Homeಕರ್ನಾಟಕಪುನೀತ್ ಕೆರೆಹಳ್ಳಿ ಮಾಡಿದ ಅವಾಂತರಗಳಿವು; ಕಡಿವಾಣ ಹಾಕದೆ ಸುಮ್ಮನೆ ಬಿಟ್ಟಿದ್ದೇಕೆ?

ಪುನೀತ್ ಕೆರೆಹಳ್ಳಿ ಮಾಡಿದ ಅವಾಂತರಗಳಿವು; ಕಡಿವಾಣ ಹಾಕದೆ ಸುಮ್ಮನೆ ಬಿಟ್ಟಿದ್ದೇಕೆ?

- Advertisement -
- Advertisement -

ಸಾಮಾಜಿಕ ಮಾಧ್ಯಮಗಳ ಮೂಲಕ ಪ್ರಚಾರಕ್ಕೆ ಬಂದವರಲ್ಲಿ ಪುನೀತ್‌ ಕೆರೆಹಳ್ಳಿ ಕೂಡ ಒಬ್ಬ. ಕಾರಿನಲ್ಲಿ ಕೂತು ಕಾಂಗ್ರೆಸ್‌ ನಾಯಕರನ್ನು ಏಕವಚನದಲ್ಲಿ ನಿಂದಿಸುತ್ತಾ, ಬಾಯಿಗೆ ಬಂದಂತೆ ಮಾತನಾಡುತ್ತಾ ಪ್ರಚಾರ ಪಡೆದ ಈ ಪುನೀತ್ ಮೂಲತಃ ಹಾಸನ ಜಿಲ್ಲೆಯವನು.

ತಾನು ಹಿಂದುತ್ವ ಬೆಂಬಲಿಗ, ಸಂಘಪರಿವಾರದ ಕಾರ್ಯಕರ್ತ ಎಂದು ಹೇಳಿಕೊಂಡು ಮುಂಚೂಣಿಗೆ ಬಂದ ಈತ ಮಾಡಿದ ಅವಾಂತರಗಳಿಗೆ ಲೆಕ್ಕವಿಲ್ಲ. ಇಂತಹ ಫ್ರಿಂಜ್‌ಗಳ ವಿರುದ್ಧ ಕಾನೂನು ಕ್ರಮ ಜರುಗಿಸದೆ ಬಿಟ್ಟಿದ್ದೇ ತಪ್ಪಾಯಿತೆಂಬುದು ಜನರ ಮಾತು. ಈಗ ಅಮಾಯಕ ಮುಸ್ಲಿಂ ವ್ಯಕ್ತಿಯೊಬ್ಬನ ಹತ್ಯೆಯಲ್ಲಿ ಪುನೀತ್‌ ಕೆರೆಹಳ್ಳಿ ಆರೋಪಿಯಾಗಿದ್ದಾನೆ.

ಪುನೀತ್‌ ಕೆರೆಹಳ್ಳಿ ಮೊದಮೊದಲು ಕಾರಿನಲ್ಲಿ ಕೂತು ಅರಚುತ್ತಿದ್ದನು. ಆಮೇಲೆ ಬಿಜೆಪಿ ನಾಯಕರೊಂದಿಗೆ ಗುರುಸಿಕೊಳ್ಳಲು ಆರಂಭಿಸಿದನು. ಮುಸ್ಲಿಂ ಸಮುದಾಯದ ವಿರುದ್ಧ ದ್ವೇಷ ಕಾರುತ್ತಾ ಪ್ರಚಾರ ಪಡೆದನು. “ಈತನಿಗೆ ಒಂದಿಷ್ಟು ಮಂದಿ ಗೂಗಲ್ ಪೇ, ಪೋನ್‌ ಪೇ ಮೂಲಕ ಧನಸಹಾಯ ಮಾಡಿ ಪ್ರೋತ್ಸಾಹಿಸಿದ್ದರಿಂದಲೇ ಕೋಮುದ್ವೇಷದ ಮಾತುಗಳನ್ನು ಹೆಚ್ಚಿಸಿಕೊಂಡ” ಎಂಬ ಆರೋಪಗಳಿವೆ. ಪುನೀತ್ ಕೆರೆಹಳ್ಳಿಯ ಇತಿಹಾಸ ಕೆದಕಿದರೆ ಆತ ಮಾಡಿರುವ ಅವಾಂತರಗಳು ಒಂದೊಂದಾಗಿ ಬಿಚ್ಚಿಕೊಳ್ಳುತ್ತವೆ.

ವೇಶ್ಯಾವಾಟಿಕೆಯಲ್ಲಿ ಕೆರೆಹಳ್ಳಿ ಹೆಸರು: 2013ರಲ್ಲಿಯೇ ಪುನಿತ್ ಕೆರೆಹಳ್ಳಿಯ ಹೆಸರು ವೇಶ್ಯಾವಾಟಿಕೆ ಪ್ರಕರಣವೊಂದರಲ್ಲಿ ಸಿಲುಕಿದೆ ಎಂಬುದು ಕಳೆದ ವರ್ಷ ಬಯಲಾಗಿತ್ತು. ಭರತ್ ಶೆಟ್ಟಿ ಎಂಬವರೊಂದಿಗೆ ಪುನೀತ್‌ ನಡೆಸಿದ್ದ ಸಂಭಾಷಣೆಯ ಆಡಿಯೊ ವೈರಲ್ ಆಗಿತ್ತು. 2013ರಲ್ಲಿ ದಾಖಲಾಗಿರುವ ಪ್ರಕರಣ ಇದಾಗಿದ್ದು, 2016ರಲ್ಲಿ ಹೋರಾಟಕ್ಕೆ ನಾನು ಬಂದಿದ್ದೇನೆ ಎಂದು ಪುನೀತ್ ಹೇಳಿಕೊಂಡಿದ್ದ.

ವೇಶ್ಯಾವಾಟಿಕೆಯ ಸಂಬಂಧ ಸುದ್ದಿ ಹರಿದಾಡಿದ್ದಾಗ ಪುನೀತ್‌ಗೆ ಆತನ ಸ್ನೇಹಿತನೊಬ್ಬ ಬುದ್ಧಿವಾದ ಹೇಳಿದ್ದ. ಆದರೆ ಆತನನ್ನೇ ಕೊಲೆ ಮಾಡಲು ಯತ್ನಿಸಿದ ಆರೋಪದ ಮೇಲೆ ಕೆರೆಹಳ್ಳಿ ವಿರುದ್ಧ ಮಳವಳ್ಳಿ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಬೇಗೂರು ಕೆರೆಗೆ ಕೋಮುವಾದದ ಬಣ್ಣ: ನ್ಯಾಯಾಲಯದ ಆದೇಶಗಳನ್ನು ಧಿಕ್ಕರಿಸಿ 2021ರ ಆಗಸ್ಟ್ 11ರಂದು ಬೇಗೂರು ಕೆರೆಯಲ್ಲಿ ಶಿವನ ಪ್ರತಿಮೆಯನ್ನು ಅನಾವರಣಗೊಳಿಸಿದ ಆರೋಪದ ಮೇಲೆ ಪುನಿತ್‌ ಕೆರೆಹಳ್ಳಿ ಮತ್ತು ಇತರರ ಮೇಲೆ ಪ್ರಕರಣ ದಾಖಲಾಗಿತ್ತು.

ಬಿಬಿಎಂಪಿಯು ಬೆಂಗಳೂರಿನ ಬೇಗೂರು ಕೆರೆಯ ಮಧ್ಯದಲ್ಲಿ ಪ್ರತಿಮೆಯನ್ನು ನಿರ್ಮಿಸುತ್ತಿರುವುದಕ್ಕೆ ಹೈಕೋರ್ಟ್ 2019 ರ ಆಗಸ್ಟ್‌ನಲ್ಲಿ ತಡೆ ನೀಡಿತ್ತು. ಕೆರೆಯ ಗಾತ್ರವನ್ನು ಕಡಿಮೆ ಮಾಡಲು ಮತ್ತು ಅದರಲ್ಲಿ ದ್ವೀಪಗಳನ್ನು ಮಾಡಲು ಬಿಬಿಎಂಪಿಗೆ ಅಧಿಕಾರವಿಲ್ಲ ಎಂದು ಅದು ಹೇಳಿತ್ತು. ಆದರೆ ಆಗಸ್ಟ್ 1 ರಿಂದ, ಬಿಜೆಪಿ ಬೆಂಬಲಿತ ಸಂಘಪರಿವಾದ ಕಾರ್ಯಕರ್ತರು, ಹೈಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿರುವ ‘ಪರಿಸರ ಉಳಿವಿನ ಪ್ರಕರಣವನ್ನು’ ಕೋಮುವಾದಿಕರಣಗೊಳಿಸಲು ನೋಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟರ್‌ಗಳನ್ನು ಹಂಚಿಕೊಂಡಿದ್ದರು.

ಶ್ರೀರಂಗಪಟ್ಟಣದಲ್ಲಿ ಕೋಮುದ್ವೇಷ ಹಬ್ಬಿಸಲು ಯತ್ನ: ಶ್ರೀರಂಗಪಟ್ಟಣದ ಜಾಮಿಯ ಮಸೀದಿ ಮೊದಲ ದೇವಾಲಯವಾಗಿತ್ತು ಎಂದು ವಿವಾದ ಸೃಷ್ಟಿಸಲು ಯತ್ನಿಸಿದವರಲ್ಲಿ ಕೆರೆಹಳ್ಳಿ ಕೂಡ ಒಬ್ಬ. ಇತಿಹಾಸವನ್ನು ಸರಿಯಾಗಿ ತಿಳಿಯದೆ ಗೊಂದಲ ಸೃಷ್ಟಿಸಿ, ಶಾಂತಿಯುತವಾಗಿರುವ ಶ್ರೀರಂಗಪಟ್ಟಣದಲ್ಲಿ ಬೆಂಕಿ ಹಚ್ಚಲು ಕೆರೆಹಳ್ಳಿಯಂತಹ ಫ್ರಿಂಜ್‌ಗಳು ಯತ್ನಿಸಿದ್ದರು. (ವಿವಾದದ ಕುರಿತು ಓದಲು ಇಲ್ಲಿ ಕ್ಲಿಕ್ ಮಾಡಿರಿ)

ಟಿಪ್ಪು ಪ್ಲೆಕ್ಸ್‌ ಹರಿದು ರಾದ್ಧಾಂತ: ಸಂವಿಧಾನ ಬಾಹಿರ ಕೃತ್ಯಗಳಲ್ಲಿ ಸಕ್ರಿಯವಾಗಿರುವ ಕೆರೆಹಳ್ಳಿ, 2022ರ ಆಗಸ್ಟ್‌ನಲ್ಲಿ ಟಿಪ್ಪು ಪ್ಲೆಕ್ಸ್ ಹರಿದು ರಾದ್ಧಾಂತ ಮಾಡಿದ್ದನು. ಕಾಂಗ್ರೆಸ್ ಪಕ್ಷದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಸ್ವಾತಂತ್ರ್ಯ ನಡಿಗೆ ಕಾರ್ಯಕ್ರಮದ ಭಾಗವಾಗಿ ಬೆಂಗಳೂರಿನಲ್ಲಿ ಅಳವಡಿಸಿದ್ದ ಟಿಪ್ಪು ಸುಲ್ತಾನ್ ಬ್ಯಾನರ್ ಹರಿದು ಕೋಮು ಸೌಹಾರ್ದತೆಗೆ ಧಕ್ಕೆ ತಂದಿದ್ದಕ್ಕೆ ಪುನೀತ್ ಕೆರೆಹಳ್ಳಿ ಸೇರಿ ಮೂವರನ್ನು ಪೊಲೀಸರು ಬಂಧಿಸಿದ್ದರು.

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಸ್ವಾತಂತ್ರ್ಯ ನಡಿಗೆ ಕಾರ್ಯಕ್ರಮ ಹಮ್ಮಿಕೊಂಡಿದ್ದ ಕಾಂಗ್ರೆಸ್ ಪಕ್ಷವು, ಕಾರ್ಪೋರೇಷನ್, ಹಡ್ಸನ್ ಸರ್ಕಲ್, ನೃಪತುಂಗ ರಸ್ತೆ ಸೇರಿದಂತೆ ಹಲವೆಡೆ ಸ್ವಾತಂತ್ರ್ಯ ಹೋರಾಟಗಾರರ ಬ್ಯಾನರ್, ಫ್ಲೆಕ್ಸ್ ಹಾಕಿತ್ತು. ಮಹಾತ್ಮ ಗಾಂಧೀಜಿ, ನೆಹರೂ, ಟಿಪ್ಪು ಸುಲ್ತಾನ್, ಭಗತ್ ಸಿಂಗ್, ಅಂಬೇಡ್ಕರ್ ಸೇರಿದಂತೆ ಹಲವು ರಾಷ್ಟ್ರೀಯ ನಾಯಕರ ಫ್ಲೆಕ್ಸ್‌ಗಳು ರಾರಾಜಿಸುತ್ತಿದ್ದವು. ಶನಿವಾರ ರಾತ್ರಿ ಹಡ್ಸನ್ ವೃತ್ತಕ್ಕೆ ನುಗ್ಗಿದ್ದ ಪುನೀತ್ ಕೆರೆಹಳ್ಳಿ ಸೇರಿದಂತೆ ಹಲವರು ಟಿಪ್ಪು ಸುಲ್ತಾನ್ ಫ್ಲೆಕ್ಸ್ ಕಿತ್ತು ವಿಡಿಯೋ ಮಾಡಿ ಹಂಚಿಕೊಂಡಿದ್ದರು.

ಜಟ್ಕಾ ಕಟ್‌, ಹಲಾಲ್‌ ಕಟ್‌ ವಿವಾದ: ಶಾಂತಿಯುತವಾಗಿ ನಡೆಯುತ್ತಿದ್ದ ಹಬ್ಬಗಳಲ್ಲಿ ಗಲಭೆಗಳನ್ನು ಸೃಷ್ಟಿಸಲು ಯತ್ನಿಸಿದವರ ಪೈಕಿ ಪುನೀತ್‌ ಕೆರೆಹಳ್ಳಿಯೂ ಒಬ್ಬ. ಮುಸ್ಲಿಮರ ಬಳಿ ವ್ಯಾಪಾರ ಮಾಡಬೇಡಿ, ಮಾಂಸ ಖರೀದಿ ಮಾಡಬೇಡಿ ಎಂದು ಪ್ರಚಾರ ಮಾಡುತ್ತಾ ಕೋಮುದ್ವೇಷವನ್ನು ಹಬ್ಬಿಸಲು ಯುಗಾದಿ ಸಂದರ್ಭ ಬಂದಾಗಲೆಲ್ಲ ಪುನೀತ್ ಕೆರೆಹಳ್ಳಿ ಮತ್ತು ಸಂಗಡಿಗರು ನಿರಂತರ ಪ್ರಯತ್ನ ಮಾಡುತ್ತಾ ಬಂದಿದ್ದಾರೆ. ಇದಕ್ಕೆ ಸಾರ್ವಜನಿಕರು ವಿರೋಧವನ್ನೂ ವ್ಯಕ್ತಪಡಿಸುತ್ತಿದ್ದಾರೆ.

ಗೋರಕ್ಷಣೆ ಹೆಸರಲ್ಲಿ ದಾಂಧಲೆ: ರಾಷ್ಟ್ರ ರಕ್ಷಣಾ ಪಡೆ ಎಂಬ ಕೂಟವನ್ನು ರಚಿಸಿಕೊಂಡು ಗೋರಕ್ಷಣೆ ಮಾಡುತ್ತೇನೆ ಎಂದು ಸಕ್ರಿಯವಾಗಿರುವ ಕೆರೆಹಳ್ಳಿ ಮತ್ತು ಸಹಚರರು ಈಗ ಕೊಲೆ ಪ್ರಕರಣದಲ್ಲಿ ಸಿಲುಕಿಬಿದ್ದಿದ್ದಾರೆ. ಅಮಾಯಕ ವ್ಯಕ್ತಿಗೆ ಲಕ್ಷಾಂತರ ರೂಪಾಯಿ ಬೇಡಿಕೆಯನ್ನೂ ಇವರು ಇಟ್ಟಿದ್ದರು, ಕೊಡಲು ಒಪ್ಪದೇ ಇದ್ದಿದ್ದರಿಂದ ಕೊಲೆ ಮಾಡಿದ್ದಾರೆಂದು ಎಫ್‌ಐಆರ್‌ನಲ್ಲಿ ನಮೂದಿಸಲಾಗಿದೆ.

ರಾಜಸ್ಥಾನ- ಹರಿಯಾಣ ಗಡಿಯಲ್ಲಿ ಇಬ್ಬರು ಮುಸ್ಲಿಮರನ್ನು ಜೀವಂತವಾಗಿ ಸುಟ್ಟು ಹಾಕಿದ ಪ್ರಕರಣವನ್ನು ಈ ಘಟನೆ ನೆನಪಿಸಿದೆ. ಗೋವನ್ನು ಸಾಗಣೆ ಮಾಡುತ್ತಿದ್ದಾರೆಂದು ಆರೋಪಿಸಿ ಬಜರಂಗದಳದ ಮುಖಂಡರು ರಾಜಸ್ಥಾನ-ಹರಿಯಾಣ ಗಡಿಯಲ್ಲಿ ನಾಸಿರ್ ಮತ್ತು ಜುನೈದ್ ಅವರನ್ನು ಹತ್ಯೆ ಮಾಡಿದ್ದಾರೆಂಬುದು ಭಾರೀ ಚರ್ಚೆಯನ್ನು ಹುಟ್ಟು ಹಾಕಿದೆ. ಬಜರಂಗದಳದ ಮುಖಂಡನಾದ ಮೋನು ಮಾನೇಸರ್ ನೇತೃತ್ವದ ಗೋರಕ್ಷಣಾ ಪಡೆ, ಈ ರೀತಿಯ ಕಾನೂನು ಬಾಹಿರ ಕೃತ್ಯದಲ್ಲಿ ಭಾಗಿಯಾಗಿ ಅನೇಕ ವಿಡಿಯೊಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಅಪ್‌ಲೋಡ್ ಮಾಡುತ್ತಿತ್ತು. ಅದೇ ಮಾದರಿಯಲ್ಲಿ ಪುನಿತ್ ಕೆರೆಹಳ್ಳಿ ತನ್ನ ಫೇಸ್‌ಬುಕ್ ಖಾತೆಯಲ್ಲಿ ವಿಡಿಯೊಗಳನ್ನು ಅಪ್‌ಲೋಡ್ ಮಾಡುತ್ತ ಬಂದಿದ್ದಾನೆ. ನೈತಿಕ ಗೂಂಡಾಗಿರಿ ಮೆರೆಯುತ್ತಾ ಕಾನೂನು ಕೈಗೆತ್ತಿಕೊಂಡಿರುವುದು ಇಲ್ಲಿನ ವಿಡಿಯೊಗಳಿಂದ ಸ್ಪಷ್ಟವಾಗುತ್ತದೆ. ಪದೇ ಪದೇ ಪ್ರಕರಣಗಳನ್ನು ದಾಖಲಾಗುತ್ತಿದ್ದರೂ ಕಠಿಣ ಕ್ರಮಗಳನ್ನು ಜರುಗಿಸದ ಕಾರಣ ಮತ್ತೆ ಮತ್ತೆ ಪುನೀತ್ ಕೆರೆಹಳ್ಳಿ ಮತ್ತಷ್ಟು ಕ್ರೌರ್ಯಗಳನ್ನು ನಡೆಸುತ್ತಿದ್ದಾನೆಂಬ ಆರೋಪಗಳನ್ನು ಸುಲಭವಾಗಿ ತಳ್ಳಿಹಾಕಲು ಸಾಧ್ಯವಿಲ್ಲ.

ಆಡಳಿತರೂಢ ಬಿಜೆಪಿಯ ನಾಯಕರೊಂದಿಗೆ ಆತ ತೆಗೆಸಿಕೊಂಡಿರುವ ಫೋಟೋಗಳು ಹರಿದಾಡುತ್ತಿವೆ. ಪ್ರಭುತ್ವದ ಪೋಷಣೆ ತನಗಿದೆ ಎಂಬ ದಾಷ್ಟ್ಯವನ್ನು ಪುನೀತ್ ಕೆರೆಹಳ್ಳಿ ಥರದವರು ಮತ್ತೆ ಮತ್ತೆ ಪ್ರದರ್ಶಿಸುತ್ತಿದ್ದಾರೆಂಬುದು ಇದರಿಂದ ಸ್ಪಷ್ಟವಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....