Homeಮುಖಪುಟರೈತರ ಎಲ್ಲಾ ಬೇಡಿಕೆಗಳ ಮುಂದೆ ಮಂಡಿಯೂರಿದ ಮೋದಿ ಸರ್ಕಾರ: ಐತಿಹಾಸಿಕ ರೈತ ಹೋರಾಟ ಶನಿವಾರ ಅಂತ್ಯ!

ರೈತರ ಎಲ್ಲಾ ಬೇಡಿಕೆಗಳ ಮುಂದೆ ಮಂಡಿಯೂರಿದ ಮೋದಿ ಸರ್ಕಾರ: ಐತಿಹಾಸಿಕ ರೈತ ಹೋರಾಟ ಶನಿವಾರ ಅಂತ್ಯ!

- Advertisement -
- Advertisement -

ಒಕ್ಕೂಟ ಸರ್ಕಾರದ ಗೃಹ ಸಚಿವಾಲಯದ ಜೊತೆಗೆ ನಡೆದ ಮಾತುಕತೆಗಳ ನಂತರ, ದೆಹಲಿಯ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರು ಅಂತಿಮವಾಗಿ ತಮ್ಮ ಆಂದೋಲನವನ್ನು ಕೊನೆಗೊಳಿಸಲು ನಿರ್ಧರಿಸಿದ್ದಾರೆ. ಆಂದೋಲನಕ್ಕೆ ಸಂಬಂಧಿಸಿದ ಎಲ್ಲಾ ಪ್ರಕರಣಗಳನ್ನು ಹಿಂಪಡೆಯುವುದು ಮತ್ತು ವಿವಾದಿತ ಕೃಷಿ ಕಾನೂನುಗಳ ವಿರುದ್ಧದ ಚಳವಳಿಯ ಸಂದರ್ಭದಲ್ಲಿ ಸಾವನ್ನಪ್ಪಿದ ರೈತರ ಕುಟುಂಬಗಳಿಗೆ ಪರಿಹಾರ ಸೇರಿದಂತೆ ಪ್ರತಿಭಟನಾ ನಿರತ ರೈತರು ಮಂಡಿಸಿದ ಎಲ್ಲಾ ಬೇಡಿಕೆಗಳನ್ನು ಒಕ್ಕೂಟ ಸರ್ಕಾರ ಅಂಗೀಕರಿಸಿದ ಹಿನ್ನೆಲೆಯಲ್ಲಿ ರೈತರು ಈ ನಿರ್ಧಾರ ಕೈಗೊಂಡಿದ್ದಾರೆ.

ರೈತರು ಡಿಸೆಂಬರ್ 11 ರ ಶನಿವಾರದಂದು ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸಿ ತಮ್ಮ ಮನೆಗಳಿಗೆ ಮರಳುವುದಾಗಿ ಘೋಷಿಸಿದ್ದಾರೆ. ನವೆಂಬರ್ 21 ರಂದು ಸಂಯುಕ್ತ ಕಿಸಾನ್ ಮೋರ್ಚಾ ಆರು ಬೇಡಿಕೆಗಳನ್ನು ಪಟ್ಟಿ ಮಾಡಿ ಪ್ರಧಾನಿ ಮೋದಿಗೆ ಪತ್ರ ಬರೆದಿತ್ತು. ಇದರ ನಂತರ ಒಕ್ಕೂಟ ಸರ್ಕಾರ ನಿನ್ನೆ ಸಂಯುಕ್ತ ಕಿಸಾನ್ ಮೋರ್ಚಾದ ಐದು ಸದಸ್ಯರ ಸಮಿತಿಗೆ ಲಿಖಿತ ಕರಡು ಪ್ರಸ್ತಾವನೆಯನ್ನು ಕಳುಹಿಸಿದೆ.

ಇದನ್ನೂ ಓದಿ:ಎಲ್ಲಾ ಪ್ರಕರಣಗಳು ತಕ್ಷಣವೇ ಅಮಾನತು: ರೈತರ ಮುಂದೆ ಮತ್ತೇ ಮಂಡಿಯೂರಿದ ಮೋದಿ ಸರ್ಕಾರ

ರೈತರ ಬೇಡಿಕೆಗಳನ್ನು ಒಪ್ಪಿಕೊಂಡಿರುವ ಬಗ್ಗೆ ಒಕ್ಕೂಟ ಸರ್ಕಾರವು ಸಂಯುಕ್ತ ಕಿಸಾನ್ ಮೋರ್ಚಾಗೆ ಅಧಿಕೃತ ಪತ್ರವನ್ನು ಕಳುಹಿಸಿದೆ. ಅದರಲ್ಲಿ, “ಕನಿಷ್ಠ ಬೆಂಬಲ ಬೆಲೆಯ ಕಾನೂನು ರಚನೆಗೆ ಸಮಿತಿ ರಚನೆ, ಹೋರಾಟದ ಸಮಯಲ್ಲಿ ರೈತರ ಮೇಲಿದ್ದ ಪ್ರಕರಣದ ವಾಪಾಸಾತಿ, ಮೃತಪಟ್ಟವರಿಗೆ ಪರಿಹಾರ, ವಿದ್ಯತ್‌ ತಿದ್ದುಪಡಿ ಮಸೂದೆ ವಾಪಾಸ್‌ ಪಡೆಯುವುದು, ಕೊಯ್ದ ಕೊಯ್ಲಿನ ಕೊಳೆ ಸುಡುವುದನ್ನು ನಿರಪರಾಧಿಕರಣ” ಸೇರಿದಂತೆ ರೈತರ ಎಲ್ಲಾ ಬೇಡಿಕೆಗಳಿಗೆ ಸರ್ಕಾರ ಒಪ್ಪಿಕೊಂಡಿದೆ.

ಕೃಷಿ ಕಾನೂನು ವಾಪಾಸು ಪಡೆಯುವುದರ ಹಿಂದೆ ಸರ್ಕಾರಕ್ಕೆ ಬೇರೆ ಉದ್ದೇಶ ಇದೆ ಎಂಬ ರೈತರು ಅನುಮಾನ ವ್ಯಕ್ತಪಡಿಸಿದರು. ಹೀಗಾಗಿ ಜೊತೆಗೆ ಪ್ರತಿಭಟನೆಯ ಸಮಯದಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಎಲ್ಲಾ ಪ್ರಕರಣಗಳು ಮತ್ತು ಹುಲ್ಲು ಸುಡುವಿಕೆಗೆ ಸಂಬಂಧಿಸಿದ ಎಲ್ಲಾ ಪ್ರಕರಣಗಳನ್ನು ರದ್ದುಗೊಳಿಸಿದ ನಂತರವೇ ಹೋರಾಟ ನಿಲ್ಲಿಸುತ್ತೇವೆ ಎಂದು ಪ್ರತಿಪಾದಿಸಿದ್ದರು.

ರೈತರು, 2016 ರಲ್ಲಿ ನಡೆದ ಮೀಸಲಾತಿಗಾಗಿ ಜಾಟ್ ಆಂದೋಲನವನ್ನು ಉಲ್ಲೇಖಿಸಿ, ಭರವಸೆ ನೀಡಿದ ನಂತರವೂ ಕಾನೂನು ಪ್ರಕರಣಗಳನ್ನು ಹಿಂಪಡೆಯಲು ಸರ್ಕಾರ ವಿಫಲವಾಗಿದೆ ಎಂದು ನೆನಪಿಸಿ ಕೊಂಡಿದ್ದಾರೆ. ಮಂಗಳವಾರ ಸಂಜೆ ದೆಹಲಿ-ಹರಿಯಾಣ ಗಡಿಯಲ್ಲಿರುವ ಸಿಂಘು ಗಡಿಯಲ್ಲಿ ಸಂಯುಕ್ತ ಕಿಸಾನ್ ಮೋರ್ಚಾದ ರೈತ ಮುಖಂಡರ ಸುದೀರ್ಘ ಸಭೆ ನಡೆದಿತ್ತು.

ಇದನ್ನೂ ಓದಿ:ಪೆಪ್ಸಿ ಕಂಪೆನಿಯ ವಿರುದ್ದ ರೈತರಿಗೆ ಜಯ: ‘ಲೇಸ್‌ ಆಲೂಗಡ್ಡೆ’ಗಳ ಪೇಟೆಂಟ್ ರದ್ದು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...