Homeಮುಖಪುಟಪಾಕ್ ಮತ್ತು ಚೀನಾ ಸ್ನೇಹ ಬೆಳೆಯಲು ಮೋದಿ ಸರ್ಕಾರ ಕಾರಣ: ರಾಹುಲ್ ಗಾಂಧಿ ಟೀಕೆ

ಪಾಕ್ ಮತ್ತು ಚೀನಾ ಸ್ನೇಹ ಬೆಳೆಯಲು ಮೋದಿ ಸರ್ಕಾರ ಕಾರಣ: ರಾಹುಲ್ ಗಾಂಧಿ ಟೀಕೆ

- Advertisement -
- Advertisement -

ಬಜೆಟ್ ಅಧಿವೇಶನದ ವೇಳೆ ಲೋಕಸಭೆಯಲ್ಲಿ ಮಾತನಾಡಿದ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ, ಒಕ್ಕೂಟ ಸರ್ಕಾರದ ವಿದೇಶಾಂಗ ನೀತಿ, ಬಡವ-ಶ್ರೀಮಂತರ ಕುರಿತಂತೆ ತಾರತಮ್ಯದ ನೀತಿ ಮತ್ತು ಒಕ್ಕೂಟದ ಬದ್ಧತೆಗಳನ್ನು ನಿಭಾಯಿಸದೆ ಇರುವ ಬಗ್ಗೆ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಒಕ್ಕೂಟ ಸರ್ಕಾರದ ವಿದೇಶಾಂಗ ನೀತಿಗಳನ್ನು ಟೀಕಿಸಿರುವ ರಾಹುಲ್ ಗಾಂಧಿ “ಚೀನಾ ಮತ್ತು ಪಾಕಿಸ್ತಾನದ ನಡುವೆ ಆಪ್ತ ಸ್ನೇಹ ಬೆಳೆಯಲು ಕೇಂದ್ರ ಸರ್ಕಾರದ ನೀತಿಗಳು ಕಾರಣ” ಎಂದು ಆರೋಪಿಸಿದ್ದಾರೆ.

“ದೇಶವು ಎಲ್ಲಾ ಕಡೆಗಳಲ್ಲಿ ಶತ್ರುಗಳಿಂದ ಸುತ್ತುವರಿದಿದೆ. ರಾಷ್ಟ್ರವು ಹೊರಗಿನಿಂದ ಮತ್ತು ಒಳಗಿನಿಂದ ಅಪಾಯದಲ್ಲಿದೆ. ಇಂತಹ ಪರಿಸ್ಥಿತಿ ಕಂಡು ಚಿಂತೆಯಾಗುತ್ತಿದೆ. ಚೀನಾ ಮತ್ತು ಪಾಕಿಸ್ತಾನವನ್ನು ಪ್ರತ್ಯೇಕವಾಗಿ ಇಡುವುದು ಭಾರತದ ಕಾರ್ಯತಂತ್ರದ ಗುರಿಯಾಗಬೇಕಿತ್ತು. ಆದರೆ ನೀವು ಆ ಎರಡೂ ರಾಷ್ಟ್ರಗಳನ್ನು ಜೊತೆಗೂಡಿಸಿದ್ದೀರಿ. ನಾವು ಎದುರಿಸುತ್ತಿರುವ ಈ ಸಮಸ್ಯೆಯನ್ನು ಕೀಳಂದಾಜು ಮಾಡಬೇಡಿ. ಇದು ಭಾರತಕ್ಕೆ ಗಂಭೀರ ಬೆದರಿಕೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ರಾಹುಲ್ ಗಾಂಧಿ ಲೋಕಸಭಾ ಭಾಷಣ: ಬಿಜೆಪಿಯಿಂದ ಟೀಕೆ, ಕಾಂಗ್ರೆಸ್‌ನಿಂದ ಶ್ಲಾಘನೆ

ಪಾಕಿಸ್ತಾನ ಮತ್ತು ಚೀನಾ ನಡುವಿನ ದ್ವಿಪಕ್ಷೀಯ ಸಂಬಂಧಗಳು, ವಿಶೇಷವಾಗಿ 2015ರಲ್ಲಿ ಚೀನಾ-ಪಾಕಿಸ್ತಾನ ಆರ್ಥಿಕ ಕಾರಿಡಾರ್ ಪ್ರಾರಂಭಿಸಿದ ನಂತರ ಬಲಗೊಂಡಿವೆ. ಈ ಸಂಬಂಧವು ಆರ್ಥಿಕ ಪಾಲುದಾರಿಕೆಯನ್ನು ಮೀರಿ, ಶಸ್ತ್ರಾಸ್ತ್ರ ಒಪ್ಪಂದಗಳು, ಜಂಟಿ ಕಾರ್ಯನಿರ್ವಹಣೆ ಮತ್ತು ರಕ್ಷಣಾ ಒಪ್ಪಂದಗಳನ್ನು ಒಳಗೊಂಡಿರುವ ಮಿಲಿಟರಿ ಸಹಕಾರವನ್ನು ಹೆಚ್ಚಿಸುತ್ತದೆ. ಕಳೆದ ವರ್ಷ ಚೀನಾದ ನೆರವಿನೊಂದಿಗೆ ಪಾಕಿಸ್ತಾನ ಅತಿದೊಡ್ಡ ಪರಮಾಣು ವಿದ್ಯುತ್ ಸ್ಥಾವರವನ್ನು ಕರಾಚಿಯಲ್ಲಿ ನಿರ್ಮಿಸಿದೆ. ಉಭಯ ದೇಶಗಳು ಮುಕ್ತ ವ್ಯಾಪಾರ ಒಪ್ಪಂದವನ್ನು ಹೊಂದಿವೆ. ಇವು ಭಾರತಕ್ಕೆ ದೊಡ್ಡ ಸವಾಲನ್ನು ಒಡ್ಡಿವೆ ಎಂದು ರಾಹುಲ್ ಗಾಂಧಿ ಆತಂಕ ವ್ಯಕ್ತಪಡಿಸಿದ್ದಾರೆ.

“ಅಫ್ಘಾನಿಸ್ತಾನವನ್ನು ತಾಲಿಬಾನ್ ವಶಕ್ಕೆ ಪಡೆದ ನಂತರ, “ಅಫ್ಘನ್ ಜೊತೆ ಸೌಹಾರ್ದ ಮತ್ತು ಸಹಕಾರ ಸಂಬಂಧಗಳನ್ನು ಭದ್ರಗೊಳಿಸಲು ನಾವು ಸಿದ್ದವಾಗಿದ್ದೇವೆ” ಎಂದು ಚೀನಾ ಹೇಳಿಕೊಂಡಿದೆ. ಇದಕ್ಕೆ ಅಫ್ಘನ್‌ನ ಹೊಸ ಸರ್ಕಾರದ ಔಪಚಾರಿಕ ಮನ್ನಣೆ ಶೀಘ್ರದಲ್ಲೇ ಸಂಭವಿಸಬಹುದು ಎಂದು ಅನೇಕರು ನಿರೀಕ್ಷಿಸುತ್ತಿದ್ದಾರೆ.

ಇದು ಸಾಧ್ಯವಾದರೆ, ಪಾಕಿಸ್ತಾನದ ಗಡಿಯಲ್ಲಿನ ಕಾರ್ಯತಂತ್ರದ ಹೂಡಿಕೆಗಳನ್ನು ರಕ್ಷಿಸಲು ತಾಲಿಬಾನ್ ಚೀನಾಕ್ಕೆ ಸಹಾಯ ಮಾಡುತ್ತದೆ. ಅಫ್ಘಾನಿಸ್ತಾನವನ್ನು ವಶಪಡಿಸಿಕೊಳ್ಳಲು ತಾಲಿಬಾನ್ ತರಬೇತಿಗೆ ಪಾಕಿಸ್ತಾನದ ಭದ್ರತಾ ಸಂಸ್ಥೆಯ ಸಹಾಯವನ್ನು ಪಡೆದಿದೆ ಎಂದು ಅನೇಕ ತಜ್ಞರು ನಂಬಿದ್ದಾರೆ. ಇವೆಲ್ಲವೂ ಸಾಮಾನ್ಯ ಬೆದರಿಕೆಗಳಲ್ಲ” ಎಂದು ಕಾಂಗ್ರೆಸ್ ನಾಯಕ ಹೇಳಿದ್ದಾರೆ.

ಇದನ್ನೂ ಓದಿ: ಇಲ್ಲಿ ಎರಡು ವಿಭಿನ್ನ ಭಾರತಗಳಿವೆ, ಒಂದು ಶ್ರೀಮಂತರದ್ದು, ಇನ್ನೊಂದು ಬಡವರದ್ದು: ರಾಹುಲ್ ಗಾಂಧಿ

“ಈ ವರ್ಷದ ಗಣರಾಜ್ಯೋತ್ಸವಕ್ಕೆ ಭಾರತಕ್ಕೆ ಅತಿಥಿಗಳು ಬರಲಿಲ್ಲ. ಏಕೆಂದರೆ, ದೇಶವು ಸಂಪೂರ್ಣವಾಗಿ ಪ್ರತ್ಯೇಕವಾಗಿದೆ ಮತ್ತು ಶತ್ರುಗಳಿಂದ ಸುತ್ತುವರಿದಿದೆ, ನಾವು ನೇಪಾಳ, ಅಫ್ಘಾನಿಸ್ತಾನ, ಚೀನಾದಿಂದ ಸುತ್ತುವರೆದಿದ್ದೇವೆ. ಮಾತ್ರವಲ್ಲದೆ, ಭಾರತ ಸರ್ಕಾರವು ದೇಶದ ಜನರ ವಿರುದ್ಧವೇ ಕೆಲಸ ಮಾಡುತ್ತಿದೆ. ಇದು ದೊಡ್ಡ ಅಪರಾಧ” ಎಂದು ಅವರು ಹೇಳಿದ್ದಾರೆ.

ಜಮ್ಮು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ನೀಡಿದ್ದ 370ನೇ ವಿಧಿಯನ್ನು ಹಿಂತೆಗೆದುಕೊಂಡಿದ್ದನ್ನು ಉಲ್ಲೇಖಿಸಿದ ರಾಹುಲ್ ಗಾಂಧಿ, “ನಾವು ಜಮ್ಮು ಕಾಶ್ಮೀರದಲ್ಲಿ ಒಂದು ದೊಡ್ಡ ಕಾರ್ಯತಂತ್ರವನ್ನು ಜಾರಿಗೊಳಿಸಿ ತಪ್ಪನ್ನು ಮಾಡಿದ್ದೇವೆ. ಗಡಿ ರಾಜ್ಯಗಳಲ್ಲೂ ಸಂಘರ್ಷಗಳು ಹೆಚ್ಚುತ್ತಿವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಯುಪಿ ಚುನಾವಣೆ-2022: ಯುವಜನರಿಗೆ ವಿಶೇಷ ಪ್ರಣಾಳಿಕೆ ಬಿಡುಗಡೆ ಮಾಡಿದ ರಾಹುಲ್ ಗಾಂಧಿ!

ಜೈಶಂಕರ್ ಸ್ಪಷ್ಟನೆ

ರಾಹುಲ್ ಗಾಂಧಿ ಅವರ ಆರೋಪಕ್ಕೆ ವಿದೇಶಾಂಗ ಸಚಿವ ಡಾ ಎಸ್ ಜೈಶಂಕರ್ ಪ್ರತಿಕ್ರಿಯಿಸಿ, ಒಕ್ಕೂಟ ಸರ್ಕಾರದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಚೀನಾ ಮತ್ತು ಪಾಕಿಸ್ತಾನ ಒಟ್ಟಿಗೆ ಕೆಲಸ ಮಾಡಿದ ನಾಲ್ಕು ಉದಾಹರಣೆಗಳನ್ನು ಪಟ್ಟಿ ಮಾಡಿ ಟ್ವಿಟರ್‌ನಲ್ಲಿ ಟ್ವೀಟ್ ಮಾಡಿದ್ದಾರೆ.

• 1963ರಲ್ಲಿ ಪಾಕಿಸ್ತಾನವು ಶಾಕ್ಸ್‌ಗಾಮ್ ಕಣಿವೆಯನ್ನು ಅಕ್ರಮವಾಗಿ ಚೀನಾಕ್ಕೆ ಹಸ್ತಾಂತರಿಸಿತ್ತು.

• 1970 ರ ದಶಕದಲ್ಲಿ ಚೀನಾ ಪಿಒಕೆ (ಪಾಕ್ ಆಕ್ರಮಿತ ಕಾಶ್ಮೀರ) ಮೂಲಕ ಕಾರಕೋರಂ ಹೆದ್ದಾರಿಯನ್ನು ನಿರ್ಮಿಸಿತು.

• 1970 ರ ದಶಕದಿಂದಲೇ ಉಭಯ ದೇಶಗಳು ನಿಕಟ ಪರಮಾಣು ಸಹಯೋಗವನ್ನು ಹೊಂದಿವೆ.

• 2013 ರಲ್ಲಿ, ಚೀನಾ-ಪಾಕಿಸ್ತಾನ ಆರ್ಥಿಕ ಕಾರಿಡಾರ್ ಪ್ರಾರಂಭವಾಯಿತು ಎಂದು ಜೈಶಂಕರ್ ಉಲ್ಲೇಖಿಸಿದ್ದಾರೆ.

ಮತ್ತೊಂದು ಟ್ವೀಟ್‌ನಲ್ಲಿ ಗಣರಾಜ್ಯೋತ್ಸವದ ರಾಷ್ಟ್ರೀಯ ಅತಿಥಿ ಇರಲಿಲ್ಲವೆನ್ನುವ ಟೀಕೆಗೆ ಉತ್ತರಿಸಿದ ಅವರು, “ನಾವು ಸಾಂಕ್ರಾಮಿಕ ರೋಗದ ಮಧ್ಯದಲ್ಲಿದ್ದೇವೆ. ವಿದೇಶಿ ಅತಿಥಿಗಳು ಗಣರಾಜ್ಯೋತ್ಸವ ಆಚರಣೆಯಲ್ಲಿ ಭೌತಿಕವಾಗಿ ಜೊತೆಗಿರಲಿಲ್ಲ. ಆದರೆ, ಕಾರ್ಯಕ್ರಮಕ್ಕೆ ಬರಬೇಕಿದ್ದ 5 ಮಧ್ಯ ಏಷ್ಯಾ ರಾಷ್ಟ್ರಗಳ ಅಧ್ಯಕ್ಷರು ಜನವರಿ 27 ರಂದು ನಡೆದ ವರ್ಚುವಲ್ ಶೃಂಗಸಭೆಯನ್ನು ನಡೆಸಿದ್ದರು. ಇದನ್ನು ರಾಹುಲ್ ಗಾಂಧಿ ಮರೆತಿದ್ದಾರೆಯೇ?” ಎಂದು ಪೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ:ಇಡಿ ದಾಳಿ ಬಿಜೆಪಿಯ ನೆಚ್ಚಿನ ಅಸ್ತ್ರ: ರಾಹುಲ್ ಗಾಂಧಿ ವ್ಯಂಗ್ಯ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...