Homeಕರ್ನಾಟಕಪುನೀತ್ ಕೆರೆಹಳ್ಳಿ ಮಾಡಿದ ಅವಾಂತರಗಳಿವು; ಕಡಿವಾಣ ಹಾಕದೆ ಸುಮ್ಮನೆ ಬಿಟ್ಟಿದ್ದೇಕೆ?

ಪುನೀತ್ ಕೆರೆಹಳ್ಳಿ ಮಾಡಿದ ಅವಾಂತರಗಳಿವು; ಕಡಿವಾಣ ಹಾಕದೆ ಸುಮ್ಮನೆ ಬಿಟ್ಟಿದ್ದೇಕೆ?

- Advertisement -
- Advertisement -

ಸಾಮಾಜಿಕ ಮಾಧ್ಯಮಗಳ ಮೂಲಕ ಪ್ರಚಾರಕ್ಕೆ ಬಂದವರಲ್ಲಿ ಪುನೀತ್‌ ಕೆರೆಹಳ್ಳಿ ಕೂಡ ಒಬ್ಬ. ಕಾರಿನಲ್ಲಿ ಕೂತು ಕಾಂಗ್ರೆಸ್‌ ನಾಯಕರನ್ನು ಏಕವಚನದಲ್ಲಿ ನಿಂದಿಸುತ್ತಾ, ಬಾಯಿಗೆ ಬಂದಂತೆ ಮಾತನಾಡುತ್ತಾ ಪ್ರಚಾರ ಪಡೆದ ಈ ಪುನೀತ್ ಮೂಲತಃ ಹಾಸನ ಜಿಲ್ಲೆಯವನು.

ತಾನು ಹಿಂದುತ್ವ ಬೆಂಬಲಿಗ, ಸಂಘಪರಿವಾರದ ಕಾರ್ಯಕರ್ತ ಎಂದು ಹೇಳಿಕೊಂಡು ಮುಂಚೂಣಿಗೆ ಬಂದ ಈತ ಮಾಡಿದ ಅವಾಂತರಗಳಿಗೆ ಲೆಕ್ಕವಿಲ್ಲ. ಇಂತಹ ಫ್ರಿಂಜ್‌ಗಳ ವಿರುದ್ಧ ಕಾನೂನು ಕ್ರಮ ಜರುಗಿಸದೆ ಬಿಟ್ಟಿದ್ದೇ ತಪ್ಪಾಯಿತೆಂಬುದು ಜನರ ಮಾತು. ಈಗ ಅಮಾಯಕ ಮುಸ್ಲಿಂ ವ್ಯಕ್ತಿಯೊಬ್ಬನ ಹತ್ಯೆಯಲ್ಲಿ ಪುನೀತ್‌ ಕೆರೆಹಳ್ಳಿ ಆರೋಪಿಯಾಗಿದ್ದಾನೆ.

ಪುನೀತ್‌ ಕೆರೆಹಳ್ಳಿ ಮೊದಮೊದಲು ಕಾರಿನಲ್ಲಿ ಕೂತು ಅರಚುತ್ತಿದ್ದನು. ಆಮೇಲೆ ಬಿಜೆಪಿ ನಾಯಕರೊಂದಿಗೆ ಗುರುಸಿಕೊಳ್ಳಲು ಆರಂಭಿಸಿದನು. ಮುಸ್ಲಿಂ ಸಮುದಾಯದ ವಿರುದ್ಧ ದ್ವೇಷ ಕಾರುತ್ತಾ ಪ್ರಚಾರ ಪಡೆದನು. “ಈತನಿಗೆ ಒಂದಿಷ್ಟು ಮಂದಿ ಗೂಗಲ್ ಪೇ, ಪೋನ್‌ ಪೇ ಮೂಲಕ ಧನಸಹಾಯ ಮಾಡಿ ಪ್ರೋತ್ಸಾಹಿಸಿದ್ದರಿಂದಲೇ ಕೋಮುದ್ವೇಷದ ಮಾತುಗಳನ್ನು ಹೆಚ್ಚಿಸಿಕೊಂಡ” ಎಂಬ ಆರೋಪಗಳಿವೆ. ಪುನೀತ್ ಕೆರೆಹಳ್ಳಿಯ ಇತಿಹಾಸ ಕೆದಕಿದರೆ ಆತ ಮಾಡಿರುವ ಅವಾಂತರಗಳು ಒಂದೊಂದಾಗಿ ಬಿಚ್ಚಿಕೊಳ್ಳುತ್ತವೆ.

ವೇಶ್ಯಾವಾಟಿಕೆಯಲ್ಲಿ ಕೆರೆಹಳ್ಳಿ ಹೆಸರು: 2013ರಲ್ಲಿಯೇ ಪುನಿತ್ ಕೆರೆಹಳ್ಳಿಯ ಹೆಸರು ವೇಶ್ಯಾವಾಟಿಕೆ ಪ್ರಕರಣವೊಂದರಲ್ಲಿ ಸಿಲುಕಿದೆ ಎಂಬುದು ಕಳೆದ ವರ್ಷ ಬಯಲಾಗಿತ್ತು. ಭರತ್ ಶೆಟ್ಟಿ ಎಂಬವರೊಂದಿಗೆ ಪುನೀತ್‌ ನಡೆಸಿದ್ದ ಸಂಭಾಷಣೆಯ ಆಡಿಯೊ ವೈರಲ್ ಆಗಿತ್ತು. 2013ರಲ್ಲಿ ದಾಖಲಾಗಿರುವ ಪ್ರಕರಣ ಇದಾಗಿದ್ದು, 2016ರಲ್ಲಿ ಹೋರಾಟಕ್ಕೆ ನಾನು ಬಂದಿದ್ದೇನೆ ಎಂದು ಪುನೀತ್ ಹೇಳಿಕೊಂಡಿದ್ದ.

ವೇಶ್ಯಾವಾಟಿಕೆಯ ಸಂಬಂಧ ಸುದ್ದಿ ಹರಿದಾಡಿದ್ದಾಗ ಪುನೀತ್‌ಗೆ ಆತನ ಸ್ನೇಹಿತನೊಬ್ಬ ಬುದ್ಧಿವಾದ ಹೇಳಿದ್ದ. ಆದರೆ ಆತನನ್ನೇ ಕೊಲೆ ಮಾಡಲು ಯತ್ನಿಸಿದ ಆರೋಪದ ಮೇಲೆ ಕೆರೆಹಳ್ಳಿ ವಿರುದ್ಧ ಮಳವಳ್ಳಿ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಬೇಗೂರು ಕೆರೆಗೆ ಕೋಮುವಾದದ ಬಣ್ಣ: ನ್ಯಾಯಾಲಯದ ಆದೇಶಗಳನ್ನು ಧಿಕ್ಕರಿಸಿ 2021ರ ಆಗಸ್ಟ್ 11ರಂದು ಬೇಗೂರು ಕೆರೆಯಲ್ಲಿ ಶಿವನ ಪ್ರತಿಮೆಯನ್ನು ಅನಾವರಣಗೊಳಿಸಿದ ಆರೋಪದ ಮೇಲೆ ಪುನಿತ್‌ ಕೆರೆಹಳ್ಳಿ ಮತ್ತು ಇತರರ ಮೇಲೆ ಪ್ರಕರಣ ದಾಖಲಾಗಿತ್ತು.

ಬಿಬಿಎಂಪಿಯು ಬೆಂಗಳೂರಿನ ಬೇಗೂರು ಕೆರೆಯ ಮಧ್ಯದಲ್ಲಿ ಪ್ರತಿಮೆಯನ್ನು ನಿರ್ಮಿಸುತ್ತಿರುವುದಕ್ಕೆ ಹೈಕೋರ್ಟ್ 2019 ರ ಆಗಸ್ಟ್‌ನಲ್ಲಿ ತಡೆ ನೀಡಿತ್ತು. ಕೆರೆಯ ಗಾತ್ರವನ್ನು ಕಡಿಮೆ ಮಾಡಲು ಮತ್ತು ಅದರಲ್ಲಿ ದ್ವೀಪಗಳನ್ನು ಮಾಡಲು ಬಿಬಿಎಂಪಿಗೆ ಅಧಿಕಾರವಿಲ್ಲ ಎಂದು ಅದು ಹೇಳಿತ್ತು. ಆದರೆ ಆಗಸ್ಟ್ 1 ರಿಂದ, ಬಿಜೆಪಿ ಬೆಂಬಲಿತ ಸಂಘಪರಿವಾದ ಕಾರ್ಯಕರ್ತರು, ಹೈಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿರುವ ‘ಪರಿಸರ ಉಳಿವಿನ ಪ್ರಕರಣವನ್ನು’ ಕೋಮುವಾದಿಕರಣಗೊಳಿಸಲು ನೋಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟರ್‌ಗಳನ್ನು ಹಂಚಿಕೊಂಡಿದ್ದರು.

ಶ್ರೀರಂಗಪಟ್ಟಣದಲ್ಲಿ ಕೋಮುದ್ವೇಷ ಹಬ್ಬಿಸಲು ಯತ್ನ: ಶ್ರೀರಂಗಪಟ್ಟಣದ ಜಾಮಿಯ ಮಸೀದಿ ಮೊದಲ ದೇವಾಲಯವಾಗಿತ್ತು ಎಂದು ವಿವಾದ ಸೃಷ್ಟಿಸಲು ಯತ್ನಿಸಿದವರಲ್ಲಿ ಕೆರೆಹಳ್ಳಿ ಕೂಡ ಒಬ್ಬ. ಇತಿಹಾಸವನ್ನು ಸರಿಯಾಗಿ ತಿಳಿಯದೆ ಗೊಂದಲ ಸೃಷ್ಟಿಸಿ, ಶಾಂತಿಯುತವಾಗಿರುವ ಶ್ರೀರಂಗಪಟ್ಟಣದಲ್ಲಿ ಬೆಂಕಿ ಹಚ್ಚಲು ಕೆರೆಹಳ್ಳಿಯಂತಹ ಫ್ರಿಂಜ್‌ಗಳು ಯತ್ನಿಸಿದ್ದರು. (ವಿವಾದದ ಕುರಿತು ಓದಲು ಇಲ್ಲಿ ಕ್ಲಿಕ್ ಮಾಡಿರಿ)

ಟಿಪ್ಪು ಪ್ಲೆಕ್ಸ್‌ ಹರಿದು ರಾದ್ಧಾಂತ: ಸಂವಿಧಾನ ಬಾಹಿರ ಕೃತ್ಯಗಳಲ್ಲಿ ಸಕ್ರಿಯವಾಗಿರುವ ಕೆರೆಹಳ್ಳಿ, 2022ರ ಆಗಸ್ಟ್‌ನಲ್ಲಿ ಟಿಪ್ಪು ಪ್ಲೆಕ್ಸ್ ಹರಿದು ರಾದ್ಧಾಂತ ಮಾಡಿದ್ದನು. ಕಾಂಗ್ರೆಸ್ ಪಕ್ಷದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಸ್ವಾತಂತ್ರ್ಯ ನಡಿಗೆ ಕಾರ್ಯಕ್ರಮದ ಭಾಗವಾಗಿ ಬೆಂಗಳೂರಿನಲ್ಲಿ ಅಳವಡಿಸಿದ್ದ ಟಿಪ್ಪು ಸುಲ್ತಾನ್ ಬ್ಯಾನರ್ ಹರಿದು ಕೋಮು ಸೌಹಾರ್ದತೆಗೆ ಧಕ್ಕೆ ತಂದಿದ್ದಕ್ಕೆ ಪುನೀತ್ ಕೆರೆಹಳ್ಳಿ ಸೇರಿ ಮೂವರನ್ನು ಪೊಲೀಸರು ಬಂಧಿಸಿದ್ದರು.

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಸ್ವಾತಂತ್ರ್ಯ ನಡಿಗೆ ಕಾರ್ಯಕ್ರಮ ಹಮ್ಮಿಕೊಂಡಿದ್ದ ಕಾಂಗ್ರೆಸ್ ಪಕ್ಷವು, ಕಾರ್ಪೋರೇಷನ್, ಹಡ್ಸನ್ ಸರ್ಕಲ್, ನೃಪತುಂಗ ರಸ್ತೆ ಸೇರಿದಂತೆ ಹಲವೆಡೆ ಸ್ವಾತಂತ್ರ್ಯ ಹೋರಾಟಗಾರರ ಬ್ಯಾನರ್, ಫ್ಲೆಕ್ಸ್ ಹಾಕಿತ್ತು. ಮಹಾತ್ಮ ಗಾಂಧೀಜಿ, ನೆಹರೂ, ಟಿಪ್ಪು ಸುಲ್ತಾನ್, ಭಗತ್ ಸಿಂಗ್, ಅಂಬೇಡ್ಕರ್ ಸೇರಿದಂತೆ ಹಲವು ರಾಷ್ಟ್ರೀಯ ನಾಯಕರ ಫ್ಲೆಕ್ಸ್‌ಗಳು ರಾರಾಜಿಸುತ್ತಿದ್ದವು. ಶನಿವಾರ ರಾತ್ರಿ ಹಡ್ಸನ್ ವೃತ್ತಕ್ಕೆ ನುಗ್ಗಿದ್ದ ಪುನೀತ್ ಕೆರೆಹಳ್ಳಿ ಸೇರಿದಂತೆ ಹಲವರು ಟಿಪ್ಪು ಸುಲ್ತಾನ್ ಫ್ಲೆಕ್ಸ್ ಕಿತ್ತು ವಿಡಿಯೋ ಮಾಡಿ ಹಂಚಿಕೊಂಡಿದ್ದರು.

ಜಟ್ಕಾ ಕಟ್‌, ಹಲಾಲ್‌ ಕಟ್‌ ವಿವಾದ: ಶಾಂತಿಯುತವಾಗಿ ನಡೆಯುತ್ತಿದ್ದ ಹಬ್ಬಗಳಲ್ಲಿ ಗಲಭೆಗಳನ್ನು ಸೃಷ್ಟಿಸಲು ಯತ್ನಿಸಿದವರ ಪೈಕಿ ಪುನೀತ್‌ ಕೆರೆಹಳ್ಳಿಯೂ ಒಬ್ಬ. ಮುಸ್ಲಿಮರ ಬಳಿ ವ್ಯಾಪಾರ ಮಾಡಬೇಡಿ, ಮಾಂಸ ಖರೀದಿ ಮಾಡಬೇಡಿ ಎಂದು ಪ್ರಚಾರ ಮಾಡುತ್ತಾ ಕೋಮುದ್ವೇಷವನ್ನು ಹಬ್ಬಿಸಲು ಯುಗಾದಿ ಸಂದರ್ಭ ಬಂದಾಗಲೆಲ್ಲ ಪುನೀತ್ ಕೆರೆಹಳ್ಳಿ ಮತ್ತು ಸಂಗಡಿಗರು ನಿರಂತರ ಪ್ರಯತ್ನ ಮಾಡುತ್ತಾ ಬಂದಿದ್ದಾರೆ. ಇದಕ್ಕೆ ಸಾರ್ವಜನಿಕರು ವಿರೋಧವನ್ನೂ ವ್ಯಕ್ತಪಡಿಸುತ್ತಿದ್ದಾರೆ.

ಗೋರಕ್ಷಣೆ ಹೆಸರಲ್ಲಿ ದಾಂಧಲೆ: ರಾಷ್ಟ್ರ ರಕ್ಷಣಾ ಪಡೆ ಎಂಬ ಕೂಟವನ್ನು ರಚಿಸಿಕೊಂಡು ಗೋರಕ್ಷಣೆ ಮಾಡುತ್ತೇನೆ ಎಂದು ಸಕ್ರಿಯವಾಗಿರುವ ಕೆರೆಹಳ್ಳಿ ಮತ್ತು ಸಹಚರರು ಈಗ ಕೊಲೆ ಪ್ರಕರಣದಲ್ಲಿ ಸಿಲುಕಿಬಿದ್ದಿದ್ದಾರೆ. ಅಮಾಯಕ ವ್ಯಕ್ತಿಗೆ ಲಕ್ಷಾಂತರ ರೂಪಾಯಿ ಬೇಡಿಕೆಯನ್ನೂ ಇವರು ಇಟ್ಟಿದ್ದರು, ಕೊಡಲು ಒಪ್ಪದೇ ಇದ್ದಿದ್ದರಿಂದ ಕೊಲೆ ಮಾಡಿದ್ದಾರೆಂದು ಎಫ್‌ಐಆರ್‌ನಲ್ಲಿ ನಮೂದಿಸಲಾಗಿದೆ.

ರಾಜಸ್ಥಾನ- ಹರಿಯಾಣ ಗಡಿಯಲ್ಲಿ ಇಬ್ಬರು ಮುಸ್ಲಿಮರನ್ನು ಜೀವಂತವಾಗಿ ಸುಟ್ಟು ಹಾಕಿದ ಪ್ರಕರಣವನ್ನು ಈ ಘಟನೆ ನೆನಪಿಸಿದೆ. ಗೋವನ್ನು ಸಾಗಣೆ ಮಾಡುತ್ತಿದ್ದಾರೆಂದು ಆರೋಪಿಸಿ ಬಜರಂಗದಳದ ಮುಖಂಡರು ರಾಜಸ್ಥಾನ-ಹರಿಯಾಣ ಗಡಿಯಲ್ಲಿ ನಾಸಿರ್ ಮತ್ತು ಜುನೈದ್ ಅವರನ್ನು ಹತ್ಯೆ ಮಾಡಿದ್ದಾರೆಂಬುದು ಭಾರೀ ಚರ್ಚೆಯನ್ನು ಹುಟ್ಟು ಹಾಕಿದೆ. ಬಜರಂಗದಳದ ಮುಖಂಡನಾದ ಮೋನು ಮಾನೇಸರ್ ನೇತೃತ್ವದ ಗೋರಕ್ಷಣಾ ಪಡೆ, ಈ ರೀತಿಯ ಕಾನೂನು ಬಾಹಿರ ಕೃತ್ಯದಲ್ಲಿ ಭಾಗಿಯಾಗಿ ಅನೇಕ ವಿಡಿಯೊಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಅಪ್‌ಲೋಡ್ ಮಾಡುತ್ತಿತ್ತು. ಅದೇ ಮಾದರಿಯಲ್ಲಿ ಪುನಿತ್ ಕೆರೆಹಳ್ಳಿ ತನ್ನ ಫೇಸ್‌ಬುಕ್ ಖಾತೆಯಲ್ಲಿ ವಿಡಿಯೊಗಳನ್ನು ಅಪ್‌ಲೋಡ್ ಮಾಡುತ್ತ ಬಂದಿದ್ದಾನೆ. ನೈತಿಕ ಗೂಂಡಾಗಿರಿ ಮೆರೆಯುತ್ತಾ ಕಾನೂನು ಕೈಗೆತ್ತಿಕೊಂಡಿರುವುದು ಇಲ್ಲಿನ ವಿಡಿಯೊಗಳಿಂದ ಸ್ಪಷ್ಟವಾಗುತ್ತದೆ. ಪದೇ ಪದೇ ಪ್ರಕರಣಗಳನ್ನು ದಾಖಲಾಗುತ್ತಿದ್ದರೂ ಕಠಿಣ ಕ್ರಮಗಳನ್ನು ಜರುಗಿಸದ ಕಾರಣ ಮತ್ತೆ ಮತ್ತೆ ಪುನೀತ್ ಕೆರೆಹಳ್ಳಿ ಮತ್ತಷ್ಟು ಕ್ರೌರ್ಯಗಳನ್ನು ನಡೆಸುತ್ತಿದ್ದಾನೆಂಬ ಆರೋಪಗಳನ್ನು ಸುಲಭವಾಗಿ ತಳ್ಳಿಹಾಕಲು ಸಾಧ್ಯವಿಲ್ಲ.

ಆಡಳಿತರೂಢ ಬಿಜೆಪಿಯ ನಾಯಕರೊಂದಿಗೆ ಆತ ತೆಗೆಸಿಕೊಂಡಿರುವ ಫೋಟೋಗಳು ಹರಿದಾಡುತ್ತಿವೆ. ಪ್ರಭುತ್ವದ ಪೋಷಣೆ ತನಗಿದೆ ಎಂಬ ದಾಷ್ಟ್ಯವನ್ನು ಪುನೀತ್ ಕೆರೆಹಳ್ಳಿ ಥರದವರು ಮತ್ತೆ ಮತ್ತೆ ಪ್ರದರ್ಶಿಸುತ್ತಿದ್ದಾರೆಂಬುದು ಇದರಿಂದ ಸ್ಪಷ್ಟವಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಆಟೋ ಚಾಲಕನಾಗಿ ಕೆಲಸ ಮಾಡುವ ತಂದೆಯೊಬ್ಬರು ಕೈಯಲ್ಲಿ ಸಿಹಿ ತಿಂಡಿಯ ಪೆಟ್ಟಿಗೆಯೊಂದಿಗೆ ಮನೆಗೆ ಹೆಜ್ಜೆ ಹಾಕುತ್ತಾರೆ. ಅದನ್ನು ನೋಡಿದ ಮಗಳು, "ಏನಪ್ಪಾ ವಿಶೇಷ, ಇವತ್ತು ಹುಟ್ಟುಹಬ್ಬನಾ, ಹಬ್ಬನಾ ಅಥವಾ ಕುಟುಂಬದ ಸಂಭ್ರಮನಾ?" ಎಂದು...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...