Homeಕರೋನಾ ತಲ್ಲಣಓಟುಗಳ ನಡುವೆ ನುಸುಳಿದ ಎರಡನೇ ಅಲೆಯ ದುರಂತಕ್ಕೆ ಮೋದಿ ಆಡಳಿತವೇ ಕಾರಣ!

ಓಟುಗಳ ನಡುವೆ ನುಸುಳಿದ ಎರಡನೇ ಅಲೆಯ ದುರಂತಕ್ಕೆ ಮೋದಿ ಆಡಳಿತವೇ ಕಾರಣ!

- Advertisement -
- Advertisement -

‘ಮೋದಿಯ ನಾಯಕತ್ವ ಮತ್ತು ಆಡಳಿತ ಶೈಲಿಯೇ ಕೋವಿಡ್ ಉಲ್ಬಣಕ್ಕೆ ಕಾರಣ. ಮೋದಿ ಒಬ್ಬ ‘ಮೆಗಾಲೊಮ್ಯಾನಿಯಾಕ್’ (ತಾನೇ ಶಕ್ತಿವಂತ, ತಾನೆ ಬುದ್ಧಿವಂತ ಎಂಬ ಹುಸಿ ಪ್ರತಿಷ್ಠೆಯ ಮನುಷ್ಯ) ಎಂದು ಭಾವಿಸಿದ್ದಾರೆ…….

ಎರಡು ದಿನದ ಹಿಂದೆ, ಕೋವಿಡ್ ಕುರಿತಂತೆ ಎನ್‌ಡಿಟಿವಿ ಮತ್ತು ದಿ ವೈರ್‌ಗೆ ನೀಡಿದ ಸಂದರ್ಶನದಲ್ಲಿ ಪ್ರಸಿದ್ಧ ಇತಿಹಾಸಕಾರ ಮತ್ತು ರಾಜಕೀಯ ಚಿಂತಹ ರಾಮಚಂದ್ರ ಗುಹಾ ಹೀಗೆ ವಿಶ್ಲೇಷಣೆ ಮಾಡಿದ್ದಾರೆ.

ರಾಜಕೀಯ ವಿಶ್ಲೇಷಕ ಝೈನಬ್ ಸಿಕಂದರ್, ಮೊದಲ ಅಲೆ ತಣ್ಣಗಾದ ನಂತರ ಅದು ತಮ್ಮದೇ ಯಶಸ್ಸು ಎಂಬಂತೆ ಬೀಗಿದ ಮೋದಿ ಸರ್ಕಾರ, ತಜ್ಞರು ಎರಡನೇ ಅಲೆಯ ಬಗ್ಗೆ ಎಚ್ಚರಿಸಿದರೂ, ಚುನಾವಣೆ ಗೆಲ್ಲುವುದೇ ಮುಖ್ಯ ಎಂಬಂತೆ ಉಡಾಫೆ ಮಾಡಿದ್ದೇ 2ನೆ ಅಲೆ ತೀವ್ರವಾಗಲು ಕಾರಣ ಎಂದು ದಿ ಪ್ರಿಂಟ್‌ನಲ್ಲಿ ಬರೆದಿದ್ದಾರೆ.

ರಾಮಚಂದ್ರ ಗುಹಾ ಪ್ರಕಾರ, ಮೋದಿ ಯಾವ ತಜ್ಞರ ಅಭಿಪ್ರಾಯಕ್ಕೂ ಬೆಲೆ ಕೊಡುವುದಿಲ್ಲ. ಅವರು ನೇಮಿಸಿಕೊಂಡ ತಜ್ಞರಲ್ಲಿ ಬಹುಪಾಲು ಜನ ಮೋದಿಯವರ ಮನದಾಳದ ಇಂಗಿತವನ್ನೇ ಸಲಹೆ ಮಾಡುತ್ತಾರೆ, ಮೋದಿ ಖುಷಿಗೊಳ್ಳುತ್ತಾರೆ. ಹೀಗಾಗಿ ಹೊರಗಿನ ಮತ್ತು ಸ್ವತಂತ್ರ ತಜ್ಞರು ಮುಂದಿನ ಅಪಾಯದ ಬಗ್ಗೆ ನವೆಂಬರ್‌ನಿಂದಲೇ ಎಚ್ಚರಿಕೆ ನೀಡುತ್ತಿದ್ದರೂ ಮೋದಿಯವರು ಅದನ್ನು ಕೇರ್ ಮಾಡಲಿಲ್ಲ ಎಂದು ಅಭಿಪ್ರಾಯ ಪಡುತ್ತಾರೆ.

ದೆಹಲಿ, ಮಹಾರಾಷ್ಟ್ರ ಮತ್ತು ಕೇರಳ ರಾಜ್ಯಗಳು ತೀವ್ರವಾದ ಮೊದಲ ಅಲೆಗೆ ತತ್ತರಿಸಿ, ಎರಡನೇ ಅಲೆ ಪ್ರವೇಶ ಮಾಡುವ ಹೊತ್ತಿಗೆ ಆರ್ಥಿಕವಾಗಿ ಹೈರಾಣಾಗಿದ್ದವು. ಇದ್ದುದರಲ್ಲಿ ಕೇರಳ ಮತ್ತು ನಂತರದಲ್ಲಿ ದೆಹಲಿ, ಮಹಾರಾಷ್ಟ್ರ ಸರ್ಕಾರಗಳು ತಮ್ಮ ರಾಜ್ಯಕ್ಕೆ ಕಾಡಿದ್ದ ಮೊದಲ ಅಲೆಯನ್ನು ಒಂದು ಹಂತಕ್ಕೆ ತರುವಲ್ಲಿ ಶ್ರಮ ವಹಿಸಿದ್ದವು.

ಆದರೆ ಎರಡನೆ ಅಲೆ ಜೋರಾದಾಗ ಅವು ಸಹಾಯಕ್ಕೆ ಮನವಿ ಮಾಡುತ್ತಿದ್ದರೆ, ಮೋದಿಯವರು ಬಂಗಾಳ ಮತ್ತು ಇತರ ಚುನಾವಣೆಗಳಲ್ಲಿ ನಿರತರಾಗಿದ್ದರು. ಈ ಮೂರು ರಾಜ್ಯಗಳಲ್ಲಿ ಬಿಜೆಪಿಯೇತರ ಸರ್ಕಾರಗಳಿವೆ ಎಂಬ ಕ್ಷುಲ್ಲಕ ರಾಜಕೀಯ ಅಂಶ ಅವರ ತಲೆಯಲ್ಲಿ ಇದ್ದೇ ಇದೆ. ಅದಿರಲಿ, ಅವರ ಗುಜರಾತ್ ಮತ್ತು ಉತ್ತರಪ್ರದೇಶ ಸರ್ಕಾರಗಳು ತೀವ್ರ ಕೋವಿಡ್ ಹಾನಿ ಅನುಭವಿಸಿಯೂ ಅಂಕಿಅಂಶ ಮುಚ್ಚಿಡುತ್ತ 2ನೆ ಅಲೆ ತೀವ್ರಗೊಳ್ಳಲು ಕಾರಣವಾದ ಮೇಲೂ ಆ ರಾಜ್ಯಗಳಿಗೆ ಕೇಂದ್ರ ಯಾವ ಸಂದೇಶ ಅಥವಾ ಎಚ್ಚರಿಕೆಯನ್ನು ನೀಡಲಿಲ್ಲ.

ಕರ್ನಾಟಕದ ಸರ್ಕಾರದ್ದು ಇನ್ನೊಂದು ಸಮಸ್ಯೆ. ಇದು ಉತ್ತರಪ್ರದೇಶ ಅಥವಾ ಗುಜರಾತಿನಂತೆ ಕೋವಿಡ್ ಸಾವಿನ, ಪಾಸಿಟಿವ್ ಪ್ರಕರಣಗಳ ಸಂಖ್ಯೆಯನ್ನು ಉದ್ದೇಶಪೂರ್ವಕವಾಗಿ ಮುಚ್ಚಿಡಲಿಲ್ಲ. ಆದರೆ ಮೋದಿಯವರಂತೆಯೇ ಈ ಸರ್ಕಾರ ಕೂಡ ತಜ್ಞರ ಮಾತನ್ನು ಗಂಭೀರವಾಗಿ ಪರಿಗಣಿಸಲೇ ಇಲ್ಲ. ಆರೋಗ್ಯ ಸಚಿವ ಡಾ. ಸುಧಾಕರ್ ಮೀಡಿಯಾ ಮುಂದೆ ಹೇಳುವ ಯೋಜನೆಗಳು ರಚನಾತ್ಮಕ ಎನಿಸುತ್ತವೆ, ಆದರೆ ಅವೆಂದೂ ಜಾರಿಗೆ ಬರಲಿಲ್ಲ. ಇಲ್ಲೂ ಆಕ್ಸಿಜನ್, ವೆಂಟಿಲೇಟರ್ ಸಮಸ್ಯೆ ಇದ್ದರೂ ರಾಜ್ಯ ಸರ್ಕಾರ ಮಾತ್ರ ಅಡ್ಡಗೋಡೆ ಮೇಲೆ ದೀಪ ಇಡುತ್ತ ಬಂದಿದೆ.

ಕಳೆದ ವಾರ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ, ರಾಜ್ಯದಲ್ಲಿ ಆಕ್ಸಿಜನ್ ಕೊರತೆ, ಲಸಿಕೆ ಕೊರತೆ, ರೆಮ್‌ಡಿಸಿವಿಯರ್ ಕೊರತೆ ಬಗ್ಗೆ ರಾಜ್ಯದ ಪ್ರತಿನಿಧಿ ತಿಳಿಸಿದರು. ಆದರೆ ಈ ಸರ್ಕಾರದ ಸಚಿವರ‍್ಯಾರೂ ಈ ಸತ್ಯವನ್ನು ಒಪ್ಪಿಕೊಳ್ಳುತ್ತಲೇ ಇಲ್ಲ. ಹಾಗೆಯೇ ನಮ್ಮ ಸಂಸದರ‍್ಯಾರೂ ಕೂಡ ರಾಜ್ಯಕ್ಕೆ ಆರೋಗ್ಯ ಸೌಲಭ್ಯಗಳನ್ನು ತುರ್ತಾಗಿ ಒದಗಿಸಿ ಎಂಬ ಒಂದೇ ಒಂದು ಬೇಡಿಕೆಯನ್ನೂ ಇವತ್ತಿಗೂ ಇಟ್ಟಿಲ್ಲ!

ಅಂದರೆ ಇಲ್ಲಿ ಮೋದಿ ಮತ್ತು ಬಿಜೆಪಿ ಆಳ್ವಿಕೆಯ ರಾಜ್ಯ ಸರ್ಕಾರಗಳು, ಕಳೆದ 4 ತಿಂಗಳಿಂದ ‘ಎಲ್ಲವೂ ಸರಿಯಾಗಿದೆ’ ಎಂಬ ಹುಸಿ ಸಂತೃಪ್ತಿಕರ ಭಾವವನ್ನು ವ್ಯಕ್ತಪಡಿಸುತ್ತ ಜನರನ್ನೂ ದಾರಿ ತಪ್ಪಿಸುತ್ತ ಬಂದವು. ತೊಂದರೆಯಲ್ಲಿದ್ದ ಬಿಜೆಪಿಯೇತರ ರಾಜ್ಯಗಳ ಬೇಡಿಕೆಗಳನ್ನು ಕೇಂದ್ರ ನಿರ್ಲಕ್ಷಿಸುತ್ತ ಬಂದಿತು. ಈಗಲೂ ಅದಕ್ಕೆ ಬಂಗಾಳ ಚುನಾವಣೆಯೇ ಮುಖ್ಯವಾಗಿದೆ. ದೆಹಲಿ ಹೈಕೋರ್ಟ್ ಸತತ ಎರಡು ದಿನಗಳ ಕಾಲ ತರಾಟೆಗೆ ತೆಗೆದುಕೊಂಡ ನಂತರವೂ ಕೇಂದ್ರ ಸರ್ಕಾರಕ್ಕೆ ಅದು ಅವಮಾನ ಅನಿಸಿಯೇ ಇಲ್ಲ ಎಂಬಂತೆ ಕಾಣುತ್ತಿದೆ.

ಝೂನಬ್ ಸಿಕಂದರ್ ಬರೆಯುತ್ತಾರೆ, ‘ಚಪ್ಪಾಳೆಯಿಂದ ಮೋದಿ ಕುರುಡರಾದರು. ಅವರದೇ ಅಭಿಮಾನಿಗಳ ಪ್ರಶಂಸೆಗಳಿಂದ ಉಬ್ಬಿ ಹೋದರು. ಜಾಗತಿಕ ಪ್ರಶಂಸೆಯನ್ನು ಮೋದಿ ಎಷ್ಟು ಪ್ರೀತಿಸುತ್ತಾರೆ ಎಂಬುದು ನಮಗೆಲ್ಲರಿಗೂ ತಿಳಿದಿದೆ. ಅವರು ಎಲ್ಲಿಗೆ ಹೋದರೂ ಅದನ್ನು ಪ್ರಭಾವಲಯದಂತೆ ಧರಿಸುತ್ತಾರೆ, ಅವರು ಭಾರತವಲ್ಲ, ನಿಜವಾದ ವಿಶ್ವ ಗುರು ಎಂದು ಮತದಾರರಿಗೆ ಮನವರಿಕೆ ಮಾಡಲು ಬಯಸುತ್ತಾರೆ. ಸಮುಂದರ್ ಪೆ ಚರ್ಚಾ ಫೋಟೋ-ಶೂಟ್‌ಗಾಗಿ ವಿಶ್ವ ನಾಯಕರನ್ನು ತಬ್ಬಿಕೊಂಡು ಅವರೊಂದಿಗೆ ಬೀಚ್‌ನಲ್ಲಿ ನಡೆಯುವಾಗ ಇಂತಹ ವಿಶ್ವಗುರು ಭ್ರಮೆಯಲ್ಲಿ ಅವರು ಇರುತ್ತಾರೆ. ಅವರ ಈ ನಡವಳಿಕೆಯೇ ಇವತ್ತಿನ ಈ ಬಿಕ್ಕಟ್ಟಿನ ಮೂಲವಾಗಿದೆ…..

ಆದ್ದರಿಂದ, ಹೊಸ ರೂಪಾಂತರವು ಭಾರತಕ್ಕೆ ಬಂದಿದೆ ಮತ್ತು ‘ಇಂಡಿಯನ್’ ರೂಪಾಂತರದ ಸಾಧ್ಯತೆಯೂ ಇದೆ ಎಂದು ತಜ್ಞರು ಹೇಳಿದ್ದನ್ನು ಮೋದಿ ಸರ್ಕಾರ ನಿರ್ಲಕ್ಷಿಸುತ್ತಲೇ ಬಂದಿದ್ದರ ಪರಿಣಾಮವೇ ಇವತ್ತಿನ ದುರಂತಕ್ಕೆ ಕಾರಣ….’

ರಾಮಚಂದ್ರ ಗುಹಾ ಪ್ರಕಾರ, ಹಿಂದೆಲ್ಲ ಸರ್ಕಾರಗಳು ದಕ್ಷ, ದೂರದೃಷ್ಟಿಯುಳ್ಳ ಅಧಿಕಾರಿಗಳನ್ನು ಪ್ರಮುಖ ಸ್ಥಾನಕ್ಕೆ ನೇಮಿಸುತ್ತಿದ್ದವು. ಅಲ್ಲಿ ಪಕ್ಷನಿಷ್ಠೆ ಅಥವಾ ವ್ಯಕ್ತಿನಿಷ್ಠೆ ನೋಡುತ್ತಿರಲಿಲ್ಲ. ಆದರೆ 2014ರ ನಂತರ ಮೋದಿಯವರು ಗುಜರಾತಿ ಅಧಿಕಾರಿಗಳನ್ನು ದೆಹಲಿಗೆ ಕರೆ ತಂದರು. ಇವರೆಲ್ಲ ವ್ಯಕ್ತಿಪೂಜೆಯ ಆರಾಧಕರು, ಪಿಎಂಒ ಕೂಡ ಅಂತಹವರಿಂದಲೇ ತುಂಬಿತು… ಹೀಗಾಗಿ ಅಲ್ಲಿ ತಜ್ಞತೆಗೆ, ಆಡಳಿತ ದಕ್ಷತೆಗೆ ಅವಕಾಶವೇ ಇಲ್ಲವಾಯಿತು’ ಎನ್ನುತ್ತಾರೆ.

ವಾಷಿಂಗ್ಟನನ್ ಪೋಸ್ಟ್ ಮತ್ತು ದಿ ಗಾರ್ಡಿಯನ್ ಈ ಎರಡು ದಿನಗಳಲ್ಲಿ ಪ್ರಕಟಿಸಿದ ಲೇಖನಗಳಲ್ಲಿ ಭಾರತದಲ್ಲಿನ 2ನೆ ಉಲ್ಬಣಕ್ಕೆ ಮೋದಿ ಸರ್ಕಾರವೇ ಕಾರಣ ಎಂದು ಟೈಟಲ್ಲಿನಲ್ಲಿಯೇ ಸಾರಿವೆ.

ಇವತ್ತು ಬಂಗಾಳದಲ್ಲಿ 6ನೆ ಹಂತದ ಮತದಾನ ಆರಂಭವಾದ ಕೂಡಲೇ ಮೊದಿ ಟ್ವೀಟ್ ಮಾಡಿ, ಎಲ್ಲರೂ ಮತ ಚಲಾಯಿಸಿ ಎನ್ನುತ್ತ ತಮ್ಮ ಸಣ್ಣ ಬುದ್ಧಿ ಪ್ರದರ್ಶಿಸಿದ್ದಾರೆ. ಅವರ ಮೂಗಿನಡಿಯೇ ಜನ ಆಮ್ಲಜನಕ ಅಂದರೆ O2 ಕೊರತೆಯಿಂದ ಸಾಯುವಾಗ ಅವರು ಟ್ವೀಟಿನಲ್ಲಿ ಓಟಿನ ಬೇಟೆಯಾಡುತ್ತಿದ್ದರು. ಈ ಒಂದು ಅಂಶವೇ ಸಾಕು ಅವರ ಹುಚ್ಚು ಶೈಲಿಯ, ಒಣ ಧಿಮಾಕಿನ ಆಡಳಿತ ಶೈಲಿಗೆ ಅಲ್ಲವೇ?

ಒಂದೆಡೆ ಕೊರೊನಾ ಪ್ರಕರಣಗಳಲ್ಲಿ ಏರಿಕೆಯಾಗುತ್ತಿರುವಾಗ ಬಂಗಾಳದ ಅಸ್ಸನೋಲ್‌ನಲ್ಲಿ ಮೋದಿ ಬೃಹತ್ ರ್ಯಾಲಿ ನಡೆಸುತ್ತಾರೆ. ಇಷ್ಟೊಂದು ಜನಸಂದಣಿ ನಾನು ನೋಡಿಯೇ ಇಲ್ಲ ಎಂದು ಉದ್ಘರಿಸುತ್ತಾರೆ. ಅಲ್ಲದೇ ನಾಳೆ ಬಂಗಾಳದಲ್ಲಿ ಮತ್ತೆ ಮೋದಿಯವರ ರ‍್ಯಾಲಿಗಳಿವೆ. ಅಲ್ಲಿ ಅಪಾರ ಜನಸಂದಣಿ ಸೇರುತ್ತದೆ ಅಥವಾ ಸೇರಿಸುತ್ತಾರೆ. ಹಾಗಾದರೆ ಮೊನ್ನೆ ಮಂಗಳವಾರ 8.45ಕ್ಕೆ ಅವರು ಹೇಳಿದ್ದೇನು? ಈ ಆಷಾಢಭೂತಿತನವೇ ಇವತ್ತಿನ ಕೋವಿಡ್ ದುರಂತದ ಮೂಲ ಅಲ್ಲವೇ?

  • ಪಿ.ಕೆ ಮಲ್ಲನಗೌಡರ್

ಇದನ್ನೂ ಓದಿ: ಬೆಡ್‌ಗಾಗಿ ಸೋಂಕಿತರ ಪರದಾಟ: ಬೆಂಗಳೂರಿನ 10,100 ಬೆಡ್‌ಗಳ ದೇಶದ ಅತಿದೊಡ್ಡ ಕೋವಿಡ್ ಕೇರ್ ಸೆಂಟರ್ ಏನಾಯಿತು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...