Homeಅಂಕಣಗಳುದಲಿತ ಸಮರ್ಥನೆಯ ಆದ್ಯಪ್ರವರ್ತಕನ ಪಾತ್ರವಹಿಸಿದ್ದ ಮೂಕನಾಯಕ

ದಲಿತ ಸಮರ್ಥನೆಯ ಆದ್ಯಪ್ರವರ್ತಕನ ಪಾತ್ರವಹಿಸಿದ್ದ ಮೂಕನಾಯಕ

ವರ್ತಮಾನದಲ್ಲಿ ಮತ್ತು ಭವಿಷ್ಯದಲ್ಲಿ ನಮ್ಮ ಜನರ ಮೇಲೆ ನಡೆಯುವ ಅನ್ಯಾಯದ ವಿರುದ್ಧ ಪರಿಹಾರ ಸೂಚಿಸಲು ಮತ್ತು ಭವಿಷ್ಯತ್ತಿನಲ್ಲಿ ನಮ್ಮ ಪ್ರಗತಿ ಕುರಿತು ಮಾರ್ಗೋಪಾಯಗಳ ಕುರಿತು ಚರ್ಚಿಸಲು ಪತ್ರಿಕೆಗಿಂತ ಉತ್ತಮ ಸಂಪನ್ಮೂಲ ಮತ್ತೊಂದಿಲ್ಲ.

- Advertisement -
- Advertisement -

ದಲಿತರನ್ನು ಎಚ್ಚರಿಸಿ ಸಬಲರನ್ನಾಗಿ ಮಾಡಬೇಕಿದ್ದರೆ ಅವರದೇ ಆದ ಪ್ರಕಟಣೆಗಳಿರಬೇಕು ಎಂದಿದ್ದರು ಡಾ.ಬಾಬಾಸಾಹೇಬ ಅಂಬೇಡ್ಕರ್. ಇದೇ ಉದ್ದೇಶದಿಂದ 1920ರ ಜನವರಿ 31ರಂದು ಮೂಕನಾಯಕ ಎಂಬ ಮರಾಠಿ ಪಾಕ್ಷಿಕವೊಂದನ್ನು ಆರಂಭಿಸಿದರು. ಆಗ ಅವರಿಗೆ 29ರ ಉಕ್ಕುಪ್ರಾಯ.

ಹದಿನೈದು ದಿನಗಳಿಗೊಮ್ಮೆ ಶನಿವಾರಗಳಂದು ಬಾಂಬೆಯಿಂದ ಹೊರಬೀಳುತ್ತಿತ್ತು ಮೂಕನಾಯಕ. ಅದರ ಕಚೇರಿ ಪರೇಲಿನ ಶ್ರಮಿಕವರ್ಗದ ನೆರೆಹೊರೆಯಲ್ಲಿತ್ತು. ಸಂತ ತುಕಾರಾಮನ ಚತುಷ್ಪದಿಯೊಂದರ ಸ್ಫೂರ್ತಿಯೇ ಮೂಕನಾಯಕ ಶೀರ್ಷಿಕೆಗೆ ಕಾರಣವಾಗಿತ್ತು. ಕೊಲ್ಹಾಪುರದ ಶಾಹು ಮಹಾರಾಜರು ಅಂಬೇಡ್ಕರ್ ಅವರನ್ನು ಅರಸಿಕೊಂಡು ಬಂದು ನೀಡಿದ್ದ 2,500 ರುಪಾಯಿಗಳ ದೇಣಿಗೆಯೇ ಪತ್ರಿಕೆಗೆ ದೊರೆತಿದ್ದ ಆರಂಭಿಕ ಚಾಲನೆ.

ಈ ಪ್ರಕಟಣೆಯ ಹಿಂದಿನ ತರ್ಕವನ್ನು ವಿವರಿಸಿ ಮೂಕನಾಯಕದ ಉದ್ಘಾಟನಾ ಸಂಚಿಕೆಯ ಸಂಪಾದಕೀಯದಲ್ಲಿ ಅವರು ಬರೆದರು- ‘ವರ್ತಮಾನದಲ್ಲಿ ಮತ್ತು ಭವಿಷ್ಯದಲ್ಲಿ ನಮ್ಮ ಜನರ ಮೇಲೆ ನಡೆಯುವ ಅನ್ಯಾಯದ ವಿರುದ್ಧ ಪರಿಹಾರ ಸೂಚಿಸಲು ಮತ್ತು ಭವಿಷ್ಯತ್ತಿನಲ್ಲಿ ನಮ್ಮ ಪ್ರಗತಿ ಕುರಿತು ಮಾರ್ಗೋಪಾಯಗಳ ಕುರಿತು ಚರ್ಚಿಸಲು ಪತ್ರಿಕೆಗಿಂತ ಉತ್ತಮ ಸಂಪನ್ಮೂಲ ಮತ್ತೊಂದಿಲ್ಲ’.

ಮುಂದುವರೆದು ಅವರು ಬರೆಯುತ್ತಾರೆ- ‘ಹಿಂದೂ ಸಮಾಜವು ಏಣಿ ಅಥವಾ ಪ್ರವೇಶ ದ್ವಾರವೇ ಇಲ್ಲದ ಹಲವು ಅಂತಸ್ತುಗಳ ಗೋಪುರವಿದ್ದಂತೆ. ಕೆಳ ಅಂತಸ್ತಿನಲ್ಲಿ ಹುಟ್ಟಿದ ವ್ಯಕ್ತಿ ಅದೆಷ್ಟೇ ಯೋಗ್ಯನಾದರೂ ಮೇಲಿನ ಅಂತಸ್ತನ್ನು ಪ್ರವೇಶಿಸಲಾರ. ಮೇಲಿನ ಅಂತಸ್ತಿನಲ್ಲಿ ಹುಟ್ಟಿದ ವ್ಯಕ್ತಿ ಅದೆಷ್ಟೇ ಅಯೋಗ್ಯನಾದರೂ ಅವನನ್ನು ಕೆಳ ಅಂತಸ್ತಿಗೆ ಓಡಿಸುವುದು ಸಾಧ್ಯವಿಲ್ಲ. ಅಂತರ್ಜಾತೀಯ ಸಹಭೋಜನ ಮತ್ತು ಅಂತರ್ಜಾತೀಯ ವಿವಾಹಗಳಿಗೆ ಅವಕಾಶವಿಲ್ಲದೆ ಏರ್ಪಟ್ಟಿರುವ ಪರಕೀಯಪ್ರಜ್ಞೆಯು ಸ್ಪೃಶ್ಯ ಮತ್ತು ಅಸ್ಪೃಶ್ಯ ಭಾವನೆಗಳನ್ನು ಅದೆಷ್ಟು ಪೋಷಿಸಿಬಿಟ್ಟಿದೆಯೆಂದರೆ ಈ ಸ್ಪೃಶ್ಯ ಮತ್ತು ಅಸ್ಪೃಶ್ಯ ಜಾತಿಗಳು ಹಿಂದೂ ಸಮಾಜದ ಭಾಗವೇ ಆಗಿದ್ದರೂ, ವಾಸ್ತವದಲ್ಲಿ ಬೇರೆ ಬೇರೆಯೇ ಜಗತ್ತುಗಳಾಗಿ ಜೀವಿಸುತ್ತಿವೆ’.

‘ಬೆಕ್ಕುಗಳು ನಾಯಿಗಳು ಅಸ್ಪೃಶ್ಯರ ಎಂಜಲು ತಿನ್ನುತ್ತವೆ. ಮಕ್ಕಳ ಮಲವನ್ನೂ ತಿನ್ನುತ್ತವೆ. ಇದೇ ನಾಯಿ ಬೆಕ್ಕುಗಳು ಸ್ಪೃಶ್ಯರ ಮನೆಯನ್ನು ಪ್ರವೇಶಿಸಬಹುದು. ಹಾಗೆ ಪ್ರವೇಶಿಸಿದರೆ ಮೈಲಿಗೆಯಿಲ್ಲ. ಈ ಪ್ರಾಣಿಗಳನ್ನು ಸ್ಪೃಶ್ಯರು ಮುಟ್ಟುತ್ತಾರೆ, ಅಪ್ಪಿ ಮುದ್ದಾಡುತ್ತಾರೆ. ಅವು ಉಣ್ಣುವ ತಟ್ಟೆಗೆ ಬಾಯಿ ಹಾಕಿದರೂ ಅವರಿಗೆ ತಕರಾರಿಲ್ಲ. ಯಾವುದೋ ಚಾಕರಿಗೆಂದು ಮನೆಯ ಹೊರಗೆ ನಿಲ್ಲುವ ಅಸ್ಪೃಶ್ಯನನ್ನು ಕಂಡ ಸವರ್ಣೀಯ ಗದರುತ್ತಾನೆ- ದೂರ ನಿಲ್ಲು, ಮಗುವಿನ ಮಲವನ್ನು ಬಾಚಿ ಎಸೆಯುವ ಬೋಕಿ ಬಿಲ್ಲೆಯನ್ನು ಅಲ್ಲಿ ಇಡಲಾಗಿದೆ. ಅದನ್ನೂ ಮುಟ್ಟಿ ಮೈಲಿಗೆ ಮಾಡುತ್ತೀಯೇನು?’ ಎಂಬ ಹೃದಯವಿದ್ರಾವಕ ಸಾಲುಗಳನ್ನು ಬಾಬಾಸಾಹೇಬರು ಮೂಕನಾಯಕದ 1920ರ ಆಗಸ್ಟ್ ಸಂಚಿಕೆಯ ಸಂಪಾದಕೀಯದಲ್ಲಿ ಬರೆದಿದ್ದಾರೆ.

ಲಂಡನ್ ಸ್ಕೂಲ್ ಅಫ್ ಎಕನಾಮಿಕ್ಸ್‌ನಲ್ಲಿ ಅರ್ಧದಲ್ಲಿಯೇ ತೊರೆದು ಬಂದಿದ್ದ ತಮ್ಮ ಉನ್ನತ ವ್ಯಾಸಂಗವನ್ನು ಮುಂದುವರೆಸಲು ಬಾಬಾಸಾಹೇಬರು ಹಠಾತ್ತನೆ ಲಂಡನ್‍ಗೆ ತೆರಳಬೇಕಾಗುತ್ತದೆ. ಮೂಕನಾಯಕನ ಉಸ್ತುವಾರಿಯನ್ನು ಅಲ್ಲಿಂದಲೇ ನೋಡಿಕೊಳ್ಳುತ್ತಾರೆ. ಪತ್ರಿಕೆಯ ಹಿಂದಿನ ಚಾಲಕಶಕ್ತಿ ತಾವೇ ಆದರೂ ಸಂಪಾದಕ ಹುದ್ದೆಯಲ್ಲಿ ಅಂಬೇಡ್ಕರ್ ಇರುವುದಿಲ್ಲ. ಪಾಂಡುರಂಗ ಭಾಟ್ಕರ್ ಈ ಪತ್ರಿಕೆಯ ಮೊದಲ ಸಂಪಾದಕರು. ಧ್ಯಾನದೇವ ಘೋಲಪ್ ಎರಡನೆಯ ಸಂಪಾದಕರು. ಆರ್ಥಿಕ ಸಂಕಟ ಈ ಪತ್ರಿಕೆಯನ್ನು ನೆರಳಿನಂತೆ ಹಿಂಬಾಲಿಸಿತ್ತು. ಘೋಲಪ್ ಅವರೊಂದಿಗೆ ಭಿನ್ನಾಭಿಪ್ರಾಯದ ಕಾರಣ ಅಂಬೇಡ್ಕರ್ 1923ರಲ್ಲಿ ಈ ಪತ್ರಿಕೆಯಿಂದ ದೂರವಾದರು.

ಬಾಬಾಸಾಹೇಬರು 1920ರಲ್ಲಿ ಆರಂಭಿಸಿದ ಮೊದಲ ಪತ್ರಿಕೆ ಮೂಕನಾಯಕವಾದರೆ ಕಡೆಯ ಪತ್ರಿಕೆ ಪ್ರಬುದ್ಧ ಭಾರತ (1956ರ ಫೆಬ್ರವರಿ ನಾಲ್ಕು). ಈ ನಡುವಿನ ಅವಧಿಯಲ್ಲಿ ಬಹಿಷ್ಕೃತ ಭಾರತ (1927ರ ಏಪ್ರಿಲ್ ಮೂರು), ಸಮತಾ (1928ರ ಜೂನ್ 29), ಜನತಾ (1930ರ ನವೆಂಬರ್ 25) ಪತ್ರಿಕೆಗಳನ್ನು ಹೊರತಂದರು.

ಅಂಬೇಡ್ಕರ್ ಆರಂಭಿಸಿದ್ದ ಪತ್ರಿಕೆಗಳಿಗೆ ಹಣಬಲವಿರಲಿಲ್ಲ. ಮೂಕನಾಯಕ ಮತ್ತು ಬಹಿಷ್ಕೃತ ಭಾರತ ಮುಚ್ಚಲು ಹಣದ ಕೊರತೆಯೇ ನೇರ ಕಾರಣ. ಜಾಹೀರಾತು ಕುರಿತು ಬಾಬಾಸಾಹೇಬರು ತಳೆದಿದ್ದ ನಿಷ್ಠುರ ನಿಲುವೂ ಪತ್ರಿಕೆಗಳ ಆರ್ಥಿಕ ಬಿಕ್ಕಟ್ಟಿಗೆ ಕಾರಣವಾಗಿತ್ತು. ಅಸಮಾನತೆ ಮತ್ತು ಸಂಪ್ರದಾಯವಾದವನ್ನು ಎತ್ತಿ ಹಿಡಿದು ಮುಂದುವರೆಸುವ ಹೊಣೆಗೇಡಿ ಜಾಹೀರಾತುಗಳನ್ನು ಅವರು ತಮ್ಮ ಸಂಪಾದಕೀಯಗಳಲ್ಲಿ ತೀವ್ರವಾಗಿ ಖಂಡಿಸಿದ್ದರು. ಬಾಂಬೇ ಕ್ರಾನಿಕಲ್ ಮತ್ತು ಬಾಲ ಗಂಗಾಧರ ತಿಲಕ್ ಅವರ ಕೇಸರಿ ಸೇರಿದಂತೆ ಹಲವಾರು ರಾಷ್ಟ್ರವಾದಿ ಪತ್ರಿಕೆಗಳು ಬ್ರಾಹ್ಮಣವಾದಿ ಧಾರ್ಮಿಕ ಸಾಹಿತ್ಯವನ್ನು, ಬ್ರಾಹ್ಮಣವಾದವನ್ನು ಎತ್ತಿ ಹಿಡಿಯುವ ಚಟುವಟಿಕೆಗಳು, ಘಟನಾವಳಿಗಳು ಹಾಗೂ ಗಂಡಾಳಿಕೆಯನ್ನು ಸಮರ್ಥಿಸುವ ಜಾಹೀರಾತುಗಳನ್ನು ಪ್ರಕಟಿಸುತ್ತಿದ್ದವು. ಸಾಮಾಜಿಕವಾಗಿ ಅನೈತಿಕ ಮತ್ತು ಅಸಭ್ಯ ಜಾಹೀರಾತುಗಳನ್ನು ಪ್ರಕಟಣೆಗಿಂತ ಜಾಹೀರಾತುಗಳ ಪ್ರಕಟಣೆಯನ್ನು ನಿಲ್ಲಿಸುವುದೇ ಲೇಸು ಎಂಬುದು ಬಾಬಾಸಾಹೇಬರ ನಿಲುವಾಗಿತ್ತು.

ಸ್ವಾತಂತ್ರ್ಯ ಹೋರಾಟದ ದಿನಗಳಲ್ಲಿ ತುಳಿದಿಟ್ಟ ಜನರ ಪರವಾಗಿ ಅಸ್ಪೃಶ್ಯತೆಯ ವಿರುದ್ಧವಾಗಿ ದನಿಯೆತ್ತಿದ್ದ ಅಂಬೇಡ್ಕರ್ ಅವರನ್ನು ಅಂದಿನ ಹಿಂದೂವಾದಿ ಮಾಲೀಕತ್ವದ ಪತ್ರಿಕೆಗಳು ಭೀಮಾಸುರ, ರಾಕ್ಷಸ, ದ್ರೋಹಿ, ಬಾಡಿಗೆಯ ಬಂಟ, ಬ್ರಹ್ಮದ್ವೇಷಿ, ರಾಷ್ಟ್ರೀಯತೆಯ ವಿರೋಧಿ ಎಂದೆಲ್ಲ ಹೀಯಾಳಿಸಿದ್ದವು.
ದಲಿತ ಸಮರ್ಥನೆಯ ಆದ್ಯಪ್ರವರ್ತಕನ ಪಾತ್ರವನ್ನು ವಹಿಸಿತ್ತು ಮೂಕನಾಯಕ.


ಇದನ್ನೂ ಓದಿ: ಬಹುಜನ ಭಾರತ: ಬಾಬಾಸಾಹೇಬರು ಮನುಸ್ಮೃತಿಯನ್ನು ಸುಟ್ಟಿದ್ದು ಸುಳ್ಳೇನು?
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...