Homeಅಂತರಾಷ್ಟ್ರೀಯಮೋದಿ ದುರಂಹಕಾರವೇ ಕೋವಿಡ್ 2ನೆ ಅಲೆಯ ತೀವ್ರತೆಗೆ ಕಾರಣ: ಫ್ರೆಂಚ್ ಪತ್ರಿಕೆ ಸಂಪಾದಕೀಯ

ಮೋದಿ ದುರಂಹಕಾರವೇ ಕೋವಿಡ್ 2ನೆ ಅಲೆಯ ತೀವ್ರತೆಗೆ ಕಾರಣ: ಫ್ರೆಂಚ್ ಪತ್ರಿಕೆ ಸಂಪಾದಕೀಯ

- Advertisement -
- Advertisement -

ಈಗ ಫ್ರೆಂಚ್ ಪತ್ರಿಕೆಯೊಂದರ ಸಂಪಾದಕೀಯದಲ್ಲಿ ಕೋವಿಡ್ ನಿರ್ವಹಣೆಯಲ್ಲಿ ಮೋದಿಯವರ ಅಸಮರ್ಥತೆಯ ಕುರಿತು ಟೀಕೆ ಬಂದಿದೆ. ಎಂದು ದಿ ಟೆಲಿಗ್ರಾಫ್ ವರದಿ ಮಾಡಿದೆ.

ಮೂರು ದಿನದ ಹಿಂದೆ ಆಸ್ಟ್ರೇಲಿಯಾದ ಪತ್ರಿಕೆಯೊಂದು, ‘ಮೋದಿ ಭಾರತವನ್ನು ವೈರಲ್ ವಿನಾಶದ ಕಡೆ ಒಯ್ಯುತ್ತಿದ್ದಾರೆ’ ಎಂದು ಬರೆದಾಗ, ನಮ್ಮ ವಿದೇಶಾಂಗ ಇಲಾಖೆಯು ಇದಕ್ಕೆ ಆಕ್ಷೇಪಿಸಿ, ‘ಮೋದಿ ಸರಿಯಾದ ದಾರಿಯಲ್ಲಿ ಭಾರತವನ್ನು ಮುನ್ನಡೆಸುತ್ತಿದ್ದಾರೆ’ ಎಂದು ಬೋಧನೆ ಮಾಡಿತ್ತು. ಆದರೆ, ಈ ಅಸಹಜ ಆಕ್ಷೇಪವನ್ನು ನಿರ್ಲಕ್ಷಿಸಿದ ವಿದೇಶಿ ಮಾಧ್ಯಮಗಳು ಮೋದಿ ವೈಫಲ್ಯ ಕುರಿತು ಬರೆಯುವುದನ್ನು ಮುಂದುವರೆಸಿವೆ.

ಕಳೆದ ವಾರ ದಿ ಗಾರ್ಡಿಯನ್ ಪತ್ರಿಕೆ ಮೋದಿ ವೈಫಲ್ಯವೇ 2ನೆ ಅಲೆಗೆ ಕಾರಣ ಎಂದು ಸಂಪಾದಕೀಯ ಬರೆದಿತ್ತು. ವಾಷಿಂಗ್ಟನ್ ಪೋಸ್ಟ್ ಒಂದು ಪುಟದ ಲೇಖನದಲ್ಲಿ ಮೋದಿಯ ಅಸಮರ್ಥ ಆಡಳಿತವನ್ನು ಮತ್ತು ಭಾರತದ ಕೋವಿಡ್ ದುರಂತವನ್ನು ವಿವರಿಸಿತ್ತು.
ಬುಧವಾರ ಫ್ರೆಂಚ್ ಪತ್ರಿಕೆ ‘ಲೆ ಮಾಂಡೆ’, ಮೋದಿಯವರ ದುರಂಹಕಾರ ಮತ್ತು ವಾಕ್ಚಾತುರ್ಯ ಭಾರತದಲ್ಲಿ ಕೋವಿಡ್ 2ನೇ ಅಲೆ ಸಂಭವಿಸಲು ಮತ್ತು ತೀವ್ರವಾಗಲು ಕಾರಣವಾಗಿದೆ’ ಎಂದು ಟೀಕಿಸಿದೆ.

ಆಸ್ಪತ್ರೆಗಳ ಎದುರು ಆಂಬ್ಯುಲೆನ್ಸ್‌ಗಳ ಸಾಲುಗಳು, ಅನಾರೋಗ್ಯ ಪೀಡಿತರ ಸಂಬಂಧಿಕರು ಆಮ್ಲಜನಕಕ್ಕಾಗಿ ಗೋಗರೆಯುವುದು ಮತ್ತು ಸಾಮೂಹಿಕ ಶವಸಂಸ್ಕಾರಗಳು ಸುಳ್ಳಾಗುವುದಿಲ್ಲ. ಅವು ಕಣ್ಣಿಗೆ ರಾಚುತ್ತಿವೆ ಎಂದು ಸಂಪಾದಕೀಯ ಹೇಳಿದೆ.

“ನಗರಗಳಿಂದ ಗ್ರಾಮೀಣ ಪ್ರದೇಶಗಳವರೆಗೆ, ಶ್ರೀಮಂತರಿಂದ ಬಡವರವರೆಗೆ, ಈ ‘ಹತ್ಯಾಕಾಂಡ’ವು ಯಾರನ್ನೂ ಬಿಡುತ್ತಿಲ್ಲ. ಫೆಬ್ರವರಿ ತನಕ ಕ್ಷೀಣಿಸುತ್ತಾ ಬಂದ ಹೊಸ ಸೋಂಕಿನ ರೇಖೆಯು (curve) ಈಗ ಬಹುತೇಕ ಲಂಬವಾಗಿದೆ” ಎಂದು ಲೆ ಮಾಂಡೆ ತನ್ನ ಸಂಪಾದಕೀಯದಲ್ಲಿ ತಿಳಿಸಿದೆ.

“ವೈರಸ್ ಮತ್ತು ಅದರ ರೂಪಾಂತರಗಳ ಅನಿರೀಕ್ಷಿತ ದಾಳಿ ಎಂಬ ಏಕಮಾತ್ರ ಹೇಳಿಕೆಯಿಂದ ಈ ನಿರ್ವಹಣಾ ವೈಫಲ್ಯವನ್ನು ವಿವರಿಸಲಾಗುವುದಿಲ್ಲ. ನರೇಂದ್ರ ಮೋದಿಯವರ ಮುಂಗಾಣುವಿಕೆ-ದೂರದರ್ಶಿತ್ವದ (ಪ್ರಿಡಿಕ್ಸನ್) ಕೊರತೆ, ದುರಹಂಕಾರ ಮತ್ತು ಮಾತಿನ ಮೋಡಿ-ಇವೆಲ್ಲವೂ ಇಂದಿನ ಸ್ಥಿತಿಗೆ ಕಾರಣವಾಗಿವೆ. ಹೀಗಾಗಿ ಈಗ ಪರಿಸ್ಥಿತಿ ನಿಯಂತ್ರಣ ತಪ್ಪಿದ್ದು, ಅಂತಾರಾಷ್ಟ್ರೀಯ ಸಹಕಾರ-ಸಂಪನ್ಮೂಲಗಳ ಅಗತ್ಯ ಬಿದ್ದಿದೆ” ಎಂದು ಸಂಪಾದಕೀಯ ವಿಮರ್ಶಿಸಿದೆ.

ಪ್ರಧಾನ ಮಂತ್ರಿ ಮೋದಿಯವರು ಕಳೆದ ವರ್ಷ ಮೊದಲ ಕೋವಿಡ್ ಅಲೆಯ ಆರಂಭದಲ್ಲಿ, ಯಾವುದೇ ಸಿದ್ಧತೆಯಿಲ್ಲದೇ ಏಕಾಏಕಿ ಕ್ರೂರ ಲಾಕ್ ಡೌನ್ ವಿಧಿಸುವ ಮೂಲಕ, ಲಕ್ಷಾಂತರ ವಲಸೆ ಕಾರ್ಮಿಕರ ಬದುಕುಗಳನ್ನು ಮೂರಾಬಟ್ಟೆ ಮಾಡಿದರು. 2021ರ ಆರಂಭದಲ್ಲಿ ಕೋವಿಡ್ ಕುರಿತು ಅವರು ಚಿಂತಿಸಲೇ ಇಲ್ಲ’ ಎಂದು ಸಂಪಾದಕೀಯ ಟೀಕಿಸಿದೆ,

“ಆರೋಗ್ಯ ತಜ್ಞರ ಸಲಹೆ ನಿರ್ಲಕ್ಷಿಸಿ ರಾಷ್ಟ್ರೀಯತಾವಾದಿ ಉಪದೇಶಗಳಿಗೆ ಆದ್ಯತೆ ನೀಡುತ್ತ, ಜನರನ್ನು ರಕ್ಷಿಸುವುದಕ್ಕಿಂತ ಸ್ವಯಂ ಸಂಭ್ರಮಕ್ಕೆ ಹೆಚ್ಚು ಒಲವು ತೋರುತ್ತ ಬಂದ ಮೋದಿ ಅವರು ಪರಿಸ್ಥಿತಿಯನ್ನು ಉಲ್ಬಣಗೊಳಿಸಿದರು” ಎಂದು ಪತ್ರಿಕೆ ಹೇಳಿದೆ. ಚುನಾವಣಾ ಪ್ರಚಾರ ಮತ್ತು ಕುಂಭಮೇಳವನ್ನು ಉಲ್ಲೇಖಿಸಿ, ‘ಇದು ಗಂಗಾ ನೀರನ್ನು (ನದಿಪ್ರದೇಶವನ್ನು) ಸಾಂಕ್ರಾಮಿಕದ ಬೃಹತ್ ತಾಣವನ್ನಾಗಿ ಪರಿವರ್ತಿಸಿತು’ ಎಂದು ಪತ್ರಿಕೆ ಅಭಿಪ್ರಾಯ ವ್ಯಕ್ತಪಡಿಸಿದೆ.

ಸಂಪಾದಕೀಯವು ಮೋದಿಯವರ ಹೆಚ್ಚು ಪ್ರಚಾರ ಪಡೆದ ಲಸಿಕೆ ಕಾರ್ಯತಂತ್ರವನ್ನು ಒಡೆದು ಹಾಕಿದೆ. ಲಸಿಕೆ ರಾಜತಾಂತ್ರಿಕತೆಯು ತಮ್ಮ ಮಹತ್ವಾಕಾಂಕ್ಷೆಗಳಿಗೆ ಅಧೀನವಾಗಿದೆ ಎಂದು ನಂಬಿದ ಮೋದಿ, ದೇಶದ ಉತ್ಪಾದನಾ ಸಾಮರ್ಥ್ಯದ ವಾಸ್ತವತೆಯನ್ನು ಕಡೆಗಣಿಸಿದರು ಎಂದು ಪತ್ರಿಕೆಯ ಸಂಪಾದಕೀಯ ತಿಳಿಸಿದೆ.

ಸೋಮವಾರ, ಆಸ್ಟ್ರೇಲಿಯಾದಲ್ಲಿನ ಭಾರತೀಯ ರಾಯಭಾರಿ ಕಚೇರಿಯು, ಸಾಂಕ್ರಾಮಿಕ ನಿರ್ವಹಣೆಯಲ್ಲಿ ಭಾರತೀಯ ನಾಯಕತ್ವದ-ಮೋದಿಯವರ- ವೈಫಲ್ಯ ಟೀಕಿಸಿದ ಆಸ್ಟ್ರೇಲಿಯಾದ ಪತ್ರಿಕೆಗೆ ಪತ್ರವೊಂದನ್ನು ಬರೆದು ಆಕ್ಷೇಪ ವ್ಯಕ್ತಪಡಿಸಿತ್ತು. ಇಂದಿರಾ ಗಾಂಧಿಯವರ ತುರ್ತು ಪರಿಸ್ಥಿತಿಯಲ್ಲಿ, ವಿದೇಶಿ ಪ್ರಕಟಣೆಗಳಲ್ಲಿ ನಕಾರಾತ್ಮಕ ಸುದ್ದಿಗಳು ಬಂದಾಗ ಹೀಗೆ ಆಕ್ಷೇಪ ಸಲ್ಲಿಸಲಾಗುತ್ತಿತ್ತು.

ಭಾರತೀಯ ರಾಯಭಾರಿ ಕಚೇರಿಯು, ಆಸ್ಟ್ರೇಲಿಯಾ ಪತ್ರಿಕೆಯ ಲೇಖನವನ್ನು “ಆಧಾರರಹಿತ, ದುರುದ್ದೇಶಪೂರಿತ ಮತ್ತು ಅಪಪ್ರಚಾರ” ಎಂದು ವಿವರಿಸಿತ್ತು. ಈಗ ಫ್ರೆಂಚ್ ಪತ್ರಿಕೆ ಸಂಪಾದಕೀಯಕ್ಕೂ ಭಾರತ ಆಕ್ಷೇಪ ಸಲ್ಲಿಸುವುದೇ?


ಇದನ್ನೂ ಓದಿ: ಕೋವಿಡ್ ಸಂದರ್ಭದಲ್ಲಿ ಬಿಜೆಪಿ ಐಟಿ ಸೆಲ್, ಪೋಸ್ಟ್ ಕಾರ್ಡ್, ಬಿಜೆಪಿ ವಕ್ತಾರರು ಹೇಳಿದ ಸುಳ್ಳುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಯಾರೋ ಒಬ್ಬರು ಅದ್ಭುತವಾಗಿ ಹೇಳಿದ್ದಾರೆ.

    ಕೊರೋನಾದಿಂದ ನಿಮ್ಮನ್ನು ನೀವೇ ರಕ್ಷಿಸಿಕೊಳ್ಳಿ. ಒಂದು ವೇಳೆ ಬಿಜೆಪಿ ರಕ್ಷಿಸುತ್ತಿದ್ದರೆ ಮಧ್ಯಪ್ರದೇಶದಲ್ಲಿ ಹರಡುತ್ತಿರಲಿಲ್ಲ. ಒಂದು ವೇಳೆ ಕಾಂಗ್ರೆಸ್ ರಕ್ಷಿಸುತ್ತಿದ್ದರೆ ಇದು ಛತ್ತೀಸಗಡದಲ್ಲಿ ಹರಡುತ್ತಿರಲಿಲ್ಲ. ಶಿವಸೇನೆ ಯೋಗ್ಯ ಅನ್ನುವುದಾದರೆ ಮಹಾರಾಷ್ಟ್ರ ದಲ್ಲಿ ಹರಡುತ್ತಿರಲಿಲ್ಲ. ಕೇಜ್ರಿವಾಲ ಯೋಗ್ಯನಾಗಿದ್ದರೆ ದೆಹಲಿಯಲ್ಲಿ ಹರಡುತ್ತಿರಲಿಲ್ಲ. ಯೋಗಿ ಯೋಗ್ಯನೆಂದರೆ ಉತ್ತರ ಪ್ರದೇಶದಲ್ಲಿ ಹರಡುತ್ತಿರಲಿಲ್ಲ. ಮೋದಿಯವರು ಶಕ್ತಿವಂತನೆನ್ನುವುದಾದರೆ ಭಾರತದಲ್ಲಿ ಹರಡುತ್ತಿರಲಿಲ್ಲ. ಹೀಗಾಗಿ ಕೊರೋನಾ ಯಾರ ಕಾರಣದಿಂದಲೂ, ಯಾವ ಪಕ್ಷದ ಕಾರಣದಿಂದಲೂ ಹರಡುತ್ತಿಲ್ಲ.

    ಹಣದಿಂದ ಇದನ್ನು ನಿರ್ಮೂಲನೆ ಮಾಡುವುದಾಗಿದ್ದರೆ ಅಮೇರಿಕದಲ್ಲಿ ಹರಡುತ್ತಿರಲಿಲ್ಲ. ವೈದ್ಯರು ಮತ್ತು ಔಷಧದಿಂದ ಇದನ್ನು ಗುಣಪಡಿಸಬಹುದಾಗಿದ್ದರೆ ಸ್ವೀಡನ್, ಫ್ರಾನ್ಸ್, ಬೆಲ್ಜಿಯಂ, ಇಟಲಿಯಲ್ಲಿ ತಡೆಯಬಹುದಾಗಿತ್ತು. ಆದರೆ ಅವರಿಗೆ ಸಾಧ್ಯವಾಗಲಿಲ್ಲ.

    ಹೀಗಾಗಿ ಇದಕ್ಕೆ ಯಾವುದ್ಯಾವುದೋ ಕಾರಣ ಹೇಳಿ ಯಾರ ಯಾರನ್ನೋ ತೆಗಳುವುದಕ್ಕಿಂತ.. ಸುಮ್ಮನೆ ಮನೆಯಲ್ಲಿರಿ. ಹೊರಬರಲು ಸಕಾರಣವಿದ್ದರೆ ಮಾಸ್ಕ ಧರಿಸಿರಿ ಮತ್ತು ಸೈನಿಟೈಜರ ಬಳಸಿ.. ಸುರಕ್ಷಿತರಾಗಿ ಇರಿ.. ನಿಮ್ಮ ಕುಟುಂಬದ ಸುರಕ್ಷತೆ ನಿಮ್ಮದೇ ಜವಾಬ್ದಾರಿ ಆಗಿರಲಿ.

    ಮನೆಯಲ್ಲಿರಿ.. ಬದುಕಿದರೆ ಬದುಕು ಇದೆ.

    ಈ ಕ್ಷಣ ಗೆಲ್ಲುವ ವಿಶ್ವಾಸವಿದೆ.

  2. Nice suggestion, nobody save from covid-19, but ourselves protect from the covid-19.
    Positive thinking, physical exersie and balanced food with humanity action needed for the time.

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...