Homeಅಂತರಾಷ್ಟ್ರೀಯಮೋದಿ ದುರಂಹಕಾರವೇ ಕೋವಿಡ್ 2ನೆ ಅಲೆಯ ತೀವ್ರತೆಗೆ ಕಾರಣ: ಫ್ರೆಂಚ್ ಪತ್ರಿಕೆ ಸಂಪಾದಕೀಯ

ಮೋದಿ ದುರಂಹಕಾರವೇ ಕೋವಿಡ್ 2ನೆ ಅಲೆಯ ತೀವ್ರತೆಗೆ ಕಾರಣ: ಫ್ರೆಂಚ್ ಪತ್ರಿಕೆ ಸಂಪಾದಕೀಯ

- Advertisement -
- Advertisement -

ಈಗ ಫ್ರೆಂಚ್ ಪತ್ರಿಕೆಯೊಂದರ ಸಂಪಾದಕೀಯದಲ್ಲಿ ಕೋವಿಡ್ ನಿರ್ವಹಣೆಯಲ್ಲಿ ಮೋದಿಯವರ ಅಸಮರ್ಥತೆಯ ಕುರಿತು ಟೀಕೆ ಬಂದಿದೆ. ಎಂದು ದಿ ಟೆಲಿಗ್ರಾಫ್ ವರದಿ ಮಾಡಿದೆ.

ಮೂರು ದಿನದ ಹಿಂದೆ ಆಸ್ಟ್ರೇಲಿಯಾದ ಪತ್ರಿಕೆಯೊಂದು, ‘ಮೋದಿ ಭಾರತವನ್ನು ವೈರಲ್ ವಿನಾಶದ ಕಡೆ ಒಯ್ಯುತ್ತಿದ್ದಾರೆ’ ಎಂದು ಬರೆದಾಗ, ನಮ್ಮ ವಿದೇಶಾಂಗ ಇಲಾಖೆಯು ಇದಕ್ಕೆ ಆಕ್ಷೇಪಿಸಿ, ‘ಮೋದಿ ಸರಿಯಾದ ದಾರಿಯಲ್ಲಿ ಭಾರತವನ್ನು ಮುನ್ನಡೆಸುತ್ತಿದ್ದಾರೆ’ ಎಂದು ಬೋಧನೆ ಮಾಡಿತ್ತು. ಆದರೆ, ಈ ಅಸಹಜ ಆಕ್ಷೇಪವನ್ನು ನಿರ್ಲಕ್ಷಿಸಿದ ವಿದೇಶಿ ಮಾಧ್ಯಮಗಳು ಮೋದಿ ವೈಫಲ್ಯ ಕುರಿತು ಬರೆಯುವುದನ್ನು ಮುಂದುವರೆಸಿವೆ.

ಕಳೆದ ವಾರ ದಿ ಗಾರ್ಡಿಯನ್ ಪತ್ರಿಕೆ ಮೋದಿ ವೈಫಲ್ಯವೇ 2ನೆ ಅಲೆಗೆ ಕಾರಣ ಎಂದು ಸಂಪಾದಕೀಯ ಬರೆದಿತ್ತು. ವಾಷಿಂಗ್ಟನ್ ಪೋಸ್ಟ್ ಒಂದು ಪುಟದ ಲೇಖನದಲ್ಲಿ ಮೋದಿಯ ಅಸಮರ್ಥ ಆಡಳಿತವನ್ನು ಮತ್ತು ಭಾರತದ ಕೋವಿಡ್ ದುರಂತವನ್ನು ವಿವರಿಸಿತ್ತು.
ಬುಧವಾರ ಫ್ರೆಂಚ್ ಪತ್ರಿಕೆ ‘ಲೆ ಮಾಂಡೆ’, ಮೋದಿಯವರ ದುರಂಹಕಾರ ಮತ್ತು ವಾಕ್ಚಾತುರ್ಯ ಭಾರತದಲ್ಲಿ ಕೋವಿಡ್ 2ನೇ ಅಲೆ ಸಂಭವಿಸಲು ಮತ್ತು ತೀವ್ರವಾಗಲು ಕಾರಣವಾಗಿದೆ’ ಎಂದು ಟೀಕಿಸಿದೆ.

ಆಸ್ಪತ್ರೆಗಳ ಎದುರು ಆಂಬ್ಯುಲೆನ್ಸ್‌ಗಳ ಸಾಲುಗಳು, ಅನಾರೋಗ್ಯ ಪೀಡಿತರ ಸಂಬಂಧಿಕರು ಆಮ್ಲಜನಕಕ್ಕಾಗಿ ಗೋಗರೆಯುವುದು ಮತ್ತು ಸಾಮೂಹಿಕ ಶವಸಂಸ್ಕಾರಗಳು ಸುಳ್ಳಾಗುವುದಿಲ್ಲ. ಅವು ಕಣ್ಣಿಗೆ ರಾಚುತ್ತಿವೆ ಎಂದು ಸಂಪಾದಕೀಯ ಹೇಳಿದೆ.

“ನಗರಗಳಿಂದ ಗ್ರಾಮೀಣ ಪ್ರದೇಶಗಳವರೆಗೆ, ಶ್ರೀಮಂತರಿಂದ ಬಡವರವರೆಗೆ, ಈ ‘ಹತ್ಯಾಕಾಂಡ’ವು ಯಾರನ್ನೂ ಬಿಡುತ್ತಿಲ್ಲ. ಫೆಬ್ರವರಿ ತನಕ ಕ್ಷೀಣಿಸುತ್ತಾ ಬಂದ ಹೊಸ ಸೋಂಕಿನ ರೇಖೆಯು (curve) ಈಗ ಬಹುತೇಕ ಲಂಬವಾಗಿದೆ” ಎಂದು ಲೆ ಮಾಂಡೆ ತನ್ನ ಸಂಪಾದಕೀಯದಲ್ಲಿ ತಿಳಿಸಿದೆ.

“ವೈರಸ್ ಮತ್ತು ಅದರ ರೂಪಾಂತರಗಳ ಅನಿರೀಕ್ಷಿತ ದಾಳಿ ಎಂಬ ಏಕಮಾತ್ರ ಹೇಳಿಕೆಯಿಂದ ಈ ನಿರ್ವಹಣಾ ವೈಫಲ್ಯವನ್ನು ವಿವರಿಸಲಾಗುವುದಿಲ್ಲ. ನರೇಂದ್ರ ಮೋದಿಯವರ ಮುಂಗಾಣುವಿಕೆ-ದೂರದರ್ಶಿತ್ವದ (ಪ್ರಿಡಿಕ್ಸನ್) ಕೊರತೆ, ದುರಹಂಕಾರ ಮತ್ತು ಮಾತಿನ ಮೋಡಿ-ಇವೆಲ್ಲವೂ ಇಂದಿನ ಸ್ಥಿತಿಗೆ ಕಾರಣವಾಗಿವೆ. ಹೀಗಾಗಿ ಈಗ ಪರಿಸ್ಥಿತಿ ನಿಯಂತ್ರಣ ತಪ್ಪಿದ್ದು, ಅಂತಾರಾಷ್ಟ್ರೀಯ ಸಹಕಾರ-ಸಂಪನ್ಮೂಲಗಳ ಅಗತ್ಯ ಬಿದ್ದಿದೆ” ಎಂದು ಸಂಪಾದಕೀಯ ವಿಮರ್ಶಿಸಿದೆ.

ಪ್ರಧಾನ ಮಂತ್ರಿ ಮೋದಿಯವರು ಕಳೆದ ವರ್ಷ ಮೊದಲ ಕೋವಿಡ್ ಅಲೆಯ ಆರಂಭದಲ್ಲಿ, ಯಾವುದೇ ಸಿದ್ಧತೆಯಿಲ್ಲದೇ ಏಕಾಏಕಿ ಕ್ರೂರ ಲಾಕ್ ಡೌನ್ ವಿಧಿಸುವ ಮೂಲಕ, ಲಕ್ಷಾಂತರ ವಲಸೆ ಕಾರ್ಮಿಕರ ಬದುಕುಗಳನ್ನು ಮೂರಾಬಟ್ಟೆ ಮಾಡಿದರು. 2021ರ ಆರಂಭದಲ್ಲಿ ಕೋವಿಡ್ ಕುರಿತು ಅವರು ಚಿಂತಿಸಲೇ ಇಲ್ಲ’ ಎಂದು ಸಂಪಾದಕೀಯ ಟೀಕಿಸಿದೆ,

“ಆರೋಗ್ಯ ತಜ್ಞರ ಸಲಹೆ ನಿರ್ಲಕ್ಷಿಸಿ ರಾಷ್ಟ್ರೀಯತಾವಾದಿ ಉಪದೇಶಗಳಿಗೆ ಆದ್ಯತೆ ನೀಡುತ್ತ, ಜನರನ್ನು ರಕ್ಷಿಸುವುದಕ್ಕಿಂತ ಸ್ವಯಂ ಸಂಭ್ರಮಕ್ಕೆ ಹೆಚ್ಚು ಒಲವು ತೋರುತ್ತ ಬಂದ ಮೋದಿ ಅವರು ಪರಿಸ್ಥಿತಿಯನ್ನು ಉಲ್ಬಣಗೊಳಿಸಿದರು” ಎಂದು ಪತ್ರಿಕೆ ಹೇಳಿದೆ. ಚುನಾವಣಾ ಪ್ರಚಾರ ಮತ್ತು ಕುಂಭಮೇಳವನ್ನು ಉಲ್ಲೇಖಿಸಿ, ‘ಇದು ಗಂಗಾ ನೀರನ್ನು (ನದಿಪ್ರದೇಶವನ್ನು) ಸಾಂಕ್ರಾಮಿಕದ ಬೃಹತ್ ತಾಣವನ್ನಾಗಿ ಪರಿವರ್ತಿಸಿತು’ ಎಂದು ಪತ್ರಿಕೆ ಅಭಿಪ್ರಾಯ ವ್ಯಕ್ತಪಡಿಸಿದೆ.

ಸಂಪಾದಕೀಯವು ಮೋದಿಯವರ ಹೆಚ್ಚು ಪ್ರಚಾರ ಪಡೆದ ಲಸಿಕೆ ಕಾರ್ಯತಂತ್ರವನ್ನು ಒಡೆದು ಹಾಕಿದೆ. ಲಸಿಕೆ ರಾಜತಾಂತ್ರಿಕತೆಯು ತಮ್ಮ ಮಹತ್ವಾಕಾಂಕ್ಷೆಗಳಿಗೆ ಅಧೀನವಾಗಿದೆ ಎಂದು ನಂಬಿದ ಮೋದಿ, ದೇಶದ ಉತ್ಪಾದನಾ ಸಾಮರ್ಥ್ಯದ ವಾಸ್ತವತೆಯನ್ನು ಕಡೆಗಣಿಸಿದರು ಎಂದು ಪತ್ರಿಕೆಯ ಸಂಪಾದಕೀಯ ತಿಳಿಸಿದೆ.

ಸೋಮವಾರ, ಆಸ್ಟ್ರೇಲಿಯಾದಲ್ಲಿನ ಭಾರತೀಯ ರಾಯಭಾರಿ ಕಚೇರಿಯು, ಸಾಂಕ್ರಾಮಿಕ ನಿರ್ವಹಣೆಯಲ್ಲಿ ಭಾರತೀಯ ನಾಯಕತ್ವದ-ಮೋದಿಯವರ- ವೈಫಲ್ಯ ಟೀಕಿಸಿದ ಆಸ್ಟ್ರೇಲಿಯಾದ ಪತ್ರಿಕೆಗೆ ಪತ್ರವೊಂದನ್ನು ಬರೆದು ಆಕ್ಷೇಪ ವ್ಯಕ್ತಪಡಿಸಿತ್ತು. ಇಂದಿರಾ ಗಾಂಧಿಯವರ ತುರ್ತು ಪರಿಸ್ಥಿತಿಯಲ್ಲಿ, ವಿದೇಶಿ ಪ್ರಕಟಣೆಗಳಲ್ಲಿ ನಕಾರಾತ್ಮಕ ಸುದ್ದಿಗಳು ಬಂದಾಗ ಹೀಗೆ ಆಕ್ಷೇಪ ಸಲ್ಲಿಸಲಾಗುತ್ತಿತ್ತು.

ಭಾರತೀಯ ರಾಯಭಾರಿ ಕಚೇರಿಯು, ಆಸ್ಟ್ರೇಲಿಯಾ ಪತ್ರಿಕೆಯ ಲೇಖನವನ್ನು “ಆಧಾರರಹಿತ, ದುರುದ್ದೇಶಪೂರಿತ ಮತ್ತು ಅಪಪ್ರಚಾರ” ಎಂದು ವಿವರಿಸಿತ್ತು. ಈಗ ಫ್ರೆಂಚ್ ಪತ್ರಿಕೆ ಸಂಪಾದಕೀಯಕ್ಕೂ ಭಾರತ ಆಕ್ಷೇಪ ಸಲ್ಲಿಸುವುದೇ?


ಇದನ್ನೂ ಓದಿ: ಕೋವಿಡ್ ಸಂದರ್ಭದಲ್ಲಿ ಬಿಜೆಪಿ ಐಟಿ ಸೆಲ್, ಪೋಸ್ಟ್ ಕಾರ್ಡ್, ಬಿಜೆಪಿ ವಕ್ತಾರರು ಹೇಳಿದ ಸುಳ್ಳುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಯಾರೋ ಒಬ್ಬರು ಅದ್ಭುತವಾಗಿ ಹೇಳಿದ್ದಾರೆ.

    ಕೊರೋನಾದಿಂದ ನಿಮ್ಮನ್ನು ನೀವೇ ರಕ್ಷಿಸಿಕೊಳ್ಳಿ. ಒಂದು ವೇಳೆ ಬಿಜೆಪಿ ರಕ್ಷಿಸುತ್ತಿದ್ದರೆ ಮಧ್ಯಪ್ರದೇಶದಲ್ಲಿ ಹರಡುತ್ತಿರಲಿಲ್ಲ. ಒಂದು ವೇಳೆ ಕಾಂಗ್ರೆಸ್ ರಕ್ಷಿಸುತ್ತಿದ್ದರೆ ಇದು ಛತ್ತೀಸಗಡದಲ್ಲಿ ಹರಡುತ್ತಿರಲಿಲ್ಲ. ಶಿವಸೇನೆ ಯೋಗ್ಯ ಅನ್ನುವುದಾದರೆ ಮಹಾರಾಷ್ಟ್ರ ದಲ್ಲಿ ಹರಡುತ್ತಿರಲಿಲ್ಲ. ಕೇಜ್ರಿವಾಲ ಯೋಗ್ಯನಾಗಿದ್ದರೆ ದೆಹಲಿಯಲ್ಲಿ ಹರಡುತ್ತಿರಲಿಲ್ಲ. ಯೋಗಿ ಯೋಗ್ಯನೆಂದರೆ ಉತ್ತರ ಪ್ರದೇಶದಲ್ಲಿ ಹರಡುತ್ತಿರಲಿಲ್ಲ. ಮೋದಿಯವರು ಶಕ್ತಿವಂತನೆನ್ನುವುದಾದರೆ ಭಾರತದಲ್ಲಿ ಹರಡುತ್ತಿರಲಿಲ್ಲ. ಹೀಗಾಗಿ ಕೊರೋನಾ ಯಾರ ಕಾರಣದಿಂದಲೂ, ಯಾವ ಪಕ್ಷದ ಕಾರಣದಿಂದಲೂ ಹರಡುತ್ತಿಲ್ಲ.

    ಹಣದಿಂದ ಇದನ್ನು ನಿರ್ಮೂಲನೆ ಮಾಡುವುದಾಗಿದ್ದರೆ ಅಮೇರಿಕದಲ್ಲಿ ಹರಡುತ್ತಿರಲಿಲ್ಲ. ವೈದ್ಯರು ಮತ್ತು ಔಷಧದಿಂದ ಇದನ್ನು ಗುಣಪಡಿಸಬಹುದಾಗಿದ್ದರೆ ಸ್ವೀಡನ್, ಫ್ರಾನ್ಸ್, ಬೆಲ್ಜಿಯಂ, ಇಟಲಿಯಲ್ಲಿ ತಡೆಯಬಹುದಾಗಿತ್ತು. ಆದರೆ ಅವರಿಗೆ ಸಾಧ್ಯವಾಗಲಿಲ್ಲ.

    ಹೀಗಾಗಿ ಇದಕ್ಕೆ ಯಾವುದ್ಯಾವುದೋ ಕಾರಣ ಹೇಳಿ ಯಾರ ಯಾರನ್ನೋ ತೆಗಳುವುದಕ್ಕಿಂತ.. ಸುಮ್ಮನೆ ಮನೆಯಲ್ಲಿರಿ. ಹೊರಬರಲು ಸಕಾರಣವಿದ್ದರೆ ಮಾಸ್ಕ ಧರಿಸಿರಿ ಮತ್ತು ಸೈನಿಟೈಜರ ಬಳಸಿ.. ಸುರಕ್ಷಿತರಾಗಿ ಇರಿ.. ನಿಮ್ಮ ಕುಟುಂಬದ ಸುರಕ್ಷತೆ ನಿಮ್ಮದೇ ಜವಾಬ್ದಾರಿ ಆಗಿರಲಿ.

    ಮನೆಯಲ್ಲಿರಿ.. ಬದುಕಿದರೆ ಬದುಕು ಇದೆ.

    ಈ ಕ್ಷಣ ಗೆಲ್ಲುವ ವಿಶ್ವಾಸವಿದೆ.

  2. Nice suggestion, nobody save from covid-19, but ourselves protect from the covid-19.
    Positive thinking, physical exersie and balanced food with humanity action needed for the time.

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...