Homeಮುಖಪುಟರೈತರ ಎಲ್ಲಾ ಬೇಡಿಕೆಗಳ ಮುಂದೆ ಮಂಡಿಯೂರಿದ ಮೋದಿ ಸರ್ಕಾರ: ಐತಿಹಾಸಿಕ ರೈತ ಹೋರಾಟ ಶನಿವಾರ ಅಂತ್ಯ!

ರೈತರ ಎಲ್ಲಾ ಬೇಡಿಕೆಗಳ ಮುಂದೆ ಮಂಡಿಯೂರಿದ ಮೋದಿ ಸರ್ಕಾರ: ಐತಿಹಾಸಿಕ ರೈತ ಹೋರಾಟ ಶನಿವಾರ ಅಂತ್ಯ!

- Advertisement -
- Advertisement -

ಒಕ್ಕೂಟ ಸರ್ಕಾರದ ಗೃಹ ಸಚಿವಾಲಯದ ಜೊತೆಗೆ ನಡೆದ ಮಾತುಕತೆಗಳ ನಂತರ, ದೆಹಲಿಯ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರು ಅಂತಿಮವಾಗಿ ತಮ್ಮ ಆಂದೋಲನವನ್ನು ಕೊನೆಗೊಳಿಸಲು ನಿರ್ಧರಿಸಿದ್ದಾರೆ. ಆಂದೋಲನಕ್ಕೆ ಸಂಬಂಧಿಸಿದ ಎಲ್ಲಾ ಪ್ರಕರಣಗಳನ್ನು ಹಿಂಪಡೆಯುವುದು ಮತ್ತು ವಿವಾದಿತ ಕೃಷಿ ಕಾನೂನುಗಳ ವಿರುದ್ಧದ ಚಳವಳಿಯ ಸಂದರ್ಭದಲ್ಲಿ ಸಾವನ್ನಪ್ಪಿದ ರೈತರ ಕುಟುಂಬಗಳಿಗೆ ಪರಿಹಾರ ಸೇರಿದಂತೆ ಪ್ರತಿಭಟನಾ ನಿರತ ರೈತರು ಮಂಡಿಸಿದ ಎಲ್ಲಾ ಬೇಡಿಕೆಗಳನ್ನು ಒಕ್ಕೂಟ ಸರ್ಕಾರ ಅಂಗೀಕರಿಸಿದ ಹಿನ್ನೆಲೆಯಲ್ಲಿ ರೈತರು ಈ ನಿರ್ಧಾರ ಕೈಗೊಂಡಿದ್ದಾರೆ.

ರೈತರು ಡಿಸೆಂಬರ್ 11 ರ ಶನಿವಾರದಂದು ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸಿ ತಮ್ಮ ಮನೆಗಳಿಗೆ ಮರಳುವುದಾಗಿ ಘೋಷಿಸಿದ್ದಾರೆ. ನವೆಂಬರ್ 21 ರಂದು ಸಂಯುಕ್ತ ಕಿಸಾನ್ ಮೋರ್ಚಾ ಆರು ಬೇಡಿಕೆಗಳನ್ನು ಪಟ್ಟಿ ಮಾಡಿ ಪ್ರಧಾನಿ ಮೋದಿಗೆ ಪತ್ರ ಬರೆದಿತ್ತು. ಇದರ ನಂತರ ಒಕ್ಕೂಟ ಸರ್ಕಾರ ನಿನ್ನೆ ಸಂಯುಕ್ತ ಕಿಸಾನ್ ಮೋರ್ಚಾದ ಐದು ಸದಸ್ಯರ ಸಮಿತಿಗೆ ಲಿಖಿತ ಕರಡು ಪ್ರಸ್ತಾವನೆಯನ್ನು ಕಳುಹಿಸಿದೆ.

ಇದನ್ನೂ ಓದಿ:ಎಲ್ಲಾ ಪ್ರಕರಣಗಳು ತಕ್ಷಣವೇ ಅಮಾನತು: ರೈತರ ಮುಂದೆ ಮತ್ತೇ ಮಂಡಿಯೂರಿದ ಮೋದಿ ಸರ್ಕಾರ

ರೈತರ ಬೇಡಿಕೆಗಳನ್ನು ಒಪ್ಪಿಕೊಂಡಿರುವ ಬಗ್ಗೆ ಒಕ್ಕೂಟ ಸರ್ಕಾರವು ಸಂಯುಕ್ತ ಕಿಸಾನ್ ಮೋರ್ಚಾಗೆ ಅಧಿಕೃತ ಪತ್ರವನ್ನು ಕಳುಹಿಸಿದೆ. ಅದರಲ್ಲಿ, “ಕನಿಷ್ಠ ಬೆಂಬಲ ಬೆಲೆಯ ಕಾನೂನು ರಚನೆಗೆ ಸಮಿತಿ ರಚನೆ, ಹೋರಾಟದ ಸಮಯಲ್ಲಿ ರೈತರ ಮೇಲಿದ್ದ ಪ್ರಕರಣದ ವಾಪಾಸಾತಿ, ಮೃತಪಟ್ಟವರಿಗೆ ಪರಿಹಾರ, ವಿದ್ಯತ್‌ ತಿದ್ದುಪಡಿ ಮಸೂದೆ ವಾಪಾಸ್‌ ಪಡೆಯುವುದು, ಕೊಯ್ದ ಕೊಯ್ಲಿನ ಕೊಳೆ ಸುಡುವುದನ್ನು ನಿರಪರಾಧಿಕರಣ” ಸೇರಿದಂತೆ ರೈತರ ಎಲ್ಲಾ ಬೇಡಿಕೆಗಳಿಗೆ ಸರ್ಕಾರ ಒಪ್ಪಿಕೊಂಡಿದೆ.

ಕೃಷಿ ಕಾನೂನು ವಾಪಾಸು ಪಡೆಯುವುದರ ಹಿಂದೆ ಸರ್ಕಾರಕ್ಕೆ ಬೇರೆ ಉದ್ದೇಶ ಇದೆ ಎಂಬ ರೈತರು ಅನುಮಾನ ವ್ಯಕ್ತಪಡಿಸಿದರು. ಹೀಗಾಗಿ ಜೊತೆಗೆ ಪ್ರತಿಭಟನೆಯ ಸಮಯದಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಎಲ್ಲಾ ಪ್ರಕರಣಗಳು ಮತ್ತು ಹುಲ್ಲು ಸುಡುವಿಕೆಗೆ ಸಂಬಂಧಿಸಿದ ಎಲ್ಲಾ ಪ್ರಕರಣಗಳನ್ನು ರದ್ದುಗೊಳಿಸಿದ ನಂತರವೇ ಹೋರಾಟ ನಿಲ್ಲಿಸುತ್ತೇವೆ ಎಂದು ಪ್ರತಿಪಾದಿಸಿದ್ದರು.

ರೈತರು, 2016 ರಲ್ಲಿ ನಡೆದ ಮೀಸಲಾತಿಗಾಗಿ ಜಾಟ್ ಆಂದೋಲನವನ್ನು ಉಲ್ಲೇಖಿಸಿ, ಭರವಸೆ ನೀಡಿದ ನಂತರವೂ ಕಾನೂನು ಪ್ರಕರಣಗಳನ್ನು ಹಿಂಪಡೆಯಲು ಸರ್ಕಾರ ವಿಫಲವಾಗಿದೆ ಎಂದು ನೆನಪಿಸಿ ಕೊಂಡಿದ್ದಾರೆ. ಮಂಗಳವಾರ ಸಂಜೆ ದೆಹಲಿ-ಹರಿಯಾಣ ಗಡಿಯಲ್ಲಿರುವ ಸಿಂಘು ಗಡಿಯಲ್ಲಿ ಸಂಯುಕ್ತ ಕಿಸಾನ್ ಮೋರ್ಚಾದ ರೈತ ಮುಖಂಡರ ಸುದೀರ್ಘ ಸಭೆ ನಡೆದಿತ್ತು.

ಇದನ್ನೂ ಓದಿ:ಪೆಪ್ಸಿ ಕಂಪೆನಿಯ ವಿರುದ್ದ ರೈತರಿಗೆ ಜಯ: ‘ಲೇಸ್‌ ಆಲೂಗಡ್ಡೆ’ಗಳ ಪೇಟೆಂಟ್ ರದ್ದು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...