Homeಅಂಕಣಗಳುದಲಿತ ಸಮರ್ಥನೆಯ ಆದ್ಯಪ್ರವರ್ತಕನ ಪಾತ್ರವಹಿಸಿದ್ದ ಮೂಕನಾಯಕ

ದಲಿತ ಸಮರ್ಥನೆಯ ಆದ್ಯಪ್ರವರ್ತಕನ ಪಾತ್ರವಹಿಸಿದ್ದ ಮೂಕನಾಯಕ

ವರ್ತಮಾನದಲ್ಲಿ ಮತ್ತು ಭವಿಷ್ಯದಲ್ಲಿ ನಮ್ಮ ಜನರ ಮೇಲೆ ನಡೆಯುವ ಅನ್ಯಾಯದ ವಿರುದ್ಧ ಪರಿಹಾರ ಸೂಚಿಸಲು ಮತ್ತು ಭವಿಷ್ಯತ್ತಿನಲ್ಲಿ ನಮ್ಮ ಪ್ರಗತಿ ಕುರಿತು ಮಾರ್ಗೋಪಾಯಗಳ ಕುರಿತು ಚರ್ಚಿಸಲು ಪತ್ರಿಕೆಗಿಂತ ಉತ್ತಮ ಸಂಪನ್ಮೂಲ ಮತ್ತೊಂದಿಲ್ಲ.

- Advertisement -
- Advertisement -

ದಲಿತರನ್ನು ಎಚ್ಚರಿಸಿ ಸಬಲರನ್ನಾಗಿ ಮಾಡಬೇಕಿದ್ದರೆ ಅವರದೇ ಆದ ಪ್ರಕಟಣೆಗಳಿರಬೇಕು ಎಂದಿದ್ದರು ಡಾ.ಬಾಬಾಸಾಹೇಬ ಅಂಬೇಡ್ಕರ್. ಇದೇ ಉದ್ದೇಶದಿಂದ 1920ರ ಜನವರಿ 31ರಂದು ಮೂಕನಾಯಕ ಎಂಬ ಮರಾಠಿ ಪಾಕ್ಷಿಕವೊಂದನ್ನು ಆರಂಭಿಸಿದರು. ಆಗ ಅವರಿಗೆ 29ರ ಉಕ್ಕುಪ್ರಾಯ.

ಹದಿನೈದು ದಿನಗಳಿಗೊಮ್ಮೆ ಶನಿವಾರಗಳಂದು ಬಾಂಬೆಯಿಂದ ಹೊರಬೀಳುತ್ತಿತ್ತು ಮೂಕನಾಯಕ. ಅದರ ಕಚೇರಿ ಪರೇಲಿನ ಶ್ರಮಿಕವರ್ಗದ ನೆರೆಹೊರೆಯಲ್ಲಿತ್ತು. ಸಂತ ತುಕಾರಾಮನ ಚತುಷ್ಪದಿಯೊಂದರ ಸ್ಫೂರ್ತಿಯೇ ಮೂಕನಾಯಕ ಶೀರ್ಷಿಕೆಗೆ ಕಾರಣವಾಗಿತ್ತು. ಕೊಲ್ಹಾಪುರದ ಶಾಹು ಮಹಾರಾಜರು ಅಂಬೇಡ್ಕರ್ ಅವರನ್ನು ಅರಸಿಕೊಂಡು ಬಂದು ನೀಡಿದ್ದ 2,500 ರುಪಾಯಿಗಳ ದೇಣಿಗೆಯೇ ಪತ್ರಿಕೆಗೆ ದೊರೆತಿದ್ದ ಆರಂಭಿಕ ಚಾಲನೆ.

ಈ ಪ್ರಕಟಣೆಯ ಹಿಂದಿನ ತರ್ಕವನ್ನು ವಿವರಿಸಿ ಮೂಕನಾಯಕದ ಉದ್ಘಾಟನಾ ಸಂಚಿಕೆಯ ಸಂಪಾದಕೀಯದಲ್ಲಿ ಅವರು ಬರೆದರು- ‘ವರ್ತಮಾನದಲ್ಲಿ ಮತ್ತು ಭವಿಷ್ಯದಲ್ಲಿ ನಮ್ಮ ಜನರ ಮೇಲೆ ನಡೆಯುವ ಅನ್ಯಾಯದ ವಿರುದ್ಧ ಪರಿಹಾರ ಸೂಚಿಸಲು ಮತ್ತು ಭವಿಷ್ಯತ್ತಿನಲ್ಲಿ ನಮ್ಮ ಪ್ರಗತಿ ಕುರಿತು ಮಾರ್ಗೋಪಾಯಗಳ ಕುರಿತು ಚರ್ಚಿಸಲು ಪತ್ರಿಕೆಗಿಂತ ಉತ್ತಮ ಸಂಪನ್ಮೂಲ ಮತ್ತೊಂದಿಲ್ಲ’.

ಮುಂದುವರೆದು ಅವರು ಬರೆಯುತ್ತಾರೆ- ‘ಹಿಂದೂ ಸಮಾಜವು ಏಣಿ ಅಥವಾ ಪ್ರವೇಶ ದ್ವಾರವೇ ಇಲ್ಲದ ಹಲವು ಅಂತಸ್ತುಗಳ ಗೋಪುರವಿದ್ದಂತೆ. ಕೆಳ ಅಂತಸ್ತಿನಲ್ಲಿ ಹುಟ್ಟಿದ ವ್ಯಕ್ತಿ ಅದೆಷ್ಟೇ ಯೋಗ್ಯನಾದರೂ ಮೇಲಿನ ಅಂತಸ್ತನ್ನು ಪ್ರವೇಶಿಸಲಾರ. ಮೇಲಿನ ಅಂತಸ್ತಿನಲ್ಲಿ ಹುಟ್ಟಿದ ವ್ಯಕ್ತಿ ಅದೆಷ್ಟೇ ಅಯೋಗ್ಯನಾದರೂ ಅವನನ್ನು ಕೆಳ ಅಂತಸ್ತಿಗೆ ಓಡಿಸುವುದು ಸಾಧ್ಯವಿಲ್ಲ. ಅಂತರ್ಜಾತೀಯ ಸಹಭೋಜನ ಮತ್ತು ಅಂತರ್ಜಾತೀಯ ವಿವಾಹಗಳಿಗೆ ಅವಕಾಶವಿಲ್ಲದೆ ಏರ್ಪಟ್ಟಿರುವ ಪರಕೀಯಪ್ರಜ್ಞೆಯು ಸ್ಪೃಶ್ಯ ಮತ್ತು ಅಸ್ಪೃಶ್ಯ ಭಾವನೆಗಳನ್ನು ಅದೆಷ್ಟು ಪೋಷಿಸಿಬಿಟ್ಟಿದೆಯೆಂದರೆ ಈ ಸ್ಪೃಶ್ಯ ಮತ್ತು ಅಸ್ಪೃಶ್ಯ ಜಾತಿಗಳು ಹಿಂದೂ ಸಮಾಜದ ಭಾಗವೇ ಆಗಿದ್ದರೂ, ವಾಸ್ತವದಲ್ಲಿ ಬೇರೆ ಬೇರೆಯೇ ಜಗತ್ತುಗಳಾಗಿ ಜೀವಿಸುತ್ತಿವೆ’.

‘ಬೆಕ್ಕುಗಳು ನಾಯಿಗಳು ಅಸ್ಪೃಶ್ಯರ ಎಂಜಲು ತಿನ್ನುತ್ತವೆ. ಮಕ್ಕಳ ಮಲವನ್ನೂ ತಿನ್ನುತ್ತವೆ. ಇದೇ ನಾಯಿ ಬೆಕ್ಕುಗಳು ಸ್ಪೃಶ್ಯರ ಮನೆಯನ್ನು ಪ್ರವೇಶಿಸಬಹುದು. ಹಾಗೆ ಪ್ರವೇಶಿಸಿದರೆ ಮೈಲಿಗೆಯಿಲ್ಲ. ಈ ಪ್ರಾಣಿಗಳನ್ನು ಸ್ಪೃಶ್ಯರು ಮುಟ್ಟುತ್ತಾರೆ, ಅಪ್ಪಿ ಮುದ್ದಾಡುತ್ತಾರೆ. ಅವು ಉಣ್ಣುವ ತಟ್ಟೆಗೆ ಬಾಯಿ ಹಾಕಿದರೂ ಅವರಿಗೆ ತಕರಾರಿಲ್ಲ. ಯಾವುದೋ ಚಾಕರಿಗೆಂದು ಮನೆಯ ಹೊರಗೆ ನಿಲ್ಲುವ ಅಸ್ಪೃಶ್ಯನನ್ನು ಕಂಡ ಸವರ್ಣೀಯ ಗದರುತ್ತಾನೆ- ದೂರ ನಿಲ್ಲು, ಮಗುವಿನ ಮಲವನ್ನು ಬಾಚಿ ಎಸೆಯುವ ಬೋಕಿ ಬಿಲ್ಲೆಯನ್ನು ಅಲ್ಲಿ ಇಡಲಾಗಿದೆ. ಅದನ್ನೂ ಮುಟ್ಟಿ ಮೈಲಿಗೆ ಮಾಡುತ್ತೀಯೇನು?’ ಎಂಬ ಹೃದಯವಿದ್ರಾವಕ ಸಾಲುಗಳನ್ನು ಬಾಬಾಸಾಹೇಬರು ಮೂಕನಾಯಕದ 1920ರ ಆಗಸ್ಟ್ ಸಂಚಿಕೆಯ ಸಂಪಾದಕೀಯದಲ್ಲಿ ಬರೆದಿದ್ದಾರೆ.

ಲಂಡನ್ ಸ್ಕೂಲ್ ಅಫ್ ಎಕನಾಮಿಕ್ಸ್‌ನಲ್ಲಿ ಅರ್ಧದಲ್ಲಿಯೇ ತೊರೆದು ಬಂದಿದ್ದ ತಮ್ಮ ಉನ್ನತ ವ್ಯಾಸಂಗವನ್ನು ಮುಂದುವರೆಸಲು ಬಾಬಾಸಾಹೇಬರು ಹಠಾತ್ತನೆ ಲಂಡನ್‍ಗೆ ತೆರಳಬೇಕಾಗುತ್ತದೆ. ಮೂಕನಾಯಕನ ಉಸ್ತುವಾರಿಯನ್ನು ಅಲ್ಲಿಂದಲೇ ನೋಡಿಕೊಳ್ಳುತ್ತಾರೆ. ಪತ್ರಿಕೆಯ ಹಿಂದಿನ ಚಾಲಕಶಕ್ತಿ ತಾವೇ ಆದರೂ ಸಂಪಾದಕ ಹುದ್ದೆಯಲ್ಲಿ ಅಂಬೇಡ್ಕರ್ ಇರುವುದಿಲ್ಲ. ಪಾಂಡುರಂಗ ಭಾಟ್ಕರ್ ಈ ಪತ್ರಿಕೆಯ ಮೊದಲ ಸಂಪಾದಕರು. ಧ್ಯಾನದೇವ ಘೋಲಪ್ ಎರಡನೆಯ ಸಂಪಾದಕರು. ಆರ್ಥಿಕ ಸಂಕಟ ಈ ಪತ್ರಿಕೆಯನ್ನು ನೆರಳಿನಂತೆ ಹಿಂಬಾಲಿಸಿತ್ತು. ಘೋಲಪ್ ಅವರೊಂದಿಗೆ ಭಿನ್ನಾಭಿಪ್ರಾಯದ ಕಾರಣ ಅಂಬೇಡ್ಕರ್ 1923ರಲ್ಲಿ ಈ ಪತ್ರಿಕೆಯಿಂದ ದೂರವಾದರು.

ಬಾಬಾಸಾಹೇಬರು 1920ರಲ್ಲಿ ಆರಂಭಿಸಿದ ಮೊದಲ ಪತ್ರಿಕೆ ಮೂಕನಾಯಕವಾದರೆ ಕಡೆಯ ಪತ್ರಿಕೆ ಪ್ರಬುದ್ಧ ಭಾರತ (1956ರ ಫೆಬ್ರವರಿ ನಾಲ್ಕು). ಈ ನಡುವಿನ ಅವಧಿಯಲ್ಲಿ ಬಹಿಷ್ಕೃತ ಭಾರತ (1927ರ ಏಪ್ರಿಲ್ ಮೂರು), ಸಮತಾ (1928ರ ಜೂನ್ 29), ಜನತಾ (1930ರ ನವೆಂಬರ್ 25) ಪತ್ರಿಕೆಗಳನ್ನು ಹೊರತಂದರು.

ಅಂಬೇಡ್ಕರ್ ಆರಂಭಿಸಿದ್ದ ಪತ್ರಿಕೆಗಳಿಗೆ ಹಣಬಲವಿರಲಿಲ್ಲ. ಮೂಕನಾಯಕ ಮತ್ತು ಬಹಿಷ್ಕೃತ ಭಾರತ ಮುಚ್ಚಲು ಹಣದ ಕೊರತೆಯೇ ನೇರ ಕಾರಣ. ಜಾಹೀರಾತು ಕುರಿತು ಬಾಬಾಸಾಹೇಬರು ತಳೆದಿದ್ದ ನಿಷ್ಠುರ ನಿಲುವೂ ಪತ್ರಿಕೆಗಳ ಆರ್ಥಿಕ ಬಿಕ್ಕಟ್ಟಿಗೆ ಕಾರಣವಾಗಿತ್ತು. ಅಸಮಾನತೆ ಮತ್ತು ಸಂಪ್ರದಾಯವಾದವನ್ನು ಎತ್ತಿ ಹಿಡಿದು ಮುಂದುವರೆಸುವ ಹೊಣೆಗೇಡಿ ಜಾಹೀರಾತುಗಳನ್ನು ಅವರು ತಮ್ಮ ಸಂಪಾದಕೀಯಗಳಲ್ಲಿ ತೀವ್ರವಾಗಿ ಖಂಡಿಸಿದ್ದರು. ಬಾಂಬೇ ಕ್ರಾನಿಕಲ್ ಮತ್ತು ಬಾಲ ಗಂಗಾಧರ ತಿಲಕ್ ಅವರ ಕೇಸರಿ ಸೇರಿದಂತೆ ಹಲವಾರು ರಾಷ್ಟ್ರವಾದಿ ಪತ್ರಿಕೆಗಳು ಬ್ರಾಹ್ಮಣವಾದಿ ಧಾರ್ಮಿಕ ಸಾಹಿತ್ಯವನ್ನು, ಬ್ರಾಹ್ಮಣವಾದವನ್ನು ಎತ್ತಿ ಹಿಡಿಯುವ ಚಟುವಟಿಕೆಗಳು, ಘಟನಾವಳಿಗಳು ಹಾಗೂ ಗಂಡಾಳಿಕೆಯನ್ನು ಸಮರ್ಥಿಸುವ ಜಾಹೀರಾತುಗಳನ್ನು ಪ್ರಕಟಿಸುತ್ತಿದ್ದವು. ಸಾಮಾಜಿಕವಾಗಿ ಅನೈತಿಕ ಮತ್ತು ಅಸಭ್ಯ ಜಾಹೀರಾತುಗಳನ್ನು ಪ್ರಕಟಣೆಗಿಂತ ಜಾಹೀರಾತುಗಳ ಪ್ರಕಟಣೆಯನ್ನು ನಿಲ್ಲಿಸುವುದೇ ಲೇಸು ಎಂಬುದು ಬಾಬಾಸಾಹೇಬರ ನಿಲುವಾಗಿತ್ತು.

ಸ್ವಾತಂತ್ರ್ಯ ಹೋರಾಟದ ದಿನಗಳಲ್ಲಿ ತುಳಿದಿಟ್ಟ ಜನರ ಪರವಾಗಿ ಅಸ್ಪೃಶ್ಯತೆಯ ವಿರುದ್ಧವಾಗಿ ದನಿಯೆತ್ತಿದ್ದ ಅಂಬೇಡ್ಕರ್ ಅವರನ್ನು ಅಂದಿನ ಹಿಂದೂವಾದಿ ಮಾಲೀಕತ್ವದ ಪತ್ರಿಕೆಗಳು ಭೀಮಾಸುರ, ರಾಕ್ಷಸ, ದ್ರೋಹಿ, ಬಾಡಿಗೆಯ ಬಂಟ, ಬ್ರಹ್ಮದ್ವೇಷಿ, ರಾಷ್ಟ್ರೀಯತೆಯ ವಿರೋಧಿ ಎಂದೆಲ್ಲ ಹೀಯಾಳಿಸಿದ್ದವು.
ದಲಿತ ಸಮರ್ಥನೆಯ ಆದ್ಯಪ್ರವರ್ತಕನ ಪಾತ್ರವನ್ನು ವಹಿಸಿತ್ತು ಮೂಕನಾಯಕ.


ಇದನ್ನೂ ಓದಿ: ಬಹುಜನ ಭಾರತ: ಬಾಬಾಸಾಹೇಬರು ಮನುಸ್ಮೃತಿಯನ್ನು ಸುಟ್ಟಿದ್ದು ಸುಳ್ಳೇನು?
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಕಾಲ್ತುಳಿತ: ಎಂಟು ಮಹಿಳೆಯರು ಸಾವು; ಹಲವು ಮಂದಿಗೆ ಗಾಯ 

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಮಂಗಳವಾರ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಎಂಟು ಮಹಿಳೆಯರು ಸಾವನ್ನಪ್ಪಿದ್ದು, ಹಲವಾರು ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ.  ಪೂಜೆಗಾಗಿ ದೇವಾಲಯದಲ್ಲಿ ಹೆಚ್ಚಿನ ಸಂಖ್ಯೆಯ ಭಕ್ತರು ಜಮಾಯಿಸಿದಾಗ ಈ ಘಟನೆ ಸಂಭವಿಸಿದ್ದು,...

ದಲಿತ ಕ್ರೈಸ್ತರ ಎಸ್‌ಸಿ ಸ್ಥಾನಮಾನ ರದ್ದು ಆದೇಶ; ಸುಪ್ರೀಂ ಕೋರ್ಟ್ ತೀರ್ಪು ಖಂಡಿಸಿದ ಮಂದಕೃಷ್ಣ ಮಾದಿಗ

ದಲಿತರು ಕ್ರೈಸ್ತರಾದರೆ ಅವರ ಎಸ್‌ಸಿ ಸ್ಥಾನಮಾನ ರದ್ದುಗೊಳ್ಳಲಿದೆ ಎಂಬ ಸುಪ್ರೀಂ ಕೋರ್ಟ್ ತೀರ್ಪನ್ನು ಬಲವಾಗಿ ಖಂಡಿಸುತ್ತೇವೆ ಎಂದು ಎಂಆರ್‌ಪಿಎಸ್ ಫೌಂಡೇಶನ್ ಅಧ್ಯಕ್ಷ ಮಂದಕೃಷ್ಣ ಮಾದಿಗ ಹೇಳಿದರು. "ದೇಶದಲ್ಲಿ ಜಾತಿ ವ್ಯವಸ್ಥೆಯನ್ನು ನಿರ್ಮೂಲನೆ ಮಾಡಬೇಕು,...

ಜಾರ್ಖಂಡ್: ರಾಮನವಮಿ ಘರ್ಷಣೆಗೆ ಸಂಬಂಧಿಸಿದ 19 ಜನರನ್ನು ಬಂಧಿಸಿ, ಕೈಕೋಳ ಹಾಕಿ ಸಾರ್ವಜನಿಕ ಮೆರವಣಿಗೆ ಮಾಡಿದ ಪೊಲೀಸರು

ಜಾರ್ಖಂಡ್‌ನ ಗರ್ವಾ ಜಿಲ್ಲೆಯಲ್ಲಿ ರಾಮನವಮಿ ಮೆರವಣಿಗೆಯ ಸಂದರ್ಭದಲ್ಲಿ ಎರಡು ಸಮುದಾಯಗಳ ನಡುವೆ ನಡೆದ ಘರ್ಷಣೆಯ ನಂತರ ಕನಿಷ್ಠ 19 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಭದ್ರತಾ ಪಡೆಗಳನ್ನು ಭಾರೀ ಪ್ರಮಾಣದಲ್ಲಿ ನಿಯೋಜಿಸಿದ ನಂತರ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ : ಹೊಸ ಮಸೂದೆ ಅಂಗೀಕರಿಸಿದ ಇಸ್ರೇಲ್ ಸಂಸತ್ತು

ಇಸ್ರೇಲ್ ಸಂಸತ್ತು ಸೋಮವಾರ (ಮಾರ್ಚ್ 30, 2026) ಹೊಸ ಮಸೂದೆಯೊಂದನ್ನು ಅಂಗೀಕರಿಸಿದೆ. ಇದರ ಪ್ರಕಾರ, ಮಿಲಿಟರಿ ನ್ಯಾಯಾಲಯದಲ್ಲಿ ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಲಾಗಿದೆ. ಪ್ರಧಾನಿ ಬೆಂಜಮಿನ್...

ಇರಾನ್ ಮೇಲೆ ದಾಳಿ : ಅಮೆರಿಕ ವಿಮಾನಗಳಿಗೆ ತನ್ನ ವಾಯುಪ್ರದೇಶ ಮುಚ್ಚಿದ ಸ್ಪೇನ್

ಇರಾನ್ ಮೇಲಿನ ದಾಳಿಗಳಲ್ಲಿ ಭಾಗಿಯಾಗಿರುವ ಅಮೆರಿಕದ ವಿಮಾನಗಳಿಗೆ ಸ್ಪೇನ್ ತನ್ನ ವಾಯುಪ್ರದೇಶವನ್ನು ನಿರ್ಬಂಧಿಸಿದೆ ಎಂದು ರಕ್ಷಣಾ ಸಚಿವೆ ಮಾರ್ಗರಿಟಾ ರೋಬಲ್ಸ್ (ಮಾ.30) ಸೋಮವಾರ ತಿಳಿಸಿದ್ದಾರೆ. ಜಂಟಿಯಾಗಿ ನಿರ್ವಹಿಸುವ ಸೇನಾ ನೆಲೆಗಳನ್ನು ಬಳಸಲು ಈ...

ಜನಗಣತಿ-2027 : ‘ಸ್ಥಿರ’ ಲಿವ್-ಇನ್ ಜೋಡಿಗೆ ವೈವಾಹಿಕ ಸ್ಥಾನಮಾನ

ತಮ್ಮ ಸಂಬಂಧ 'ಸ್ಥಿರ' ಎಂದು ಹೇಳಿಕೊಳ್ಳುವ ಲಿವ್-ಇನ್ ಜೋಡಿಗಳನ್ನು 2027ರ ಜನಗಣತಿಯಲ್ಲಿ ವಿವಾಹಿತ ದಂಪತಿಯೆಂದು ಪರಿಗಣಿಸಲಾಗುತ್ತದೆ ಎಂದು ವರದಿಯಾಗಿದೆ. ಜನಗಣತಿ ವೆಬ್‌ಸೈಟ್‌ನ FAQ (ಪದೇ ಪದೇ ಕೇಳಲಾಗುವ ಪ್ರಶ್ನೆಗಳು) ವಿಭಾಗದಲ್ಲಿ ಈ ಬಗ್ಗೆ ಸ್ಪಷ್ಟನೆ...