Homeಅಂತರಾಷ್ಟ್ರೀಯಬಾಂಗ್ಲಾದೇಶ: ಮಕ್ಕಳ ನೊಬೆಲ್ ಶಾಂತಿ ಪ್ರಶಸ್ತಿ ಪಡೆದ 17ರ ಯುವಕ ಸಾದತ್ ರಹಮಾನ್!

ಬಾಂಗ್ಲಾದೇಶ: ಮಕ್ಕಳ ನೊಬೆಲ್ ಶಾಂತಿ ಪ್ರಶಸ್ತಿ ಪಡೆದ 17ರ ಯುವಕ ಸಾದತ್ ರಹಮಾನ್!

42 ದೇಶಗಳ 142 ಅರ್ಜಿದಾರರಲ್ಲಿ ಸದತ್ ರಹಮಾನ್ ಆಯ್ಕೆಯಾಗಿದ್ದಾರೆ. ಸೈಬರ್ ಬೆದರಿಕೆಯಿಂದ ಬಳಲುತ್ತಿರುವ ಹದಿಹರೆಯದವರಿಗೆ ಸಹಾಯ ಮಾಡಲು ಅವರು ‘ಸೈಬರ್ ಟೀನ್ಸ್’ ಆಪ್‌ ಅನ್ನು ರಚಿಸಿದ್ದಾರೆ.

- Advertisement -
- Advertisement -

ಸೈಬರ್ ಬೆದರಿಕೆಗಳನ್ನು ಎದುರಿಸುವ ಮೊಬೈಲ್ ಅಪ್ಲಿಕೇಶನ್ ರಚಿಸಿದ್ದಕ್ಕಾಗಿ ಬಾಂಗ್ಲಾದೇಶದ ಯುವಕ ಸಾದತ್ ರಹಮಾನ್‌ಗೆ ಈ ವರ್ಷದ ಅಂತರರಾಷ್ಟ್ರೀಯ ಮಕ್ಕಳ ಶಾಂತಿ ಪ್ರಶಸ್ತಿಯನ್ನು ನೀಡಲಾಗಿದೆ. ಈ ಪ್ರಶಸ್ತಿಯನ್ನು ನೋಬೆಲ್ ಪ್ರಶಸ್ತಿ ವಿಜೇತರಾದ ಯೂಸುಫ್ ಮಲಾಲ ಘೋಷಿಸಿದರು.

ಸೈಬರ್ ಬೆದರಿಕೆಯನ್ನು ತಡೆಯಲು ಸಾಮಾಜಿಕ ಸಂಸ್ಥೆಯೊಂದನ್ನು ಕಟ್ಟಿ, ಮೊಬೈಲ್ ಅಪ್ಲಿಕೇಶನ್ “ಸೈಬರ್ ಟೀನ್ಸ್” ಅನ್ನು ಸ್ಥಾಪಿಸುವಲ್ಲಿ ತೊಡಗಿಸಿಕೊಂಡಿದ್ದಕ್ಕಾಗಿ ಶುಕ್ರವಾರ 17 ವರ್ಷದ ಯುವಕನಿಗೆ ಪ್ರಶಸ್ತಿಯನ್ನು ನೀಡಲಾಗಿದೆ ಎಂದು ನ್ಯೂಸ್ ಸರ್ವಿಸ್ ಡಿವಿಷನ್ ವರದಿ ಮಾಡಿದೆ.

ಇದನ್ನೂ ಓದಿ: ಸೈಬರ್‌ ದಾಳಿಯ ಬಗ್ಗೆ 20 ಲಕ್ಷ ಬಳಕೆದಾರರಿಗೆ ಎಚ್ಚರಿಕೆ ನೀಡಿದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ

ಮಕ್ಕಳ ಹಕ್ಕುಗಳಿಗಾಗಿ ಹೋರಾಡುವ ಮಗುವಿಗೆ ಅಂತರರಾಷ್ಟ್ರೀಯ ಮಕ್ಕಳ ಹಕ್ಕುಗಳ ಸಂಸ್ಥೆ ಕಿಡ್ಸ್ ರೈಟ್ಸ್ ಈ ಬಹುಮಾನವನ್ನು ನೀಡುತ್ತದೆ.

42 ದೇಶಗಳ 142 ಅರ್ಜಿದಾರರಲ್ಲಿ ಸದತ್ ರಹಮಾನ್ ಆಯ್ಕೆಯಾಗಿದ್ದಾರೆ. ಸೈಬರ್ ಬೆದರಿಕೆಯಿಂದ ಬಳಲುತ್ತಿರುವ ಹದಿಹರೆಯದವರಿಗೆ ಸಹಾಯ ಮಾಡಲು ಅವರು ‘ಸೈಬರ್ ಟೀನ್ಸ್’ ಆಪ್‌ ಅನ್ನು ರಚಿಸಿದ್ದಾರೆ. ಈ ಅಪ್ಲಿಕೇಶನ್ ಯುವಜನರಿಗೆ ಇಂಟರ್ನೆಟ್ ಸುರಕ್ಷತೆಯ ಬಗ್ಗೆ ಮಾಹಿತಿಯನ್ನು ಒದಗಿಸುತ್ತದೆ. ಸೈಬರ್ ಬೆದರಿಕೆಯನ್ನು ಸುರಕ್ಷಿತವಾಗಿ ವರದಿ ಮಾಡಲು ಇದು ಅವರಿಗೆ ಸಹಾಯ ಮಾಡುತ್ತದೆ.

ಇದನ್ನೂ ಓದಿ: ದೇಶದಲ್ಲಿ ೨೦೨೦ಕ್ಕೆ ಹೊಸ ರಾಷ್ಟ್ರೀಯ ಸೈಬರ್‌ ಭದ್ರತಾ ನೀತಿ ಜಾರಿಗೆ ತರಲು ಚಿಂತನೆ..!

ಸೈಬರ್ ತಜ್ಞರು, ಸಾಮಾಜಿಕ ಕಾರ್ಯಕರ್ತರು ಮತ್ತು ಪೊಲೀಸರನ್ನು ಒಟ್ಟುಗೂಡಿಸಲು ಸದಾತ್ ಒಂದು ಸಂಘಟನೆಯನ್ನು ರಚಿಸಿದ್ದರು. ಸೈಬರ್ ಬೆದರಿಕೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಜಾಗೃತಿ ಮೂಡಿಸಲು ಅವರು ಸೆಮಿನಾರ್ ಮತ್ತು ಸಭೆಗಳ ಮೂಲಕ ಶಾಲೆಗಳು ಮತ್ತು ಕಾಲೇಜುಗಳಲ್ಲಿ ಯುವಕರನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.

ಕಿಡ್ಸ್ ರೈಟ್ಸ್ ಸಂಘಟನೆಯ ಪ್ರಕಾರ, ಸೈಬರ್ ಬೆದರಿಕೆಗೆ ಒಳಗಾದ 300 ಕ್ಕೂ ಹೆಚ್ಚು ಸಂತ್ರಸ್ತರಿಗೆ ಈ ಅಪ್ಲಿಕೇಶನ್ ಸಹಕರಿಸಿದೆ. ಜೊತೆಗೆ ಇದು ಮಾನಸಿಕ ಆರೋಗ್ಯಕ್ಕೆ ಸಂಬಂಧಿಸಿದ ಸಮಸ್ಯೆಗಳಿಗೆ ಸಹಕರಿಸಿದೆ. ಇದರಿಂದ ಯುವಜನರು ಡಿಜಿಟಲ್ ಸಾಕ್ಷರತೆಯ ಶಿಕ್ಷಣವನ್ನು ಹೊಂದಿರುವ ತಮ್ಮ ಪ್ರದೇಶದ ಶಾಲೆಗಳಲ್ಲಿ ಸೈಬರ್ ಕ್ಲಬ್‌ಗಳನ್ನು ಸಹ ರಚಿಸಿದ್ದಾರೆ.

ಇದನ್ನೂ ಓದಿ: ಆರೋಗ್ಯ ಸೇತು ಆಪ್ ಕುರಿತ ಮಾಹಿತಿ ಇಲ್ಲ: ಕೇಂದ್ರ ಸರ್ಕಾರಕ್ಕೆ ನೋಟಿಸ್!

ಮಿಖಾಯಿಲ್ ಗೋರ್ಬಚೇವ್ ಅವರ ಅಧ್ಯಕ್ಷತೆಯಲ್ಲಿ 2005 ರಲ್ಲಿ ರೋಮ್‌ನಲ್ಲಿ ನಡೆದ ನೊಬೆಲ್ ಶಾಂತಿ ಪ್ರಶಸ್ತಿ ವಿಜೇತರ ವಿಶ್ವ ಶೃಂಗಸಭೆಯಲ್ಲಿ, ಕಿಡ್ಸ್ ರೈಟ್ಸ್ ಈ ಬಹುಮಾನವನ್ನು ನೀಡಲು ಪ್ರಾರಂಭಿಸಿತು. ಅಂದಿನಿಂದ, ಪ್ರತಿವರ್ಷ ನೊಬೆಲ್ ಶಾಂತಿ ಪ್ರಶಸ್ತಿ ವಿಜೇತರಿಂದ ಈ ಬಹುಮಾನವನ್ನು ನೀಡಲಾಗುತ್ತದೆ.

ಅತ್ಯುತ್ತಮ ಕೆಲಸಗಳನ್ನು ಮಾಡುತ್ತಿರುವ ಯುವಜನರನ್ನು ಗುರುತಿಸಿ, ಅವರ ಆಲೋಚನೆಗಳನ್ನು ಉತ್ತೇಜಿಸಲು ಮತ್ತು ಅವರ ಕೆಲಸವನ್ನು ಮತ್ತಷ್ಟು ಹೆಚ್ಚಿಸಲು ಒಂದು ವೇದಿಕೆಯನ್ನು ಒದಗಿಸಲಾಗುತ್ತದೆ. ವಿಜೇತರು ವಿಶ್ವವಿದ್ಯಾಲಯದ ಪದವಿ ತನಕ ಶಿಕ್ಷಣ ಪಡೆಯಲು ವಿದ್ಯಾರ್ಥಿವೇತನವನ್ನು ಪಡೆಯುತ್ತಾರೆ.


ಇದನ್ನೂ ಓದಿ: ವಿಕೃತ ಲೈಂಗಿಕ ಸಂತೃಪ್ತಿಗಾಗಿ ಮಕ್ಕಳ ದುರ್ಬಳಕೆ: ಒಂದೇ ವಾರದಲ್ಲಿ 41 ಮಂದಿ ಬಂಧನ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...