Homeರಾಷ್ಟ್ರೀಯ2016-2020ರ ನಡುವೆ 3,400 ಕೋಮು ಗಲಭೆಗಳು ನಡೆದಿವೆ ಎಂದು ಒಪ್ಪಿಕೊಂಡಿದ್ದ ಮೋದಿ ಸರ್ಕಾರ

2016-2020ರ ನಡುವೆ 3,400 ಕೋಮು ಗಲಭೆಗಳು ನಡೆದಿವೆ ಎಂದು ಒಪ್ಪಿಕೊಂಡಿದ್ದ ಮೋದಿ ಸರ್ಕಾರ

- Advertisement -
- Advertisement -

ಇತ್ತೀಚೆಗೆ ಕೋಮು ವಿಭಜನೆಗಳು ಹೆಚ್ಚುತ್ತಿದ್ದು, ದೇಶ ಹಾಗೂ ರಾಜ್ಯದ ಬಿಜೆಪಿ ಸರ್ಕಾರದಗಳು ಈ ವಿಷಯಗಳನ್ನು ಗಂಭೀರವಾಗಿ ಗಣನೆಗೆ ತೆಗೆದುಕೊಂಡಿಲ್ಲ. ವಾಸ್ತವದಲ್ಲಿ ಬಿಜೆಪಿ ಪಕ್ಷದ ಪದಾದಿಕಾರಿಗಳು ಹಾಗೂ ಸರ್ಕಾರದ ಪ್ರತಿನಿಧಿಗಳೇ ಈ ಕೋಮುದ್ವೇಷ ಹಾಗೂ ಮುಸ್ಲಿಂ ದ್ವೇಷಗಳಿಗೆ ತುಪ್ಪ ಸುರಿಯುತ್ತಿದೆ.

ಬಿಜೆಪಿ ಆಡಳಿತದ 2016-2020ರ ಅವಧಿಯಲ್ಲಿ ಭಾರತದಲ್ಲಿ 3,399 ಕೋಮು ಗಲಭೆ ಪ್ರಕರಣಗಳು ನಡೆದಿವೆ ಎಂದು ಒಕ್ಕೂಟ ಸರ್ಕಾರ ಮಾರ್ಚ್‌ 30ರ ಮಂಗಳವಾರದಂದು ಒಪ್ಪಿಕೊಂಡಿತ್ತು. ಇದೀಗ ಈ ಸಂದೇಶ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸಂಸತ್ತಿನಲ್ಲಿ ಕಾಂಗ್ರೆಸ್ ಸಂಸದ ಶಶಿ ತರೂರ್ ಮತ್ತು ಬಿಜೆಪಿ ಸಂಸದ ಚಂದ್ರ ಪ್ರಕಾಶ್ ಜೋಶಿ ಅವರು ಕೇಳಿದ ಪ್ರಶ್ನೆಗೆ ಉತ್ತರವಾಗಿ ಗೃಹ ವ್ಯವಹಾರಗಳ ಸಚಿವ ನಿತ್ಯಾನಂದ ರೈ ಈ ವಿಷಯವನ್ನು ಬಹಿರಂಗಪಡಿಸಿದ್ದರು. ಇತ್ತೀಚಿನ ವರ್ಷಗಳಲ್ಲಿ ದೇಶದಲ್ಲಿ ನಡೆದ ಗಲಭೆಗಳು ಮತ್ತು ಹತ್ಯೆಗಳ ದಾಖಲೆಯನ್ನು ಸರ್ಕಾರ ನಿರ್ವಹಿಸಿದೆಯೇ ಎಂದು ಸಂಸದರಿಬ್ಬರು ಸರ್ಕಾರವನ್ನು ಪ್ರಶ್ನಿಸಿದ್ದರು.

ಇದನ್ನೂ ಓದಿ: ಕೋಮು ಗಲಭೆಗಳಿಂದ ಭಾರತದಲ್ಲಿ ಸ್ಥಳಾಂತರಗೊಂಡವರ ಕೆಲವು ಫೈಲ್ಸ್

2020ರಲ್ಲಿ 857, 2019ರಲ್ಲಿ 438, 2018ರಲ್ಲಿ 512, 2017ರಲ್ಲಿ 723 ಮತ್ತು 2016ರಲ್ಲಿ 869 ಕೋಮು ಅಥವಾ ಧಾರ್ಮಿಕ ಗಲಭೆ ಪ್ರಕರಣಗಳು ದಾಖಲಾಗಿವೆ ಎಂದು ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೊ (ಎನ್‌ಸಿಆರ್‌ಬಿ) ವರದಿಗಳನ್ನು ಉಲ್ಲೇಖಿಸಿ ಸಚಿವ ನಿತ್ಯಾನಂದ ರೈ ಅಂದು ಹೇಳಿದ್ದರು.

ಅದಕ್ಕೆ ಪೂರಕವಾಗಿ 2020ರಲ್ಲಿ 51,606, 2019ರಲ್ಲಿ 45,985, 2018ರಲ್ಲಿ 57,828, 2017ರಲ್ಲಿ 58,880 ಮತ್ತು 2016ರಲ್ಲಿ 61,974 ಗಲಭೆ ಪ್ರಕರಣಗಳು ದಾಖಲಾಗಿವೆ ಎಂದು ಅವರು ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ. ಎನ್‌ಸಿಆರ್‌ಬಿಯಿಂದ ಸಾಮೂಹಿಕ ಹತ್ಯೆಯ ಯಾವುದೇ ಪ್ರತ್ಯೇಕ ಡೇಟಾವನ್ನು ನಿರ್ವಹಿಸುವುದಿಲ್ಲ ಎಂದು ಅವರು ತಿಳಿಸಿದ್ದರು.

ದೇಶದಲ್ಲಿ ಕೋಮು ಘಟನೆಗಳು ನಿರಂತರವಾಗಿ ನಡೆಯುತ್ತಿದ್ದರೂ ಪ್ರಧಾನಿ ಮೋದಿ ಈ ಬಗ್ಗೆ ಯಾವುದೆ ಪ್ರತಿಕ್ರಿಯೆಯನ್ನು ನೀಡಿಲ್ಲ. ಈ ಬಗ್ಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲಾ ಪ್ರಧಾನಿಯ ಮೌನವನ್ನು ಪ್ರಶ್ನಿಸಿದ್ದು, ದ್ವೇಷದ ಘಟನೆಗಳನ್ನು ಏಕೆ ಖಂಡಿಸಿಲ್ಲ ಎಂದು ಕೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Dear admin
    Kindly justify today’s Belgium after election trend by leftists..
    Hope u r happy for that hear.
    Demanding for Sharia law.
    Are u sleeping blaming communal insecurities.

    People are wise enough tdy know ur way out

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...