Homeಅಂಕಣಗಳುದಲಿತ ಸಮರ್ಥನೆಯ ಆದ್ಯಪ್ರವರ್ತಕನ ಪಾತ್ರವಹಿಸಿದ್ದ ಮೂಕನಾಯಕ

ದಲಿತ ಸಮರ್ಥನೆಯ ಆದ್ಯಪ್ರವರ್ತಕನ ಪಾತ್ರವಹಿಸಿದ್ದ ಮೂಕನಾಯಕ

ವರ್ತಮಾನದಲ್ಲಿ ಮತ್ತು ಭವಿಷ್ಯದಲ್ಲಿ ನಮ್ಮ ಜನರ ಮೇಲೆ ನಡೆಯುವ ಅನ್ಯಾಯದ ವಿರುದ್ಧ ಪರಿಹಾರ ಸೂಚಿಸಲು ಮತ್ತು ಭವಿಷ್ಯತ್ತಿನಲ್ಲಿ ನಮ್ಮ ಪ್ರಗತಿ ಕುರಿತು ಮಾರ್ಗೋಪಾಯಗಳ ಕುರಿತು ಚರ್ಚಿಸಲು ಪತ್ರಿಕೆಗಿಂತ ಉತ್ತಮ ಸಂಪನ್ಮೂಲ ಮತ್ತೊಂದಿಲ್ಲ.

- Advertisement -
- Advertisement -

ದಲಿತರನ್ನು ಎಚ್ಚರಿಸಿ ಸಬಲರನ್ನಾಗಿ ಮಾಡಬೇಕಿದ್ದರೆ ಅವರದೇ ಆದ ಪ್ರಕಟಣೆಗಳಿರಬೇಕು ಎಂದಿದ್ದರು ಡಾ.ಬಾಬಾಸಾಹೇಬ ಅಂಬೇಡ್ಕರ್. ಇದೇ ಉದ್ದೇಶದಿಂದ 1920ರ ಜನವರಿ 31ರಂದು ಮೂಕನಾಯಕ ಎಂಬ ಮರಾಠಿ ಪಾಕ್ಷಿಕವೊಂದನ್ನು ಆರಂಭಿಸಿದರು. ಆಗ ಅವರಿಗೆ 29ರ ಉಕ್ಕುಪ್ರಾಯ.

ಹದಿನೈದು ದಿನಗಳಿಗೊಮ್ಮೆ ಶನಿವಾರಗಳಂದು ಬಾಂಬೆಯಿಂದ ಹೊರಬೀಳುತ್ತಿತ್ತು ಮೂಕನಾಯಕ. ಅದರ ಕಚೇರಿ ಪರೇಲಿನ ಶ್ರಮಿಕವರ್ಗದ ನೆರೆಹೊರೆಯಲ್ಲಿತ್ತು. ಸಂತ ತುಕಾರಾಮನ ಚತುಷ್ಪದಿಯೊಂದರ ಸ್ಫೂರ್ತಿಯೇ ಮೂಕನಾಯಕ ಶೀರ್ಷಿಕೆಗೆ ಕಾರಣವಾಗಿತ್ತು. ಕೊಲ್ಹಾಪುರದ ಶಾಹು ಮಹಾರಾಜರು ಅಂಬೇಡ್ಕರ್ ಅವರನ್ನು ಅರಸಿಕೊಂಡು ಬಂದು ನೀಡಿದ್ದ 2,500 ರುಪಾಯಿಗಳ ದೇಣಿಗೆಯೇ ಪತ್ರಿಕೆಗೆ ದೊರೆತಿದ್ದ ಆರಂಭಿಕ ಚಾಲನೆ.

ಈ ಪ್ರಕಟಣೆಯ ಹಿಂದಿನ ತರ್ಕವನ್ನು ವಿವರಿಸಿ ಮೂಕನಾಯಕದ ಉದ್ಘಾಟನಾ ಸಂಚಿಕೆಯ ಸಂಪಾದಕೀಯದಲ್ಲಿ ಅವರು ಬರೆದರು- ‘ವರ್ತಮಾನದಲ್ಲಿ ಮತ್ತು ಭವಿಷ್ಯದಲ್ಲಿ ನಮ್ಮ ಜನರ ಮೇಲೆ ನಡೆಯುವ ಅನ್ಯಾಯದ ವಿರುದ್ಧ ಪರಿಹಾರ ಸೂಚಿಸಲು ಮತ್ತು ಭವಿಷ್ಯತ್ತಿನಲ್ಲಿ ನಮ್ಮ ಪ್ರಗತಿ ಕುರಿತು ಮಾರ್ಗೋಪಾಯಗಳ ಕುರಿತು ಚರ್ಚಿಸಲು ಪತ್ರಿಕೆಗಿಂತ ಉತ್ತಮ ಸಂಪನ್ಮೂಲ ಮತ್ತೊಂದಿಲ್ಲ’.

ಮುಂದುವರೆದು ಅವರು ಬರೆಯುತ್ತಾರೆ- ‘ಹಿಂದೂ ಸಮಾಜವು ಏಣಿ ಅಥವಾ ಪ್ರವೇಶ ದ್ವಾರವೇ ಇಲ್ಲದ ಹಲವು ಅಂತಸ್ತುಗಳ ಗೋಪುರವಿದ್ದಂತೆ. ಕೆಳ ಅಂತಸ್ತಿನಲ್ಲಿ ಹುಟ್ಟಿದ ವ್ಯಕ್ತಿ ಅದೆಷ್ಟೇ ಯೋಗ್ಯನಾದರೂ ಮೇಲಿನ ಅಂತಸ್ತನ್ನು ಪ್ರವೇಶಿಸಲಾರ. ಮೇಲಿನ ಅಂತಸ್ತಿನಲ್ಲಿ ಹುಟ್ಟಿದ ವ್ಯಕ್ತಿ ಅದೆಷ್ಟೇ ಅಯೋಗ್ಯನಾದರೂ ಅವನನ್ನು ಕೆಳ ಅಂತಸ್ತಿಗೆ ಓಡಿಸುವುದು ಸಾಧ್ಯವಿಲ್ಲ. ಅಂತರ್ಜಾತೀಯ ಸಹಭೋಜನ ಮತ್ತು ಅಂತರ್ಜಾತೀಯ ವಿವಾಹಗಳಿಗೆ ಅವಕಾಶವಿಲ್ಲದೆ ಏರ್ಪಟ್ಟಿರುವ ಪರಕೀಯಪ್ರಜ್ಞೆಯು ಸ್ಪೃಶ್ಯ ಮತ್ತು ಅಸ್ಪೃಶ್ಯ ಭಾವನೆಗಳನ್ನು ಅದೆಷ್ಟು ಪೋಷಿಸಿಬಿಟ್ಟಿದೆಯೆಂದರೆ ಈ ಸ್ಪೃಶ್ಯ ಮತ್ತು ಅಸ್ಪೃಶ್ಯ ಜಾತಿಗಳು ಹಿಂದೂ ಸಮಾಜದ ಭಾಗವೇ ಆಗಿದ್ದರೂ, ವಾಸ್ತವದಲ್ಲಿ ಬೇರೆ ಬೇರೆಯೇ ಜಗತ್ತುಗಳಾಗಿ ಜೀವಿಸುತ್ತಿವೆ’.

‘ಬೆಕ್ಕುಗಳು ನಾಯಿಗಳು ಅಸ್ಪೃಶ್ಯರ ಎಂಜಲು ತಿನ್ನುತ್ತವೆ. ಮಕ್ಕಳ ಮಲವನ್ನೂ ತಿನ್ನುತ್ತವೆ. ಇದೇ ನಾಯಿ ಬೆಕ್ಕುಗಳು ಸ್ಪೃಶ್ಯರ ಮನೆಯನ್ನು ಪ್ರವೇಶಿಸಬಹುದು. ಹಾಗೆ ಪ್ರವೇಶಿಸಿದರೆ ಮೈಲಿಗೆಯಿಲ್ಲ. ಈ ಪ್ರಾಣಿಗಳನ್ನು ಸ್ಪೃಶ್ಯರು ಮುಟ್ಟುತ್ತಾರೆ, ಅಪ್ಪಿ ಮುದ್ದಾಡುತ್ತಾರೆ. ಅವು ಉಣ್ಣುವ ತಟ್ಟೆಗೆ ಬಾಯಿ ಹಾಕಿದರೂ ಅವರಿಗೆ ತಕರಾರಿಲ್ಲ. ಯಾವುದೋ ಚಾಕರಿಗೆಂದು ಮನೆಯ ಹೊರಗೆ ನಿಲ್ಲುವ ಅಸ್ಪೃಶ್ಯನನ್ನು ಕಂಡ ಸವರ್ಣೀಯ ಗದರುತ್ತಾನೆ- ದೂರ ನಿಲ್ಲು, ಮಗುವಿನ ಮಲವನ್ನು ಬಾಚಿ ಎಸೆಯುವ ಬೋಕಿ ಬಿಲ್ಲೆಯನ್ನು ಅಲ್ಲಿ ಇಡಲಾಗಿದೆ. ಅದನ್ನೂ ಮುಟ್ಟಿ ಮೈಲಿಗೆ ಮಾಡುತ್ತೀಯೇನು?’ ಎಂಬ ಹೃದಯವಿದ್ರಾವಕ ಸಾಲುಗಳನ್ನು ಬಾಬಾಸಾಹೇಬರು ಮೂಕನಾಯಕದ 1920ರ ಆಗಸ್ಟ್ ಸಂಚಿಕೆಯ ಸಂಪಾದಕೀಯದಲ್ಲಿ ಬರೆದಿದ್ದಾರೆ.

ಲಂಡನ್ ಸ್ಕೂಲ್ ಅಫ್ ಎಕನಾಮಿಕ್ಸ್‌ನಲ್ಲಿ ಅರ್ಧದಲ್ಲಿಯೇ ತೊರೆದು ಬಂದಿದ್ದ ತಮ್ಮ ಉನ್ನತ ವ್ಯಾಸಂಗವನ್ನು ಮುಂದುವರೆಸಲು ಬಾಬಾಸಾಹೇಬರು ಹಠಾತ್ತನೆ ಲಂಡನ್‍ಗೆ ತೆರಳಬೇಕಾಗುತ್ತದೆ. ಮೂಕನಾಯಕನ ಉಸ್ತುವಾರಿಯನ್ನು ಅಲ್ಲಿಂದಲೇ ನೋಡಿಕೊಳ್ಳುತ್ತಾರೆ. ಪತ್ರಿಕೆಯ ಹಿಂದಿನ ಚಾಲಕಶಕ್ತಿ ತಾವೇ ಆದರೂ ಸಂಪಾದಕ ಹುದ್ದೆಯಲ್ಲಿ ಅಂಬೇಡ್ಕರ್ ಇರುವುದಿಲ್ಲ. ಪಾಂಡುರಂಗ ಭಾಟ್ಕರ್ ಈ ಪತ್ರಿಕೆಯ ಮೊದಲ ಸಂಪಾದಕರು. ಧ್ಯಾನದೇವ ಘೋಲಪ್ ಎರಡನೆಯ ಸಂಪಾದಕರು. ಆರ್ಥಿಕ ಸಂಕಟ ಈ ಪತ್ರಿಕೆಯನ್ನು ನೆರಳಿನಂತೆ ಹಿಂಬಾಲಿಸಿತ್ತು. ಘೋಲಪ್ ಅವರೊಂದಿಗೆ ಭಿನ್ನಾಭಿಪ್ರಾಯದ ಕಾರಣ ಅಂಬೇಡ್ಕರ್ 1923ರಲ್ಲಿ ಈ ಪತ್ರಿಕೆಯಿಂದ ದೂರವಾದರು.

ಬಾಬಾಸಾಹೇಬರು 1920ರಲ್ಲಿ ಆರಂಭಿಸಿದ ಮೊದಲ ಪತ್ರಿಕೆ ಮೂಕನಾಯಕವಾದರೆ ಕಡೆಯ ಪತ್ರಿಕೆ ಪ್ರಬುದ್ಧ ಭಾರತ (1956ರ ಫೆಬ್ರವರಿ ನಾಲ್ಕು). ಈ ನಡುವಿನ ಅವಧಿಯಲ್ಲಿ ಬಹಿಷ್ಕೃತ ಭಾರತ (1927ರ ಏಪ್ರಿಲ್ ಮೂರು), ಸಮತಾ (1928ರ ಜೂನ್ 29), ಜನತಾ (1930ರ ನವೆಂಬರ್ 25) ಪತ್ರಿಕೆಗಳನ್ನು ಹೊರತಂದರು.

ಅಂಬೇಡ್ಕರ್ ಆರಂಭಿಸಿದ್ದ ಪತ್ರಿಕೆಗಳಿಗೆ ಹಣಬಲವಿರಲಿಲ್ಲ. ಮೂಕನಾಯಕ ಮತ್ತು ಬಹಿಷ್ಕೃತ ಭಾರತ ಮುಚ್ಚಲು ಹಣದ ಕೊರತೆಯೇ ನೇರ ಕಾರಣ. ಜಾಹೀರಾತು ಕುರಿತು ಬಾಬಾಸಾಹೇಬರು ತಳೆದಿದ್ದ ನಿಷ್ಠುರ ನಿಲುವೂ ಪತ್ರಿಕೆಗಳ ಆರ್ಥಿಕ ಬಿಕ್ಕಟ್ಟಿಗೆ ಕಾರಣವಾಗಿತ್ತು. ಅಸಮಾನತೆ ಮತ್ತು ಸಂಪ್ರದಾಯವಾದವನ್ನು ಎತ್ತಿ ಹಿಡಿದು ಮುಂದುವರೆಸುವ ಹೊಣೆಗೇಡಿ ಜಾಹೀರಾತುಗಳನ್ನು ಅವರು ತಮ್ಮ ಸಂಪಾದಕೀಯಗಳಲ್ಲಿ ತೀವ್ರವಾಗಿ ಖಂಡಿಸಿದ್ದರು. ಬಾಂಬೇ ಕ್ರಾನಿಕಲ್ ಮತ್ತು ಬಾಲ ಗಂಗಾಧರ ತಿಲಕ್ ಅವರ ಕೇಸರಿ ಸೇರಿದಂತೆ ಹಲವಾರು ರಾಷ್ಟ್ರವಾದಿ ಪತ್ರಿಕೆಗಳು ಬ್ರಾಹ್ಮಣವಾದಿ ಧಾರ್ಮಿಕ ಸಾಹಿತ್ಯವನ್ನು, ಬ್ರಾಹ್ಮಣವಾದವನ್ನು ಎತ್ತಿ ಹಿಡಿಯುವ ಚಟುವಟಿಕೆಗಳು, ಘಟನಾವಳಿಗಳು ಹಾಗೂ ಗಂಡಾಳಿಕೆಯನ್ನು ಸಮರ್ಥಿಸುವ ಜಾಹೀರಾತುಗಳನ್ನು ಪ್ರಕಟಿಸುತ್ತಿದ್ದವು. ಸಾಮಾಜಿಕವಾಗಿ ಅನೈತಿಕ ಮತ್ತು ಅಸಭ್ಯ ಜಾಹೀರಾತುಗಳನ್ನು ಪ್ರಕಟಣೆಗಿಂತ ಜಾಹೀರಾತುಗಳ ಪ್ರಕಟಣೆಯನ್ನು ನಿಲ್ಲಿಸುವುದೇ ಲೇಸು ಎಂಬುದು ಬಾಬಾಸಾಹೇಬರ ನಿಲುವಾಗಿತ್ತು.

ಸ್ವಾತಂತ್ರ್ಯ ಹೋರಾಟದ ದಿನಗಳಲ್ಲಿ ತುಳಿದಿಟ್ಟ ಜನರ ಪರವಾಗಿ ಅಸ್ಪೃಶ್ಯತೆಯ ವಿರುದ್ಧವಾಗಿ ದನಿಯೆತ್ತಿದ್ದ ಅಂಬೇಡ್ಕರ್ ಅವರನ್ನು ಅಂದಿನ ಹಿಂದೂವಾದಿ ಮಾಲೀಕತ್ವದ ಪತ್ರಿಕೆಗಳು ಭೀಮಾಸುರ, ರಾಕ್ಷಸ, ದ್ರೋಹಿ, ಬಾಡಿಗೆಯ ಬಂಟ, ಬ್ರಹ್ಮದ್ವೇಷಿ, ರಾಷ್ಟ್ರೀಯತೆಯ ವಿರೋಧಿ ಎಂದೆಲ್ಲ ಹೀಯಾಳಿಸಿದ್ದವು.
ದಲಿತ ಸಮರ್ಥನೆಯ ಆದ್ಯಪ್ರವರ್ತಕನ ಪಾತ್ರವನ್ನು ವಹಿಸಿತ್ತು ಮೂಕನಾಯಕ.


ಇದನ್ನೂ ಓದಿ: ಬಹುಜನ ಭಾರತ: ಬಾಬಾಸಾಹೇಬರು ಮನುಸ್ಮೃತಿಯನ್ನು ಸುಟ್ಟಿದ್ದು ಸುಳ್ಳೇನು?
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...