Homeರಾಷ್ಟ್ರೀಯ2016-2020ರ ನಡುವೆ 3,400 ಕೋಮು ಗಲಭೆಗಳು ನಡೆದಿವೆ ಎಂದು ಒಪ್ಪಿಕೊಂಡಿದ್ದ ಮೋದಿ ಸರ್ಕಾರ

2016-2020ರ ನಡುವೆ 3,400 ಕೋಮು ಗಲಭೆಗಳು ನಡೆದಿವೆ ಎಂದು ಒಪ್ಪಿಕೊಂಡಿದ್ದ ಮೋದಿ ಸರ್ಕಾರ

- Advertisement -
- Advertisement -

ಇತ್ತೀಚೆಗೆ ಕೋಮು ವಿಭಜನೆಗಳು ಹೆಚ್ಚುತ್ತಿದ್ದು, ದೇಶ ಹಾಗೂ ರಾಜ್ಯದ ಬಿಜೆಪಿ ಸರ್ಕಾರದಗಳು ಈ ವಿಷಯಗಳನ್ನು ಗಂಭೀರವಾಗಿ ಗಣನೆಗೆ ತೆಗೆದುಕೊಂಡಿಲ್ಲ. ವಾಸ್ತವದಲ್ಲಿ ಬಿಜೆಪಿ ಪಕ್ಷದ ಪದಾದಿಕಾರಿಗಳು ಹಾಗೂ ಸರ್ಕಾರದ ಪ್ರತಿನಿಧಿಗಳೇ ಈ ಕೋಮುದ್ವೇಷ ಹಾಗೂ ಮುಸ್ಲಿಂ ದ್ವೇಷಗಳಿಗೆ ತುಪ್ಪ ಸುರಿಯುತ್ತಿದೆ.

ಬಿಜೆಪಿ ಆಡಳಿತದ 2016-2020ರ ಅವಧಿಯಲ್ಲಿ ಭಾರತದಲ್ಲಿ 3,399 ಕೋಮು ಗಲಭೆ ಪ್ರಕರಣಗಳು ನಡೆದಿವೆ ಎಂದು ಒಕ್ಕೂಟ ಸರ್ಕಾರ ಮಾರ್ಚ್‌ 30ರ ಮಂಗಳವಾರದಂದು ಒಪ್ಪಿಕೊಂಡಿತ್ತು. ಇದೀಗ ಈ ಸಂದೇಶ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸಂಸತ್ತಿನಲ್ಲಿ ಕಾಂಗ್ರೆಸ್ ಸಂಸದ ಶಶಿ ತರೂರ್ ಮತ್ತು ಬಿಜೆಪಿ ಸಂಸದ ಚಂದ್ರ ಪ್ರಕಾಶ್ ಜೋಶಿ ಅವರು ಕೇಳಿದ ಪ್ರಶ್ನೆಗೆ ಉತ್ತರವಾಗಿ ಗೃಹ ವ್ಯವಹಾರಗಳ ಸಚಿವ ನಿತ್ಯಾನಂದ ರೈ ಈ ವಿಷಯವನ್ನು ಬಹಿರಂಗಪಡಿಸಿದ್ದರು. ಇತ್ತೀಚಿನ ವರ್ಷಗಳಲ್ಲಿ ದೇಶದಲ್ಲಿ ನಡೆದ ಗಲಭೆಗಳು ಮತ್ತು ಹತ್ಯೆಗಳ ದಾಖಲೆಯನ್ನು ಸರ್ಕಾರ ನಿರ್ವಹಿಸಿದೆಯೇ ಎಂದು ಸಂಸದರಿಬ್ಬರು ಸರ್ಕಾರವನ್ನು ಪ್ರಶ್ನಿಸಿದ್ದರು.

ಇದನ್ನೂ ಓದಿ: ಕೋಮು ಗಲಭೆಗಳಿಂದ ಭಾರತದಲ್ಲಿ ಸ್ಥಳಾಂತರಗೊಂಡವರ ಕೆಲವು ಫೈಲ್ಸ್

2020ರಲ್ಲಿ 857, 2019ರಲ್ಲಿ 438, 2018ರಲ್ಲಿ 512, 2017ರಲ್ಲಿ 723 ಮತ್ತು 2016ರಲ್ಲಿ 869 ಕೋಮು ಅಥವಾ ಧಾರ್ಮಿಕ ಗಲಭೆ ಪ್ರಕರಣಗಳು ದಾಖಲಾಗಿವೆ ಎಂದು ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೊ (ಎನ್‌ಸಿಆರ್‌ಬಿ) ವರದಿಗಳನ್ನು ಉಲ್ಲೇಖಿಸಿ ಸಚಿವ ನಿತ್ಯಾನಂದ ರೈ ಅಂದು ಹೇಳಿದ್ದರು.

ಅದಕ್ಕೆ ಪೂರಕವಾಗಿ 2020ರಲ್ಲಿ 51,606, 2019ರಲ್ಲಿ 45,985, 2018ರಲ್ಲಿ 57,828, 2017ರಲ್ಲಿ 58,880 ಮತ್ತು 2016ರಲ್ಲಿ 61,974 ಗಲಭೆ ಪ್ರಕರಣಗಳು ದಾಖಲಾಗಿವೆ ಎಂದು ಅವರು ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ. ಎನ್‌ಸಿಆರ್‌ಬಿಯಿಂದ ಸಾಮೂಹಿಕ ಹತ್ಯೆಯ ಯಾವುದೇ ಪ್ರತ್ಯೇಕ ಡೇಟಾವನ್ನು ನಿರ್ವಹಿಸುವುದಿಲ್ಲ ಎಂದು ಅವರು ತಿಳಿಸಿದ್ದರು.

ದೇಶದಲ್ಲಿ ಕೋಮು ಘಟನೆಗಳು ನಿರಂತರವಾಗಿ ನಡೆಯುತ್ತಿದ್ದರೂ ಪ್ರಧಾನಿ ಮೋದಿ ಈ ಬಗ್ಗೆ ಯಾವುದೆ ಪ್ರತಿಕ್ರಿಯೆಯನ್ನು ನೀಡಿಲ್ಲ. ಈ ಬಗ್ಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲಾ ಪ್ರಧಾನಿಯ ಮೌನವನ್ನು ಪ್ರಶ್ನಿಸಿದ್ದು, ದ್ವೇಷದ ಘಟನೆಗಳನ್ನು ಏಕೆ ಖಂಡಿಸಿಲ್ಲ ಎಂದು ಕೇಳಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

  1. Dear admin
    Kindly justify today’s Belgium after election trend by leftists..
    Hope u r happy for that hear.
    Demanding for Sharia law.
    Are u sleeping blaming communal insecurities.

    People are wise enough tdy know ur way out

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...