Homeಅಂತರಾಷ್ಟ್ರೀಯಬಾಂಗ್ಲಾದೇಶ: ಮಕ್ಕಳ ನೊಬೆಲ್ ಶಾಂತಿ ಪ್ರಶಸ್ತಿ ಪಡೆದ 17ರ ಯುವಕ ಸಾದತ್ ರಹಮಾನ್!

ಬಾಂಗ್ಲಾದೇಶ: ಮಕ್ಕಳ ನೊಬೆಲ್ ಶಾಂತಿ ಪ್ರಶಸ್ತಿ ಪಡೆದ 17ರ ಯುವಕ ಸಾದತ್ ರಹಮಾನ್!

42 ದೇಶಗಳ 142 ಅರ್ಜಿದಾರರಲ್ಲಿ ಸದತ್ ರಹಮಾನ್ ಆಯ್ಕೆಯಾಗಿದ್ದಾರೆ. ಸೈಬರ್ ಬೆದರಿಕೆಯಿಂದ ಬಳಲುತ್ತಿರುವ ಹದಿಹರೆಯದವರಿಗೆ ಸಹಾಯ ಮಾಡಲು ಅವರು ‘ಸೈಬರ್ ಟೀನ್ಸ್’ ಆಪ್‌ ಅನ್ನು ರಚಿಸಿದ್ದಾರೆ.

- Advertisement -
- Advertisement -

ಸೈಬರ್ ಬೆದರಿಕೆಗಳನ್ನು ಎದುರಿಸುವ ಮೊಬೈಲ್ ಅಪ್ಲಿಕೇಶನ್ ರಚಿಸಿದ್ದಕ್ಕಾಗಿ ಬಾಂಗ್ಲಾದೇಶದ ಯುವಕ ಸಾದತ್ ರಹಮಾನ್‌ಗೆ ಈ ವರ್ಷದ ಅಂತರರಾಷ್ಟ್ರೀಯ ಮಕ್ಕಳ ಶಾಂತಿ ಪ್ರಶಸ್ತಿಯನ್ನು ನೀಡಲಾಗಿದೆ. ಈ ಪ್ರಶಸ್ತಿಯನ್ನು ನೋಬೆಲ್ ಪ್ರಶಸ್ತಿ ವಿಜೇತರಾದ ಯೂಸುಫ್ ಮಲಾಲ ಘೋಷಿಸಿದರು.

ಸೈಬರ್ ಬೆದರಿಕೆಯನ್ನು ತಡೆಯಲು ಸಾಮಾಜಿಕ ಸಂಸ್ಥೆಯೊಂದನ್ನು ಕಟ್ಟಿ, ಮೊಬೈಲ್ ಅಪ್ಲಿಕೇಶನ್ “ಸೈಬರ್ ಟೀನ್ಸ್” ಅನ್ನು ಸ್ಥಾಪಿಸುವಲ್ಲಿ ತೊಡಗಿಸಿಕೊಂಡಿದ್ದಕ್ಕಾಗಿ ಶುಕ್ರವಾರ 17 ವರ್ಷದ ಯುವಕನಿಗೆ ಪ್ರಶಸ್ತಿಯನ್ನು ನೀಡಲಾಗಿದೆ ಎಂದು ನ್ಯೂಸ್ ಸರ್ವಿಸ್ ಡಿವಿಷನ್ ವರದಿ ಮಾಡಿದೆ.

ಇದನ್ನೂ ಓದಿ: ಸೈಬರ್‌ ದಾಳಿಯ ಬಗ್ಗೆ 20 ಲಕ್ಷ ಬಳಕೆದಾರರಿಗೆ ಎಚ್ಚರಿಕೆ ನೀಡಿದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ

ಮಕ್ಕಳ ಹಕ್ಕುಗಳಿಗಾಗಿ ಹೋರಾಡುವ ಮಗುವಿಗೆ ಅಂತರರಾಷ್ಟ್ರೀಯ ಮಕ್ಕಳ ಹಕ್ಕುಗಳ ಸಂಸ್ಥೆ ಕಿಡ್ಸ್ ರೈಟ್ಸ್ ಈ ಬಹುಮಾನವನ್ನು ನೀಡುತ್ತದೆ.

42 ದೇಶಗಳ 142 ಅರ್ಜಿದಾರರಲ್ಲಿ ಸದತ್ ರಹಮಾನ್ ಆಯ್ಕೆಯಾಗಿದ್ದಾರೆ. ಸೈಬರ್ ಬೆದರಿಕೆಯಿಂದ ಬಳಲುತ್ತಿರುವ ಹದಿಹರೆಯದವರಿಗೆ ಸಹಾಯ ಮಾಡಲು ಅವರು ‘ಸೈಬರ್ ಟೀನ್ಸ್’ ಆಪ್‌ ಅನ್ನು ರಚಿಸಿದ್ದಾರೆ. ಈ ಅಪ್ಲಿಕೇಶನ್ ಯುವಜನರಿಗೆ ಇಂಟರ್ನೆಟ್ ಸುರಕ್ಷತೆಯ ಬಗ್ಗೆ ಮಾಹಿತಿಯನ್ನು ಒದಗಿಸುತ್ತದೆ. ಸೈಬರ್ ಬೆದರಿಕೆಯನ್ನು ಸುರಕ್ಷಿತವಾಗಿ ವರದಿ ಮಾಡಲು ಇದು ಅವರಿಗೆ ಸಹಾಯ ಮಾಡುತ್ತದೆ.

ಇದನ್ನೂ ಓದಿ: ದೇಶದಲ್ಲಿ ೨೦೨೦ಕ್ಕೆ ಹೊಸ ರಾಷ್ಟ್ರೀಯ ಸೈಬರ್‌ ಭದ್ರತಾ ನೀತಿ ಜಾರಿಗೆ ತರಲು ಚಿಂತನೆ..!

ಸೈಬರ್ ತಜ್ಞರು, ಸಾಮಾಜಿಕ ಕಾರ್ಯಕರ್ತರು ಮತ್ತು ಪೊಲೀಸರನ್ನು ಒಟ್ಟುಗೂಡಿಸಲು ಸದಾತ್ ಒಂದು ಸಂಘಟನೆಯನ್ನು ರಚಿಸಿದ್ದರು. ಸೈಬರ್ ಬೆದರಿಕೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಜಾಗೃತಿ ಮೂಡಿಸಲು ಅವರು ಸೆಮಿನಾರ್ ಮತ್ತು ಸಭೆಗಳ ಮೂಲಕ ಶಾಲೆಗಳು ಮತ್ತು ಕಾಲೇಜುಗಳಲ್ಲಿ ಯುವಕರನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.

ಕಿಡ್ಸ್ ರೈಟ್ಸ್ ಸಂಘಟನೆಯ ಪ್ರಕಾರ, ಸೈಬರ್ ಬೆದರಿಕೆಗೆ ಒಳಗಾದ 300 ಕ್ಕೂ ಹೆಚ್ಚು ಸಂತ್ರಸ್ತರಿಗೆ ಈ ಅಪ್ಲಿಕೇಶನ್ ಸಹಕರಿಸಿದೆ. ಜೊತೆಗೆ ಇದು ಮಾನಸಿಕ ಆರೋಗ್ಯಕ್ಕೆ ಸಂಬಂಧಿಸಿದ ಸಮಸ್ಯೆಗಳಿಗೆ ಸಹಕರಿಸಿದೆ. ಇದರಿಂದ ಯುವಜನರು ಡಿಜಿಟಲ್ ಸಾಕ್ಷರತೆಯ ಶಿಕ್ಷಣವನ್ನು ಹೊಂದಿರುವ ತಮ್ಮ ಪ್ರದೇಶದ ಶಾಲೆಗಳಲ್ಲಿ ಸೈಬರ್ ಕ್ಲಬ್‌ಗಳನ್ನು ಸಹ ರಚಿಸಿದ್ದಾರೆ.

ಇದನ್ನೂ ಓದಿ: ಆರೋಗ್ಯ ಸೇತು ಆಪ್ ಕುರಿತ ಮಾಹಿತಿ ಇಲ್ಲ: ಕೇಂದ್ರ ಸರ್ಕಾರಕ್ಕೆ ನೋಟಿಸ್!

ಮಿಖಾಯಿಲ್ ಗೋರ್ಬಚೇವ್ ಅವರ ಅಧ್ಯಕ್ಷತೆಯಲ್ಲಿ 2005 ರಲ್ಲಿ ರೋಮ್‌ನಲ್ಲಿ ನಡೆದ ನೊಬೆಲ್ ಶಾಂತಿ ಪ್ರಶಸ್ತಿ ವಿಜೇತರ ವಿಶ್ವ ಶೃಂಗಸಭೆಯಲ್ಲಿ, ಕಿಡ್ಸ್ ರೈಟ್ಸ್ ಈ ಬಹುಮಾನವನ್ನು ನೀಡಲು ಪ್ರಾರಂಭಿಸಿತು. ಅಂದಿನಿಂದ, ಪ್ರತಿವರ್ಷ ನೊಬೆಲ್ ಶಾಂತಿ ಪ್ರಶಸ್ತಿ ವಿಜೇತರಿಂದ ಈ ಬಹುಮಾನವನ್ನು ನೀಡಲಾಗುತ್ತದೆ.

ಅತ್ಯುತ್ತಮ ಕೆಲಸಗಳನ್ನು ಮಾಡುತ್ತಿರುವ ಯುವಜನರನ್ನು ಗುರುತಿಸಿ, ಅವರ ಆಲೋಚನೆಗಳನ್ನು ಉತ್ತೇಜಿಸಲು ಮತ್ತು ಅವರ ಕೆಲಸವನ್ನು ಮತ್ತಷ್ಟು ಹೆಚ್ಚಿಸಲು ಒಂದು ವೇದಿಕೆಯನ್ನು ಒದಗಿಸಲಾಗುತ್ತದೆ. ವಿಜೇತರು ವಿಶ್ವವಿದ್ಯಾಲಯದ ಪದವಿ ತನಕ ಶಿಕ್ಷಣ ಪಡೆಯಲು ವಿದ್ಯಾರ್ಥಿವೇತನವನ್ನು ಪಡೆಯುತ್ತಾರೆ.


ಇದನ್ನೂ ಓದಿ: ವಿಕೃತ ಲೈಂಗಿಕ ಸಂತೃಪ್ತಿಗಾಗಿ ಮಕ್ಕಳ ದುರ್ಬಳಕೆ: ಒಂದೇ ವಾರದಲ್ಲಿ 41 ಮಂದಿ ಬಂಧನ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...