿಧಾನ ಬಾಹಿರ ಕೃತ್ಯಗಳಲ್ಲಿ ಸಕ್ರಿಯವಾಗಿರುವ ಕೆರೆಹಳ್ಳಿ, 2022ರ ಆಗಸ್ಟ್‌ನಲ್ಲಿ ಟಿಪ್ಪು ಪ್ಲೆಕ್ಸ್ ಹರಿದು ರಾದ್ಧಾಂತ ಮಾಡಿದ್ದನು. ಕಾಂಗ್ರೆಸ್ ಪಕ್ಷದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಸ್ವಾತಂತ್ರ್ಯ ನಡಿಗೆ ಕಾರ್ಯಕ್ರಮದ ಭಾಗವಾಗಿ ಬೆಂಗಳೂರಿನಲ್ಲಿ ಅಳವಡಿಸಿದ್ದ ಟಿಪ್ಪು ಸುಲ್ತಾನ್ ಬ್ಯಾನರ್ ಹರಿದು ಕೋಮು ಸೌಹಾರ್ದತೆಗೆ ಧಕ್ಕೆ ತಂದಿದ್ದಕ್ಕೆ ಪುನೀತ್ ಕೆರೆಹಳ್ಳಿ ಸೇರಿ ಮೂವರನ್ನು ಪೊಲೀಸರು ಬಂಧಿಸಿದ್ದರು.

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಸ್ವಾತಂತ್ರ್ಯ ನಡಿಗೆ ಕಾರ್ಯಕ್ರಮ ಹಮ್ಮಿಕೊಂಡಿದ್ದ ಕಾಂಗ್ರೆಸ್ ಪಕ್ಷವು, ಕಾರ್ಪೋರೇಷನ್, ಹಡ್ಸನ್ ಸರ್ಕಲ್, ನೃಪತುಂಗ ರಸ್ತೆ ಸೇರಿದಂತೆ ಹಲವೆಡೆ ಸ್ವಾತಂತ್ರ್ಯ ಹೋರಾಟಗಾರರ ಬ್ಯಾನರ್, ಫ್ಲೆಕ್ಸ್ ಹಾಕಿತ್ತು. ಮಹಾತ್ಮ ಗಾಂಧೀಜಿ, ನೆಹರೂ, ಟಿಪ್ಪು ಸುಲ್ತಾನ್, ಭಗತ್ ಸಿಂಗ್, ಅಂಬೇಡ್ಕರ್ ಸೇರಿದಂತೆ ಹಲವು ರಾಷ್ಟ್ರೀಯ ನಾಯಕರ ಫ್ಲೆಕ್ಸ್‌ಗಳು ರಾರಾಜಿಸುತ್ತಿದ್ದವು. ಶನಿವಾರ ರಾತ್ರಿ ಹಡ್ಸನ್ ವೃತ್ತಕ್ಕೆ ನುಗ್ಗಿದ್ದ ಪುನೀತ್ ಕೆರೆಹಳ್ಳಿ ಸೇರಿದಂತೆ ಹಲವರು ಟಿಪ್ಪು ಸುಲ್ತಾನ್ ಫ್ಲೆಕ್ಸ್ ಕಿತ್ತು ವಿಡಿಯೋ ಮಾಡಿ ಹಂಚಿಕೊಂಡಿದ್ದರು.

ಜಟ್ಕಾ ಕಟ್‌, ಹಲಾಲ್‌ ಕಟ್‌ ವಿವಾದ: ಶಾಂತಿಯುತವಾಗಿ ನಡೆಯುತ್ತಿದ್ದ ಹಬ್ಬಗಳಲ್ಲಿ ಗಲಭೆಗಳನ್ನು ಸೃಷ್ಟಿಸಲು ಯತ್ನಿಸಿದವರ ಪೈಕಿ ಪುನೀತ್‌ ಕೆರೆಹಳ್ಳಿಯೂ ಒಬ್ಬ. ಮುಸ್ಲಿಮರ ಬಳಿ ವ್ಯಾಪಾರ ಮಾಡಬೇಡಿ, ಮಾಂಸ ಖರೀದಿ ಮಾಡಬೇಡಿ ಎಂದು ಪ್ರಚಾರ ಮಾಡುತ್ತಾ ಕೋಮುದ್ವೇಷವನ್ನು ಹಬ್ಬಿಸಲು ಯುಗಾದಿ ಸಂದರ್ಭ ಬಂದಾಗಲೆಲ್ಲ ಪುನೀತ್ ಕೆರೆಹಳ್ಳಿ ಮತ್ತು ಸಂಗಡಿಗರು ನಿರಂತರ ಪ್ರಯತ್ನ ಮಾಡುತ್ತಾ ಬಂದಿದ್ದಾರೆ. ಇದಕ್ಕೆ ಸಾರ್ವಜನಿಕರು ವಿರೋಧವನ್ನೂ ವ್ಯಕ್ತಪಡಿಸುತ್ತಿದ್ದಾರೆ.

ಗೋರಕ್ಷಣೆ ಹೆಸರಲ್ಲಿ ದಾಂಧಲೆ: ರಾಷ್ಟ್ರ ರಕ್ಷಣಾ ಪಡೆ ಎಂಬ ಕೂಟವನ್ನು ರಚಿಸಿಕೊಂಡು ಗೋರಕ್ಷಣೆ ಮಾಡುತ್ತೇನೆ ಎಂದು ಸಕ್ರಿಯವಾಗಿರುವ ಕೆರೆಹಳ್ಳಿ ಮತ್ತು ಸಹಚರರು ಈಗ ಕೊಲೆ ಪ್ರಕರಣದಲ್ಲಿ ಸಿಲುಕಿಬಿದ್ದಿದ್ದಾರೆ. ಅಮಾಯಕ ವ್ಯಕ್ತಿಗೆ ಲಕ್ಷಾಂತರ ರೂಪಾಯಿ ಬೇಡಿಕೆಯನ್ನೂ ಇವರು ಇಟ್ಟಿದ್ದರು, ಕೊಡಲು ಒಪ್ಪದೇ ಇದ್ದಿದ್ದರಿಂದ ಕೊಲೆ ಮಾಡಿದ್ದಾರೆಂದು ಎಫ್‌ಐಆರ್‌ನಲ್ಲಿ ನಮೂದಿಸಲಾಗಿದೆ.

ರಾಜಸ್ಥಾನ- ಹರಿಯಾಣ ಗಡಿಯಲ್ಲಿ ಇಬ್ಬರು ಮುಸ್ಲಿಮರನ್ನು ಜೀವಂತವಾಗಿ ಸುಟ್ಟು ಹಾಕಿದ ಪ್ರಕರಣವನ್ನು ಈ ಘಟನೆ ನೆನಪಿಸಿದೆ. ಗೋವನ್ನು ಸಾಗಣೆ ಮಾಡುತ್ತಿದ್ದಾರೆಂದು ಆರೋಪಿಸಿ ಬಜರಂಗದಳದ ಮುಖಂಡರು ರಾಜಸ್ಥಾನ-ಹರಿಯಾಣ ಗಡಿಯಲ್ಲಿ ನಾಸಿರ್ ಮತ್ತು ಜುನೈದ್ ಅವರನ್ನು ಹತ್ಯೆ ಮಾಡಿದ್ದಾರೆಂಬುದು ಭಾರೀ ಚರ್ಚೆಯನ್ನು ಹುಟ್ಟು ಹಾಕಿದೆ. ಬಜರಂಗದಳದ ಮುಖಂಡನಾದ ಮೋನು ಮಾನೇಸರ್ ನೇತೃತ್ವದ ಗೋರಕ್ಷಣಾ ಪಡೆ, ಈ ರೀತಿಯ ಕಾನೂನು ಬಾಹಿರ ಕೃತ್ಯದಲ್ಲಿ ಭಾಗಿಯಾಗಿ ಅನೇಕ ವಿಡಿಯೊಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಅಪ್‌ಲೋಡ್ ಮಾಡುತ್ತಿತ್ತು. ಅದೇ ಮಾದರಿಯಲ್ಲಿ ಪುನಿತ್ ಕೆರೆಹಳ್ಳಿ ತನ್ನ ಫೇಸ್‌ಬುಕ್ ಖಾತೆಯಲ್ಲಿ ವಿಡಿಯೊಗಳನ್ನು ಅಪ್‌ಲೋಡ್ ಮಾಡುತ್ತ ಬಂದಿದ್ದಾನೆ. ನೈತಿಕ ಗೂಂಡಾಗಿರಿ ಮೆರೆಯುತ್ತಾ ಕಾನೂನು ಕೈಗೆತ್ತಿಕೊಂಡಿರುವುದು ಇಲ್ಲಿನ ವಿಡಿಯೊಗಳಿಂದ ಸ್ಪಷ್ಟವಾಗುತ್ತದೆ. ಪದೇ ಪದೇ ಪ್ರಕರಣಗಳನ್ನು ದಾಖಲಾಗುತ್ತಿದ್ದರೂ ಕಠಿಣ ಕ್ರಮಗಳನ್ನು ಜರುಗಿಸದ ಕಾರಣ ಮತ್ತೆ ಮತ್ತೆ ಪುನೀತ್ ಕೆರೆಹಳ್ಳಿ ಮತ್ತಷ್ಟು ಕ್ರೌರ್ಯಗಳನ್ನು ನಡೆಸುತ್ತಿದ್ದಾನೆಂಬ ಆರೋಪಗಳನ್ನು ಸುಲಭವಾಗಿ ತಳ್ಳಿಹಾಕಲು ಸಾಧ್ಯವಿಲ್ಲ.

ಆಡಳಿತರೂಢ ಬಿಜೆಪಿಯ ನಾಯಕರೊಂದಿಗೆ ಆತ ತೆಗೆಸಿಕೊಂಡಿರುವ ಫೋಟೋಗಳು ಹರಿದಾಡುತ್ತಿವೆ. ಪ್ರಭುತ್ವದ ಪೋಷಣೆ ತನಗಿದೆ ಎಂಬ ದಾಷ್ಟ್ಯವನ್ನು ಪುನೀತ್ ಕೆರೆಹಳ್ಳಿ ಥರದವರು ಮತ್ತೆ ಮತ್ತೆ ಪ್ರದರ್ಶಿಸುತ್ತಿದ್ದಾರೆಂಬುದು ಇದರಿಂದ ಸ್ಪಷ್ಟವಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...