Homeಅಂತರಾಷ್ಟ್ರೀಯಮೋದಿ ದುರಂಹಕಾರವೇ ಕೋವಿಡ್ 2ನೆ ಅಲೆಯ ತೀವ್ರತೆಗೆ ಕಾರಣ: ಫ್ರೆಂಚ್ ಪತ್ರಿಕೆ ಸಂಪಾದಕೀಯ

ಮೋದಿ ದುರಂಹಕಾರವೇ ಕೋವಿಡ್ 2ನೆ ಅಲೆಯ ತೀವ್ರತೆಗೆ ಕಾರಣ: ಫ್ರೆಂಚ್ ಪತ್ರಿಕೆ ಸಂಪಾದಕೀಯ

- Advertisement -
- Advertisement -

ಈಗ ಫ್ರೆಂಚ್ ಪತ್ರಿಕೆಯೊಂದರ ಸಂಪಾದಕೀಯದಲ್ಲಿ ಕೋವಿಡ್ ನಿರ್ವಹಣೆಯಲ್ಲಿ ಮೋದಿಯವರ ಅಸಮರ್ಥತೆಯ ಕುರಿತು ಟೀಕೆ ಬಂದಿದೆ. ಎಂದು ದಿ ಟೆಲಿಗ್ರಾಫ್ ವರದಿ ಮಾಡಿದೆ.

ಮೂರು ದಿನದ ಹಿಂದೆ ಆಸ್ಟ್ರೇಲಿಯಾದ ಪತ್ರಿಕೆಯೊಂದು, ‘ಮೋದಿ ಭಾರತವನ್ನು ವೈರಲ್ ವಿನಾಶದ ಕಡೆ ಒಯ್ಯುತ್ತಿದ್ದಾರೆ’ ಎಂದು ಬರೆದಾಗ, ನಮ್ಮ ವಿದೇಶಾಂಗ ಇಲಾಖೆಯು ಇದಕ್ಕೆ ಆಕ್ಷೇಪಿಸಿ, ‘ಮೋದಿ ಸರಿಯಾದ ದಾರಿಯಲ್ಲಿ ಭಾರತವನ್ನು ಮುನ್ನಡೆಸುತ್ತಿದ್ದಾರೆ’ ಎಂದು ಬೋಧನೆ ಮಾಡಿತ್ತು. ಆದರೆ, ಈ ಅಸಹಜ ಆಕ್ಷೇಪವನ್ನು ನಿರ್ಲಕ್ಷಿಸಿದ ವಿದೇಶಿ ಮಾಧ್ಯಮಗಳು ಮೋದಿ ವೈಫಲ್ಯ ಕುರಿತು ಬರೆಯುವುದನ್ನು ಮುಂದುವರೆಸಿವೆ.

ಕಳೆದ ವಾರ ದಿ ಗಾರ್ಡಿಯನ್ ಪತ್ರಿಕೆ ಮೋದಿ ವೈಫಲ್ಯವೇ 2ನೆ ಅಲೆಗೆ ಕಾರಣ ಎಂದು ಸಂಪಾದಕೀಯ ಬರೆದಿತ್ತು. ವಾಷಿಂಗ್ಟನ್ ಪೋಸ್ಟ್ ಒಂದು ಪುಟದ ಲೇಖನದಲ್ಲಿ ಮೋದಿಯ ಅಸಮರ್ಥ ಆಡಳಿತವನ್ನು ಮತ್ತು ಭಾರತದ ಕೋವಿಡ್ ದುರಂತವನ್ನು ವಿವರಿಸಿತ್ತು.
ಬುಧವಾರ ಫ್ರೆಂಚ್ ಪತ್ರಿಕೆ ‘ಲೆ ಮಾಂಡೆ’, ಮೋದಿಯವರ ದುರಂಹಕಾರ ಮತ್ತು ವಾಕ್ಚಾತುರ್ಯ ಭಾರತದಲ್ಲಿ ಕೋವಿಡ್ 2ನೇ ಅಲೆ ಸಂಭವಿಸಲು ಮತ್ತು ತೀವ್ರವಾಗಲು ಕಾರಣವಾಗಿದೆ’ ಎಂದು ಟೀಕಿಸಿದೆ.

ಆಸ್ಪತ್ರೆಗಳ ಎದುರು ಆಂಬ್ಯುಲೆನ್ಸ್‌ಗಳ ಸಾಲುಗಳು, ಅನಾರೋಗ್ಯ ಪೀಡಿತರ ಸಂಬಂಧಿಕರು ಆಮ್ಲಜನಕಕ್ಕಾಗಿ ಗೋಗರೆಯುವುದು ಮತ್ತು ಸಾಮೂಹಿಕ ಶವಸಂಸ್ಕಾರಗಳು ಸುಳ್ಳಾಗುವುದಿಲ್ಲ. ಅವು ಕಣ್ಣಿಗೆ ರಾಚುತ್ತಿವೆ ಎಂದು ಸಂಪಾದಕೀಯ ಹೇಳಿದೆ.

“ನಗರಗಳಿಂದ ಗ್ರಾಮೀಣ ಪ್ರದೇಶಗಳವರೆಗೆ, ಶ್ರೀಮಂತರಿಂದ ಬಡವರವರೆಗೆ, ಈ ‘ಹತ್ಯಾಕಾಂಡ’ವು ಯಾರನ್ನೂ ಬಿಡುತ್ತಿಲ್ಲ. ಫೆಬ್ರವರಿ ತನಕ ಕ್ಷೀಣಿಸುತ್ತಾ ಬಂದ ಹೊಸ ಸೋಂಕಿನ ರೇಖೆಯು (curve) ಈಗ ಬಹುತೇಕ ಲಂಬವಾಗಿದೆ” ಎಂದು ಲೆ ಮಾಂಡೆ ತನ್ನ ಸಂಪಾದಕೀಯದಲ್ಲಿ ತಿಳಿಸಿದೆ.

“ವೈರಸ್ ಮತ್ತು ಅದರ ರೂಪಾಂತರಗಳ ಅನಿರೀಕ್ಷಿತ ದಾಳಿ ಎಂಬ ಏಕಮಾತ್ರ ಹೇಳಿಕೆಯಿಂದ ಈ ನಿರ್ವಹಣಾ ವೈಫಲ್ಯವನ್ನು ವಿವರಿಸಲಾಗುವುದಿಲ್ಲ. ನರೇಂದ್ರ ಮೋದಿಯವರ ಮುಂಗಾಣುವಿಕೆ-ದೂರದರ್ಶಿತ್ವದ (ಪ್ರಿಡಿಕ್ಸನ್) ಕೊರತೆ, ದುರಹಂಕಾರ ಮತ್ತು ಮಾತಿನ ಮೋಡಿ-ಇವೆಲ್ಲವೂ ಇಂದಿನ ಸ್ಥಿತಿಗೆ ಕಾರಣವಾಗಿವೆ. ಹೀಗಾಗಿ ಈಗ ಪರಿಸ್ಥಿತಿ ನಿಯಂತ್ರಣ ತಪ್ಪಿದ್ದು, ಅಂತಾರಾಷ್ಟ್ರೀಯ ಸಹಕಾರ-ಸಂಪನ್ಮೂಲಗಳ ಅಗತ್ಯ ಬಿದ್ದಿದೆ” ಎಂದು ಸಂಪಾದಕೀಯ ವಿಮರ್ಶಿಸಿದೆ.

ಪ್ರಧಾನ ಮಂತ್ರಿ ಮೋದಿಯವರು ಕಳೆದ ವರ್ಷ ಮೊದಲ ಕೋವಿಡ್ ಅಲೆಯ ಆರಂಭದಲ್ಲಿ, ಯಾವುದೇ ಸಿದ್ಧತೆಯಿಲ್ಲದೇ ಏಕಾಏಕಿ ಕ್ರೂರ ಲಾಕ್ ಡೌನ್ ವಿಧಿಸುವ ಮೂಲಕ, ಲಕ್ಷಾಂತರ ವಲಸೆ ಕಾರ್ಮಿಕರ ಬದುಕುಗಳನ್ನು ಮೂರಾಬಟ್ಟೆ ಮಾಡಿದರು. 2021ರ ಆರಂಭದಲ್ಲಿ ಕೋವಿಡ್ ಕುರಿತು ಅವರು ಚಿಂತಿಸಲೇ ಇಲ್ಲ’ ಎಂದು ಸಂಪಾದಕೀಯ ಟೀಕಿಸಿದೆ,

“ಆರೋಗ್ಯ ತಜ್ಞರ ಸಲಹೆ ನಿರ್ಲಕ್ಷಿಸಿ ರಾಷ್ಟ್ರೀಯತಾವಾದಿ ಉಪದೇಶಗಳಿಗೆ ಆದ್ಯತೆ ನೀಡುತ್ತ, ಜನರನ್ನು ರಕ್ಷಿಸುವುದಕ್ಕಿಂತ ಸ್ವಯಂ ಸಂಭ್ರಮಕ್ಕೆ ಹೆಚ್ಚು ಒಲವು ತೋರುತ್ತ ಬಂದ ಮೋದಿ ಅವರು ಪರಿಸ್ಥಿತಿಯನ್ನು ಉಲ್ಬಣಗೊಳಿಸಿದರು” ಎಂದು ಪತ್ರಿಕೆ ಹೇಳಿದೆ. ಚುನಾವಣಾ ಪ್ರಚಾರ ಮತ್ತು ಕುಂಭಮೇಳವನ್ನು ಉಲ್ಲೇಖಿಸಿ, ‘ಇದು ಗಂಗಾ ನೀರನ್ನು (ನದಿಪ್ರದೇಶವನ್ನು) ಸಾಂಕ್ರಾಮಿಕದ ಬೃಹತ್ ತಾಣವನ್ನಾಗಿ ಪರಿವರ್ತಿಸಿತು’ ಎಂದು ಪತ್ರಿಕೆ ಅಭಿಪ್ರಾಯ ವ್ಯಕ್ತಪಡಿಸಿದೆ.

ಸಂಪಾದಕೀಯವು ಮೋದಿಯವರ ಹೆಚ್ಚು ಪ್ರಚಾರ ಪಡೆದ ಲಸಿಕೆ ಕಾರ್ಯತಂತ್ರವನ್ನು ಒಡೆದು ಹಾಕಿದೆ. ಲಸಿಕೆ ರಾಜತಾಂತ್ರಿಕತೆಯು ತಮ್ಮ ಮಹತ್ವಾಕಾಂಕ್ಷೆಗಳಿಗೆ ಅಧೀನವಾಗಿದೆ ಎಂದು ನಂಬಿದ ಮೋದಿ, ದೇಶದ ಉತ್ಪಾದನಾ ಸಾಮರ್ಥ್ಯದ ವಾಸ್ತವತೆಯನ್ನು ಕಡೆಗಣಿಸಿದರು ಎಂದು ಪತ್ರಿಕೆಯ ಸಂಪಾದಕೀಯ ತಿಳಿಸಿದೆ.

ಸೋಮವಾರ, ಆಸ್ಟ್ರೇಲಿಯಾದಲ್ಲಿನ ಭಾರತೀಯ ರಾಯಭಾರಿ ಕಚೇರಿಯು, ಸಾಂಕ್ರಾಮಿಕ ನಿರ್ವಹಣೆಯಲ್ಲಿ ಭಾರತೀಯ ನಾಯಕತ್ವದ-ಮೋದಿಯವರ- ವೈಫಲ್ಯ ಟೀಕಿಸಿದ ಆಸ್ಟ್ರೇಲಿಯಾದ ಪತ್ರಿಕೆಗೆ ಪತ್ರವೊಂದನ್ನು ಬರೆದು ಆಕ್ಷೇಪ ವ್ಯಕ್ತಪಡಿಸಿತ್ತು. ಇಂದಿರಾ ಗಾಂಧಿಯವರ ತುರ್ತು ಪರಿಸ್ಥಿತಿಯಲ್ಲಿ, ವಿದೇಶಿ ಪ್ರಕಟಣೆಗಳಲ್ಲಿ ನಕಾರಾತ್ಮಕ ಸುದ್ದಿಗಳು ಬಂದಾಗ ಹೀಗೆ ಆಕ್ಷೇಪ ಸಲ್ಲಿಸಲಾಗುತ್ತಿತ್ತು.

ಭಾರತೀಯ ರಾಯಭಾರಿ ಕಚೇರಿಯು, ಆಸ್ಟ್ರೇಲಿಯಾ ಪತ್ರಿಕೆಯ ಲೇಖನವನ್ನು “ಆಧಾರರಹಿತ, ದುರುದ್ದೇಶಪೂರಿತ ಮತ್ತು ಅಪಪ್ರಚಾರ” ಎಂದು ವಿವರಿಸಿತ್ತು. ಈಗ ಫ್ರೆಂಚ್ ಪತ್ರಿಕೆ ಸಂಪಾದಕೀಯಕ್ಕೂ ಭಾರತ ಆಕ್ಷೇಪ ಸಲ್ಲಿಸುವುದೇ?


ಇದನ್ನೂ ಓದಿ: ಕೋವಿಡ್ ಸಂದರ್ಭದಲ್ಲಿ ಬಿಜೆಪಿ ಐಟಿ ಸೆಲ್, ಪೋಸ್ಟ್ ಕಾರ್ಡ್, ಬಿಜೆಪಿ ವಕ್ತಾರರು ಹೇಳಿದ ಸುಳ್ಳುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಯಾರೋ ಒಬ್ಬರು ಅದ್ಭುತವಾಗಿ ಹೇಳಿದ್ದಾರೆ.

    ಕೊರೋನಾದಿಂದ ನಿಮ್ಮನ್ನು ನೀವೇ ರಕ್ಷಿಸಿಕೊಳ್ಳಿ. ಒಂದು ವೇಳೆ ಬಿಜೆಪಿ ರಕ್ಷಿಸುತ್ತಿದ್ದರೆ ಮಧ್ಯಪ್ರದೇಶದಲ್ಲಿ ಹರಡುತ್ತಿರಲಿಲ್ಲ. ಒಂದು ವೇಳೆ ಕಾಂಗ್ರೆಸ್ ರಕ್ಷಿಸುತ್ತಿದ್ದರೆ ಇದು ಛತ್ತೀಸಗಡದಲ್ಲಿ ಹರಡುತ್ತಿರಲಿಲ್ಲ. ಶಿವಸೇನೆ ಯೋಗ್ಯ ಅನ್ನುವುದಾದರೆ ಮಹಾರಾಷ್ಟ್ರ ದಲ್ಲಿ ಹರಡುತ್ತಿರಲಿಲ್ಲ. ಕೇಜ್ರಿವಾಲ ಯೋಗ್ಯನಾಗಿದ್ದರೆ ದೆಹಲಿಯಲ್ಲಿ ಹರಡುತ್ತಿರಲಿಲ್ಲ. ಯೋಗಿ ಯೋಗ್ಯನೆಂದರೆ ಉತ್ತರ ಪ್ರದೇಶದಲ್ಲಿ ಹರಡುತ್ತಿರಲಿಲ್ಲ. ಮೋದಿಯವರು ಶಕ್ತಿವಂತನೆನ್ನುವುದಾದರೆ ಭಾರತದಲ್ಲಿ ಹರಡುತ್ತಿರಲಿಲ್ಲ. ಹೀಗಾಗಿ ಕೊರೋನಾ ಯಾರ ಕಾರಣದಿಂದಲೂ, ಯಾವ ಪಕ್ಷದ ಕಾರಣದಿಂದಲೂ ಹರಡುತ್ತಿಲ್ಲ.

    ಹಣದಿಂದ ಇದನ್ನು ನಿರ್ಮೂಲನೆ ಮಾಡುವುದಾಗಿದ್ದರೆ ಅಮೇರಿಕದಲ್ಲಿ ಹರಡುತ್ತಿರಲಿಲ್ಲ. ವೈದ್ಯರು ಮತ್ತು ಔಷಧದಿಂದ ಇದನ್ನು ಗುಣಪಡಿಸಬಹುದಾಗಿದ್ದರೆ ಸ್ವೀಡನ್, ಫ್ರಾನ್ಸ್, ಬೆಲ್ಜಿಯಂ, ಇಟಲಿಯಲ್ಲಿ ತಡೆಯಬಹುದಾಗಿತ್ತು. ಆದರೆ ಅವರಿಗೆ ಸಾಧ್ಯವಾಗಲಿಲ್ಲ.

    ಹೀಗಾಗಿ ಇದಕ್ಕೆ ಯಾವುದ್ಯಾವುದೋ ಕಾರಣ ಹೇಳಿ ಯಾರ ಯಾರನ್ನೋ ತೆಗಳುವುದಕ್ಕಿಂತ.. ಸುಮ್ಮನೆ ಮನೆಯಲ್ಲಿರಿ. ಹೊರಬರಲು ಸಕಾರಣವಿದ್ದರೆ ಮಾಸ್ಕ ಧರಿಸಿರಿ ಮತ್ತು ಸೈನಿಟೈಜರ ಬಳಸಿ.. ಸುರಕ್ಷಿತರಾಗಿ ಇರಿ.. ನಿಮ್ಮ ಕುಟುಂಬದ ಸುರಕ್ಷತೆ ನಿಮ್ಮದೇ ಜವಾಬ್ದಾರಿ ಆಗಿರಲಿ.

    ಮನೆಯಲ್ಲಿರಿ.. ಬದುಕಿದರೆ ಬದುಕು ಇದೆ.

    ಈ ಕ್ಷಣ ಗೆಲ್ಲುವ ವಿಶ್ವಾಸವಿದೆ.

  2. Nice suggestion, nobody save from covid-19, but ourselves protect from the covid-19.
    Positive thinking, physical exersie and balanced food with humanity action needed for the time.

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...