Homeಅಂತರಾಷ್ಟ್ರೀಯಬಾಂಗ್ಲಾದೇಶ: ಮಕ್ಕಳ ನೊಬೆಲ್ ಶಾಂತಿ ಪ್ರಶಸ್ತಿ ಪಡೆದ 17ರ ಯುವಕ ಸಾದತ್ ರಹಮಾನ್!

ಬಾಂಗ್ಲಾದೇಶ: ಮಕ್ಕಳ ನೊಬೆಲ್ ಶಾಂತಿ ಪ್ರಶಸ್ತಿ ಪಡೆದ 17ರ ಯುವಕ ಸಾದತ್ ರಹಮಾನ್!

42 ದೇಶಗಳ 142 ಅರ್ಜಿದಾರರಲ್ಲಿ ಸದತ್ ರಹಮಾನ್ ಆಯ್ಕೆಯಾಗಿದ್ದಾರೆ. ಸೈಬರ್ ಬೆದರಿಕೆಯಿಂದ ಬಳಲುತ್ತಿರುವ ಹದಿಹರೆಯದವರಿಗೆ ಸಹಾಯ ಮಾಡಲು ಅವರು ‘ಸೈಬರ್ ಟೀನ್ಸ್’ ಆಪ್‌ ಅನ್ನು ರಚಿಸಿದ್ದಾರೆ.

- Advertisement -
- Advertisement -

ಸೈಬರ್ ಬೆದರಿಕೆಗಳನ್ನು ಎದುರಿಸುವ ಮೊಬೈಲ್ ಅಪ್ಲಿಕೇಶನ್ ರಚಿಸಿದ್ದಕ್ಕಾಗಿ ಬಾಂಗ್ಲಾದೇಶದ ಯುವಕ ಸಾದತ್ ರಹಮಾನ್‌ಗೆ ಈ ವರ್ಷದ ಅಂತರರಾಷ್ಟ್ರೀಯ ಮಕ್ಕಳ ಶಾಂತಿ ಪ್ರಶಸ್ತಿಯನ್ನು ನೀಡಲಾಗಿದೆ. ಈ ಪ್ರಶಸ್ತಿಯನ್ನು ನೋಬೆಲ್ ಪ್ರಶಸ್ತಿ ವಿಜೇತರಾದ ಯೂಸುಫ್ ಮಲಾಲ ಘೋಷಿಸಿದರು.

ಸೈಬರ್ ಬೆದರಿಕೆಯನ್ನು ತಡೆಯಲು ಸಾಮಾಜಿಕ ಸಂಸ್ಥೆಯೊಂದನ್ನು ಕಟ್ಟಿ, ಮೊಬೈಲ್ ಅಪ್ಲಿಕೇಶನ್ “ಸೈಬರ್ ಟೀನ್ಸ್” ಅನ್ನು ಸ್ಥಾಪಿಸುವಲ್ಲಿ ತೊಡಗಿಸಿಕೊಂಡಿದ್ದಕ್ಕಾಗಿ ಶುಕ್ರವಾರ 17 ವರ್ಷದ ಯುವಕನಿಗೆ ಪ್ರಶಸ್ತಿಯನ್ನು ನೀಡಲಾಗಿದೆ ಎಂದು ನ್ಯೂಸ್ ಸರ್ವಿಸ್ ಡಿವಿಷನ್ ವರದಿ ಮಾಡಿದೆ.

ಇದನ್ನೂ ಓದಿ: ಸೈಬರ್‌ ದಾಳಿಯ ಬಗ್ಗೆ 20 ಲಕ್ಷ ಬಳಕೆದಾರರಿಗೆ ಎಚ್ಚರಿಕೆ ನೀಡಿದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ

ಮಕ್ಕಳ ಹಕ್ಕುಗಳಿಗಾಗಿ ಹೋರಾಡುವ ಮಗುವಿಗೆ ಅಂತರರಾಷ್ಟ್ರೀಯ ಮಕ್ಕಳ ಹಕ್ಕುಗಳ ಸಂಸ್ಥೆ ಕಿಡ್ಸ್ ರೈಟ್ಸ್ ಈ ಬಹುಮಾನವನ್ನು ನೀಡುತ್ತದೆ.

42 ದೇಶಗಳ 142 ಅರ್ಜಿದಾರರಲ್ಲಿ ಸದತ್ ರಹಮಾನ್ ಆಯ್ಕೆಯಾಗಿದ್ದಾರೆ. ಸೈಬರ್ ಬೆದರಿಕೆಯಿಂದ ಬಳಲುತ್ತಿರುವ ಹದಿಹರೆಯದವರಿಗೆ ಸಹಾಯ ಮಾಡಲು ಅವರು ‘ಸೈಬರ್ ಟೀನ್ಸ್’ ಆಪ್‌ ಅನ್ನು ರಚಿಸಿದ್ದಾರೆ. ಈ ಅಪ್ಲಿಕೇಶನ್ ಯುವಜನರಿಗೆ ಇಂಟರ್ನೆಟ್ ಸುರಕ್ಷತೆಯ ಬಗ್ಗೆ ಮಾಹಿತಿಯನ್ನು ಒದಗಿಸುತ್ತದೆ. ಸೈಬರ್ ಬೆದರಿಕೆಯನ್ನು ಸುರಕ್ಷಿತವಾಗಿ ವರದಿ ಮಾಡಲು ಇದು ಅವರಿಗೆ ಸಹಾಯ ಮಾಡುತ್ತದೆ.

ಇದನ್ನೂ ಓದಿ: ದೇಶದಲ್ಲಿ ೨೦೨೦ಕ್ಕೆ ಹೊಸ ರಾಷ್ಟ್ರೀಯ ಸೈಬರ್‌ ಭದ್ರತಾ ನೀತಿ ಜಾರಿಗೆ ತರಲು ಚಿಂತನೆ..!

ಸೈಬರ್ ತಜ್ಞರು, ಸಾಮಾಜಿಕ ಕಾರ್ಯಕರ್ತರು ಮತ್ತು ಪೊಲೀಸರನ್ನು ಒಟ್ಟುಗೂಡಿಸಲು ಸದಾತ್ ಒಂದು ಸಂಘಟನೆಯನ್ನು ರಚಿಸಿದ್ದರು. ಸೈಬರ್ ಬೆದರಿಕೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಜಾಗೃತಿ ಮೂಡಿಸಲು ಅವರು ಸೆಮಿನಾರ್ ಮತ್ತು ಸಭೆಗಳ ಮೂಲಕ ಶಾಲೆಗಳು ಮತ್ತು ಕಾಲೇಜುಗಳಲ್ಲಿ ಯುವಕರನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.

ಕಿಡ್ಸ್ ರೈಟ್ಸ್ ಸಂಘಟನೆಯ ಪ್ರಕಾರ, ಸೈಬರ್ ಬೆದರಿಕೆಗೆ ಒಳಗಾದ 300 ಕ್ಕೂ ಹೆಚ್ಚು ಸಂತ್ರಸ್ತರಿಗೆ ಈ ಅಪ್ಲಿಕೇಶನ್ ಸಹಕರಿಸಿದೆ. ಜೊತೆಗೆ ಇದು ಮಾನಸಿಕ ಆರೋಗ್ಯಕ್ಕೆ ಸಂಬಂಧಿಸಿದ ಸಮಸ್ಯೆಗಳಿಗೆ ಸಹಕರಿಸಿದೆ. ಇದರಿಂದ ಯುವಜನರು ಡಿಜಿಟಲ್ ಸಾಕ್ಷರತೆಯ ಶಿಕ್ಷಣವನ್ನು ಹೊಂದಿರುವ ತಮ್ಮ ಪ್ರದೇಶದ ಶಾಲೆಗಳಲ್ಲಿ ಸೈಬರ್ ಕ್ಲಬ್‌ಗಳನ್ನು ಸಹ ರಚಿಸಿದ್ದಾರೆ.

ಇದನ್ನೂ ಓದಿ: ಆರೋಗ್ಯ ಸೇತು ಆಪ್ ಕುರಿತ ಮಾಹಿತಿ ಇಲ್ಲ: ಕೇಂದ್ರ ಸರ್ಕಾರಕ್ಕೆ ನೋಟಿಸ್!

ಮಿಖಾಯಿಲ್ ಗೋರ್ಬಚೇವ್ ಅವರ ಅಧ್ಯಕ್ಷತೆಯಲ್ಲಿ 2005 ರಲ್ಲಿ ರೋಮ್‌ನಲ್ಲಿ ನಡೆದ ನೊಬೆಲ್ ಶಾಂತಿ ಪ್ರಶಸ್ತಿ ವಿಜೇತರ ವಿಶ್ವ ಶೃಂಗಸಭೆಯಲ್ಲಿ, ಕಿಡ್ಸ್ ರೈಟ್ಸ್ ಈ ಬಹುಮಾನವನ್ನು ನೀಡಲು ಪ್ರಾರಂಭಿಸಿತು. ಅಂದಿನಿಂದ, ಪ್ರತಿವರ್ಷ ನೊಬೆಲ್ ಶಾಂತಿ ಪ್ರಶಸ್ತಿ ವಿಜೇತರಿಂದ ಈ ಬಹುಮಾನವನ್ನು ನೀಡಲಾಗುತ್ತದೆ.

ಅತ್ಯುತ್ತಮ ಕೆಲಸಗಳನ್ನು ಮಾಡುತ್ತಿರುವ ಯುವಜನರನ್ನು ಗುರುತಿಸಿ, ಅವರ ಆಲೋಚನೆಗಳನ್ನು ಉತ್ತೇಜಿಸಲು ಮತ್ತು ಅವರ ಕೆಲಸವನ್ನು ಮತ್ತಷ್ಟು ಹೆಚ್ಚಿಸಲು ಒಂದು ವೇದಿಕೆಯನ್ನು ಒದಗಿಸಲಾಗುತ್ತದೆ. ವಿಜೇತರು ವಿಶ್ವವಿದ್ಯಾಲಯದ ಪದವಿ ತನಕ ಶಿಕ್ಷಣ ಪಡೆಯಲು ವಿದ್ಯಾರ್ಥಿವೇತನವನ್ನು ಪಡೆಯುತ್ತಾರೆ.


ಇದನ್ನೂ ಓದಿ: ವಿಕೃತ ಲೈಂಗಿಕ ಸಂತೃಪ್ತಿಗಾಗಿ ಮಕ್ಕಳ ದುರ್ಬಳಕೆ: ಒಂದೇ ವಾರದಲ್ಲಿ 41 ಮಂದಿ ಬಂಧನ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...