Homeಅಂತರಾಷ್ಟ್ರೀಯಬಾಂಗ್ಲಾದೇಶ: ಮಕ್ಕಳ ನೊಬೆಲ್ ಶಾಂತಿ ಪ್ರಶಸ್ತಿ ಪಡೆದ 17ರ ಯುವಕ ಸಾದತ್ ರಹಮಾನ್!

ಬಾಂಗ್ಲಾದೇಶ: ಮಕ್ಕಳ ನೊಬೆಲ್ ಶಾಂತಿ ಪ್ರಶಸ್ತಿ ಪಡೆದ 17ರ ಯುವಕ ಸಾದತ್ ರಹಮಾನ್!

42 ದೇಶಗಳ 142 ಅರ್ಜಿದಾರರಲ್ಲಿ ಸದತ್ ರಹಮಾನ್ ಆಯ್ಕೆಯಾಗಿದ್ದಾರೆ. ಸೈಬರ್ ಬೆದರಿಕೆಯಿಂದ ಬಳಲುತ್ತಿರುವ ಹದಿಹರೆಯದವರಿಗೆ ಸಹಾಯ ಮಾಡಲು ಅವರು ‘ಸೈಬರ್ ಟೀನ್ಸ್’ ಆಪ್‌ ಅನ್ನು ರಚಿಸಿದ್ದಾರೆ.

- Advertisement -
- Advertisement -

ಸೈಬರ್ ಬೆದರಿಕೆಗಳನ್ನು ಎದುರಿಸುವ ಮೊಬೈಲ್ ಅಪ್ಲಿಕೇಶನ್ ರಚಿಸಿದ್ದಕ್ಕಾಗಿ ಬಾಂಗ್ಲಾದೇಶದ ಯುವಕ ಸಾದತ್ ರಹಮಾನ್‌ಗೆ ಈ ವರ್ಷದ ಅಂತರರಾಷ್ಟ್ರೀಯ ಮಕ್ಕಳ ಶಾಂತಿ ಪ್ರಶಸ್ತಿಯನ್ನು ನೀಡಲಾಗಿದೆ. ಈ ಪ್ರಶಸ್ತಿಯನ್ನು ನೋಬೆಲ್ ಪ್ರಶಸ್ತಿ ವಿಜೇತರಾದ ಯೂಸುಫ್ ಮಲಾಲ ಘೋಷಿಸಿದರು.

ಸೈಬರ್ ಬೆದರಿಕೆಯನ್ನು ತಡೆಯಲು ಸಾಮಾಜಿಕ ಸಂಸ್ಥೆಯೊಂದನ್ನು ಕಟ್ಟಿ, ಮೊಬೈಲ್ ಅಪ್ಲಿಕೇಶನ್ “ಸೈಬರ್ ಟೀನ್ಸ್” ಅನ್ನು ಸ್ಥಾಪಿಸುವಲ್ಲಿ ತೊಡಗಿಸಿಕೊಂಡಿದ್ದಕ್ಕಾಗಿ ಶುಕ್ರವಾರ 17 ವರ್ಷದ ಯುವಕನಿಗೆ ಪ್ರಶಸ್ತಿಯನ್ನು ನೀಡಲಾಗಿದೆ ಎಂದು ನ್ಯೂಸ್ ಸರ್ವಿಸ್ ಡಿವಿಷನ್ ವರದಿ ಮಾಡಿದೆ.

ಇದನ್ನೂ ಓದಿ: ಸೈಬರ್‌ ದಾಳಿಯ ಬಗ್ಗೆ 20 ಲಕ್ಷ ಬಳಕೆದಾರರಿಗೆ ಎಚ್ಚರಿಕೆ ನೀಡಿದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ

ಮಕ್ಕಳ ಹಕ್ಕುಗಳಿಗಾಗಿ ಹೋರಾಡುವ ಮಗುವಿಗೆ ಅಂತರರಾಷ್ಟ್ರೀಯ ಮಕ್ಕಳ ಹಕ್ಕುಗಳ ಸಂಸ್ಥೆ ಕಿಡ್ಸ್ ರೈಟ್ಸ್ ಈ ಬಹುಮಾನವನ್ನು ನೀಡುತ್ತದೆ.

42 ದೇಶಗಳ 142 ಅರ್ಜಿದಾರರಲ್ಲಿ ಸದತ್ ರಹಮಾನ್ ಆಯ್ಕೆಯಾಗಿದ್ದಾರೆ. ಸೈಬರ್ ಬೆದರಿಕೆಯಿಂದ ಬಳಲುತ್ತಿರುವ ಹದಿಹರೆಯದವರಿಗೆ ಸಹಾಯ ಮಾಡಲು ಅವರು ‘ಸೈಬರ್ ಟೀನ್ಸ್’ ಆಪ್‌ ಅನ್ನು ರಚಿಸಿದ್ದಾರೆ. ಈ ಅಪ್ಲಿಕೇಶನ್ ಯುವಜನರಿಗೆ ಇಂಟರ್ನೆಟ್ ಸುರಕ್ಷತೆಯ ಬಗ್ಗೆ ಮಾಹಿತಿಯನ್ನು ಒದಗಿಸುತ್ತದೆ. ಸೈಬರ್ ಬೆದರಿಕೆಯನ್ನು ಸುರಕ್ಷಿತವಾಗಿ ವರದಿ ಮಾಡಲು ಇದು ಅವರಿಗೆ ಸಹಾಯ ಮಾಡುತ್ತದೆ.

ಇದನ್ನೂ ಓದಿ: ದೇಶದಲ್ಲಿ ೨೦೨೦ಕ್ಕೆ ಹೊಸ ರಾಷ್ಟ್ರೀಯ ಸೈಬರ್‌ ಭದ್ರತಾ ನೀತಿ ಜಾರಿಗೆ ತರಲು ಚಿಂತನೆ..!

ಸೈಬರ್ ತಜ್ಞರು, ಸಾಮಾಜಿಕ ಕಾರ್ಯಕರ್ತರು ಮತ್ತು ಪೊಲೀಸರನ್ನು ಒಟ್ಟುಗೂಡಿಸಲು ಸದಾತ್ ಒಂದು ಸಂಘಟನೆಯನ್ನು ರಚಿಸಿದ್ದರು. ಸೈಬರ್ ಬೆದರಿಕೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಜಾಗೃತಿ ಮೂಡಿಸಲು ಅವರು ಸೆಮಿನಾರ್ ಮತ್ತು ಸಭೆಗಳ ಮೂಲಕ ಶಾಲೆಗಳು ಮತ್ತು ಕಾಲೇಜುಗಳಲ್ಲಿ ಯುವಕರನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.

ಕಿಡ್ಸ್ ರೈಟ್ಸ್ ಸಂಘಟನೆಯ ಪ್ರಕಾರ, ಸೈಬರ್ ಬೆದರಿಕೆಗೆ ಒಳಗಾದ 300 ಕ್ಕೂ ಹೆಚ್ಚು ಸಂತ್ರಸ್ತರಿಗೆ ಈ ಅಪ್ಲಿಕೇಶನ್ ಸಹಕರಿಸಿದೆ. ಜೊತೆಗೆ ಇದು ಮಾನಸಿಕ ಆರೋಗ್ಯಕ್ಕೆ ಸಂಬಂಧಿಸಿದ ಸಮಸ್ಯೆಗಳಿಗೆ ಸಹಕರಿಸಿದೆ. ಇದರಿಂದ ಯುವಜನರು ಡಿಜಿಟಲ್ ಸಾಕ್ಷರತೆಯ ಶಿಕ್ಷಣವನ್ನು ಹೊಂದಿರುವ ತಮ್ಮ ಪ್ರದೇಶದ ಶಾಲೆಗಳಲ್ಲಿ ಸೈಬರ್ ಕ್ಲಬ್‌ಗಳನ್ನು ಸಹ ರಚಿಸಿದ್ದಾರೆ.

ಇದನ್ನೂ ಓದಿ: ಆರೋಗ್ಯ ಸೇತು ಆಪ್ ಕುರಿತ ಮಾಹಿತಿ ಇಲ್ಲ: ಕೇಂದ್ರ ಸರ್ಕಾರಕ್ಕೆ ನೋಟಿಸ್!

ಮಿಖಾಯಿಲ್ ಗೋರ್ಬಚೇವ್ ಅವರ ಅಧ್ಯಕ್ಷತೆಯಲ್ಲಿ 2005 ರಲ್ಲಿ ರೋಮ್‌ನಲ್ಲಿ ನಡೆದ ನೊಬೆಲ್ ಶಾಂತಿ ಪ್ರಶಸ್ತಿ ವಿಜೇತರ ವಿಶ್ವ ಶೃಂಗಸಭೆಯಲ್ಲಿ, ಕಿಡ್ಸ್ ರೈಟ್ಸ್ ಈ ಬಹುಮಾನವನ್ನು ನೀಡಲು ಪ್ರಾರಂಭಿಸಿತು. ಅಂದಿನಿಂದ, ಪ್ರತಿವರ್ಷ ನೊಬೆಲ್ ಶಾಂತಿ ಪ್ರಶಸ್ತಿ ವಿಜೇತರಿಂದ ಈ ಬಹುಮಾನವನ್ನು ನೀಡಲಾಗುತ್ತದೆ.

ಅತ್ಯುತ್ತಮ ಕೆಲಸಗಳನ್ನು ಮಾಡುತ್ತಿರುವ ಯುವಜನರನ್ನು ಗುರುತಿಸಿ, ಅವರ ಆಲೋಚನೆಗಳನ್ನು ಉತ್ತೇಜಿಸಲು ಮತ್ತು ಅವರ ಕೆಲಸವನ್ನು ಮತ್ತಷ್ಟು ಹೆಚ್ಚಿಸಲು ಒಂದು ವೇದಿಕೆಯನ್ನು ಒದಗಿಸಲಾಗುತ್ತದೆ. ವಿಜೇತರು ವಿಶ್ವವಿದ್ಯಾಲಯದ ಪದವಿ ತನಕ ಶಿಕ್ಷಣ ಪಡೆಯಲು ವಿದ್ಯಾರ್ಥಿವೇತನವನ್ನು ಪಡೆಯುತ್ತಾರೆ.


ಇದನ್ನೂ ಓದಿ: ವಿಕೃತ ಲೈಂಗಿಕ ಸಂತೃಪ್ತಿಗಾಗಿ ಮಕ್ಕಳ ದುರ್ಬಳಕೆ: ಒಂದೇ ವಾರದಲ್ಲಿ 41 ಮಂದಿ ಬಂಧನ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...