Homeಕರೋನಾ ತಲ್ಲಣಓಟುಗಳ ನಡುವೆ ನುಸುಳಿದ ಎರಡನೇ ಅಲೆಯ ದುರಂತಕ್ಕೆ ಮೋದಿ ಆಡಳಿತವೇ ಕಾರಣ!

ಓಟುಗಳ ನಡುವೆ ನುಸುಳಿದ ಎರಡನೇ ಅಲೆಯ ದುರಂತಕ್ಕೆ ಮೋದಿ ಆಡಳಿತವೇ ಕಾರಣ!

- Advertisement -
- Advertisement -

‘ಮೋದಿಯ ನಾಯಕತ್ವ ಮತ್ತು ಆಡಳಿತ ಶೈಲಿಯೇ ಕೋವಿಡ್ ಉಲ್ಬಣಕ್ಕೆ ಕಾರಣ. ಮೋದಿ ಒಬ್ಬ ‘ಮೆಗಾಲೊಮ್ಯಾನಿಯಾಕ್’ (ತಾನೇ ಶಕ್ತಿವಂತ, ತಾನೆ ಬುದ್ಧಿವಂತ ಎಂಬ ಹುಸಿ ಪ್ರತಿಷ್ಠೆಯ ಮನುಷ್ಯ) ಎಂದು ಭಾವಿಸಿದ್ದಾರೆ…….

ಎರಡು ದಿನದ ಹಿಂದೆ, ಕೋವಿಡ್ ಕುರಿತಂತೆ ಎನ್‌ಡಿಟಿವಿ ಮತ್ತು ದಿ ವೈರ್‌ಗೆ ನೀಡಿದ ಸಂದರ್ಶನದಲ್ಲಿ ಪ್ರಸಿದ್ಧ ಇತಿಹಾಸಕಾರ ಮತ್ತು ರಾಜಕೀಯ ಚಿಂತಹ ರಾಮಚಂದ್ರ ಗುಹಾ ಹೀಗೆ ವಿಶ್ಲೇಷಣೆ ಮಾಡಿದ್ದಾರೆ.

ರಾಜಕೀಯ ವಿಶ್ಲೇಷಕ ಝೈನಬ್ ಸಿಕಂದರ್, ಮೊದಲ ಅಲೆ ತಣ್ಣಗಾದ ನಂತರ ಅದು ತಮ್ಮದೇ ಯಶಸ್ಸು ಎಂಬಂತೆ ಬೀಗಿದ ಮೋದಿ ಸರ್ಕಾರ, ತಜ್ಞರು ಎರಡನೇ ಅಲೆಯ ಬಗ್ಗೆ ಎಚ್ಚರಿಸಿದರೂ, ಚುನಾವಣೆ ಗೆಲ್ಲುವುದೇ ಮುಖ್ಯ ಎಂಬಂತೆ ಉಡಾಫೆ ಮಾಡಿದ್ದೇ 2ನೆ ಅಲೆ ತೀವ್ರವಾಗಲು ಕಾರಣ ಎಂದು ದಿ ಪ್ರಿಂಟ್‌ನಲ್ಲಿ ಬರೆದಿದ್ದಾರೆ.

ರಾಮಚಂದ್ರ ಗುಹಾ ಪ್ರಕಾರ, ಮೋದಿ ಯಾವ ತಜ್ಞರ ಅಭಿಪ್ರಾಯಕ್ಕೂ ಬೆಲೆ ಕೊಡುವುದಿಲ್ಲ. ಅವರು ನೇಮಿಸಿಕೊಂಡ ತಜ್ಞರಲ್ಲಿ ಬಹುಪಾಲು ಜನ ಮೋದಿಯವರ ಮನದಾಳದ ಇಂಗಿತವನ್ನೇ ಸಲಹೆ ಮಾಡುತ್ತಾರೆ, ಮೋದಿ ಖುಷಿಗೊಳ್ಳುತ್ತಾರೆ. ಹೀಗಾಗಿ ಹೊರಗಿನ ಮತ್ತು ಸ್ವತಂತ್ರ ತಜ್ಞರು ಮುಂದಿನ ಅಪಾಯದ ಬಗ್ಗೆ ನವೆಂಬರ್‌ನಿಂದಲೇ ಎಚ್ಚರಿಕೆ ನೀಡುತ್ತಿದ್ದರೂ ಮೋದಿಯವರು ಅದನ್ನು ಕೇರ್ ಮಾಡಲಿಲ್ಲ ಎಂದು ಅಭಿಪ್ರಾಯ ಪಡುತ್ತಾರೆ.

ದೆಹಲಿ, ಮಹಾರಾಷ್ಟ್ರ ಮತ್ತು ಕೇರಳ ರಾಜ್ಯಗಳು ತೀವ್ರವಾದ ಮೊದಲ ಅಲೆಗೆ ತತ್ತರಿಸಿ, ಎರಡನೇ ಅಲೆ ಪ್ರವೇಶ ಮಾಡುವ ಹೊತ್ತಿಗೆ ಆರ್ಥಿಕವಾಗಿ ಹೈರಾಣಾಗಿದ್ದವು. ಇದ್ದುದರಲ್ಲಿ ಕೇರಳ ಮತ್ತು ನಂತರದಲ್ಲಿ ದೆಹಲಿ, ಮಹಾರಾಷ್ಟ್ರ ಸರ್ಕಾರಗಳು ತಮ್ಮ ರಾಜ್ಯಕ್ಕೆ ಕಾಡಿದ್ದ ಮೊದಲ ಅಲೆಯನ್ನು ಒಂದು ಹಂತಕ್ಕೆ ತರುವಲ್ಲಿ ಶ್ರಮ ವಹಿಸಿದ್ದವು.

ಆದರೆ ಎರಡನೆ ಅಲೆ ಜೋರಾದಾಗ ಅವು ಸಹಾಯಕ್ಕೆ ಮನವಿ ಮಾಡುತ್ತಿದ್ದರೆ, ಮೋದಿಯವರು ಬಂಗಾಳ ಮತ್ತು ಇತರ ಚುನಾವಣೆಗಳಲ್ಲಿ ನಿರತರಾಗಿದ್ದರು. ಈ ಮೂರು ರಾಜ್ಯಗಳಲ್ಲಿ ಬಿಜೆಪಿಯೇತರ ಸರ್ಕಾರಗಳಿವೆ ಎಂಬ ಕ್ಷುಲ್ಲಕ ರಾಜಕೀಯ ಅಂಶ ಅವರ ತಲೆಯಲ್ಲಿ ಇದ್ದೇ ಇದೆ. ಅದಿರಲಿ, ಅವರ ಗುಜರಾತ್ ಮತ್ತು ಉತ್ತರಪ್ರದೇಶ ಸರ್ಕಾರಗಳು ತೀವ್ರ ಕೋವಿಡ್ ಹಾನಿ ಅನುಭವಿಸಿಯೂ ಅಂಕಿಅಂಶ ಮುಚ್ಚಿಡುತ್ತ 2ನೆ ಅಲೆ ತೀವ್ರಗೊಳ್ಳಲು ಕಾರಣವಾದ ಮೇಲೂ ಆ ರಾಜ್ಯಗಳಿಗೆ ಕೇಂದ್ರ ಯಾವ ಸಂದೇಶ ಅಥವಾ ಎಚ್ಚರಿಕೆಯನ್ನು ನೀಡಲಿಲ್ಲ.

ಕರ್ನಾಟಕದ ಸರ್ಕಾರದ್ದು ಇನ್ನೊಂದು ಸಮಸ್ಯೆ. ಇದು ಉತ್ತರಪ್ರದೇಶ ಅಥವಾ ಗುಜರಾತಿನಂತೆ ಕೋವಿಡ್ ಸಾವಿನ, ಪಾಸಿಟಿವ್ ಪ್ರಕರಣಗಳ ಸಂಖ್ಯೆಯನ್ನು ಉದ್ದೇಶಪೂರ್ವಕವಾಗಿ ಮುಚ್ಚಿಡಲಿಲ್ಲ. ಆದರೆ ಮೋದಿಯವರಂತೆಯೇ ಈ ಸರ್ಕಾರ ಕೂಡ ತಜ್ಞರ ಮಾತನ್ನು ಗಂಭೀರವಾಗಿ ಪರಿಗಣಿಸಲೇ ಇಲ್ಲ. ಆರೋಗ್ಯ ಸಚಿವ ಡಾ. ಸುಧಾಕರ್ ಮೀಡಿಯಾ ಮುಂದೆ ಹೇಳುವ ಯೋಜನೆಗಳು ರಚನಾತ್ಮಕ ಎನಿಸುತ್ತವೆ, ಆದರೆ ಅವೆಂದೂ ಜಾರಿಗೆ ಬರಲಿಲ್ಲ. ಇಲ್ಲೂ ಆಕ್ಸಿಜನ್, ವೆಂಟಿಲೇಟರ್ ಸಮಸ್ಯೆ ಇದ್ದರೂ ರಾಜ್ಯ ಸರ್ಕಾರ ಮಾತ್ರ ಅಡ್ಡಗೋಡೆ ಮೇಲೆ ದೀಪ ಇಡುತ್ತ ಬಂದಿದೆ.

ಕಳೆದ ವಾರ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ, ರಾಜ್ಯದಲ್ಲಿ ಆಕ್ಸಿಜನ್ ಕೊರತೆ, ಲಸಿಕೆ ಕೊರತೆ, ರೆಮ್‌ಡಿಸಿವಿಯರ್ ಕೊರತೆ ಬಗ್ಗೆ ರಾಜ್ಯದ ಪ್ರತಿನಿಧಿ ತಿಳಿಸಿದರು. ಆದರೆ ಈ ಸರ್ಕಾರದ ಸಚಿವರ‍್ಯಾರೂ ಈ ಸತ್ಯವನ್ನು ಒಪ್ಪಿಕೊಳ್ಳುತ್ತಲೇ ಇಲ್ಲ. ಹಾಗೆಯೇ ನಮ್ಮ ಸಂಸದರ‍್ಯಾರೂ ಕೂಡ ರಾಜ್ಯಕ್ಕೆ ಆರೋಗ್ಯ ಸೌಲಭ್ಯಗಳನ್ನು ತುರ್ತಾಗಿ ಒದಗಿಸಿ ಎಂಬ ಒಂದೇ ಒಂದು ಬೇಡಿಕೆಯನ್ನೂ ಇವತ್ತಿಗೂ ಇಟ್ಟಿಲ್ಲ!

ಅಂದರೆ ಇಲ್ಲಿ ಮೋದಿ ಮತ್ತು ಬಿಜೆಪಿ ಆಳ್ವಿಕೆಯ ರಾಜ್ಯ ಸರ್ಕಾರಗಳು, ಕಳೆದ 4 ತಿಂಗಳಿಂದ ‘ಎಲ್ಲವೂ ಸರಿಯಾಗಿದೆ’ ಎಂಬ ಹುಸಿ ಸಂತೃಪ್ತಿಕರ ಭಾವವನ್ನು ವ್ಯಕ್ತಪಡಿಸುತ್ತ ಜನರನ್ನೂ ದಾರಿ ತಪ್ಪಿಸುತ್ತ ಬಂದವು. ತೊಂದರೆಯಲ್ಲಿದ್ದ ಬಿಜೆಪಿಯೇತರ ರಾಜ್ಯಗಳ ಬೇಡಿಕೆಗಳನ್ನು ಕೇಂದ್ರ ನಿರ್ಲಕ್ಷಿಸುತ್ತ ಬಂದಿತು. ಈಗಲೂ ಅದಕ್ಕೆ ಬಂಗಾಳ ಚುನಾವಣೆಯೇ ಮುಖ್ಯವಾಗಿದೆ. ದೆಹಲಿ ಹೈಕೋರ್ಟ್ ಸತತ ಎರಡು ದಿನಗಳ ಕಾಲ ತರಾಟೆಗೆ ತೆಗೆದುಕೊಂಡ ನಂತರವೂ ಕೇಂದ್ರ ಸರ್ಕಾರಕ್ಕೆ ಅದು ಅವಮಾನ ಅನಿಸಿಯೇ ಇಲ್ಲ ಎಂಬಂತೆ ಕಾಣುತ್ತಿದೆ.

ಝೂನಬ್ ಸಿಕಂದರ್ ಬರೆಯುತ್ತಾರೆ, ‘ಚಪ್ಪಾಳೆಯಿಂದ ಮೋದಿ ಕುರುಡರಾದರು. ಅವರದೇ ಅಭಿಮಾನಿಗಳ ಪ್ರಶಂಸೆಗಳಿಂದ ಉಬ್ಬಿ ಹೋದರು. ಜಾಗತಿಕ ಪ್ರಶಂಸೆಯನ್ನು ಮೋದಿ ಎಷ್ಟು ಪ್ರೀತಿಸುತ್ತಾರೆ ಎಂಬುದು ನಮಗೆಲ್ಲರಿಗೂ ತಿಳಿದಿದೆ. ಅವರು ಎಲ್ಲಿಗೆ ಹೋದರೂ ಅದನ್ನು ಪ್ರಭಾವಲಯದಂತೆ ಧರಿಸುತ್ತಾರೆ, ಅವರು ಭಾರತವಲ್ಲ, ನಿಜವಾದ ವಿಶ್ವ ಗುರು ಎಂದು ಮತದಾರರಿಗೆ ಮನವರಿಕೆ ಮಾಡಲು ಬಯಸುತ್ತಾರೆ. ಸಮುಂದರ್ ಪೆ ಚರ್ಚಾ ಫೋಟೋ-ಶೂಟ್‌ಗಾಗಿ ವಿಶ್ವ ನಾಯಕರನ್ನು ತಬ್ಬಿಕೊಂಡು ಅವರೊಂದಿಗೆ ಬೀಚ್‌ನಲ್ಲಿ ನಡೆಯುವಾಗ ಇಂತಹ ವಿಶ್ವಗುರು ಭ್ರಮೆಯಲ್ಲಿ ಅವರು ಇರುತ್ತಾರೆ. ಅವರ ಈ ನಡವಳಿಕೆಯೇ ಇವತ್ತಿನ ಈ ಬಿಕ್ಕಟ್ಟಿನ ಮೂಲವಾಗಿದೆ…..

ಆದ್ದರಿಂದ, ಹೊಸ ರೂಪಾಂತರವು ಭಾರತಕ್ಕೆ ಬಂದಿದೆ ಮತ್ತು ‘ಇಂಡಿಯನ್’ ರೂಪಾಂತರದ ಸಾಧ್ಯತೆಯೂ ಇದೆ ಎಂದು ತಜ್ಞರು ಹೇಳಿದ್ದನ್ನು ಮೋದಿ ಸರ್ಕಾರ ನಿರ್ಲಕ್ಷಿಸುತ್ತಲೇ ಬಂದಿದ್ದರ ಪರಿಣಾಮವೇ ಇವತ್ತಿನ ದುರಂತಕ್ಕೆ ಕಾರಣ….’

ರಾಮಚಂದ್ರ ಗುಹಾ ಪ್ರಕಾರ, ಹಿಂದೆಲ್ಲ ಸರ್ಕಾರಗಳು ದಕ್ಷ, ದೂರದೃಷ್ಟಿಯುಳ್ಳ ಅಧಿಕಾರಿಗಳನ್ನು ಪ್ರಮುಖ ಸ್ಥಾನಕ್ಕೆ ನೇಮಿಸುತ್ತಿದ್ದವು. ಅಲ್ಲಿ ಪಕ್ಷನಿಷ್ಠೆ ಅಥವಾ ವ್ಯಕ್ತಿನಿಷ್ಠೆ ನೋಡುತ್ತಿರಲಿಲ್ಲ. ಆದರೆ 2014ರ ನಂತರ ಮೋದಿಯವರು ಗುಜರಾತಿ ಅಧಿಕಾರಿಗಳನ್ನು ದೆಹಲಿಗೆ ಕರೆ ತಂದರು. ಇವರೆಲ್ಲ ವ್ಯಕ್ತಿಪೂಜೆಯ ಆರಾಧಕರು, ಪಿಎಂಒ ಕೂಡ ಅಂತಹವರಿಂದಲೇ ತುಂಬಿತು… ಹೀಗಾಗಿ ಅಲ್ಲಿ ತಜ್ಞತೆಗೆ, ಆಡಳಿತ ದಕ್ಷತೆಗೆ ಅವಕಾಶವೇ ಇಲ್ಲವಾಯಿತು’ ಎನ್ನುತ್ತಾರೆ.

ವಾಷಿಂಗ್ಟನನ್ ಪೋಸ್ಟ್ ಮತ್ತು ದಿ ಗಾರ್ಡಿಯನ್ ಈ ಎರಡು ದಿನಗಳಲ್ಲಿ ಪ್ರಕಟಿಸಿದ ಲೇಖನಗಳಲ್ಲಿ ಭಾರತದಲ್ಲಿನ 2ನೆ ಉಲ್ಬಣಕ್ಕೆ ಮೋದಿ ಸರ್ಕಾರವೇ ಕಾರಣ ಎಂದು ಟೈಟಲ್ಲಿನಲ್ಲಿಯೇ ಸಾರಿವೆ.

ಇವತ್ತು ಬಂಗಾಳದಲ್ಲಿ 6ನೆ ಹಂತದ ಮತದಾನ ಆರಂಭವಾದ ಕೂಡಲೇ ಮೊದಿ ಟ್ವೀಟ್ ಮಾಡಿ, ಎಲ್ಲರೂ ಮತ ಚಲಾಯಿಸಿ ಎನ್ನುತ್ತ ತಮ್ಮ ಸಣ್ಣ ಬುದ್ಧಿ ಪ್ರದರ್ಶಿಸಿದ್ದಾರೆ. ಅವರ ಮೂಗಿನಡಿಯೇ ಜನ ಆಮ್ಲಜನಕ ಅಂದರೆ O2 ಕೊರತೆಯಿಂದ ಸಾಯುವಾಗ ಅವರು ಟ್ವೀಟಿನಲ್ಲಿ ಓಟಿನ ಬೇಟೆಯಾಡುತ್ತಿದ್ದರು. ಈ ಒಂದು ಅಂಶವೇ ಸಾಕು ಅವರ ಹುಚ್ಚು ಶೈಲಿಯ, ಒಣ ಧಿಮಾಕಿನ ಆಡಳಿತ ಶೈಲಿಗೆ ಅಲ್ಲವೇ?

ಒಂದೆಡೆ ಕೊರೊನಾ ಪ್ರಕರಣಗಳಲ್ಲಿ ಏರಿಕೆಯಾಗುತ್ತಿರುವಾಗ ಬಂಗಾಳದ ಅಸ್ಸನೋಲ್‌ನಲ್ಲಿ ಮೋದಿ ಬೃಹತ್ ರ್ಯಾಲಿ ನಡೆಸುತ್ತಾರೆ. ಇಷ್ಟೊಂದು ಜನಸಂದಣಿ ನಾನು ನೋಡಿಯೇ ಇಲ್ಲ ಎಂದು ಉದ್ಘರಿಸುತ್ತಾರೆ. ಅಲ್ಲದೇ ನಾಳೆ ಬಂಗಾಳದಲ್ಲಿ ಮತ್ತೆ ಮೋದಿಯವರ ರ‍್ಯಾಲಿಗಳಿವೆ. ಅಲ್ಲಿ ಅಪಾರ ಜನಸಂದಣಿ ಸೇರುತ್ತದೆ ಅಥವಾ ಸೇರಿಸುತ್ತಾರೆ. ಹಾಗಾದರೆ ಮೊನ್ನೆ ಮಂಗಳವಾರ 8.45ಕ್ಕೆ ಅವರು ಹೇಳಿದ್ದೇನು? ಈ ಆಷಾಢಭೂತಿತನವೇ ಇವತ್ತಿನ ಕೋವಿಡ್ ದುರಂತದ ಮೂಲ ಅಲ್ಲವೇ?

  • ಪಿ.ಕೆ ಮಲ್ಲನಗೌಡರ್

ಇದನ್ನೂ ಓದಿ: ಬೆಡ್‌ಗಾಗಿ ಸೋಂಕಿತರ ಪರದಾಟ: ಬೆಂಗಳೂರಿನ 10,100 ಬೆಡ್‌ಗಳ ದೇಶದ ಅತಿದೊಡ್ಡ ಕೋವಿಡ್ ಕೇರ್ ಸೆಂಟರ್ ಏನಾಯಿತು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಹಲ್ಗಾಮ್ ದಾಳಿ ಕುರಿತ ಪೋಸ್ಟ್‌: ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್‌ಗೆ ನಿರೀಕ್ಷಣಾ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಸಾಮಾಜಿಕ ಮಾಧ್ಯಮ ಪೋಸ್ಟ್‌ಗೆ ಸಂಬಂಧಿಸಿದಂತೆ ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ಅವರಿಗೆ ನಿರೀಕ್ಷಣಾ ಜಾಮೀನು...

ಮಧ್ಯಪ್ರಾಚ್ಯ ಉದ್ವಿಗ್ನತೆ: ಎಲ್‌ಪಿಜಿ ಕೊರತೆಗೆ ಮುಂಬೈನಲ್ಲಿ ಶೇ. 20 ರಷ್ಟು ಹೋಟೆಲ್‌, ರೆಸ್ಟೋರೆಂಟ್‌ ಬಂದ್: ಬೆಂಗಳೂರು, ಚೆನ್ನೈನಲ್ಲೂ ಸಮಸ್ಯೆ

ಪಶ್ಚಿಮ ಏಷ್ಯಾ ಸಂಘರ್ಷ ಹತ್ತು ದಿನಗಳಿಗೂ ಹೆಚ್ಚು ಕಾಲ ಮುಂದುವರಿದಿರುವುದರಿಂದ, ಭಾರತದ ಹೋಟೆಲ್‌ಗಳು ಮತ್ತು ಇತರ ಉಧ್ಯಮಗಳು ಎಲ್‌ಪಿಜಿ ಪೂರೈಕೆ ಬಿಕ್ಕಟ್ಟನ್ನು ಎದುರಿಸುತ್ತಿವೆ. ಬೆಂಗಳೂರಿನ ನಂತರ, ಚೆನ್ನೈ ಮತ್ತು ಮುಂಬೈನಂತಹ ಇತರ ನಗರಗಳು ಸಹ...

‘ಕೋವಿಡ್ ಲಸಿಕೆ ಪೀಡಿತರಿಗಾಗಿ ಪರಿಹಾರ ನೀತಿ ಅಳವಡಿಸಿಕೊಳ್ಳಿ..’; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕೋವಿಡ್ ವಿರುದ್ಧ ರೋಗನಿರೋಧಕ ಶಕ್ತಿಯಾಗಿ ಲಸಿಕೆ ನೀಡಿದ ನಂತರ ಉಂಟಾಗುವ ಪ್ರತಿಕೂಲ ಪರಿಣಾಮಗಳ ವೈಜ್ಞಾನಿಕ ಮೌಲ್ಯಮಾಪನಕ್ಕಾಗಿ ಅಸ್ತಿತ್ವದಲ್ಲಿರುವ ಕಾರ್ಯವಿಧಾನವನ್ನು ಮುಂದುವರಿಸಬೇಕೆಂದು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಅದೇ ಸಮಯದಲ್ಲಿ, ಕೋವಿಡ್ -19 ವ್ಯಾಕ್ಸಿನೇಷನ್ ನಂತರದ...

ಮೇಘಾಲಯ|ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ವಿವಾದಾತ್ಮಕ ಅಧಿಸೂಚನೆ: ಪಶ್ಚಿಮ ಗಾರೋ ಬೆಟ್ಟಗಳಲ್ಲಿ ಭುಗಿಲೆದ್ದ ಹಿಂಸಾಚಾರ; ಇಬ್ಬರ ಸಾವು

ಗುವಾಹಟಿ: ಏಪ್ರಿಲ್ 10 ರಂದು ನಡೆಯಲಿರುವ ಗಾರೋ ಹಿಲ್ಸ್ ಸ್ವಾಯತ್ತ ಜಿಲ್ಲಾ ಮಂಡಳಿ (ಜಿಎಚ್‌ಎಡಿಸಿ) ಚುನಾವಣೆಯಲ್ಲಿ ಬುಡಕಟ್ಟು ಜನಾಂಗದವರಲ್ಲದವರು ಸ್ಪರ್ಧಿಸುವುದನ್ನು ನಿಷೇಧಿಸುವ ವಿವಾದಾತ್ಮಕ ಅಧಿಸೂಚನೆಯನ್ನು ವಿರೋಧಿಸಿ ಮೇಘಾಲಯದ ಪಶ್ಚಿಮ ಗಾರೋ ಹಿಲ್ಸ್ ಜಿಲ್ಲೆಯಲ್ಲಿ...

ಸಂವಿಧಾನ, ಸದನದ ಘನತೆ ಉಳಿಸಲು ಲೋಕಸಭಾ ಸ್ಪೀಕರ್ ವಿರುದ್ಧ ನಿರ್ಣಯ: ಕಾಂಗ್ರೆಸ್ ಸಂಸದ ಗೊಗೊಯ್

ಸ್ಪೀಕರ್ ಓಂ ಬಿರ್ಲಾ ಪಕ್ಷಪಾತಿ ವರ್ತನೆ ಹೊಂದಿದ್ದಾರೆ. ಹಾಗಾಗಿ, ಸಂವಿಧಾನ ಉಳಿಸಲು ವಿರೋಧ ಪಕ್ಷವು ಅವರನ್ನು ಪದಚ್ಯುತಗೊಳಿಸುವ ನಿರ್ಣಯ ತರಬೇಕಾಯಿತು ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮಂಗಳವಾರ (ಮಾ.10) ಲೋಕಸಭೆಯಲ್ಲಿ ಹೇಳಿದರು....

ನಿರಂತರ ಎಲ್‌ಪಿಜಿ ಪೂರೈಕೆ ಖಚಿತಪಡಿಸಿಕೊಳ್ಳಲು ‘ಅಗತ್ಯ ಸರಕು ಕಾಯ್ದೆ’ ಜಾರಿಗೆ ತಂದ ಕೇಂದ್ರ

ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಕುರಿತು ದೂರು ನೀಡಿದ ನಂತರ, ದೇಶೀಯ ಅಡುಗೆ ಅನಿಲದ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು 'ಅಗತ್ಯ ಸರಕು ಕಾಯ್ದೆ'ಯನ್ನು ಜಾರಿಗೆ ತಂದಿದೆ ಎಂದು...

‘ಯುದ್ಧ ಯಾವಾಗ ಕೊನೆಗೊಳ್ಳುತ್ತದೆ ಎಂಬುದನ್ನು ಇರಾನ್ ನಿರ್ಧರಿಸುತ್ತದೆ’: ಟ್ರಂಪ್ ‘ಅಲ್ಪಾವಧಿಯ ಸಂಘರ್ಷ’ ಹೇಳಿಕೆಗೆ ಇರಾನ್ ತಿರುಗೇಟು 

ಟೆಹ್ರಾನ್: ಇರಾನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಟೆಹ್ರಾನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಅಮೆರಿಕ ಮತ್ತು ಇಸ್ರೇಲಿ ಗುರಿಗಳ ವಿರುದ್ಧದ ಮಿಲಿಟರಿ ಕ್ರಮಗಳು ಯಾವಾಗ ನಿಂತವು ಎಂಬುದನ್ನು...

ಮಹಿಳಾ ಮೀಸಲಾತಿ ಮಸೂದೆ; ತ್ವರಿತ ಅನುಷ್ಠಾನಕ್ಕೆ ವಿಪಕ್ಷಗಳ ಅಭಿಪ್ರಾಯ ಕೇಳಿದ ಕೇಂದ್ರ ಸರ್ಕಾರ

ನವದೆಹಲಿ: ಮಹಿಳಾ ಮೀಸಲಾತಿ ಕಾನೂನಿನ ಅನುಷ್ಠಾನವನ್ನು ತ್ವರಿತಗೊಳಿಸುವ ಪ್ರಯತ್ನದಲ್ಲಿ, ಲೋಕಸಭೆ ಮತ್ತು ರಾಜ್ಯ ಶಾಸಕಾಂಗ ಸಭೆಗಳಲ್ಲಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿ ನೀಡುವ ಶಾಸನವನ್ನು ತಿದ್ದುಪಡಿ ಮಾಡುವ ಪ್ರಸ್ತಾಪದ ಕುರಿತು ಅಭಿಪ್ರಾಯಗಳನ್ನು...

ಕೋಲ್ಕತ್ತಾ : ಕಾಳಿಘಾಟ್ ಬಳಿಕ ದಕ್ಷಿಣೇಶ್ವರದಲ್ಲೂ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ‘ಗೋ ಬ್ಯಾಕ್ ಘೋಷಣೆ’

ಕಾಳಿಘಾಟ್ ಬಳಿಕ ಕೋಲ್ಕತ್ತಾದ ದಕ್ಷಿಣೇಶ್ವರ ದೇವಸ್ಥಾನದಲ್ಲೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ದ 'ಗೋ ಬ್ಯಾಕ್ ಘೋಷಣೆಗಳು' ಕೇಳಿ ಬಂದಿವೆ. ಮಂಗಳವಾರ (ಮಾ.10) ಬೆಳಿಗ್ಗೆ ಜ್ಞಾನೇಶ್ ಕುಮಾರ್ ದಕ್ಷಿಣೇಶ್ವರ ಕಾಳಿ ದೇವಸ್ಥಾನಕ್ಕೆ ಭೇಟಿ...

ಉತ್ತರ ಪ್ರದೇಶ| ಹೋಳಿ ಹಬ್ಬದ ಶುಭ ಕೋರಿದ ದಲಿತ ಯುವಕನನ್ನು ಕೊಂದ ಪ್ರಬಲಜಾತಿ ಕುಟುಂಬ

ಉತ್ತರ ಪ್ರದೇಶದ ಲಕ್ನೋದ ದುಬಗ್ಗಾ ಪ್ರದೇಶದಲ್ಲಿ, ಹೋಳಿ ಹಬ್ಬದ ಸಂದರ್ಭದಲ್ಲಿ ಶುಭಕೋರಿದ 22 ವರ್ಷದ ದಲಿತ ವ್ಯಕ್ತಿಯನ್ನು ಬ್ರಾಹ್ಮಣ ಕುಟುಂಬದ ಸದಸ್ಯರು ಇರಿದು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆ ಮಾರ್ಚ್ 4...