Homeನಿಜವೋ ಸುಳ್ಳೋFact check: ಮುಂಬೈ ರೈಲ್ವೇ ನಿಲ್ದಾಣದಲ್ಲಿ ವಲಸಿಗರು ಸೇರಲು ಮಸೀದಿ ಕಾರಣವೇ? ಎಬಿಪಿ ಸುದ್ದಿ ಮಾಡಿದ್ದೇನು?

Fact check: ಮುಂಬೈ ರೈಲ್ವೇ ನಿಲ್ದಾಣದಲ್ಲಿ ವಲಸಿಗರು ಸೇರಲು ಮಸೀದಿ ಕಾರಣವೇ? ಎಬಿಪಿ ಸುದ್ದಿ ಮಾಡಿದ್ದೇನು?

- Advertisement -
- Advertisement -

ಏಪ್ರಿಲ್ 14 ರಂದು, ಮುಂಬೈನ ಬಾಂದ್ರಾ ರೈಲ್ವೆ ನಿಲ್ದಾಣದ ಬಳಿ ಭಾರಿ ಸಂಖ್ಯೆಯಲ್ಲಿ ವಲಸಿಗರು ಜಮಾಯಿಸಿದ್ದರು. ತಮ್ಮ ಊರಿಗೆ ತೆರಳಲು ಸೇರಿದ್ದ ಆ ಜನರನ್ನು ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್‌ ಮಾಡಿದ್ದ ಸುದ್ದಿ ಮಾಧ್ಯಮಗಳಲ್ಲಿ ದಿನವಿಡೀ ಪ್ರಸಾರವಾಯಿತು.

ಮುಂಬೈನ ಬಾಂದ್ರದಲ್ಲಿ ವಲಸೆ ಕಾರ್ಮಿಕರು ತಮ್ಮೂರಿಗೆ ತೆರಳಲು ಬಂದಾಗ ಪೊಲೀಸರು ಲಾಠ ಪ್ರಹಾರ ನಡೆಸಿದ್ದಾರೆ. ಮೂರು ವಾರ ಲಾಕ್ ಡೌನ್ ಸಹಿಸಿದ ಅವರು ಮತ್ತೆ 19 ದಿನ ಸಾಧ್ಯವಿಲ್ಲವೆಂದು ಊರಿಗೆ ತೆರಳಲು ಮುಂದಾಗಿದ್ದರು.

Posted by Naanu Gauri on Tuesday, April 14, 2020

ಈ ಕುರಿತು ವದಂತಿ ಹಬ್ಬಿಸಿ ಜನರಿಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಮರಾಠಿ ಸುದ್ದಿ ಚಾನೆಲ್ ಎಬಿಪಿ ಮಜಾ ವರದಿಗಾರ ರಾಹುಲ್ ಕುಲಕರ್ಣಿ ಸೇರಿದಂತೆ ಇತರ 11 ಜನರನ್ನು ಮುಂಬೈ ಪೊಲೀಸರು ಬಂಧಿಸಿದ್ದರು. ವಲಸಿಗರನ್ನು ಮನೆಗೆ ಹಿಂದಿರುಗಿಸಲು ವಿಶೇಷ ರೈಲುಗಳು ಇದೆ ಎಂದು ಈ ವರದಿಗಾರರು ಸುದ್ದಿ ಪ್ರಸಾರ ಮಾಡಿದ್ದರು. ಆದರೆ ಎಬಿಪಿ ಚಾನೆಲ್ ತಮ್ಮ ವರದಿಗಾರನನ್ನು ಸಮರ್ಥಿಸಿಕೊಂಡಿದೆ. ಪತ್ರಕರ್ತನನ್ನು ಬಂಧಿಸುವ ಮೊದಲು ಸತ್ಯ ಮತ್ತು ಸನ್ನಿವೇಶಗಳ ಸರಿಯಾದ ಪರಿಶೀಲನೆ ಇರಬೇಕು ಎಂದು ಹೇಳಿಕೊಂಡಿದೆ. ನಂತರ ಮುಂಬೈನ ನ್ಯಾಯಾಲಯವು ಅವರಿಗೆ ಜಾಮೀನು ನೀಡಿತು.

ಎಬಿಪಿ ಗ್ರೂಪ್‌ನ ಹಿಂದಿ ಚಾನೆಲ್ ಆದ ಎಬಿಪಿ ನ್ಯೂಸ್ ಸಹ ದೃಶ್ಯಗಳನ್ನು ಪ್ರಸಾರ ಮಾಡಿತ್ತು. ಇಷ್ಟು ದೊಡ್ಡ ಸಂಖ್ಯೆಯಲ್ಲಿ ವಲಸೆ ಕಾರ್ಮಿಕರು ನಿಲ್ದಾಣದ ಹೊರಗೆ ಹೇಗೆ ಸೇರಿದರು ಎಂಬ ಪ್ರಶ್ನೆಯನ್ನು ಹುಟ್ಟುಹಾಕಿ, ಇದನ್ನ “ಪಿತೂರಿ” ಎಂದು ಕರೆದು ಘಟನೆಗೆ ಧಾರ್ಮಿಕ ಕಾರಣವಿದೆಯೆಂದು ಸೂಚಿಸಿತು.

ಕೆಳಗಿನ ವೀಡಿಯೊದಲ್ಲಿ, ನಿರೂಪಕಿ ಶೋಭನಾ ಯಾದವ್, “ಎಬಿಪಿ ನ್ಯೂಸ್ ಇದರ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕುತ್ತಿದೆ. ಜನರನ್ನು ಒಟ್ಟುಗೂಡಿಸಲು ಮಸೀದಿಯಿಂದ ಪ್ರಚೋದಿಸಲಾಗಿದೆಯೇ? ಎಂಬುವುದು ದೊಡ್ಡ ಪ್ರಶ್ನೆ. ಮುಸ್ಲಿಂ ನಾಯಕರು ಭಾಷಣ ಮಾಡುವ ಮೂಲಕ ಜನರನ್ನು ಕೆರಳಿಸಿ ಜನಸಮೂಹವನ್ನು ಒಟ್ಟುಗೂಡಿಸಿದ್ದಾರೆಯೇ? ಈ ಜನಸಮೂಹ ನೆರೆಯಲು ಜಮಾ ಮಸೀದಿ ಕಾರಣವೇ? ಮಸೀದಿಯಿಂದ ಸಾವಿರಾರು ಜನರನ್ನು ಒಟ್ಟುಗೂಡಿಸಲಾಗಿದೆ. ಈ ಜನಸಮೂಹವನ್ನು ವಾಟ್ಸಾಪ್ ಸಂದೇಶ ಅಥವಾ ಫೋನ್ ಕರೆಯೊಂದಿಗೆ ಒಟ್ಟುಗೂಡಿಸಲಾಗಿದೆಯೇ? ಮುಂಬೈ ಪೊಲೀಸರು ಏಕೆ ನಿದ್ದೆ ಮಾಡುತ್ತಿದ್ದರು? ಅವರ ಬುದ್ಧಿಮತ್ತೆ ಏನು ಮಾಡಿದೆ? ” ಎಂದು ಹೇಳುತ್ತಿದ್ದಾರೆ.

ಎಬಿಪಿ ನ್ಯೂಸ್ ಎತ್ತಿದ ಐದು ಪ್ರಶ್ನೆಗಳು ಹೀಗಿವೆ:

ಜನರನ್ನು ಒಟ್ಟುಗೂಡಿಸಲು ಮಸೀದಿಯಿಂದ ಪ್ರಚೋದಿಸಲಾಗಿದೆಯೇ?
ಮುಸ್ಲಿಂ ನಾಯಕರು ನೀಡಿದ ಭಾಷಣವು ಜನರನ್ನು ಒಟ್ಟುಗೂಡಿಸಲು ಪ್ರೇರೇಪಿಸಿತೆ?
ಈ ಜನಸಮೂಹಕ್ಕೆ ಜಮಾ ಮಸೀದಿ ಕಾರಣವೇ?
ಈ ಗುಂಪನ್ನು ವಾಟ್ಸಾಪ್ ಅಥವಾ ಫೋನ್ ಕರೆಗಳ ಮೂಲಕ ಕಳುಹಿಸಿದ ಸಂದೇಶಗಳೊಂದಿಗೆ ಒಟ್ಟುಗೂಡಿಸಲಾಗಿದೆಯೇ?
ಮುಂಬೈ ಪೊಲೀಸರು ಮಲಗಿದ್ದಾರೆಯೇ?
ಪ್ರಸಾರದ ಸಮಯದಲ್ಲಿ ಪರದೆಯಲ್ಲಿ ಮುಖ್ಯವಾಗಿ “ಜನ ಗುಂಪುಗೂಡಲು ಜಮಾ ಮಸೀದಿ ಜವಾಬ್ದಾರಿ?” ಎಂದು ಓಡುತ್ತಿತ್ತು.

ಶೋಭನಾ ಯಾದವ್ ವಿಡಿಯೋದಲ್ಲಿ ಮುಂದುವರೆದು ಚಾನೆಲ್ ವರದಿಗಾರರಾದ ಅಜಯ್ ದುಬೆಗೆ , “ಅಜಯ್ ದುಬೆ, ಎಬಿಪಿ ನ್ಯೂಸ್ ದೊಡ್ಡ ಪ್ರಶ್ನೆಗಳನ್ನು ಎತ್ತುತ್ತಿದೆ. ನಿಮ್ಮ ಮಾಹಿತಿ ಏನು ಹೇಳುತ್ತಿದೆ, ಮಸೀದಿಯ ಜನರು ಇಲ್ಲಿಗೆ ಸೇರಲು ಅವರನ್ನು ಪ್ರಚೋದಿಸಿದ್ದಾರೆಯೇ? ” ಎಂದು ಕೇಳಿದ್ದಾರೆ.

ಆದರೆ ವರದಿಗಾರ ಪ್ರಶ್ನೆಯನ್ನು ತಪ್ಪಿಸಿ, “ಪೊಲೀಸರು ಈ ವಿಷಯವನ್ನು ತನಿಖೆ ಮಾಡುತ್ತಾರೆ. ಮುಖ್ಯವಾಗಿ ಈಗಾಗಲೇ ಪೊಲೀಸರು ಜನಸಮೂಹವನ್ನು ಚದುರಿಸಿದ್ದಾರೆ. ಆದಾಗ್ಯೂ, ಯಾವುದೇ ಯೋಜನೆ ಇಲ್ಲದೆ ಜನಸಮೂಹವು ಸ್ಥಳದಲ್ಲಿ ನೆರೆದಿದೆ ಎಂದು ನಂಬುವುದು ಕಷ್ಟ” ಎಂದು ದುಬೆ ಹೇಳಿದರು. ಪ್ರಸಾರದ ಈ ಸಮಯದಲ್ಲೂ, ಮಸೀದಿಯ ಬಳಿ ಜನಸಮೂಹ ಜಮಾಯಿಸಿದ್ದ ‘ಪಾಯಿಂಟ್’ ಅನ್ನು ಚಾನೆಲ್ ಎತ್ತಿ ತೋರಿಸುತ್ತಲೇ ಇತ್ತು.

ಎಬಿಪಿ ನ್ಯೂಸ್ v/s ಎಬಿಪಿ ನಿರೂಪಕಿ ರುಬಿಕಾ ಲಿಯಾಕತ್

ನಂತರದ ದಿನಗಳಲ್ಲಿ, ಎಬಿಪಿ ನ್ಯೂಸ್ ಪತ್ರಕರ್ತೆ ರುಬಿಕಾ ಲಿಯಾಕತ್ ಎಬಿಪಿ ನ್ಯೂಸ್‌ನ ಅಧಿಕೃತ ಫೇಸ್‌ಬುಕ್ ಪುಟದಿಂದ ಫೇಸ್‌ಬುಕ್ ಲೈವ್ ಮಾಡಿ, ಮುಸ್ಲಿಂ ಸಮುದಾಯದ ಜನರು ನಿಲ್ದಾಣದಲ್ಲಿ ಜಮಾಯಿಸಿದ್ದಾರೆ ಎಂಬ ವದಂತಿಯ ಬಗ್ಗೆ ಮಾತನಾಡಿದ್ದಾರೆ. ಅವರು ಹೇಳಿದ ಪ್ರಕಾರ, “ಮುಸ್ಲಿಂ ಜನರು ಅಲ್ಲಿ ಒಟ್ಟುಗೂಡಿದ್ದರು ಎಂದು ಹೇಳುತ್ತಿರುವ ಜನರು ಸುಳ್ಳುಗಾರರು ಎಂಬುದನ್ನು ನಾನು ಅದನ್ನು ನಿಮಗೆ ಸ್ಪಷ್ಟಪಡಿಸುತ್ತೇನೆ. ಇದು ಮಸೀದಿಯವರು ಸೇರಿಸಿದ ಜನರ ಗುಂಪು ಅಲ್ಲ ಎಂದು ಸ್ಪಷ್ಟ ಪಡಿಸುತ್ತೇನೆ. ಇದು ನಿಜವಾಗಿಯು ಮುಂದೆ ಏನು ಮಾಡಬೇಕೆಂದು ತಿಳಿಯದೆ ತೊಂದರೆಗೀಡಾದ ವಲಸಿಗರ ಸಮಸ್ಯೆಯಾಗಿದೆ. ” ಎಂದು ಹೇಳಿದ್ದಾರೆ.

Bandra की भीड़ किसने जुटायी? साज़िश या लापरवाही? Live session with Rubika

Posted by ABP News on Tuesday, April 14, 2020

ಫ್ಯಾಕ್ಟ್-ಚೆಕ್‌

ಈ ಬಗ್ಗೆ ಫ್ಯಾಕ್ಟ್ ಚೆಕ್ ನಡೆಸಿದ “ಭೂಮ್ ಲೈವ್” ಪೊಲೀಸರನ್ನು ಸಂಪರ್ಕಿಸಿದೆ. ವಲಸಿಗ ಕಾರ್ಮಿಕರು ಈ ರೀತಿಯಾಗಿ ಸೇರಿರುವುದಕ್ಕೆ ಯಾವುದೇ ಕೋಮು ದೃಷ್ಟಿಕೋನ ಇಲ್ಲ ಎಂದು ಮುಂಬೈ ಪೊಲೀಸರು ಸ್ಪಷ್ಟಪಡಿಸಿದ್ದಾರೆ ಎಂದು ವರದಿ ಮಾಡಿದೆ.

ಅಲ್ಲಿಗೆ ವಲಸೆ ಕಾರ್ಮಿಕರು ಬಾಂದ್ರಾ ನಿಲ್ದಾಣದಲ್ಲಿ ಸೇರುವುದಕ್ಕೆ ಯಾವುದೇ ಮುಸ್ಲಿಮರು ಅಥವಾ ಮಸೀದಿ ಕಾರಣವಲ್ಲ ಎಂಬುದು ಸ್ಪಷ್ಟವಾಗಿದೆ. ಬದಲಿಗೆ ಎಬಿಪಿ ನ್ಯೂಸ್‌ ಸೇರಿದಂತೆ ಹಲವು ಟಿವಿ ಚಾನೆಲ್‌ಗಳು ವಲಸೆ ಕಾರ್ಮಿಕರಿಗೆ ವಿಶೇಷ ರೈಲುವ್ಯವಸ್ಥೆ ಮಾಡಲಾಗಿದೆ ಎಂಬ ಸುಳ್ಳು ಸುದ್ದಿ ಪ್ರಸಾರ ಮಾಡಿದ್ದರಿಂದ ಜನರು ಒಟ್ಟುಗೂಡಿದ್ದಾರೆ ಎಂಬು ತಿಳಿದುಬಂದಿದೆ.

ಇಡೀ ಘಟನೆಯ ಬಗ್ಗೆ ಎಬಿಪಿ ನ್ಯೂಸ್‌ನ ಎರಡು ವೀಡಿಯೊಗಳೆ ಚಾನೆಲ್‌ನಲ್ಲಿ ಇರುವ ದ್ವಂದ್ವವನ್ನು ತೋರಿಸುತ್ತದೆ. ಘಟನೆಯನ್ನು ಕೋಮು ದೃಷ್ಟಿಕೋನ ನೀಡುವುದರೊಂದಿಗೆ, ಮಸೀದಿಯ ವಿರುದ್ಧ “ದೊಡ್ಡ ಪ್ರಶ್ನೆಗಳನ್ನು” ಹುಟ್ಟುಹಾಕಿ ಕಡೆಗೆ ಅದನ್ನು ವದಂತಿಗಳೆಂದು ಸಂಪೂರ್ಣವಾಗಿ ತಳ್ಳಿಹಾಕುವವರೆಗೆ ಎಲ್ಲಾ ಪಾತ್ರವನ್ನು ತಾನೇ ನಿರ್ವಹಿಸುತ್ತದೆ. ಎಬಿಪಿ ಮಜಾ ವಿರುದ್ಧ ವದಂತಿಗಳ ಆರೋಪಗಳು ತನಿಖೆಯ ವಿಷಯವಾಗಿದ್ದರೂ, ಎಬಿಪಿ ಗ್ರೂಪ್‌ನ ಹಿಂದಿ ಚಾನೆಲ್ ಎಬಿಪಿ ನ್ಯೂಸ್ ಕೋಮು ಆಧಾರಿತ ನಿರೂಪಣೆಯನ್ನು ನೀಡಿದ್ದಕ್ಕಾಗಿ ಹಾಗೂ ಘಟನೆಗೆ ಅಲ್ಪಸಂಖ್ಯಾತ ಸಮುದಾಯ ಕಾರಣವೆಂದು ದೂಷಿಸಿದ್ದಕ್ಕಾಗಿ ಖಂಡಿತವಾಗಿಯೂ ಶಿಕ್ಷಿಸಬೇಕಾಗಿದೆ.

ಮಾರ್ಚ್ ನಲ್ಲಿ ದೆಹಲಿಯ ಧಾರ್ಮಿಕ ಸಭೆಯೊಂದರಲ್ಲಿ ಭಾಗವಹಿಸಿದ ಹೆಚ್ಚಿನ ಸಂಖ್ಯೆಯ ಜನರಿಗೆ COVID-19 ಇರುವುದು ಪತ್ತೆಯಾದ ನಂತರ ಭಾರತದ ಮುಖ್ಯವಾಹಿನಿಯ ಮಾಧ್ಯಮಗಳು, ಕೊರೊನಾ ವೈರಸ್ ಹರಡುವಿಕೆಯನ್ನು ಕೋಮುವಾದೀಕರಣಗೊಳಿಸುವಲ್ಲಿ ಸಕ್ರಿಯವಾಗಿ ಭಾಗವಹಿಸಿವೆ. ಸಭೆಯನ್ನು ಹಾಟ್‌ಸ್ಪಾಟ್‌ ಎಂದು ಗುರುತಿಸಲಾಗಿರುವುದರಿಂದ, ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳಕ್ಕಾಗಿ ಚಾನೆಲ್‌ಗಳು ಮುಸ್ಲಿಂ ಸಮುದಾಯವನ್ನು ಸಂಪೂರ್ಣವಾಗಿ ಗುರಿಯಾಗಿರಿಸಿಕೊಂಡಿರುವುದು ಮಾತ್ರವಲ್ಲದೆ ಹಲವಾರು ಸುಳ್ಳು ಸುದ್ದಿಯನ್ನು ಹರಡಿದೆ.


ಇದನ್ನೂ ಓದಿ: ಇಡೀ ಪ್ರಪಂಚ ಎದುರಿಸುವಷ್ಟು ಕೊರೊನಾವನ್ನು ಭಾರತವೊಂದೇ ಎದುರಿಸುತ್ತಿದೆ ಎಂಬುದು ನಿಜವೇ? ಈ ನಕ್ಷೆ ಯಾವಾಗಿನದು? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...