Homeಅಂತರಾಷ್ಟ್ರೀಯಬಾಂಗ್ಲಾದೇಶ: ಮಕ್ಕಳ ನೊಬೆಲ್ ಶಾಂತಿ ಪ್ರಶಸ್ತಿ ಪಡೆದ 17ರ ಯುವಕ ಸಾದತ್ ರಹಮಾನ್!

ಬಾಂಗ್ಲಾದೇಶ: ಮಕ್ಕಳ ನೊಬೆಲ್ ಶಾಂತಿ ಪ್ರಶಸ್ತಿ ಪಡೆದ 17ರ ಯುವಕ ಸಾದತ್ ರಹಮಾನ್!

42 ದೇಶಗಳ 142 ಅರ್ಜಿದಾರರಲ್ಲಿ ಸದತ್ ರಹಮಾನ್ ಆಯ್ಕೆಯಾಗಿದ್ದಾರೆ. ಸೈಬರ್ ಬೆದರಿಕೆಯಿಂದ ಬಳಲುತ್ತಿರುವ ಹದಿಹರೆಯದವರಿಗೆ ಸಹಾಯ ಮಾಡಲು ಅವರು ‘ಸೈಬರ್ ಟೀನ್ಸ್’ ಆಪ್‌ ಅನ್ನು ರಚಿಸಿದ್ದಾರೆ.

- Advertisement -
- Advertisement -

ಸೈಬರ್ ಬೆದರಿಕೆಗಳನ್ನು ಎದುರಿಸುವ ಮೊಬೈಲ್ ಅಪ್ಲಿಕೇಶನ್ ರಚಿಸಿದ್ದಕ್ಕಾಗಿ ಬಾಂಗ್ಲಾದೇಶದ ಯುವಕ ಸಾದತ್ ರಹಮಾನ್‌ಗೆ ಈ ವರ್ಷದ ಅಂತರರಾಷ್ಟ್ರೀಯ ಮಕ್ಕಳ ಶಾಂತಿ ಪ್ರಶಸ್ತಿಯನ್ನು ನೀಡಲಾಗಿದೆ. ಈ ಪ್ರಶಸ್ತಿಯನ್ನು ನೋಬೆಲ್ ಪ್ರಶಸ್ತಿ ವಿಜೇತರಾದ ಯೂಸುಫ್ ಮಲಾಲ ಘೋಷಿಸಿದರು.

ಸೈಬರ್ ಬೆದರಿಕೆಯನ್ನು ತಡೆಯಲು ಸಾಮಾಜಿಕ ಸಂಸ್ಥೆಯೊಂದನ್ನು ಕಟ್ಟಿ, ಮೊಬೈಲ್ ಅಪ್ಲಿಕೇಶನ್ “ಸೈಬರ್ ಟೀನ್ಸ್” ಅನ್ನು ಸ್ಥಾಪಿಸುವಲ್ಲಿ ತೊಡಗಿಸಿಕೊಂಡಿದ್ದಕ್ಕಾಗಿ ಶುಕ್ರವಾರ 17 ವರ್ಷದ ಯುವಕನಿಗೆ ಪ್ರಶಸ್ತಿಯನ್ನು ನೀಡಲಾಗಿದೆ ಎಂದು ನ್ಯೂಸ್ ಸರ್ವಿಸ್ ಡಿವಿಷನ್ ವರದಿ ಮಾಡಿದೆ.

ಇದನ್ನೂ ಓದಿ: ಸೈಬರ್‌ ದಾಳಿಯ ಬಗ್ಗೆ 20 ಲಕ್ಷ ಬಳಕೆದಾರರಿಗೆ ಎಚ್ಚರಿಕೆ ನೀಡಿದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ

ಮಕ್ಕಳ ಹಕ್ಕುಗಳಿಗಾಗಿ ಹೋರಾಡುವ ಮಗುವಿಗೆ ಅಂತರರಾಷ್ಟ್ರೀಯ ಮಕ್ಕಳ ಹಕ್ಕುಗಳ ಸಂಸ್ಥೆ ಕಿಡ್ಸ್ ರೈಟ್ಸ್ ಈ ಬಹುಮಾನವನ್ನು ನೀಡುತ್ತದೆ.

42 ದೇಶಗಳ 142 ಅರ್ಜಿದಾರರಲ್ಲಿ ಸದತ್ ರಹಮಾನ್ ಆಯ್ಕೆಯಾಗಿದ್ದಾರೆ. ಸೈಬರ್ ಬೆದರಿಕೆಯಿಂದ ಬಳಲುತ್ತಿರುವ ಹದಿಹರೆಯದವರಿಗೆ ಸಹಾಯ ಮಾಡಲು ಅವರು ‘ಸೈಬರ್ ಟೀನ್ಸ್’ ಆಪ್‌ ಅನ್ನು ರಚಿಸಿದ್ದಾರೆ. ಈ ಅಪ್ಲಿಕೇಶನ್ ಯುವಜನರಿಗೆ ಇಂಟರ್ನೆಟ್ ಸುರಕ್ಷತೆಯ ಬಗ್ಗೆ ಮಾಹಿತಿಯನ್ನು ಒದಗಿಸುತ್ತದೆ. ಸೈಬರ್ ಬೆದರಿಕೆಯನ್ನು ಸುರಕ್ಷಿತವಾಗಿ ವರದಿ ಮಾಡಲು ಇದು ಅವರಿಗೆ ಸಹಾಯ ಮಾಡುತ್ತದೆ.

ಇದನ್ನೂ ಓದಿ: ದೇಶದಲ್ಲಿ ೨೦೨೦ಕ್ಕೆ ಹೊಸ ರಾಷ್ಟ್ರೀಯ ಸೈಬರ್‌ ಭದ್ರತಾ ನೀತಿ ಜಾರಿಗೆ ತರಲು ಚಿಂತನೆ..!

ಸೈಬರ್ ತಜ್ಞರು, ಸಾಮಾಜಿಕ ಕಾರ್ಯಕರ್ತರು ಮತ್ತು ಪೊಲೀಸರನ್ನು ಒಟ್ಟುಗೂಡಿಸಲು ಸದಾತ್ ಒಂದು ಸಂಘಟನೆಯನ್ನು ರಚಿಸಿದ್ದರು. ಸೈಬರ್ ಬೆದರಿಕೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಜಾಗೃತಿ ಮೂಡಿಸಲು ಅವರು ಸೆಮಿನಾರ್ ಮತ್ತು ಸಭೆಗಳ ಮೂಲಕ ಶಾಲೆಗಳು ಮತ್ತು ಕಾಲೇಜುಗಳಲ್ಲಿ ಯುವಕರನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.

ಕಿಡ್ಸ್ ರೈಟ್ಸ್ ಸಂಘಟನೆಯ ಪ್ರಕಾರ, ಸೈಬರ್ ಬೆದರಿಕೆಗೆ ಒಳಗಾದ 300 ಕ್ಕೂ ಹೆಚ್ಚು ಸಂತ್ರಸ್ತರಿಗೆ ಈ ಅಪ್ಲಿಕೇಶನ್ ಸಹಕರಿಸಿದೆ. ಜೊತೆಗೆ ಇದು ಮಾನಸಿಕ ಆರೋಗ್ಯಕ್ಕೆ ಸಂಬಂಧಿಸಿದ ಸಮಸ್ಯೆಗಳಿಗೆ ಸಹಕರಿಸಿದೆ. ಇದರಿಂದ ಯುವಜನರು ಡಿಜಿಟಲ್ ಸಾಕ್ಷರತೆಯ ಶಿಕ್ಷಣವನ್ನು ಹೊಂದಿರುವ ತಮ್ಮ ಪ್ರದೇಶದ ಶಾಲೆಗಳಲ್ಲಿ ಸೈಬರ್ ಕ್ಲಬ್‌ಗಳನ್ನು ಸಹ ರಚಿಸಿದ್ದಾರೆ.

ಇದನ್ನೂ ಓದಿ: ಆರೋಗ್ಯ ಸೇತು ಆಪ್ ಕುರಿತ ಮಾಹಿತಿ ಇಲ್ಲ: ಕೇಂದ್ರ ಸರ್ಕಾರಕ್ಕೆ ನೋಟಿಸ್!

ಮಿಖಾಯಿಲ್ ಗೋರ್ಬಚೇವ್ ಅವರ ಅಧ್ಯಕ್ಷತೆಯಲ್ಲಿ 2005 ರಲ್ಲಿ ರೋಮ್‌ನಲ್ಲಿ ನಡೆದ ನೊಬೆಲ್ ಶಾಂತಿ ಪ್ರಶಸ್ತಿ ವಿಜೇತರ ವಿಶ್ವ ಶೃಂಗಸಭೆಯಲ್ಲಿ, ಕಿಡ್ಸ್ ರೈಟ್ಸ್ ಈ ಬಹುಮಾನವನ್ನು ನೀಡಲು ಪ್ರಾರಂಭಿಸಿತು. ಅಂದಿನಿಂದ, ಪ್ರತಿವರ್ಷ ನೊಬೆಲ್ ಶಾಂತಿ ಪ್ರಶಸ್ತಿ ವಿಜೇತರಿಂದ ಈ ಬಹುಮಾನವನ್ನು ನೀಡಲಾಗುತ್ತದೆ.

ಅತ್ಯುತ್ತಮ ಕೆಲಸಗಳನ್ನು ಮಾಡುತ್ತಿರುವ ಯುವಜನರನ್ನು ಗುರುತಿಸಿ, ಅವರ ಆಲೋಚನೆಗಳನ್ನು ಉತ್ತೇಜಿಸಲು ಮತ್ತು ಅವರ ಕೆಲಸವನ್ನು ಮತ್ತಷ್ಟು ಹೆಚ್ಚಿಸಲು ಒಂದು ವೇದಿಕೆಯನ್ನು ಒದಗಿಸಲಾಗುತ್ತದೆ. ವಿಜೇತರು ವಿಶ್ವವಿದ್ಯಾಲಯದ ಪದವಿ ತನಕ ಶಿಕ್ಷಣ ಪಡೆಯಲು ವಿದ್ಯಾರ್ಥಿವೇತನವನ್ನು ಪಡೆಯುತ್ತಾರೆ.


ಇದನ್ನೂ ಓದಿ: ವಿಕೃತ ಲೈಂಗಿಕ ಸಂತೃಪ್ತಿಗಾಗಿ ಮಕ್ಕಳ ದುರ್ಬಳಕೆ: ಒಂದೇ ವಾರದಲ್ಲಿ 41 ಮಂದಿ ಬಂಧನ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...