Homeಮುಖಪುಟನಿಯಂತ್ರಿಸಲು ಸಾಧ್ಯವಾಗದ ಎಲ್ಲವನ್ನೂ ಮೋದಿ ಸರ್ಕಾರ ಧ್ವಂಸ ಮಾಡುತ್ತಿದೆ: ಮಮತಾ ಬ್ಯಾನರ್ಜಿ

ನಿಯಂತ್ರಿಸಲು ಸಾಧ್ಯವಾಗದ ಎಲ್ಲವನ್ನೂ ಮೋದಿ ಸರ್ಕಾರ ಧ್ವಂಸ ಮಾಡುತ್ತಿದೆ: ಮಮತಾ ಬ್ಯಾನರ್ಜಿ

- Advertisement -
- Advertisement -

ಬಿಜೆಪಿ ನೇತೃತ್ವದ ಒಕ್ಕೂಟ ಸರ್ಕಾರವು ಟ್ವಿಟ್ಟರ್ ಅನ್ನು ನಿಯಂತ್ರಿಸುತ್ತಿರುವ ಪ್ರಯತ್ನಗಳ ಬಗ್ಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಟೀಕಿಸಿದ್ದಾರೆ. ಒಕ್ಕೂಟ ಸರ್ಕಾರವು ಟ್ವಿಟರ್‌‌ ಮೇಲೆ ಪ್ರಭಾವ ಬೀರಲು ವಿಫಲವಾಗಿದೆ ಆದ್ದರಿಂದ ಇದೀಗ ಅವನ್ನು ಧ್ವಂಸ ಮಾಡಲು ಪ್ರಯತ್ನಿಸುತ್ತಿದೆ ಎಂದು ಹೇಳಿದ್ದಾರೆ.

ಒಕ್ಕೂಟ ಸರ್ಕಾರ ತನ್ನ ಸರ್ಕಾರವನ್ನು ಕೂಡಾ ಇದೇ ರೀತಿ ನಡೆಸಿಕೊಳ್ಳುತ್ತಿದೆ ಎಂದು ಅವರು ಹೇಳಿದ್ದಾರೆ.

ಸುದ್ದಿಗಾರೊಂದಿಗೆ ಮಾತನಾಡಿ ಅವರು, “ಒಕ್ಕೂಟ ಸರ್ಕಾರಕ್ಕೆ ಟ್ವಿಟರ್‌ ಅನ್ನು ನಿಯಂತ್ರಿಸಲು ಸಾಧ್ಯವಾಗುತ್ತಿಲ್ಲ, ಆದ್ದರಿಂದ ಅದನ್ನು ಧ್ವಂಸ ಮಾಡಲು ಪ್ರಯತ್ನಿಸುತ್ತಿದೆ. ಇದನ್ನು ನಾನು ಖಂಡಿಸುತ್ತೇನೆ. ಒಕ್ಕೂಟಕ್ಕೆ ನಿರ್ವಹಿಸಲು ಸಾಧ್ಯವಾಗದ ಎಲ್ಲರೊಂದಿಗೆ ಹಾಗೆ ಮಾಡಲು ಪ್ರಯತ್ನಿಸುತ್ತಿದೆ. ಅವರಿಗೆ ನನ್ನನ್ನು ನಿಯಂತ್ರಿಸಲು ಸಾಧ್ಯಗಿಲ್ಲ, ಅದಕ್ಕಾಗಿಯೇ ಅವರು ನನ್ನ ಸರ್ಕಾರವನ್ನು ಧ್ವಂಸ ಮಾಡಲು ಪ್ರಯತ್ನಿಸುತ್ತಿದ್ದಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ನಾವು ಪ್ರಮಾಣಪತ್ರ ಹೊಂದಿದ ಗೂಂಡಾಗಳು: ಶಿವಸೇನೆಯ ಸಂಜಯ್ ರಾವತ್

ಐಟಿ ನಿಯಮಗಳನ್ನು ಪಾಲಿಸದಿರುವುದು ಮತ್ತು ಹೊಸ ಮಾರ್ಗಸೂಚಿಗಳ ಅಡಿಯಲ್ಲಿ ಕಡ್ಡಾಯವಾಗಿರುವ ಪ್ರಮುಖ ಸಿಬ್ಬಂದಿಯನ್ನು ನೇಮಿಸುವಲ್ಲಿ ವಿಫಲವಾದ ಕಾರಣ ಟ್ವಿಟರ್‌ ಭಾರತದಲ್ಲಿ ಕಾನೂನು ರಕ್ಷಣೆಯನ್ನು ಕಳೆದುಕೊಂಡಿದೆ. ಆದ್ದರಿಂದ ಈಗ ಟ್ವಿಟರ್‌‌ನಲ್ಲಿ ವ್ಯಕ್ತಿಯೊಬ್ಬರು ಯಾವುದೆ ಆಕ್ಷೇಪಾರ್ಹ ವಿಷಯಗಳನ್ನು ಹಾಕಿದರೆ ಭಾರತೀಯ ದಂಡ ಸಂಹಿತೆಯ ಅಡಿಯಲ್ಲಿ ಟ್ವಿಟರ್‌ ಮೇಲೆ ಕೂಡಾ ಕ್ರಮ ಕೈಗೊಳ್ಳಬಹುದಾಗಿದೆ.

ರಾಜ್ಯದಲ್ಲಿ ರಾಜಕೀಯ ಹಿಂಸಾಚಾರ ಮುಂದುವರೆಸಿದೆ ಎಂಬ ಬಿಜೆಪಿಯ ಆರೋಪಗಳ ಕುರಿತು ಬೆಳಕು ಚೆಲ್ಲಿದ ಮುಖ್ಯಮಂತ್ರಿ, “ಇದು ಬಿಜೆಪಿಯ ಗಿಮಿಕ್ ಆಗಿದ್ದು, ಮಾಡಲ್ಪಟ್ಟ ಎಲ್ಲಾ ಆರೋಪಗಳು ಸಂಪೂರ್ಣವಾಗಿ ಆಧಾರರಹಿತ” ಎಂದು ಹೇಳಿದ್ದಾರೆ.

“ರಾಜ್ಯದಲ್ಲಿ ಈಗ ಯಾವುದೇ ರಾಜಕೀಯ ಹಿಂಸಾಚಾರಗಳು ನಡೆಯುತ್ತಿಲ್ಲ. ಒಂದು ಅಥವಾ ಎರಡು ವಿರಳ ಘಟನೆಗಳು ನಡೆದಿರಬಹುದು, ಆದರೆ ಅವುಗಳನ್ನು ರಾಜಕೀಯ ಹಿಂಸಾಚಾರದ ಘಟನೆಗಳೆಂದು ಹಣೆಪಟ್ಟಿ ಕಟ್ಟಲು ಸಾಧ್ಯವಿಲ್ಲ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಲಕ್ಷದ್ವೀಪ: ನಿರ್ಮಾಪಕಿ ಆಯಿಷಾ ಸುಲ್ತಾನಗೆ ಬಂಧನದಿಂದ ರಕ್ಷಣೆ ನೀಡಿದ ಕೇರಳ ಹೈಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...