Homeಮುಖಪುಟರೈತರ ಎಲ್ಲಾ ಬೇಡಿಕೆಗಳ ಮುಂದೆ ಮಂಡಿಯೂರಿದ ಮೋದಿ ಸರ್ಕಾರ: ಐತಿಹಾಸಿಕ ರೈತ ಹೋರಾಟ ಶನಿವಾರ ಅಂತ್ಯ!

ರೈತರ ಎಲ್ಲಾ ಬೇಡಿಕೆಗಳ ಮುಂದೆ ಮಂಡಿಯೂರಿದ ಮೋದಿ ಸರ್ಕಾರ: ಐತಿಹಾಸಿಕ ರೈತ ಹೋರಾಟ ಶನಿವಾರ ಅಂತ್ಯ!

- Advertisement -
- Advertisement -

ಒಕ್ಕೂಟ ಸರ್ಕಾರದ ಗೃಹ ಸಚಿವಾಲಯದ ಜೊತೆಗೆ ನಡೆದ ಮಾತುಕತೆಗಳ ನಂತರ, ದೆಹಲಿಯ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರು ಅಂತಿಮವಾಗಿ ತಮ್ಮ ಆಂದೋಲನವನ್ನು ಕೊನೆಗೊಳಿಸಲು ನಿರ್ಧರಿಸಿದ್ದಾರೆ. ಆಂದೋಲನಕ್ಕೆ ಸಂಬಂಧಿಸಿದ ಎಲ್ಲಾ ಪ್ರಕರಣಗಳನ್ನು ಹಿಂಪಡೆಯುವುದು ಮತ್ತು ವಿವಾದಿತ ಕೃಷಿ ಕಾನೂನುಗಳ ವಿರುದ್ಧದ ಚಳವಳಿಯ ಸಂದರ್ಭದಲ್ಲಿ ಸಾವನ್ನಪ್ಪಿದ ರೈತರ ಕುಟುಂಬಗಳಿಗೆ ಪರಿಹಾರ ಸೇರಿದಂತೆ ಪ್ರತಿಭಟನಾ ನಿರತ ರೈತರು ಮಂಡಿಸಿದ ಎಲ್ಲಾ ಬೇಡಿಕೆಗಳನ್ನು ಒಕ್ಕೂಟ ಸರ್ಕಾರ ಅಂಗೀಕರಿಸಿದ ಹಿನ್ನೆಲೆಯಲ್ಲಿ ರೈತರು ಈ ನಿರ್ಧಾರ ಕೈಗೊಂಡಿದ್ದಾರೆ.

ರೈತರು ಡಿಸೆಂಬರ್ 11 ರ ಶನಿವಾರದಂದು ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸಿ ತಮ್ಮ ಮನೆಗಳಿಗೆ ಮರಳುವುದಾಗಿ ಘೋಷಿಸಿದ್ದಾರೆ. ನವೆಂಬರ್ 21 ರಂದು ಸಂಯುಕ್ತ ಕಿಸಾನ್ ಮೋರ್ಚಾ ಆರು ಬೇಡಿಕೆಗಳನ್ನು ಪಟ್ಟಿ ಮಾಡಿ ಪ್ರಧಾನಿ ಮೋದಿಗೆ ಪತ್ರ ಬರೆದಿತ್ತು. ಇದರ ನಂತರ ಒಕ್ಕೂಟ ಸರ್ಕಾರ ನಿನ್ನೆ ಸಂಯುಕ್ತ ಕಿಸಾನ್ ಮೋರ್ಚಾದ ಐದು ಸದಸ್ಯರ ಸಮಿತಿಗೆ ಲಿಖಿತ ಕರಡು ಪ್ರಸ್ತಾವನೆಯನ್ನು ಕಳುಹಿಸಿದೆ.

ಇದನ್ನೂ ಓದಿ:ಎಲ್ಲಾ ಪ್ರಕರಣಗಳು ತಕ್ಷಣವೇ ಅಮಾನತು: ರೈತರ ಮುಂದೆ ಮತ್ತೇ ಮಂಡಿಯೂರಿದ ಮೋದಿ ಸರ್ಕಾರ

ರೈತರ ಬೇಡಿಕೆಗಳನ್ನು ಒಪ್ಪಿಕೊಂಡಿರುವ ಬಗ್ಗೆ ಒಕ್ಕೂಟ ಸರ್ಕಾರವು ಸಂಯುಕ್ತ ಕಿಸಾನ್ ಮೋರ್ಚಾಗೆ ಅಧಿಕೃತ ಪತ್ರವನ್ನು ಕಳುಹಿಸಿದೆ. ಅದರಲ್ಲಿ, “ಕನಿಷ್ಠ ಬೆಂಬಲ ಬೆಲೆಯ ಕಾನೂನು ರಚನೆಗೆ ಸಮಿತಿ ರಚನೆ, ಹೋರಾಟದ ಸಮಯಲ್ಲಿ ರೈತರ ಮೇಲಿದ್ದ ಪ್ರಕರಣದ ವಾಪಾಸಾತಿ, ಮೃತಪಟ್ಟವರಿಗೆ ಪರಿಹಾರ, ವಿದ್ಯತ್‌ ತಿದ್ದುಪಡಿ ಮಸೂದೆ ವಾಪಾಸ್‌ ಪಡೆಯುವುದು, ಕೊಯ್ದ ಕೊಯ್ಲಿನ ಕೊಳೆ ಸುಡುವುದನ್ನು ನಿರಪರಾಧಿಕರಣ” ಸೇರಿದಂತೆ ರೈತರ ಎಲ್ಲಾ ಬೇಡಿಕೆಗಳಿಗೆ ಸರ್ಕಾರ ಒಪ್ಪಿಕೊಂಡಿದೆ.

ಕೃಷಿ ಕಾನೂನು ವಾಪಾಸು ಪಡೆಯುವುದರ ಹಿಂದೆ ಸರ್ಕಾರಕ್ಕೆ ಬೇರೆ ಉದ್ದೇಶ ಇದೆ ಎಂಬ ರೈತರು ಅನುಮಾನ ವ್ಯಕ್ತಪಡಿಸಿದರು. ಹೀಗಾಗಿ ಜೊತೆಗೆ ಪ್ರತಿಭಟನೆಯ ಸಮಯದಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಎಲ್ಲಾ ಪ್ರಕರಣಗಳು ಮತ್ತು ಹುಲ್ಲು ಸುಡುವಿಕೆಗೆ ಸಂಬಂಧಿಸಿದ ಎಲ್ಲಾ ಪ್ರಕರಣಗಳನ್ನು ರದ್ದುಗೊಳಿಸಿದ ನಂತರವೇ ಹೋರಾಟ ನಿಲ್ಲಿಸುತ್ತೇವೆ ಎಂದು ಪ್ರತಿಪಾದಿಸಿದ್ದರು.

ರೈತರು, 2016 ರಲ್ಲಿ ನಡೆದ ಮೀಸಲಾತಿಗಾಗಿ ಜಾಟ್ ಆಂದೋಲನವನ್ನು ಉಲ್ಲೇಖಿಸಿ, ಭರವಸೆ ನೀಡಿದ ನಂತರವೂ ಕಾನೂನು ಪ್ರಕರಣಗಳನ್ನು ಹಿಂಪಡೆಯಲು ಸರ್ಕಾರ ವಿಫಲವಾಗಿದೆ ಎಂದು ನೆನಪಿಸಿ ಕೊಂಡಿದ್ದಾರೆ. ಮಂಗಳವಾರ ಸಂಜೆ ದೆಹಲಿ-ಹರಿಯಾಣ ಗಡಿಯಲ್ಲಿರುವ ಸಿಂಘು ಗಡಿಯಲ್ಲಿ ಸಂಯುಕ್ತ ಕಿಸಾನ್ ಮೋರ್ಚಾದ ರೈತ ಮುಖಂಡರ ಸುದೀರ್ಘ ಸಭೆ ನಡೆದಿತ್ತು.

ಇದನ್ನೂ ಓದಿ:ಪೆಪ್ಸಿ ಕಂಪೆನಿಯ ವಿರುದ್ದ ರೈತರಿಗೆ ಜಯ: ‘ಲೇಸ್‌ ಆಲೂಗಡ್ಡೆ’ಗಳ ಪೇಟೆಂಟ್ ರದ್ದು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...