Homeಅಂತರಾಷ್ಟ್ರೀಯಮೋದಿ ದುರಂಹಕಾರವೇ ಕೋವಿಡ್ 2ನೆ ಅಲೆಯ ತೀವ್ರತೆಗೆ ಕಾರಣ: ಫ್ರೆಂಚ್ ಪತ್ರಿಕೆ ಸಂಪಾದಕೀಯ

ಮೋದಿ ದುರಂಹಕಾರವೇ ಕೋವಿಡ್ 2ನೆ ಅಲೆಯ ತೀವ್ರತೆಗೆ ಕಾರಣ: ಫ್ರೆಂಚ್ ಪತ್ರಿಕೆ ಸಂಪಾದಕೀಯ

- Advertisement -
- Advertisement -

ಈಗ ಫ್ರೆಂಚ್ ಪತ್ರಿಕೆಯೊಂದರ ಸಂಪಾದಕೀಯದಲ್ಲಿ ಕೋವಿಡ್ ನಿರ್ವಹಣೆಯಲ್ಲಿ ಮೋದಿಯವರ ಅಸಮರ್ಥತೆಯ ಕುರಿತು ಟೀಕೆ ಬಂದಿದೆ. ಎಂದು ದಿ ಟೆಲಿಗ್ರಾಫ್ ವರದಿ ಮಾಡಿದೆ.

ಮೂರು ದಿನದ ಹಿಂದೆ ಆಸ್ಟ್ರೇಲಿಯಾದ ಪತ್ರಿಕೆಯೊಂದು, ‘ಮೋದಿ ಭಾರತವನ್ನು ವೈರಲ್ ವಿನಾಶದ ಕಡೆ ಒಯ್ಯುತ್ತಿದ್ದಾರೆ’ ಎಂದು ಬರೆದಾಗ, ನಮ್ಮ ವಿದೇಶಾಂಗ ಇಲಾಖೆಯು ಇದಕ್ಕೆ ಆಕ್ಷೇಪಿಸಿ, ‘ಮೋದಿ ಸರಿಯಾದ ದಾರಿಯಲ್ಲಿ ಭಾರತವನ್ನು ಮುನ್ನಡೆಸುತ್ತಿದ್ದಾರೆ’ ಎಂದು ಬೋಧನೆ ಮಾಡಿತ್ತು. ಆದರೆ, ಈ ಅಸಹಜ ಆಕ್ಷೇಪವನ್ನು ನಿರ್ಲಕ್ಷಿಸಿದ ವಿದೇಶಿ ಮಾಧ್ಯಮಗಳು ಮೋದಿ ವೈಫಲ್ಯ ಕುರಿತು ಬರೆಯುವುದನ್ನು ಮುಂದುವರೆಸಿವೆ.

ಕಳೆದ ವಾರ ದಿ ಗಾರ್ಡಿಯನ್ ಪತ್ರಿಕೆ ಮೋದಿ ವೈಫಲ್ಯವೇ 2ನೆ ಅಲೆಗೆ ಕಾರಣ ಎಂದು ಸಂಪಾದಕೀಯ ಬರೆದಿತ್ತು. ವಾಷಿಂಗ್ಟನ್ ಪೋಸ್ಟ್ ಒಂದು ಪುಟದ ಲೇಖನದಲ್ಲಿ ಮೋದಿಯ ಅಸಮರ್ಥ ಆಡಳಿತವನ್ನು ಮತ್ತು ಭಾರತದ ಕೋವಿಡ್ ದುರಂತವನ್ನು ವಿವರಿಸಿತ್ತು.
ಬುಧವಾರ ಫ್ರೆಂಚ್ ಪತ್ರಿಕೆ ‘ಲೆ ಮಾಂಡೆ’, ಮೋದಿಯವರ ದುರಂಹಕಾರ ಮತ್ತು ವಾಕ್ಚಾತುರ್ಯ ಭಾರತದಲ್ಲಿ ಕೋವಿಡ್ 2ನೇ ಅಲೆ ಸಂಭವಿಸಲು ಮತ್ತು ತೀವ್ರವಾಗಲು ಕಾರಣವಾಗಿದೆ’ ಎಂದು ಟೀಕಿಸಿದೆ.

ಆಸ್ಪತ್ರೆಗಳ ಎದುರು ಆಂಬ್ಯುಲೆನ್ಸ್‌ಗಳ ಸಾಲುಗಳು, ಅನಾರೋಗ್ಯ ಪೀಡಿತರ ಸಂಬಂಧಿಕರು ಆಮ್ಲಜನಕಕ್ಕಾಗಿ ಗೋಗರೆಯುವುದು ಮತ್ತು ಸಾಮೂಹಿಕ ಶವಸಂಸ್ಕಾರಗಳು ಸುಳ್ಳಾಗುವುದಿಲ್ಲ. ಅವು ಕಣ್ಣಿಗೆ ರಾಚುತ್ತಿವೆ ಎಂದು ಸಂಪಾದಕೀಯ ಹೇಳಿದೆ.

“ನಗರಗಳಿಂದ ಗ್ರಾಮೀಣ ಪ್ರದೇಶಗಳವರೆಗೆ, ಶ್ರೀಮಂತರಿಂದ ಬಡವರವರೆಗೆ, ಈ ‘ಹತ್ಯಾಕಾಂಡ’ವು ಯಾರನ್ನೂ ಬಿಡುತ್ತಿಲ್ಲ. ಫೆಬ್ರವರಿ ತನಕ ಕ್ಷೀಣಿಸುತ್ತಾ ಬಂದ ಹೊಸ ಸೋಂಕಿನ ರೇಖೆಯು (curve) ಈಗ ಬಹುತೇಕ ಲಂಬವಾಗಿದೆ” ಎಂದು ಲೆ ಮಾಂಡೆ ತನ್ನ ಸಂಪಾದಕೀಯದಲ್ಲಿ ತಿಳಿಸಿದೆ.

“ವೈರಸ್ ಮತ್ತು ಅದರ ರೂಪಾಂತರಗಳ ಅನಿರೀಕ್ಷಿತ ದಾಳಿ ಎಂಬ ಏಕಮಾತ್ರ ಹೇಳಿಕೆಯಿಂದ ಈ ನಿರ್ವಹಣಾ ವೈಫಲ್ಯವನ್ನು ವಿವರಿಸಲಾಗುವುದಿಲ್ಲ. ನರೇಂದ್ರ ಮೋದಿಯವರ ಮುಂಗಾಣುವಿಕೆ-ದೂರದರ್ಶಿತ್ವದ (ಪ್ರಿಡಿಕ್ಸನ್) ಕೊರತೆ, ದುರಹಂಕಾರ ಮತ್ತು ಮಾತಿನ ಮೋಡಿ-ಇವೆಲ್ಲವೂ ಇಂದಿನ ಸ್ಥಿತಿಗೆ ಕಾರಣವಾಗಿವೆ. ಹೀಗಾಗಿ ಈಗ ಪರಿಸ್ಥಿತಿ ನಿಯಂತ್ರಣ ತಪ್ಪಿದ್ದು, ಅಂತಾರಾಷ್ಟ್ರೀಯ ಸಹಕಾರ-ಸಂಪನ್ಮೂಲಗಳ ಅಗತ್ಯ ಬಿದ್ದಿದೆ” ಎಂದು ಸಂಪಾದಕೀಯ ವಿಮರ್ಶಿಸಿದೆ.

ಪ್ರಧಾನ ಮಂತ್ರಿ ಮೋದಿಯವರು ಕಳೆದ ವರ್ಷ ಮೊದಲ ಕೋವಿಡ್ ಅಲೆಯ ಆರಂಭದಲ್ಲಿ, ಯಾವುದೇ ಸಿದ್ಧತೆಯಿಲ್ಲದೇ ಏಕಾಏಕಿ ಕ್ರೂರ ಲಾಕ್ ಡೌನ್ ವಿಧಿಸುವ ಮೂಲಕ, ಲಕ್ಷಾಂತರ ವಲಸೆ ಕಾರ್ಮಿಕರ ಬದುಕುಗಳನ್ನು ಮೂರಾಬಟ್ಟೆ ಮಾಡಿದರು. 2021ರ ಆರಂಭದಲ್ಲಿ ಕೋವಿಡ್ ಕುರಿತು ಅವರು ಚಿಂತಿಸಲೇ ಇಲ್ಲ’ ಎಂದು ಸಂಪಾದಕೀಯ ಟೀಕಿಸಿದೆ,

“ಆರೋಗ್ಯ ತಜ್ಞರ ಸಲಹೆ ನಿರ್ಲಕ್ಷಿಸಿ ರಾಷ್ಟ್ರೀಯತಾವಾದಿ ಉಪದೇಶಗಳಿಗೆ ಆದ್ಯತೆ ನೀಡುತ್ತ, ಜನರನ್ನು ರಕ್ಷಿಸುವುದಕ್ಕಿಂತ ಸ್ವಯಂ ಸಂಭ್ರಮಕ್ಕೆ ಹೆಚ್ಚು ಒಲವು ತೋರುತ್ತ ಬಂದ ಮೋದಿ ಅವರು ಪರಿಸ್ಥಿತಿಯನ್ನು ಉಲ್ಬಣಗೊಳಿಸಿದರು” ಎಂದು ಪತ್ರಿಕೆ ಹೇಳಿದೆ. ಚುನಾವಣಾ ಪ್ರಚಾರ ಮತ್ತು ಕುಂಭಮೇಳವನ್ನು ಉಲ್ಲೇಖಿಸಿ, ‘ಇದು ಗಂಗಾ ನೀರನ್ನು (ನದಿಪ್ರದೇಶವನ್ನು) ಸಾಂಕ್ರಾಮಿಕದ ಬೃಹತ್ ತಾಣವನ್ನಾಗಿ ಪರಿವರ್ತಿಸಿತು’ ಎಂದು ಪತ್ರಿಕೆ ಅಭಿಪ್ರಾಯ ವ್ಯಕ್ತಪಡಿಸಿದೆ.

ಸಂಪಾದಕೀಯವು ಮೋದಿಯವರ ಹೆಚ್ಚು ಪ್ರಚಾರ ಪಡೆದ ಲಸಿಕೆ ಕಾರ್ಯತಂತ್ರವನ್ನು ಒಡೆದು ಹಾಕಿದೆ. ಲಸಿಕೆ ರಾಜತಾಂತ್ರಿಕತೆಯು ತಮ್ಮ ಮಹತ್ವಾಕಾಂಕ್ಷೆಗಳಿಗೆ ಅಧೀನವಾಗಿದೆ ಎಂದು ನಂಬಿದ ಮೋದಿ, ದೇಶದ ಉತ್ಪಾದನಾ ಸಾಮರ್ಥ್ಯದ ವಾಸ್ತವತೆಯನ್ನು ಕಡೆಗಣಿಸಿದರು ಎಂದು ಪತ್ರಿಕೆಯ ಸಂಪಾದಕೀಯ ತಿಳಿಸಿದೆ.

ಸೋಮವಾರ, ಆಸ್ಟ್ರೇಲಿಯಾದಲ್ಲಿನ ಭಾರತೀಯ ರಾಯಭಾರಿ ಕಚೇರಿಯು, ಸಾಂಕ್ರಾಮಿಕ ನಿರ್ವಹಣೆಯಲ್ಲಿ ಭಾರತೀಯ ನಾಯಕತ್ವದ-ಮೋದಿಯವರ- ವೈಫಲ್ಯ ಟೀಕಿಸಿದ ಆಸ್ಟ್ರೇಲಿಯಾದ ಪತ್ರಿಕೆಗೆ ಪತ್ರವೊಂದನ್ನು ಬರೆದು ಆಕ್ಷೇಪ ವ್ಯಕ್ತಪಡಿಸಿತ್ತು. ಇಂದಿರಾ ಗಾಂಧಿಯವರ ತುರ್ತು ಪರಿಸ್ಥಿತಿಯಲ್ಲಿ, ವಿದೇಶಿ ಪ್ರಕಟಣೆಗಳಲ್ಲಿ ನಕಾರಾತ್ಮಕ ಸುದ್ದಿಗಳು ಬಂದಾಗ ಹೀಗೆ ಆಕ್ಷೇಪ ಸಲ್ಲಿಸಲಾಗುತ್ತಿತ್ತು.

ಭಾರತೀಯ ರಾಯಭಾರಿ ಕಚೇರಿಯು, ಆಸ್ಟ್ರೇಲಿಯಾ ಪತ್ರಿಕೆಯ ಲೇಖನವನ್ನು “ಆಧಾರರಹಿತ, ದುರುದ್ದೇಶಪೂರಿತ ಮತ್ತು ಅಪಪ್ರಚಾರ” ಎಂದು ವಿವರಿಸಿತ್ತು. ಈಗ ಫ್ರೆಂಚ್ ಪತ್ರಿಕೆ ಸಂಪಾದಕೀಯಕ್ಕೂ ಭಾರತ ಆಕ್ಷೇಪ ಸಲ್ಲಿಸುವುದೇ?


ಇದನ್ನೂ ಓದಿ: ಕೋವಿಡ್ ಸಂದರ್ಭದಲ್ಲಿ ಬಿಜೆಪಿ ಐಟಿ ಸೆಲ್, ಪೋಸ್ಟ್ ಕಾರ್ಡ್, ಬಿಜೆಪಿ ವಕ್ತಾರರು ಹೇಳಿದ ಸುಳ್ಳುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಯಾರೋ ಒಬ್ಬರು ಅದ್ಭುತವಾಗಿ ಹೇಳಿದ್ದಾರೆ.

    ಕೊರೋನಾದಿಂದ ನಿಮ್ಮನ್ನು ನೀವೇ ರಕ್ಷಿಸಿಕೊಳ್ಳಿ. ಒಂದು ವೇಳೆ ಬಿಜೆಪಿ ರಕ್ಷಿಸುತ್ತಿದ್ದರೆ ಮಧ್ಯಪ್ರದೇಶದಲ್ಲಿ ಹರಡುತ್ತಿರಲಿಲ್ಲ. ಒಂದು ವೇಳೆ ಕಾಂಗ್ರೆಸ್ ರಕ್ಷಿಸುತ್ತಿದ್ದರೆ ಇದು ಛತ್ತೀಸಗಡದಲ್ಲಿ ಹರಡುತ್ತಿರಲಿಲ್ಲ. ಶಿವಸೇನೆ ಯೋಗ್ಯ ಅನ್ನುವುದಾದರೆ ಮಹಾರಾಷ್ಟ್ರ ದಲ್ಲಿ ಹರಡುತ್ತಿರಲಿಲ್ಲ. ಕೇಜ್ರಿವಾಲ ಯೋಗ್ಯನಾಗಿದ್ದರೆ ದೆಹಲಿಯಲ್ಲಿ ಹರಡುತ್ತಿರಲಿಲ್ಲ. ಯೋಗಿ ಯೋಗ್ಯನೆಂದರೆ ಉತ್ತರ ಪ್ರದೇಶದಲ್ಲಿ ಹರಡುತ್ತಿರಲಿಲ್ಲ. ಮೋದಿಯವರು ಶಕ್ತಿವಂತನೆನ್ನುವುದಾದರೆ ಭಾರತದಲ್ಲಿ ಹರಡುತ್ತಿರಲಿಲ್ಲ. ಹೀಗಾಗಿ ಕೊರೋನಾ ಯಾರ ಕಾರಣದಿಂದಲೂ, ಯಾವ ಪಕ್ಷದ ಕಾರಣದಿಂದಲೂ ಹರಡುತ್ತಿಲ್ಲ.

    ಹಣದಿಂದ ಇದನ್ನು ನಿರ್ಮೂಲನೆ ಮಾಡುವುದಾಗಿದ್ದರೆ ಅಮೇರಿಕದಲ್ಲಿ ಹರಡುತ್ತಿರಲಿಲ್ಲ. ವೈದ್ಯರು ಮತ್ತು ಔಷಧದಿಂದ ಇದನ್ನು ಗುಣಪಡಿಸಬಹುದಾಗಿದ್ದರೆ ಸ್ವೀಡನ್, ಫ್ರಾನ್ಸ್, ಬೆಲ್ಜಿಯಂ, ಇಟಲಿಯಲ್ಲಿ ತಡೆಯಬಹುದಾಗಿತ್ತು. ಆದರೆ ಅವರಿಗೆ ಸಾಧ್ಯವಾಗಲಿಲ್ಲ.

    ಹೀಗಾಗಿ ಇದಕ್ಕೆ ಯಾವುದ್ಯಾವುದೋ ಕಾರಣ ಹೇಳಿ ಯಾರ ಯಾರನ್ನೋ ತೆಗಳುವುದಕ್ಕಿಂತ.. ಸುಮ್ಮನೆ ಮನೆಯಲ್ಲಿರಿ. ಹೊರಬರಲು ಸಕಾರಣವಿದ್ದರೆ ಮಾಸ್ಕ ಧರಿಸಿರಿ ಮತ್ತು ಸೈನಿಟೈಜರ ಬಳಸಿ.. ಸುರಕ್ಷಿತರಾಗಿ ಇರಿ.. ನಿಮ್ಮ ಕುಟುಂಬದ ಸುರಕ್ಷತೆ ನಿಮ್ಮದೇ ಜವಾಬ್ದಾರಿ ಆಗಿರಲಿ.

    ಮನೆಯಲ್ಲಿರಿ.. ಬದುಕಿದರೆ ಬದುಕು ಇದೆ.

    ಈ ಕ್ಷಣ ಗೆಲ್ಲುವ ವಿಶ್ವಾಸವಿದೆ.

  2. Nice suggestion, nobody save from covid-19, but ourselves protect from the covid-19.
    Positive thinking, physical exersie and balanced food with humanity action needed for the time.

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...