Homeಅಂಕಣಗಳುದಲಿತ ಸಮರ್ಥನೆಯ ಆದ್ಯಪ್ರವರ್ತಕನ ಪಾತ್ರವಹಿಸಿದ್ದ ಮೂಕನಾಯಕ

ದಲಿತ ಸಮರ್ಥನೆಯ ಆದ್ಯಪ್ರವರ್ತಕನ ಪಾತ್ರವಹಿಸಿದ್ದ ಮೂಕನಾಯಕ

ವರ್ತಮಾನದಲ್ಲಿ ಮತ್ತು ಭವಿಷ್ಯದಲ್ಲಿ ನಮ್ಮ ಜನರ ಮೇಲೆ ನಡೆಯುವ ಅನ್ಯಾಯದ ವಿರುದ್ಧ ಪರಿಹಾರ ಸೂಚಿಸಲು ಮತ್ತು ಭವಿಷ್ಯತ್ತಿನಲ್ಲಿ ನಮ್ಮ ಪ್ರಗತಿ ಕುರಿತು ಮಾರ್ಗೋಪಾಯಗಳ ಕುರಿತು ಚರ್ಚಿಸಲು ಪತ್ರಿಕೆಗಿಂತ ಉತ್ತಮ ಸಂಪನ್ಮೂಲ ಮತ್ತೊಂದಿಲ್ಲ.

- Advertisement -
- Advertisement -

ದಲಿತರನ್ನು ಎಚ್ಚರಿಸಿ ಸಬಲರನ್ನಾಗಿ ಮಾಡಬೇಕಿದ್ದರೆ ಅವರದೇ ಆದ ಪ್ರಕಟಣೆಗಳಿರಬೇಕು ಎಂದಿದ್ದರು ಡಾ.ಬಾಬಾಸಾಹೇಬ ಅಂಬೇಡ್ಕರ್. ಇದೇ ಉದ್ದೇಶದಿಂದ 1920ರ ಜನವರಿ 31ರಂದು ಮೂಕನಾಯಕ ಎಂಬ ಮರಾಠಿ ಪಾಕ್ಷಿಕವೊಂದನ್ನು ಆರಂಭಿಸಿದರು. ಆಗ ಅವರಿಗೆ 29ರ ಉಕ್ಕುಪ್ರಾಯ.

ಹದಿನೈದು ದಿನಗಳಿಗೊಮ್ಮೆ ಶನಿವಾರಗಳಂದು ಬಾಂಬೆಯಿಂದ ಹೊರಬೀಳುತ್ತಿತ್ತು ಮೂಕನಾಯಕ. ಅದರ ಕಚೇರಿ ಪರೇಲಿನ ಶ್ರಮಿಕವರ್ಗದ ನೆರೆಹೊರೆಯಲ್ಲಿತ್ತು. ಸಂತ ತುಕಾರಾಮನ ಚತುಷ್ಪದಿಯೊಂದರ ಸ್ಫೂರ್ತಿಯೇ ಮೂಕನಾಯಕ ಶೀರ್ಷಿಕೆಗೆ ಕಾರಣವಾಗಿತ್ತು. ಕೊಲ್ಹಾಪುರದ ಶಾಹು ಮಹಾರಾಜರು ಅಂಬೇಡ್ಕರ್ ಅವರನ್ನು ಅರಸಿಕೊಂಡು ಬಂದು ನೀಡಿದ್ದ 2,500 ರುಪಾಯಿಗಳ ದೇಣಿಗೆಯೇ ಪತ್ರಿಕೆಗೆ ದೊರೆತಿದ್ದ ಆರಂಭಿಕ ಚಾಲನೆ.

ಈ ಪ್ರಕಟಣೆಯ ಹಿಂದಿನ ತರ್ಕವನ್ನು ವಿವರಿಸಿ ಮೂಕನಾಯಕದ ಉದ್ಘಾಟನಾ ಸಂಚಿಕೆಯ ಸಂಪಾದಕೀಯದಲ್ಲಿ ಅವರು ಬರೆದರು- ‘ವರ್ತಮಾನದಲ್ಲಿ ಮತ್ತು ಭವಿಷ್ಯದಲ್ಲಿ ನಮ್ಮ ಜನರ ಮೇಲೆ ನಡೆಯುವ ಅನ್ಯಾಯದ ವಿರುದ್ಧ ಪರಿಹಾರ ಸೂಚಿಸಲು ಮತ್ತು ಭವಿಷ್ಯತ್ತಿನಲ್ಲಿ ನಮ್ಮ ಪ್ರಗತಿ ಕುರಿತು ಮಾರ್ಗೋಪಾಯಗಳ ಕುರಿತು ಚರ್ಚಿಸಲು ಪತ್ರಿಕೆಗಿಂತ ಉತ್ತಮ ಸಂಪನ್ಮೂಲ ಮತ್ತೊಂದಿಲ್ಲ’.

ಮುಂದುವರೆದು ಅವರು ಬರೆಯುತ್ತಾರೆ- ‘ಹಿಂದೂ ಸಮಾಜವು ಏಣಿ ಅಥವಾ ಪ್ರವೇಶ ದ್ವಾರವೇ ಇಲ್ಲದ ಹಲವು ಅಂತಸ್ತುಗಳ ಗೋಪುರವಿದ್ದಂತೆ. ಕೆಳ ಅಂತಸ್ತಿನಲ್ಲಿ ಹುಟ್ಟಿದ ವ್ಯಕ್ತಿ ಅದೆಷ್ಟೇ ಯೋಗ್ಯನಾದರೂ ಮೇಲಿನ ಅಂತಸ್ತನ್ನು ಪ್ರವೇಶಿಸಲಾರ. ಮೇಲಿನ ಅಂತಸ್ತಿನಲ್ಲಿ ಹುಟ್ಟಿದ ವ್ಯಕ್ತಿ ಅದೆಷ್ಟೇ ಅಯೋಗ್ಯನಾದರೂ ಅವನನ್ನು ಕೆಳ ಅಂತಸ್ತಿಗೆ ಓಡಿಸುವುದು ಸಾಧ್ಯವಿಲ್ಲ. ಅಂತರ್ಜಾತೀಯ ಸಹಭೋಜನ ಮತ್ತು ಅಂತರ್ಜಾತೀಯ ವಿವಾಹಗಳಿಗೆ ಅವಕಾಶವಿಲ್ಲದೆ ಏರ್ಪಟ್ಟಿರುವ ಪರಕೀಯಪ್ರಜ್ಞೆಯು ಸ್ಪೃಶ್ಯ ಮತ್ತು ಅಸ್ಪೃಶ್ಯ ಭಾವನೆಗಳನ್ನು ಅದೆಷ್ಟು ಪೋಷಿಸಿಬಿಟ್ಟಿದೆಯೆಂದರೆ ಈ ಸ್ಪೃಶ್ಯ ಮತ್ತು ಅಸ್ಪೃಶ್ಯ ಜಾತಿಗಳು ಹಿಂದೂ ಸಮಾಜದ ಭಾಗವೇ ಆಗಿದ್ದರೂ, ವಾಸ್ತವದಲ್ಲಿ ಬೇರೆ ಬೇರೆಯೇ ಜಗತ್ತುಗಳಾಗಿ ಜೀವಿಸುತ್ತಿವೆ’.

‘ಬೆಕ್ಕುಗಳು ನಾಯಿಗಳು ಅಸ್ಪೃಶ್ಯರ ಎಂಜಲು ತಿನ್ನುತ್ತವೆ. ಮಕ್ಕಳ ಮಲವನ್ನೂ ತಿನ್ನುತ್ತವೆ. ಇದೇ ನಾಯಿ ಬೆಕ್ಕುಗಳು ಸ್ಪೃಶ್ಯರ ಮನೆಯನ್ನು ಪ್ರವೇಶಿಸಬಹುದು. ಹಾಗೆ ಪ್ರವೇಶಿಸಿದರೆ ಮೈಲಿಗೆಯಿಲ್ಲ. ಈ ಪ್ರಾಣಿಗಳನ್ನು ಸ್ಪೃಶ್ಯರು ಮುಟ್ಟುತ್ತಾರೆ, ಅಪ್ಪಿ ಮುದ್ದಾಡುತ್ತಾರೆ. ಅವು ಉಣ್ಣುವ ತಟ್ಟೆಗೆ ಬಾಯಿ ಹಾಕಿದರೂ ಅವರಿಗೆ ತಕರಾರಿಲ್ಲ. ಯಾವುದೋ ಚಾಕರಿಗೆಂದು ಮನೆಯ ಹೊರಗೆ ನಿಲ್ಲುವ ಅಸ್ಪೃಶ್ಯನನ್ನು ಕಂಡ ಸವರ್ಣೀಯ ಗದರುತ್ತಾನೆ- ದೂರ ನಿಲ್ಲು, ಮಗುವಿನ ಮಲವನ್ನು ಬಾಚಿ ಎಸೆಯುವ ಬೋಕಿ ಬಿಲ್ಲೆಯನ್ನು ಅಲ್ಲಿ ಇಡಲಾಗಿದೆ. ಅದನ್ನೂ ಮುಟ್ಟಿ ಮೈಲಿಗೆ ಮಾಡುತ್ತೀಯೇನು?’ ಎಂಬ ಹೃದಯವಿದ್ರಾವಕ ಸಾಲುಗಳನ್ನು ಬಾಬಾಸಾಹೇಬರು ಮೂಕನಾಯಕದ 1920ರ ಆಗಸ್ಟ್ ಸಂಚಿಕೆಯ ಸಂಪಾದಕೀಯದಲ್ಲಿ ಬರೆದಿದ್ದಾರೆ.

ಲಂಡನ್ ಸ್ಕೂಲ್ ಅಫ್ ಎಕನಾಮಿಕ್ಸ್‌ನಲ್ಲಿ ಅರ್ಧದಲ್ಲಿಯೇ ತೊರೆದು ಬಂದಿದ್ದ ತಮ್ಮ ಉನ್ನತ ವ್ಯಾಸಂಗವನ್ನು ಮುಂದುವರೆಸಲು ಬಾಬಾಸಾಹೇಬರು ಹಠಾತ್ತನೆ ಲಂಡನ್‍ಗೆ ತೆರಳಬೇಕಾಗುತ್ತದೆ. ಮೂಕನಾಯಕನ ಉಸ್ತುವಾರಿಯನ್ನು ಅಲ್ಲಿಂದಲೇ ನೋಡಿಕೊಳ್ಳುತ್ತಾರೆ. ಪತ್ರಿಕೆಯ ಹಿಂದಿನ ಚಾಲಕಶಕ್ತಿ ತಾವೇ ಆದರೂ ಸಂಪಾದಕ ಹುದ್ದೆಯಲ್ಲಿ ಅಂಬೇಡ್ಕರ್ ಇರುವುದಿಲ್ಲ. ಪಾಂಡುರಂಗ ಭಾಟ್ಕರ್ ಈ ಪತ್ರಿಕೆಯ ಮೊದಲ ಸಂಪಾದಕರು. ಧ್ಯಾನದೇವ ಘೋಲಪ್ ಎರಡನೆಯ ಸಂಪಾದಕರು. ಆರ್ಥಿಕ ಸಂಕಟ ಈ ಪತ್ರಿಕೆಯನ್ನು ನೆರಳಿನಂತೆ ಹಿಂಬಾಲಿಸಿತ್ತು. ಘೋಲಪ್ ಅವರೊಂದಿಗೆ ಭಿನ್ನಾಭಿಪ್ರಾಯದ ಕಾರಣ ಅಂಬೇಡ್ಕರ್ 1923ರಲ್ಲಿ ಈ ಪತ್ರಿಕೆಯಿಂದ ದೂರವಾದರು.

ಬಾಬಾಸಾಹೇಬರು 1920ರಲ್ಲಿ ಆರಂಭಿಸಿದ ಮೊದಲ ಪತ್ರಿಕೆ ಮೂಕನಾಯಕವಾದರೆ ಕಡೆಯ ಪತ್ರಿಕೆ ಪ್ರಬುದ್ಧ ಭಾರತ (1956ರ ಫೆಬ್ರವರಿ ನಾಲ್ಕು). ಈ ನಡುವಿನ ಅವಧಿಯಲ್ಲಿ ಬಹಿಷ್ಕೃತ ಭಾರತ (1927ರ ಏಪ್ರಿಲ್ ಮೂರು), ಸಮತಾ (1928ರ ಜೂನ್ 29), ಜನತಾ (1930ರ ನವೆಂಬರ್ 25) ಪತ್ರಿಕೆಗಳನ್ನು ಹೊರತಂದರು.

ಅಂಬೇಡ್ಕರ್ ಆರಂಭಿಸಿದ್ದ ಪತ್ರಿಕೆಗಳಿಗೆ ಹಣಬಲವಿರಲಿಲ್ಲ. ಮೂಕನಾಯಕ ಮತ್ತು ಬಹಿಷ್ಕೃತ ಭಾರತ ಮುಚ್ಚಲು ಹಣದ ಕೊರತೆಯೇ ನೇರ ಕಾರಣ. ಜಾಹೀರಾತು ಕುರಿತು ಬಾಬಾಸಾಹೇಬರು ತಳೆದಿದ್ದ ನಿಷ್ಠುರ ನಿಲುವೂ ಪತ್ರಿಕೆಗಳ ಆರ್ಥಿಕ ಬಿಕ್ಕಟ್ಟಿಗೆ ಕಾರಣವಾಗಿತ್ತು. ಅಸಮಾನತೆ ಮತ್ತು ಸಂಪ್ರದಾಯವಾದವನ್ನು ಎತ್ತಿ ಹಿಡಿದು ಮುಂದುವರೆಸುವ ಹೊಣೆಗೇಡಿ ಜಾಹೀರಾತುಗಳನ್ನು ಅವರು ತಮ್ಮ ಸಂಪಾದಕೀಯಗಳಲ್ಲಿ ತೀವ್ರವಾಗಿ ಖಂಡಿಸಿದ್ದರು. ಬಾಂಬೇ ಕ್ರಾನಿಕಲ್ ಮತ್ತು ಬಾಲ ಗಂಗಾಧರ ತಿಲಕ್ ಅವರ ಕೇಸರಿ ಸೇರಿದಂತೆ ಹಲವಾರು ರಾಷ್ಟ್ರವಾದಿ ಪತ್ರಿಕೆಗಳು ಬ್ರಾಹ್ಮಣವಾದಿ ಧಾರ್ಮಿಕ ಸಾಹಿತ್ಯವನ್ನು, ಬ್ರಾಹ್ಮಣವಾದವನ್ನು ಎತ್ತಿ ಹಿಡಿಯುವ ಚಟುವಟಿಕೆಗಳು, ಘಟನಾವಳಿಗಳು ಹಾಗೂ ಗಂಡಾಳಿಕೆಯನ್ನು ಸಮರ್ಥಿಸುವ ಜಾಹೀರಾತುಗಳನ್ನು ಪ್ರಕಟಿಸುತ್ತಿದ್ದವು. ಸಾಮಾಜಿಕವಾಗಿ ಅನೈತಿಕ ಮತ್ತು ಅಸಭ್ಯ ಜಾಹೀರಾತುಗಳನ್ನು ಪ್ರಕಟಣೆಗಿಂತ ಜಾಹೀರಾತುಗಳ ಪ್ರಕಟಣೆಯನ್ನು ನಿಲ್ಲಿಸುವುದೇ ಲೇಸು ಎಂಬುದು ಬಾಬಾಸಾಹೇಬರ ನಿಲುವಾಗಿತ್ತು.

ಸ್ವಾತಂತ್ರ್ಯ ಹೋರಾಟದ ದಿನಗಳಲ್ಲಿ ತುಳಿದಿಟ್ಟ ಜನರ ಪರವಾಗಿ ಅಸ್ಪೃಶ್ಯತೆಯ ವಿರುದ್ಧವಾಗಿ ದನಿಯೆತ್ತಿದ್ದ ಅಂಬೇಡ್ಕರ್ ಅವರನ್ನು ಅಂದಿನ ಹಿಂದೂವಾದಿ ಮಾಲೀಕತ್ವದ ಪತ್ರಿಕೆಗಳು ಭೀಮಾಸುರ, ರಾಕ್ಷಸ, ದ್ರೋಹಿ, ಬಾಡಿಗೆಯ ಬಂಟ, ಬ್ರಹ್ಮದ್ವೇಷಿ, ರಾಷ್ಟ್ರೀಯತೆಯ ವಿರೋಧಿ ಎಂದೆಲ್ಲ ಹೀಯಾಳಿಸಿದ್ದವು.
ದಲಿತ ಸಮರ್ಥನೆಯ ಆದ್ಯಪ್ರವರ್ತಕನ ಪಾತ್ರವನ್ನು ವಹಿಸಿತ್ತು ಮೂಕನಾಯಕ.


ಇದನ್ನೂ ಓದಿ: ಬಹುಜನ ಭಾರತ: ಬಾಬಾಸಾಹೇಬರು ಮನುಸ್ಮೃತಿಯನ್ನು ಸುಟ್ಟಿದ್ದು ಸುಳ್ಳೇನು?
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...