Homeನಿಜವೋ ಸುಳ್ಳೋFact check: ಮುಂಬೈ ರೈಲ್ವೇ ನಿಲ್ದಾಣದಲ್ಲಿ ವಲಸಿಗರು ಸೇರಲು ಮಸೀದಿ ಕಾರಣವೇ? ಎಬಿಪಿ ಸುದ್ದಿ ಮಾಡಿದ್ದೇನು?

Fact check: ಮುಂಬೈ ರೈಲ್ವೇ ನಿಲ್ದಾಣದಲ್ಲಿ ವಲಸಿಗರು ಸೇರಲು ಮಸೀದಿ ಕಾರಣವೇ? ಎಬಿಪಿ ಸುದ್ದಿ ಮಾಡಿದ್ದೇನು?

- Advertisement -
- Advertisement -

ಏಪ್ರಿಲ್ 14 ರಂದು, ಮುಂಬೈನ ಬಾಂದ್ರಾ ರೈಲ್ವೆ ನಿಲ್ದಾಣದ ಬಳಿ ಭಾರಿ ಸಂಖ್ಯೆಯಲ್ಲಿ ವಲಸಿಗರು ಜಮಾಯಿಸಿದ್ದರು. ತಮ್ಮ ಊರಿಗೆ ತೆರಳಲು ಸೇರಿದ್ದ ಆ ಜನರನ್ನು ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್‌ ಮಾಡಿದ್ದ ಸುದ್ದಿ ಮಾಧ್ಯಮಗಳಲ್ಲಿ ದಿನವಿಡೀ ಪ್ರಸಾರವಾಯಿತು.

ಮುಂಬೈನ ಬಾಂದ್ರದಲ್ಲಿ ವಲಸೆ ಕಾರ್ಮಿಕರು ತಮ್ಮೂರಿಗೆ ತೆರಳಲು ಬಂದಾಗ ಪೊಲೀಸರು ಲಾಠ ಪ್ರಹಾರ ನಡೆಸಿದ್ದಾರೆ. ಮೂರು ವಾರ ಲಾಕ್ ಡೌನ್ ಸಹಿಸಿದ ಅವರು ಮತ್ತೆ 19 ದಿನ ಸಾಧ್ಯವಿಲ್ಲವೆಂದು ಊರಿಗೆ ತೆರಳಲು ಮುಂದಾಗಿದ್ದರು.

Posted by Naanu Gauri on Tuesday, April 14, 2020

ಈ ಕುರಿತು ವದಂತಿ ಹಬ್ಬಿಸಿ ಜನರಿಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಮರಾಠಿ ಸುದ್ದಿ ಚಾನೆಲ್ ಎಬಿಪಿ ಮಜಾ ವರದಿಗಾರ ರಾಹುಲ್ ಕುಲಕರ್ಣಿ ಸೇರಿದಂತೆ ಇತರ 11 ಜನರನ್ನು ಮುಂಬೈ ಪೊಲೀಸರು ಬಂಧಿಸಿದ್ದರು. ವಲಸಿಗರನ್ನು ಮನೆಗೆ ಹಿಂದಿರುಗಿಸಲು ವಿಶೇಷ ರೈಲುಗಳು ಇದೆ ಎಂದು ಈ ವರದಿಗಾರರು ಸುದ್ದಿ ಪ್ರಸಾರ ಮಾಡಿದ್ದರು. ಆದರೆ ಎಬಿಪಿ ಚಾನೆಲ್ ತಮ್ಮ ವರದಿಗಾರನನ್ನು ಸಮರ್ಥಿಸಿಕೊಂಡಿದೆ. ಪತ್ರಕರ್ತನನ್ನು ಬಂಧಿಸುವ ಮೊದಲು ಸತ್ಯ ಮತ್ತು ಸನ್ನಿವೇಶಗಳ ಸರಿಯಾದ ಪರಿಶೀಲನೆ ಇರಬೇಕು ಎಂದು ಹೇಳಿಕೊಂಡಿದೆ. ನಂತರ ಮುಂಬೈನ ನ್ಯಾಯಾಲಯವು ಅವರಿಗೆ ಜಾಮೀನು ನೀಡಿತು.

ಎಬಿಪಿ ಗ್ರೂಪ್‌ನ ಹಿಂದಿ ಚಾನೆಲ್ ಆದ ಎಬಿಪಿ ನ್ಯೂಸ್ ಸಹ ದೃಶ್ಯಗಳನ್ನು ಪ್ರಸಾರ ಮಾಡಿತ್ತು. ಇಷ್ಟು ದೊಡ್ಡ ಸಂಖ್ಯೆಯಲ್ಲಿ ವಲಸೆ ಕಾರ್ಮಿಕರು ನಿಲ್ದಾಣದ ಹೊರಗೆ ಹೇಗೆ ಸೇರಿದರು ಎಂಬ ಪ್ರಶ್ನೆಯನ್ನು ಹುಟ್ಟುಹಾಕಿ, ಇದನ್ನ “ಪಿತೂರಿ” ಎಂದು ಕರೆದು ಘಟನೆಗೆ ಧಾರ್ಮಿಕ ಕಾರಣವಿದೆಯೆಂದು ಸೂಚಿಸಿತು.

ಕೆಳಗಿನ ವೀಡಿಯೊದಲ್ಲಿ, ನಿರೂಪಕಿ ಶೋಭನಾ ಯಾದವ್, “ಎಬಿಪಿ ನ್ಯೂಸ್ ಇದರ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕುತ್ತಿದೆ. ಜನರನ್ನು ಒಟ್ಟುಗೂಡಿಸಲು ಮಸೀದಿಯಿಂದ ಪ್ರಚೋದಿಸಲಾಗಿದೆಯೇ? ಎಂಬುವುದು ದೊಡ್ಡ ಪ್ರಶ್ನೆ. ಮುಸ್ಲಿಂ ನಾಯಕರು ಭಾಷಣ ಮಾಡುವ ಮೂಲಕ ಜನರನ್ನು ಕೆರಳಿಸಿ ಜನಸಮೂಹವನ್ನು ಒಟ್ಟುಗೂಡಿಸಿದ್ದಾರೆಯೇ? ಈ ಜನಸಮೂಹ ನೆರೆಯಲು ಜಮಾ ಮಸೀದಿ ಕಾರಣವೇ? ಮಸೀದಿಯಿಂದ ಸಾವಿರಾರು ಜನರನ್ನು ಒಟ್ಟುಗೂಡಿಸಲಾಗಿದೆ. ಈ ಜನಸಮೂಹವನ್ನು ವಾಟ್ಸಾಪ್ ಸಂದೇಶ ಅಥವಾ ಫೋನ್ ಕರೆಯೊಂದಿಗೆ ಒಟ್ಟುಗೂಡಿಸಲಾಗಿದೆಯೇ? ಮುಂಬೈ ಪೊಲೀಸರು ಏಕೆ ನಿದ್ದೆ ಮಾಡುತ್ತಿದ್ದರು? ಅವರ ಬುದ್ಧಿಮತ್ತೆ ಏನು ಮಾಡಿದೆ? ” ಎಂದು ಹೇಳುತ್ತಿದ್ದಾರೆ.

ಎಬಿಪಿ ನ್ಯೂಸ್ ಎತ್ತಿದ ಐದು ಪ್ರಶ್ನೆಗಳು ಹೀಗಿವೆ:

ಜನರನ್ನು ಒಟ್ಟುಗೂಡಿಸಲು ಮಸೀದಿಯಿಂದ ಪ್ರಚೋದಿಸಲಾಗಿದೆಯೇ?
ಮುಸ್ಲಿಂ ನಾಯಕರು ನೀಡಿದ ಭಾಷಣವು ಜನರನ್ನು ಒಟ್ಟುಗೂಡಿಸಲು ಪ್ರೇರೇಪಿಸಿತೆ?
ಈ ಜನಸಮೂಹಕ್ಕೆ ಜಮಾ ಮಸೀದಿ ಕಾರಣವೇ?
ಈ ಗುಂಪನ್ನು ವಾಟ್ಸಾಪ್ ಅಥವಾ ಫೋನ್ ಕರೆಗಳ ಮೂಲಕ ಕಳುಹಿಸಿದ ಸಂದೇಶಗಳೊಂದಿಗೆ ಒಟ್ಟುಗೂಡಿಸಲಾಗಿದೆಯೇ?
ಮುಂಬೈ ಪೊಲೀಸರು ಮಲಗಿದ್ದಾರೆಯೇ?
ಪ್ರಸಾರದ ಸಮಯದಲ್ಲಿ ಪರದೆಯಲ್ಲಿ ಮುಖ್ಯವಾಗಿ “ಜನ ಗುಂಪುಗೂಡಲು ಜಮಾ ಮಸೀದಿ ಜವಾಬ್ದಾರಿ?” ಎಂದು ಓಡುತ್ತಿತ್ತು.

ಶೋಭನಾ ಯಾದವ್ ವಿಡಿಯೋದಲ್ಲಿ ಮುಂದುವರೆದು ಚಾನೆಲ್ ವರದಿಗಾರರಾದ ಅಜಯ್ ದುಬೆಗೆ , “ಅಜಯ್ ದುಬೆ, ಎಬಿಪಿ ನ್ಯೂಸ್ ದೊಡ್ಡ ಪ್ರಶ್ನೆಗಳನ್ನು ಎತ್ತುತ್ತಿದೆ. ನಿಮ್ಮ ಮಾಹಿತಿ ಏನು ಹೇಳುತ್ತಿದೆ, ಮಸೀದಿಯ ಜನರು ಇಲ್ಲಿಗೆ ಸೇರಲು ಅವರನ್ನು ಪ್ರಚೋದಿಸಿದ್ದಾರೆಯೇ? ” ಎಂದು ಕೇಳಿದ್ದಾರೆ.

ಆದರೆ ವರದಿಗಾರ ಪ್ರಶ್ನೆಯನ್ನು ತಪ್ಪಿಸಿ, “ಪೊಲೀಸರು ಈ ವಿಷಯವನ್ನು ತನಿಖೆ ಮಾಡುತ್ತಾರೆ. ಮುಖ್ಯವಾಗಿ ಈಗಾಗಲೇ ಪೊಲೀಸರು ಜನಸಮೂಹವನ್ನು ಚದುರಿಸಿದ್ದಾರೆ. ಆದಾಗ್ಯೂ, ಯಾವುದೇ ಯೋಜನೆ ಇಲ್ಲದೆ ಜನಸಮೂಹವು ಸ್ಥಳದಲ್ಲಿ ನೆರೆದಿದೆ ಎಂದು ನಂಬುವುದು ಕಷ್ಟ” ಎಂದು ದುಬೆ ಹೇಳಿದರು. ಪ್ರಸಾರದ ಈ ಸಮಯದಲ್ಲೂ, ಮಸೀದಿಯ ಬಳಿ ಜನಸಮೂಹ ಜಮಾಯಿಸಿದ್ದ ‘ಪಾಯಿಂಟ್’ ಅನ್ನು ಚಾನೆಲ್ ಎತ್ತಿ ತೋರಿಸುತ್ತಲೇ ಇತ್ತು.

ಎಬಿಪಿ ನ್ಯೂಸ್ v/s ಎಬಿಪಿ ನಿರೂಪಕಿ ರುಬಿಕಾ ಲಿಯಾಕತ್

ನಂತರದ ದಿನಗಳಲ್ಲಿ, ಎಬಿಪಿ ನ್ಯೂಸ್ ಪತ್ರಕರ್ತೆ ರುಬಿಕಾ ಲಿಯಾಕತ್ ಎಬಿಪಿ ನ್ಯೂಸ್‌ನ ಅಧಿಕೃತ ಫೇಸ್‌ಬುಕ್ ಪುಟದಿಂದ ಫೇಸ್‌ಬುಕ್ ಲೈವ್ ಮಾಡಿ, ಮುಸ್ಲಿಂ ಸಮುದಾಯದ ಜನರು ನಿಲ್ದಾಣದಲ್ಲಿ ಜಮಾಯಿಸಿದ್ದಾರೆ ಎಂಬ ವದಂತಿಯ ಬಗ್ಗೆ ಮಾತನಾಡಿದ್ದಾರೆ. ಅವರು ಹೇಳಿದ ಪ್ರಕಾರ, “ಮುಸ್ಲಿಂ ಜನರು ಅಲ್ಲಿ ಒಟ್ಟುಗೂಡಿದ್ದರು ಎಂದು ಹೇಳುತ್ತಿರುವ ಜನರು ಸುಳ್ಳುಗಾರರು ಎಂಬುದನ್ನು ನಾನು ಅದನ್ನು ನಿಮಗೆ ಸ್ಪಷ್ಟಪಡಿಸುತ್ತೇನೆ. ಇದು ಮಸೀದಿಯವರು ಸೇರಿಸಿದ ಜನರ ಗುಂಪು ಅಲ್ಲ ಎಂದು ಸ್ಪಷ್ಟ ಪಡಿಸುತ್ತೇನೆ. ಇದು ನಿಜವಾಗಿಯು ಮುಂದೆ ಏನು ಮಾಡಬೇಕೆಂದು ತಿಳಿಯದೆ ತೊಂದರೆಗೀಡಾದ ವಲಸಿಗರ ಸಮಸ್ಯೆಯಾಗಿದೆ. ” ಎಂದು ಹೇಳಿದ್ದಾರೆ.

Bandra की भीड़ किसने जुटायी? साज़िश या लापरवाही? Live session with Rubika

Posted by ABP News on Tuesday, April 14, 2020

ಫ್ಯಾಕ್ಟ್-ಚೆಕ್‌

ಈ ಬಗ್ಗೆ ಫ್ಯಾಕ್ಟ್ ಚೆಕ್ ನಡೆಸಿದ “ಭೂಮ್ ಲೈವ್” ಪೊಲೀಸರನ್ನು ಸಂಪರ್ಕಿಸಿದೆ. ವಲಸಿಗ ಕಾರ್ಮಿಕರು ಈ ರೀತಿಯಾಗಿ ಸೇರಿರುವುದಕ್ಕೆ ಯಾವುದೇ ಕೋಮು ದೃಷ್ಟಿಕೋನ ಇಲ್ಲ ಎಂದು ಮುಂಬೈ ಪೊಲೀಸರು ಸ್ಪಷ್ಟಪಡಿಸಿದ್ದಾರೆ ಎಂದು ವರದಿ ಮಾಡಿದೆ.

ಅಲ್ಲಿಗೆ ವಲಸೆ ಕಾರ್ಮಿಕರು ಬಾಂದ್ರಾ ನಿಲ್ದಾಣದಲ್ಲಿ ಸೇರುವುದಕ್ಕೆ ಯಾವುದೇ ಮುಸ್ಲಿಮರು ಅಥವಾ ಮಸೀದಿ ಕಾರಣವಲ್ಲ ಎಂಬುದು ಸ್ಪಷ್ಟವಾಗಿದೆ. ಬದಲಿಗೆ ಎಬಿಪಿ ನ್ಯೂಸ್‌ ಸೇರಿದಂತೆ ಹಲವು ಟಿವಿ ಚಾನೆಲ್‌ಗಳು ವಲಸೆ ಕಾರ್ಮಿಕರಿಗೆ ವಿಶೇಷ ರೈಲುವ್ಯವಸ್ಥೆ ಮಾಡಲಾಗಿದೆ ಎಂಬ ಸುಳ್ಳು ಸುದ್ದಿ ಪ್ರಸಾರ ಮಾಡಿದ್ದರಿಂದ ಜನರು ಒಟ್ಟುಗೂಡಿದ್ದಾರೆ ಎಂಬು ತಿಳಿದುಬಂದಿದೆ.

ಇಡೀ ಘಟನೆಯ ಬಗ್ಗೆ ಎಬಿಪಿ ನ್ಯೂಸ್‌ನ ಎರಡು ವೀಡಿಯೊಗಳೆ ಚಾನೆಲ್‌ನಲ್ಲಿ ಇರುವ ದ್ವಂದ್ವವನ್ನು ತೋರಿಸುತ್ತದೆ. ಘಟನೆಯನ್ನು ಕೋಮು ದೃಷ್ಟಿಕೋನ ನೀಡುವುದರೊಂದಿಗೆ, ಮಸೀದಿಯ ವಿರುದ್ಧ “ದೊಡ್ಡ ಪ್ರಶ್ನೆಗಳನ್ನು” ಹುಟ್ಟುಹಾಕಿ ಕಡೆಗೆ ಅದನ್ನು ವದಂತಿಗಳೆಂದು ಸಂಪೂರ್ಣವಾಗಿ ತಳ್ಳಿಹಾಕುವವರೆಗೆ ಎಲ್ಲಾ ಪಾತ್ರವನ್ನು ತಾನೇ ನಿರ್ವಹಿಸುತ್ತದೆ. ಎಬಿಪಿ ಮಜಾ ವಿರುದ್ಧ ವದಂತಿಗಳ ಆರೋಪಗಳು ತನಿಖೆಯ ವಿಷಯವಾಗಿದ್ದರೂ, ಎಬಿಪಿ ಗ್ರೂಪ್‌ನ ಹಿಂದಿ ಚಾನೆಲ್ ಎಬಿಪಿ ನ್ಯೂಸ್ ಕೋಮು ಆಧಾರಿತ ನಿರೂಪಣೆಯನ್ನು ನೀಡಿದ್ದಕ್ಕಾಗಿ ಹಾಗೂ ಘಟನೆಗೆ ಅಲ್ಪಸಂಖ್ಯಾತ ಸಮುದಾಯ ಕಾರಣವೆಂದು ದೂಷಿಸಿದ್ದಕ್ಕಾಗಿ ಖಂಡಿತವಾಗಿಯೂ ಶಿಕ್ಷಿಸಬೇಕಾಗಿದೆ.

ಮಾರ್ಚ್ ನಲ್ಲಿ ದೆಹಲಿಯ ಧಾರ್ಮಿಕ ಸಭೆಯೊಂದರಲ್ಲಿ ಭಾಗವಹಿಸಿದ ಹೆಚ್ಚಿನ ಸಂಖ್ಯೆಯ ಜನರಿಗೆ COVID-19 ಇರುವುದು ಪತ್ತೆಯಾದ ನಂತರ ಭಾರತದ ಮುಖ್ಯವಾಹಿನಿಯ ಮಾಧ್ಯಮಗಳು, ಕೊರೊನಾ ವೈರಸ್ ಹರಡುವಿಕೆಯನ್ನು ಕೋಮುವಾದೀಕರಣಗೊಳಿಸುವಲ್ಲಿ ಸಕ್ರಿಯವಾಗಿ ಭಾಗವಹಿಸಿವೆ. ಸಭೆಯನ್ನು ಹಾಟ್‌ಸ್ಪಾಟ್‌ ಎಂದು ಗುರುತಿಸಲಾಗಿರುವುದರಿಂದ, ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳಕ್ಕಾಗಿ ಚಾನೆಲ್‌ಗಳು ಮುಸ್ಲಿಂ ಸಮುದಾಯವನ್ನು ಸಂಪೂರ್ಣವಾಗಿ ಗುರಿಯಾಗಿರಿಸಿಕೊಂಡಿರುವುದು ಮಾತ್ರವಲ್ಲದೆ ಹಲವಾರು ಸುಳ್ಳು ಸುದ್ದಿಯನ್ನು ಹರಡಿದೆ.


ಇದನ್ನೂ ಓದಿ: ಇಡೀ ಪ್ರಪಂಚ ಎದುರಿಸುವಷ್ಟು ಕೊರೊನಾವನ್ನು ಭಾರತವೊಂದೇ ಎದುರಿಸುತ್ತಿದೆ ಎಂಬುದು ನಿಜವೇ? ಈ ನಕ್ಷೆ ಯಾವಾಗಿನದು? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...