Homeಮುಖಪುಟಪಾಕ್ ಮತ್ತು ಚೀನಾ ಸ್ನೇಹ ಬೆಳೆಯಲು ಮೋದಿ ಸರ್ಕಾರ ಕಾರಣ: ರಾಹುಲ್ ಗಾಂಧಿ ಟೀಕೆ

ಪಾಕ್ ಮತ್ತು ಚೀನಾ ಸ್ನೇಹ ಬೆಳೆಯಲು ಮೋದಿ ಸರ್ಕಾರ ಕಾರಣ: ರಾಹುಲ್ ಗಾಂಧಿ ಟೀಕೆ

- Advertisement -
- Advertisement -

ಬಜೆಟ್ ಅಧಿವೇಶನದ ವೇಳೆ ಲೋಕಸಭೆಯಲ್ಲಿ ಮಾತನಾಡಿದ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ, ಒಕ್ಕೂಟ ಸರ್ಕಾರದ ವಿದೇಶಾಂಗ ನೀತಿ, ಬಡವ-ಶ್ರೀಮಂತರ ಕುರಿತಂತೆ ತಾರತಮ್ಯದ ನೀತಿ ಮತ್ತು ಒಕ್ಕೂಟದ ಬದ್ಧತೆಗಳನ್ನು ನಿಭಾಯಿಸದೆ ಇರುವ ಬಗ್ಗೆ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಒಕ್ಕೂಟ ಸರ್ಕಾರದ ವಿದೇಶಾಂಗ ನೀತಿಗಳನ್ನು ಟೀಕಿಸಿರುವ ರಾಹುಲ್ ಗಾಂಧಿ “ಚೀನಾ ಮತ್ತು ಪಾಕಿಸ್ತಾನದ ನಡುವೆ ಆಪ್ತ ಸ್ನೇಹ ಬೆಳೆಯಲು ಕೇಂದ್ರ ಸರ್ಕಾರದ ನೀತಿಗಳು ಕಾರಣ” ಎಂದು ಆರೋಪಿಸಿದ್ದಾರೆ.

“ದೇಶವು ಎಲ್ಲಾ ಕಡೆಗಳಲ್ಲಿ ಶತ್ರುಗಳಿಂದ ಸುತ್ತುವರಿದಿದೆ. ರಾಷ್ಟ್ರವು ಹೊರಗಿನಿಂದ ಮತ್ತು ಒಳಗಿನಿಂದ ಅಪಾಯದಲ್ಲಿದೆ. ಇಂತಹ ಪರಿಸ್ಥಿತಿ ಕಂಡು ಚಿಂತೆಯಾಗುತ್ತಿದೆ. ಚೀನಾ ಮತ್ತು ಪಾಕಿಸ್ತಾನವನ್ನು ಪ್ರತ್ಯೇಕವಾಗಿ ಇಡುವುದು ಭಾರತದ ಕಾರ್ಯತಂತ್ರದ ಗುರಿಯಾಗಬೇಕಿತ್ತು. ಆದರೆ ನೀವು ಆ ಎರಡೂ ರಾಷ್ಟ್ರಗಳನ್ನು ಜೊತೆಗೂಡಿಸಿದ್ದೀರಿ. ನಾವು ಎದುರಿಸುತ್ತಿರುವ ಈ ಸಮಸ್ಯೆಯನ್ನು ಕೀಳಂದಾಜು ಮಾಡಬೇಡಿ. ಇದು ಭಾರತಕ್ಕೆ ಗಂಭೀರ ಬೆದರಿಕೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ರಾಹುಲ್ ಗಾಂಧಿ ಲೋಕಸಭಾ ಭಾಷಣ: ಬಿಜೆಪಿಯಿಂದ ಟೀಕೆ, ಕಾಂಗ್ರೆಸ್‌ನಿಂದ ಶ್ಲಾಘನೆ

ಪಾಕಿಸ್ತಾನ ಮತ್ತು ಚೀನಾ ನಡುವಿನ ದ್ವಿಪಕ್ಷೀಯ ಸಂಬಂಧಗಳು, ವಿಶೇಷವಾಗಿ 2015ರಲ್ಲಿ ಚೀನಾ-ಪಾಕಿಸ್ತಾನ ಆರ್ಥಿಕ ಕಾರಿಡಾರ್ ಪ್ರಾರಂಭಿಸಿದ ನಂತರ ಬಲಗೊಂಡಿವೆ. ಈ ಸಂಬಂಧವು ಆರ್ಥಿಕ ಪಾಲುದಾರಿಕೆಯನ್ನು ಮೀರಿ, ಶಸ್ತ್ರಾಸ್ತ್ರ ಒಪ್ಪಂದಗಳು, ಜಂಟಿ ಕಾರ್ಯನಿರ್ವಹಣೆ ಮತ್ತು ರಕ್ಷಣಾ ಒಪ್ಪಂದಗಳನ್ನು ಒಳಗೊಂಡಿರುವ ಮಿಲಿಟರಿ ಸಹಕಾರವನ್ನು ಹೆಚ್ಚಿಸುತ್ತದೆ. ಕಳೆದ ವರ್ಷ ಚೀನಾದ ನೆರವಿನೊಂದಿಗೆ ಪಾಕಿಸ್ತಾನ ಅತಿದೊಡ್ಡ ಪರಮಾಣು ವಿದ್ಯುತ್ ಸ್ಥಾವರವನ್ನು ಕರಾಚಿಯಲ್ಲಿ ನಿರ್ಮಿಸಿದೆ. ಉಭಯ ದೇಶಗಳು ಮುಕ್ತ ವ್ಯಾಪಾರ ಒಪ್ಪಂದವನ್ನು ಹೊಂದಿವೆ. ಇವು ಭಾರತಕ್ಕೆ ದೊಡ್ಡ ಸವಾಲನ್ನು ಒಡ್ಡಿವೆ ಎಂದು ರಾಹುಲ್ ಗಾಂಧಿ ಆತಂಕ ವ್ಯಕ್ತಪಡಿಸಿದ್ದಾರೆ.

“ಅಫ್ಘಾನಿಸ್ತಾನವನ್ನು ತಾಲಿಬಾನ್ ವಶಕ್ಕೆ ಪಡೆದ ನಂತರ, “ಅಫ್ಘನ್ ಜೊತೆ ಸೌಹಾರ್ದ ಮತ್ತು ಸಹಕಾರ ಸಂಬಂಧಗಳನ್ನು ಭದ್ರಗೊಳಿಸಲು ನಾವು ಸಿದ್ದವಾಗಿದ್ದೇವೆ” ಎಂದು ಚೀನಾ ಹೇಳಿಕೊಂಡಿದೆ. ಇದಕ್ಕೆ ಅಫ್ಘನ್‌ನ ಹೊಸ ಸರ್ಕಾರದ ಔಪಚಾರಿಕ ಮನ್ನಣೆ ಶೀಘ್ರದಲ್ಲೇ ಸಂಭವಿಸಬಹುದು ಎಂದು ಅನೇಕರು ನಿರೀಕ್ಷಿಸುತ್ತಿದ್ದಾರೆ.

ಇದು ಸಾಧ್ಯವಾದರೆ, ಪಾಕಿಸ್ತಾನದ ಗಡಿಯಲ್ಲಿನ ಕಾರ್ಯತಂತ್ರದ ಹೂಡಿಕೆಗಳನ್ನು ರಕ್ಷಿಸಲು ತಾಲಿಬಾನ್ ಚೀನಾಕ್ಕೆ ಸಹಾಯ ಮಾಡುತ್ತದೆ. ಅಫ್ಘಾನಿಸ್ತಾನವನ್ನು ವಶಪಡಿಸಿಕೊಳ್ಳಲು ತಾಲಿಬಾನ್ ತರಬೇತಿಗೆ ಪಾಕಿಸ್ತಾನದ ಭದ್ರತಾ ಸಂಸ್ಥೆಯ ಸಹಾಯವನ್ನು ಪಡೆದಿದೆ ಎಂದು ಅನೇಕ ತಜ್ಞರು ನಂಬಿದ್ದಾರೆ. ಇವೆಲ್ಲವೂ ಸಾಮಾನ್ಯ ಬೆದರಿಕೆಗಳಲ್ಲ” ಎಂದು ಕಾಂಗ್ರೆಸ್ ನಾಯಕ ಹೇಳಿದ್ದಾರೆ.

ಇದನ್ನೂ ಓದಿ: ಇಲ್ಲಿ ಎರಡು ವಿಭಿನ್ನ ಭಾರತಗಳಿವೆ, ಒಂದು ಶ್ರೀಮಂತರದ್ದು, ಇನ್ನೊಂದು ಬಡವರದ್ದು: ರಾಹುಲ್ ಗಾಂಧಿ

“ಈ ವರ್ಷದ ಗಣರಾಜ್ಯೋತ್ಸವಕ್ಕೆ ಭಾರತಕ್ಕೆ ಅತಿಥಿಗಳು ಬರಲಿಲ್ಲ. ಏಕೆಂದರೆ, ದೇಶವು ಸಂಪೂರ್ಣವಾಗಿ ಪ್ರತ್ಯೇಕವಾಗಿದೆ ಮತ್ತು ಶತ್ರುಗಳಿಂದ ಸುತ್ತುವರಿದಿದೆ, ನಾವು ನೇಪಾಳ, ಅಫ್ಘಾನಿಸ್ತಾನ, ಚೀನಾದಿಂದ ಸುತ್ತುವರೆದಿದ್ದೇವೆ. ಮಾತ್ರವಲ್ಲದೆ, ಭಾರತ ಸರ್ಕಾರವು ದೇಶದ ಜನರ ವಿರುದ್ಧವೇ ಕೆಲಸ ಮಾಡುತ್ತಿದೆ. ಇದು ದೊಡ್ಡ ಅಪರಾಧ” ಎಂದು ಅವರು ಹೇಳಿದ್ದಾರೆ.

ಜಮ್ಮು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ನೀಡಿದ್ದ 370ನೇ ವಿಧಿಯನ್ನು ಹಿಂತೆಗೆದುಕೊಂಡಿದ್ದನ್ನು ಉಲ್ಲೇಖಿಸಿದ ರಾಹುಲ್ ಗಾಂಧಿ, “ನಾವು ಜಮ್ಮು ಕಾಶ್ಮೀರದಲ್ಲಿ ಒಂದು ದೊಡ್ಡ ಕಾರ್ಯತಂತ್ರವನ್ನು ಜಾರಿಗೊಳಿಸಿ ತಪ್ಪನ್ನು ಮಾಡಿದ್ದೇವೆ. ಗಡಿ ರಾಜ್ಯಗಳಲ್ಲೂ ಸಂಘರ್ಷಗಳು ಹೆಚ್ಚುತ್ತಿವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಯುಪಿ ಚುನಾವಣೆ-2022: ಯುವಜನರಿಗೆ ವಿಶೇಷ ಪ್ರಣಾಳಿಕೆ ಬಿಡುಗಡೆ ಮಾಡಿದ ರಾಹುಲ್ ಗಾಂಧಿ!

ಜೈಶಂಕರ್ ಸ್ಪಷ್ಟನೆ

ರಾಹುಲ್ ಗಾಂಧಿ ಅವರ ಆರೋಪಕ್ಕೆ ವಿದೇಶಾಂಗ ಸಚಿವ ಡಾ ಎಸ್ ಜೈಶಂಕರ್ ಪ್ರತಿಕ್ರಿಯಿಸಿ, ಒಕ್ಕೂಟ ಸರ್ಕಾರದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಚೀನಾ ಮತ್ತು ಪಾಕಿಸ್ತಾನ ಒಟ್ಟಿಗೆ ಕೆಲಸ ಮಾಡಿದ ನಾಲ್ಕು ಉದಾಹರಣೆಗಳನ್ನು ಪಟ್ಟಿ ಮಾಡಿ ಟ್ವಿಟರ್‌ನಲ್ಲಿ ಟ್ವೀಟ್ ಮಾಡಿದ್ದಾರೆ.

• 1963ರಲ್ಲಿ ಪಾಕಿಸ್ತಾನವು ಶಾಕ್ಸ್‌ಗಾಮ್ ಕಣಿವೆಯನ್ನು ಅಕ್ರಮವಾಗಿ ಚೀನಾಕ್ಕೆ ಹಸ್ತಾಂತರಿಸಿತ್ತು.

• 1970 ರ ದಶಕದಲ್ಲಿ ಚೀನಾ ಪಿಒಕೆ (ಪಾಕ್ ಆಕ್ರಮಿತ ಕಾಶ್ಮೀರ) ಮೂಲಕ ಕಾರಕೋರಂ ಹೆದ್ದಾರಿಯನ್ನು ನಿರ್ಮಿಸಿತು.

• 1970 ರ ದಶಕದಿಂದಲೇ ಉಭಯ ದೇಶಗಳು ನಿಕಟ ಪರಮಾಣು ಸಹಯೋಗವನ್ನು ಹೊಂದಿವೆ.

• 2013 ರಲ್ಲಿ, ಚೀನಾ-ಪಾಕಿಸ್ತಾನ ಆರ್ಥಿಕ ಕಾರಿಡಾರ್ ಪ್ರಾರಂಭವಾಯಿತು ಎಂದು ಜೈಶಂಕರ್ ಉಲ್ಲೇಖಿಸಿದ್ದಾರೆ.

ಮತ್ತೊಂದು ಟ್ವೀಟ್‌ನಲ್ಲಿ ಗಣರಾಜ್ಯೋತ್ಸವದ ರಾಷ್ಟ್ರೀಯ ಅತಿಥಿ ಇರಲಿಲ್ಲವೆನ್ನುವ ಟೀಕೆಗೆ ಉತ್ತರಿಸಿದ ಅವರು, “ನಾವು ಸಾಂಕ್ರಾಮಿಕ ರೋಗದ ಮಧ್ಯದಲ್ಲಿದ್ದೇವೆ. ವಿದೇಶಿ ಅತಿಥಿಗಳು ಗಣರಾಜ್ಯೋತ್ಸವ ಆಚರಣೆಯಲ್ಲಿ ಭೌತಿಕವಾಗಿ ಜೊತೆಗಿರಲಿಲ್ಲ. ಆದರೆ, ಕಾರ್ಯಕ್ರಮಕ್ಕೆ ಬರಬೇಕಿದ್ದ 5 ಮಧ್ಯ ಏಷ್ಯಾ ರಾಷ್ಟ್ರಗಳ ಅಧ್ಯಕ್ಷರು ಜನವರಿ 27 ರಂದು ನಡೆದ ವರ್ಚುವಲ್ ಶೃಂಗಸಭೆಯನ್ನು ನಡೆಸಿದ್ದರು. ಇದನ್ನು ರಾಹುಲ್ ಗಾಂಧಿ ಮರೆತಿದ್ದಾರೆಯೇ?” ಎಂದು ಪೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ:ಇಡಿ ದಾಳಿ ಬಿಜೆಪಿಯ ನೆಚ್ಚಿನ ಅಸ್ತ್ರ: ರಾಹುಲ್ ಗಾಂಧಿ ವ್ಯಂಗ್ಯ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...