Homeಕರೋನಾ ತಲ್ಲಣಓಟುಗಳ ನಡುವೆ ನುಸುಳಿದ ಎರಡನೇ ಅಲೆಯ ದುರಂತಕ್ಕೆ ಮೋದಿ ಆಡಳಿತವೇ ಕಾರಣ!

ಓಟುಗಳ ನಡುವೆ ನುಸುಳಿದ ಎರಡನೇ ಅಲೆಯ ದುರಂತಕ್ಕೆ ಮೋದಿ ಆಡಳಿತವೇ ಕಾರಣ!

- Advertisement -
- Advertisement -

‘ಮೋದಿಯ ನಾಯಕತ್ವ ಮತ್ತು ಆಡಳಿತ ಶೈಲಿಯೇ ಕೋವಿಡ್ ಉಲ್ಬಣಕ್ಕೆ ಕಾರಣ. ಮೋದಿ ಒಬ್ಬ ‘ಮೆಗಾಲೊಮ್ಯಾನಿಯಾಕ್’ (ತಾನೇ ಶಕ್ತಿವಂತ, ತಾನೆ ಬುದ್ಧಿವಂತ ಎಂಬ ಹುಸಿ ಪ್ರತಿಷ್ಠೆಯ ಮನುಷ್ಯ) ಎಂದು ಭಾವಿಸಿದ್ದಾರೆ…….

ಎರಡು ದಿನದ ಹಿಂದೆ, ಕೋವಿಡ್ ಕುರಿತಂತೆ ಎನ್‌ಡಿಟಿವಿ ಮತ್ತು ದಿ ವೈರ್‌ಗೆ ನೀಡಿದ ಸಂದರ್ಶನದಲ್ಲಿ ಪ್ರಸಿದ್ಧ ಇತಿಹಾಸಕಾರ ಮತ್ತು ರಾಜಕೀಯ ಚಿಂತಹ ರಾಮಚಂದ್ರ ಗುಹಾ ಹೀಗೆ ವಿಶ್ಲೇಷಣೆ ಮಾಡಿದ್ದಾರೆ.

ರಾಜಕೀಯ ವಿಶ್ಲೇಷಕ ಝೈನಬ್ ಸಿಕಂದರ್, ಮೊದಲ ಅಲೆ ತಣ್ಣಗಾದ ನಂತರ ಅದು ತಮ್ಮದೇ ಯಶಸ್ಸು ಎಂಬಂತೆ ಬೀಗಿದ ಮೋದಿ ಸರ್ಕಾರ, ತಜ್ಞರು ಎರಡನೇ ಅಲೆಯ ಬಗ್ಗೆ ಎಚ್ಚರಿಸಿದರೂ, ಚುನಾವಣೆ ಗೆಲ್ಲುವುದೇ ಮುಖ್ಯ ಎಂಬಂತೆ ಉಡಾಫೆ ಮಾಡಿದ್ದೇ 2ನೆ ಅಲೆ ತೀವ್ರವಾಗಲು ಕಾರಣ ಎಂದು ದಿ ಪ್ರಿಂಟ್‌ನಲ್ಲಿ ಬರೆದಿದ್ದಾರೆ.

ರಾಮಚಂದ್ರ ಗುಹಾ ಪ್ರಕಾರ, ಮೋದಿ ಯಾವ ತಜ್ಞರ ಅಭಿಪ್ರಾಯಕ್ಕೂ ಬೆಲೆ ಕೊಡುವುದಿಲ್ಲ. ಅವರು ನೇಮಿಸಿಕೊಂಡ ತಜ್ಞರಲ್ಲಿ ಬಹುಪಾಲು ಜನ ಮೋದಿಯವರ ಮನದಾಳದ ಇಂಗಿತವನ್ನೇ ಸಲಹೆ ಮಾಡುತ್ತಾರೆ, ಮೋದಿ ಖುಷಿಗೊಳ್ಳುತ್ತಾರೆ. ಹೀಗಾಗಿ ಹೊರಗಿನ ಮತ್ತು ಸ್ವತಂತ್ರ ತಜ್ಞರು ಮುಂದಿನ ಅಪಾಯದ ಬಗ್ಗೆ ನವೆಂಬರ್‌ನಿಂದಲೇ ಎಚ್ಚರಿಕೆ ನೀಡುತ್ತಿದ್ದರೂ ಮೋದಿಯವರು ಅದನ್ನು ಕೇರ್ ಮಾಡಲಿಲ್ಲ ಎಂದು ಅಭಿಪ್ರಾಯ ಪಡುತ್ತಾರೆ.

ದೆಹಲಿ, ಮಹಾರಾಷ್ಟ್ರ ಮತ್ತು ಕೇರಳ ರಾಜ್ಯಗಳು ತೀವ್ರವಾದ ಮೊದಲ ಅಲೆಗೆ ತತ್ತರಿಸಿ, ಎರಡನೇ ಅಲೆ ಪ್ರವೇಶ ಮಾಡುವ ಹೊತ್ತಿಗೆ ಆರ್ಥಿಕವಾಗಿ ಹೈರಾಣಾಗಿದ್ದವು. ಇದ್ದುದರಲ್ಲಿ ಕೇರಳ ಮತ್ತು ನಂತರದಲ್ಲಿ ದೆಹಲಿ, ಮಹಾರಾಷ್ಟ್ರ ಸರ್ಕಾರಗಳು ತಮ್ಮ ರಾಜ್ಯಕ್ಕೆ ಕಾಡಿದ್ದ ಮೊದಲ ಅಲೆಯನ್ನು ಒಂದು ಹಂತಕ್ಕೆ ತರುವಲ್ಲಿ ಶ್ರಮ ವಹಿಸಿದ್ದವು.

ಆದರೆ ಎರಡನೆ ಅಲೆ ಜೋರಾದಾಗ ಅವು ಸಹಾಯಕ್ಕೆ ಮನವಿ ಮಾಡುತ್ತಿದ್ದರೆ, ಮೋದಿಯವರು ಬಂಗಾಳ ಮತ್ತು ಇತರ ಚುನಾವಣೆಗಳಲ್ಲಿ ನಿರತರಾಗಿದ್ದರು. ಈ ಮೂರು ರಾಜ್ಯಗಳಲ್ಲಿ ಬಿಜೆಪಿಯೇತರ ಸರ್ಕಾರಗಳಿವೆ ಎಂಬ ಕ್ಷುಲ್ಲಕ ರಾಜಕೀಯ ಅಂಶ ಅವರ ತಲೆಯಲ್ಲಿ ಇದ್ದೇ ಇದೆ. ಅದಿರಲಿ, ಅವರ ಗುಜರಾತ್ ಮತ್ತು ಉತ್ತರಪ್ರದೇಶ ಸರ್ಕಾರಗಳು ತೀವ್ರ ಕೋವಿಡ್ ಹಾನಿ ಅನುಭವಿಸಿಯೂ ಅಂಕಿಅಂಶ ಮುಚ್ಚಿಡುತ್ತ 2ನೆ ಅಲೆ ತೀವ್ರಗೊಳ್ಳಲು ಕಾರಣವಾದ ಮೇಲೂ ಆ ರಾಜ್ಯಗಳಿಗೆ ಕೇಂದ್ರ ಯಾವ ಸಂದೇಶ ಅಥವಾ ಎಚ್ಚರಿಕೆಯನ್ನು ನೀಡಲಿಲ್ಲ.

ಕರ್ನಾಟಕದ ಸರ್ಕಾರದ್ದು ಇನ್ನೊಂದು ಸಮಸ್ಯೆ. ಇದು ಉತ್ತರಪ್ರದೇಶ ಅಥವಾ ಗುಜರಾತಿನಂತೆ ಕೋವಿಡ್ ಸಾವಿನ, ಪಾಸಿಟಿವ್ ಪ್ರಕರಣಗಳ ಸಂಖ್ಯೆಯನ್ನು ಉದ್ದೇಶಪೂರ್ವಕವಾಗಿ ಮುಚ್ಚಿಡಲಿಲ್ಲ. ಆದರೆ ಮೋದಿಯವರಂತೆಯೇ ಈ ಸರ್ಕಾರ ಕೂಡ ತಜ್ಞರ ಮಾತನ್ನು ಗಂಭೀರವಾಗಿ ಪರಿಗಣಿಸಲೇ ಇಲ್ಲ. ಆರೋಗ್ಯ ಸಚಿವ ಡಾ. ಸುಧಾಕರ್ ಮೀಡಿಯಾ ಮುಂದೆ ಹೇಳುವ ಯೋಜನೆಗಳು ರಚನಾತ್ಮಕ ಎನಿಸುತ್ತವೆ, ಆದರೆ ಅವೆಂದೂ ಜಾರಿಗೆ ಬರಲಿಲ್ಲ. ಇಲ್ಲೂ ಆಕ್ಸಿಜನ್, ವೆಂಟಿಲೇಟರ್ ಸಮಸ್ಯೆ ಇದ್ದರೂ ರಾಜ್ಯ ಸರ್ಕಾರ ಮಾತ್ರ ಅಡ್ಡಗೋಡೆ ಮೇಲೆ ದೀಪ ಇಡುತ್ತ ಬಂದಿದೆ.

ಕಳೆದ ವಾರ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ, ರಾಜ್ಯದಲ್ಲಿ ಆಕ್ಸಿಜನ್ ಕೊರತೆ, ಲಸಿಕೆ ಕೊರತೆ, ರೆಮ್‌ಡಿಸಿವಿಯರ್ ಕೊರತೆ ಬಗ್ಗೆ ರಾಜ್ಯದ ಪ್ರತಿನಿಧಿ ತಿಳಿಸಿದರು. ಆದರೆ ಈ ಸರ್ಕಾರದ ಸಚಿವರ‍್ಯಾರೂ ಈ ಸತ್ಯವನ್ನು ಒಪ್ಪಿಕೊಳ್ಳುತ್ತಲೇ ಇಲ್ಲ. ಹಾಗೆಯೇ ನಮ್ಮ ಸಂಸದರ‍್ಯಾರೂ ಕೂಡ ರಾಜ್ಯಕ್ಕೆ ಆರೋಗ್ಯ ಸೌಲಭ್ಯಗಳನ್ನು ತುರ್ತಾಗಿ ಒದಗಿಸಿ ಎಂಬ ಒಂದೇ ಒಂದು ಬೇಡಿಕೆಯನ್ನೂ ಇವತ್ತಿಗೂ ಇಟ್ಟಿಲ್ಲ!

ಅಂದರೆ ಇಲ್ಲಿ ಮೋದಿ ಮತ್ತು ಬಿಜೆಪಿ ಆಳ್ವಿಕೆಯ ರಾಜ್ಯ ಸರ್ಕಾರಗಳು, ಕಳೆದ 4 ತಿಂಗಳಿಂದ ‘ಎಲ್ಲವೂ ಸರಿಯಾಗಿದೆ’ ಎಂಬ ಹುಸಿ ಸಂತೃಪ್ತಿಕರ ಭಾವವನ್ನು ವ್ಯಕ್ತಪಡಿಸುತ್ತ ಜನರನ್ನೂ ದಾರಿ ತಪ್ಪಿಸುತ್ತ ಬಂದವು. ತೊಂದರೆಯಲ್ಲಿದ್ದ ಬಿಜೆಪಿಯೇತರ ರಾಜ್ಯಗಳ ಬೇಡಿಕೆಗಳನ್ನು ಕೇಂದ್ರ ನಿರ್ಲಕ್ಷಿಸುತ್ತ ಬಂದಿತು. ಈಗಲೂ ಅದಕ್ಕೆ ಬಂಗಾಳ ಚುನಾವಣೆಯೇ ಮುಖ್ಯವಾಗಿದೆ. ದೆಹಲಿ ಹೈಕೋರ್ಟ್ ಸತತ ಎರಡು ದಿನಗಳ ಕಾಲ ತರಾಟೆಗೆ ತೆಗೆದುಕೊಂಡ ನಂತರವೂ ಕೇಂದ್ರ ಸರ್ಕಾರಕ್ಕೆ ಅದು ಅವಮಾನ ಅನಿಸಿಯೇ ಇಲ್ಲ ಎಂಬಂತೆ ಕಾಣುತ್ತಿದೆ.

ಝೂನಬ್ ಸಿಕಂದರ್ ಬರೆಯುತ್ತಾರೆ, ‘ಚಪ್ಪಾಳೆಯಿಂದ ಮೋದಿ ಕುರುಡರಾದರು. ಅವರದೇ ಅಭಿಮಾನಿಗಳ ಪ್ರಶಂಸೆಗಳಿಂದ ಉಬ್ಬಿ ಹೋದರು. ಜಾಗತಿಕ ಪ್ರಶಂಸೆಯನ್ನು ಮೋದಿ ಎಷ್ಟು ಪ್ರೀತಿಸುತ್ತಾರೆ ಎಂಬುದು ನಮಗೆಲ್ಲರಿಗೂ ತಿಳಿದಿದೆ. ಅವರು ಎಲ್ಲಿಗೆ ಹೋದರೂ ಅದನ್ನು ಪ್ರಭಾವಲಯದಂತೆ ಧರಿಸುತ್ತಾರೆ, ಅವರು ಭಾರತವಲ್ಲ, ನಿಜವಾದ ವಿಶ್ವ ಗುರು ಎಂದು ಮತದಾರರಿಗೆ ಮನವರಿಕೆ ಮಾಡಲು ಬಯಸುತ್ತಾರೆ. ಸಮುಂದರ್ ಪೆ ಚರ್ಚಾ ಫೋಟೋ-ಶೂಟ್‌ಗಾಗಿ ವಿಶ್ವ ನಾಯಕರನ್ನು ತಬ್ಬಿಕೊಂಡು ಅವರೊಂದಿಗೆ ಬೀಚ್‌ನಲ್ಲಿ ನಡೆಯುವಾಗ ಇಂತಹ ವಿಶ್ವಗುರು ಭ್ರಮೆಯಲ್ಲಿ ಅವರು ಇರುತ್ತಾರೆ. ಅವರ ಈ ನಡವಳಿಕೆಯೇ ಇವತ್ತಿನ ಈ ಬಿಕ್ಕಟ್ಟಿನ ಮೂಲವಾಗಿದೆ…..

ಆದ್ದರಿಂದ, ಹೊಸ ರೂಪಾಂತರವು ಭಾರತಕ್ಕೆ ಬಂದಿದೆ ಮತ್ತು ‘ಇಂಡಿಯನ್’ ರೂಪಾಂತರದ ಸಾಧ್ಯತೆಯೂ ಇದೆ ಎಂದು ತಜ್ಞರು ಹೇಳಿದ್ದನ್ನು ಮೋದಿ ಸರ್ಕಾರ ನಿರ್ಲಕ್ಷಿಸುತ್ತಲೇ ಬಂದಿದ್ದರ ಪರಿಣಾಮವೇ ಇವತ್ತಿನ ದುರಂತಕ್ಕೆ ಕಾರಣ….’

ರಾಮಚಂದ್ರ ಗುಹಾ ಪ್ರಕಾರ, ಹಿಂದೆಲ್ಲ ಸರ್ಕಾರಗಳು ದಕ್ಷ, ದೂರದೃಷ್ಟಿಯುಳ್ಳ ಅಧಿಕಾರಿಗಳನ್ನು ಪ್ರಮುಖ ಸ್ಥಾನಕ್ಕೆ ನೇಮಿಸುತ್ತಿದ್ದವು. ಅಲ್ಲಿ ಪಕ್ಷನಿಷ್ಠೆ ಅಥವಾ ವ್ಯಕ್ತಿನಿಷ್ಠೆ ನೋಡುತ್ತಿರಲಿಲ್ಲ. ಆದರೆ 2014ರ ನಂತರ ಮೋದಿಯವರು ಗುಜರಾತಿ ಅಧಿಕಾರಿಗಳನ್ನು ದೆಹಲಿಗೆ ಕರೆ ತಂದರು. ಇವರೆಲ್ಲ ವ್ಯಕ್ತಿಪೂಜೆಯ ಆರಾಧಕರು, ಪಿಎಂಒ ಕೂಡ ಅಂತಹವರಿಂದಲೇ ತುಂಬಿತು… ಹೀಗಾಗಿ ಅಲ್ಲಿ ತಜ್ಞತೆಗೆ, ಆಡಳಿತ ದಕ್ಷತೆಗೆ ಅವಕಾಶವೇ ಇಲ್ಲವಾಯಿತು’ ಎನ್ನುತ್ತಾರೆ.

ವಾಷಿಂಗ್ಟನನ್ ಪೋಸ್ಟ್ ಮತ್ತು ದಿ ಗಾರ್ಡಿಯನ್ ಈ ಎರಡು ದಿನಗಳಲ್ಲಿ ಪ್ರಕಟಿಸಿದ ಲೇಖನಗಳಲ್ಲಿ ಭಾರತದಲ್ಲಿನ 2ನೆ ಉಲ್ಬಣಕ್ಕೆ ಮೋದಿ ಸರ್ಕಾರವೇ ಕಾರಣ ಎಂದು ಟೈಟಲ್ಲಿನಲ್ಲಿಯೇ ಸಾರಿವೆ.

ಇವತ್ತು ಬಂಗಾಳದಲ್ಲಿ 6ನೆ ಹಂತದ ಮತದಾನ ಆರಂಭವಾದ ಕೂಡಲೇ ಮೊದಿ ಟ್ವೀಟ್ ಮಾಡಿ, ಎಲ್ಲರೂ ಮತ ಚಲಾಯಿಸಿ ಎನ್ನುತ್ತ ತಮ್ಮ ಸಣ್ಣ ಬುದ್ಧಿ ಪ್ರದರ್ಶಿಸಿದ್ದಾರೆ. ಅವರ ಮೂಗಿನಡಿಯೇ ಜನ ಆಮ್ಲಜನಕ ಅಂದರೆ O2 ಕೊರತೆಯಿಂದ ಸಾಯುವಾಗ ಅವರು ಟ್ವೀಟಿನಲ್ಲಿ ಓಟಿನ ಬೇಟೆಯಾಡುತ್ತಿದ್ದರು. ಈ ಒಂದು ಅಂಶವೇ ಸಾಕು ಅವರ ಹುಚ್ಚು ಶೈಲಿಯ, ಒಣ ಧಿಮಾಕಿನ ಆಡಳಿತ ಶೈಲಿಗೆ ಅಲ್ಲವೇ?

ಒಂದೆಡೆ ಕೊರೊನಾ ಪ್ರಕರಣಗಳಲ್ಲಿ ಏರಿಕೆಯಾಗುತ್ತಿರುವಾಗ ಬಂಗಾಳದ ಅಸ್ಸನೋಲ್‌ನಲ್ಲಿ ಮೋದಿ ಬೃಹತ್ ರ್ಯಾಲಿ ನಡೆಸುತ್ತಾರೆ. ಇಷ್ಟೊಂದು ಜನಸಂದಣಿ ನಾನು ನೋಡಿಯೇ ಇಲ್ಲ ಎಂದು ಉದ್ಘರಿಸುತ್ತಾರೆ. ಅಲ್ಲದೇ ನಾಳೆ ಬಂಗಾಳದಲ್ಲಿ ಮತ್ತೆ ಮೋದಿಯವರ ರ‍್ಯಾಲಿಗಳಿವೆ. ಅಲ್ಲಿ ಅಪಾರ ಜನಸಂದಣಿ ಸೇರುತ್ತದೆ ಅಥವಾ ಸೇರಿಸುತ್ತಾರೆ. ಹಾಗಾದರೆ ಮೊನ್ನೆ ಮಂಗಳವಾರ 8.45ಕ್ಕೆ ಅವರು ಹೇಳಿದ್ದೇನು? ಈ ಆಷಾಢಭೂತಿತನವೇ ಇವತ್ತಿನ ಕೋವಿಡ್ ದುರಂತದ ಮೂಲ ಅಲ್ಲವೇ?

  • ಪಿ.ಕೆ ಮಲ್ಲನಗೌಡರ್

ಇದನ್ನೂ ಓದಿ: ಬೆಡ್‌ಗಾಗಿ ಸೋಂಕಿತರ ಪರದಾಟ: ಬೆಂಗಳೂರಿನ 10,100 ಬೆಡ್‌ಗಳ ದೇಶದ ಅತಿದೊಡ್ಡ ಕೋವಿಡ್ ಕೇರ್ ಸೆಂಟರ್ ಏನಾಯಿತು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...

ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ಸಾವು : ಪಿತೂರಿ ಶಂಕೆ ವ್ಯಕ್ತಪಡಿಸಿದ ಮಮತಾ ಬ್ಯಾನರ್ಜಿ, ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿದ ರಾಜಕೀಯ ನಾಯಕರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಸಾವಿಗೆ ಕಾರಣವಾದ ಬಾರಾಮತಿ ವಿಮಾನ ಪತನದ ಕುರಿತು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕೆಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ಜ.28) ಒತ್ತಾಯಿಸಿದ್ದಾರೆ....

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆಯಲು ಯುಜಿಸಿ ಹೊಸ ನಿಯಮ; ಮುಂದುವರೆದ ಪ್ರಬಲಜಾತಿ ಗುಂಪಿನ ವಿರೋಧ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ಪರಿಹರಿಸುವ ಗುರಿಯನ್ನು ಹೊಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಪರಿಷ್ಕೃತ ನಿಯಮಗಳ ಕುರಿತು ದೇಶದಲ್ಲಿ ಭಾರಿ ರಾಜಕೀಯ ವಾಗ್ವಾದ ಭುಗಿಲೆದ್ದಿದೆ. ಹೊಸ ಮಾರ್ಗಸೂಚಿಗಳ ಕುರಿತು...

ಜನಸೇನಾ ಶಾಸಕನಿಂದ ಅತ್ಯಾಚಾರ, ಬಲವಂತದ ಗರ್ಭಪಾತ : ಮಹಿಳೆ ಆರೋಪ

ಆಂಧ್ರ ಪ್ರದೇಶದ ರೈಲ್ವೆ ಕೊಡೂರು ವಿಧಾನಸಭಾ ಕ್ಷೇತ್ರದ ಜನ ಸೇನಾ ಶಾಸಕ ಮತ್ತು ಸರ್ಕಾರಿ ಸಚೇತಕ ಅರವ ಶ್ರೀಧರ್ ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರ ಮತ್ತು ಬಲವಂತದ ಗರ್ಭಪಾತ ಆರೋಪ ಮಾಡಿದ್ದಾರೆ. ಈ ಕುರಿತು ವಿಡಿಯೋ...

ಬಾರಾಮತಿ ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ನಿಧನ; ಸಂತಾಪ ಸೂಚಿಸಿದ ಪ್ರಮುಖರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ಐವರು ಜನರು ಪ್ರಯಾಣಿಸುತ್ತಿದ್ದ ವಿಮಾನ ಬುಧವಾರ ಬೆಳಿಗ್ಗೆ ಪುಣೆ ಜಿಲ್ಲೆಯಲ್ಲಿ ಪತನಗೊಂಡು ಸಾವನ್ನಪ್ಪಿದ್ದಾರೆ. ಎನ್‌ಸಿಪಿ ನಾಯಕರಾದ ಅಜಿತ್ ಪವಾರ್ (66) ಮತ್ತು ಇತರರನ್ನು ಹೊತ್ತೊಯ್ಯುತ್ತಿದ್ದ...