Homeನಿಜವೋ ಸುಳ್ಳೋಅಮ್ಮ ಆರೋಗ್ಯವಾಗಿದ್ದಾರೆ; ಸುಳ್ಳು ಸುದ್ದಿ ಹಬ್ಬಿಸದಿರಿ: ಹಿನ್ನಲೆ ಗಾಯಕಿ ಎಸ್. ಜಾನಕಿ ಪುತ್ರ ಸ್ಪಷ್ಟನೆ

ಅಮ್ಮ ಆರೋಗ್ಯವಾಗಿದ್ದಾರೆ; ಸುಳ್ಳು ಸುದ್ದಿ ಹಬ್ಬಿಸದಿರಿ: ಹಿನ್ನಲೆ ಗಾಯಕಿ ಎಸ್. ಜಾನಕಿ ಪುತ್ರ ಸ್ಪಷ್ಟನೆ

- Advertisement -
- Advertisement -

ಜನಪ್ರಿಯ ಹಿನ್ನೆಲೆ ಗಾಯಕಿ ಎಸ್.ಜಾನಕಿ (82) ನಿಧನರಾದರು ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ವೈರಲಾಗಿದ್ದು, ಇದು ಸುಳ್ಳು ಸುದ್ದಿ ಎಂದು ಅವರ ಮಗ ಮುರಳಿ ಕೃಷ್ಣ ಸ್ಪಷ್ಟ ಪಡಿಸಿದ್ದಾರೆ.

ಎಸ್. ಜಾನಕಿ ಅವರು ಸುಮಾರು 60 ವರ್ಷಗಳ ಕಾಲದಿಂದ ಚಿತ್ರರಂಗದಲ್ಲಿದ್ದು, 17 ಭಾಷೆಗಳಲ್ಲಿ 48 ಸಾವಿರಕ್ಕೂ ಹೆಚ್ಚು ಹಾಡುಗಳನ್ನು ಹಾಡಿದ್ದಾರೆ. ವಯಸ್ಸಾದ ಕಾರಣ ಅವರು ಹಾಡುವುದನ್ನು ನಿಲ್ಲಿಸಿದ್ದರು.

ಪ್ರಸ್ತುತ ಹೈದರಾಬಾದ್‌ನಲ್ಲಿ ವಾಸಿಸುತ್ತಿರುವ ಅವರ ಆರೋಗ್ಯದ ಬಗ್ಗೆ ಕಿಡಿಗೇಡಿಗಳು ಪದೇ ಪದೇ ಸುಳ್ಳು ಸುದ್ದಿಯನ್ನು ಹಬ್ಬಿಸುತ್ತಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಸುದ್ದಿ

ಜನಕಿಯ ಅವರು ಮಗ ಮುರಳಿ ಕೃಷ್ಣ ಮಾತನಾಡಿ “ತಾಯಿಗೆ ಸಣ್ಣ ಆಪರೇಷನ್ ಇದೆ. ಸದ್ಯ ಅವರು ಆರೋಗ್ಯವಾಗಿದ್ದಾರೆ. ದಯವಿಟ್ಟು ಕೆಟ್ಟ ಸುದ್ದಿ ಹರಡಬೇಡಿ, ಅಮ್ಮ ಚೆನ್ನಾಗಿಯೇ ಇದ್ದಾರೆ” ಎಂದು ಹೇಳಿದ್ದಾರೆ.

ಯುವ ಗಾಯಕರಿಗೆ ಸ್ಪೂರ್ತಿಯಾಗಿರುವ ಇವರನ್ನು “ಜಾನಕಿ ಅಮ್ಮ” ಎಂದೇ ಗೌರವದಿಂದ ಕರೆಯುತ್ತಾರೆ. 1957 ರಲ್ಲಿ ‘ಕೊಂಜುಮ್ ಸಲಂಗೈ’ ಚಿತ್ರದ “ಸಿಂಗರವೆಲೆನ್ ದೇವಾ” ಹಾಡಿನೊಂದಿಗೆ ತಮಿಳಿನ ಅತ್ಯಂತ ಪ್ರೀತಿಯ ಹಿನ್ನೆಲೆ ಗಾಯಕರಲ್ಲಿ ಒಬ್ಬರಾದ ಜಾನಕಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದ್ದರು. 2017 ರಲ್ಲಿ ಅವರು ವಯಸ್ಸಿನ ಕಾರಣಕ್ಕೆ ಹಾಡುವುದನ್ನು ನಿಲ್ಲಿಸಿದ್ದರು.


ಓದಿ: ತಮಿಳುನಾಡು ಲಾಕಪ್ ಡೆತ್: ಪ್ರಕರಣವನ್ನು ಸಿಬಿಐಗೆ ವಹಿಸಿದ ರಾಜ್ಯ ಸರ್ಕಾರ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾವೇರಿ: ರೈತರ ಹಿತ ಕಾಯುವುದು ನನ್ನ ಮೊದಲ ಕರ್ತವ್ಯ ಡಿ.ಕೆ.ಶಿವಕುಮಾರ್

ರಾಜ್ಯದ ಜಲಾಶಯಗಳಲ್ಲಿ ನೀರಿನ ಲಭ್ಯತೆ ಕಡಿಮೆಯಿರುವಾಗ ನಮ್ಮ ರೈತರನ್ನು ಬದುಕಿಸುವ ಸವಾಲಿನ ಜೊತೆಗೆ ಕಾನೂನನ್ನೂ ಕಾಪಾಡಬೇಕಾದ ಹೊಣೆಗಾರಿಕೆ ಇದೆ. ಕಾವೇರಿ ವಿಚಾರದಲ್ಲಿ ನಮ್ಮ ರೈತರ ಹಿತ ಕಾಯುವುದು ನನ್ನ ಮೊದಲ ಕರ್ತವ್ಯ ಎಂದು...

‘ಅಸ್ತಿತ್ವದ ಸಮಸ್ಯೆಯಲ್ಲ, ಹೊಣೆಗಾರಿಕೆಯೇ ಮುಖ್ಯ’: ಆರ್‌ಎಸ್‌ಎಸ್ ನೋಂದಣಿ ಕುರಿತು ಬಿ.ಎಲ್. ಸಂತೋಷ್ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ನೋಂದಣಿ ಹಾಗೂ ಅದರ ಕಾನೂನಾತ್ಮಕ ಅಸ್ತಿತ್ವಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ.ಎಲ್. ಸಂತೋಷ್ ಹಾಗೂ ಕರ್ನಾಟಕದ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್...

ನಾನು ‘ದಿಮಾಗಿ ನಕ್ಸಲ್’ ಆಗಿದ್ದರೆ ಅದಕ್ಕೆ ಹೆಮ್ಮೆ ಇದೆ: ಮೋದಿ-ರಿಜಿಜು ವಿರುದ್ಧ ಚಿದಂಬರಂ ತಿರುಗೇಟು

ಸ್ವಾತಂತ್ರ್ಯ ದಿನಾಚರಣೆಯ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬಳಸಿದ್ದ ‘ದಿಮಾಗಿ ನಕ್ಸಲರು’ (ವೈಚಾರಿಕ ನಕ್ಸಲರು) ಎಂಬ ಪದ ಬಳಕೆ ದೇಶದ ರಾಜಕೀಯ ವಲಯದಲ್ಲಿ ಹೊಸ ಸಂಚಲನ ಸೃಷ್ಟಿಸಿದೆ. ಪ್ರಧಾನಿಯವರ ಈ...

CAA ವಿರೋಧಿ ಪ್ರತಿಭಟನೆಗೆ ಕಾರಣವಾಗಿದ್ದ ಪ್ರಶ್ನೆಗಳು ಮತ್ತೆ ಜನಗಣತಿಯಲ್ಲಿ-ವರದಿ

ಶೀಘ್ರದಲ್ಲೇ ಪ್ರಾರಂಭವಾಗಲಿರುವ ಜನಗಣತಿಯ ಜನಸಂಖ್ಯಾ ಎಣಿಕೆ ಹಂತವು, 2011ರ ಜನಗಣತಿಗೆ ಹೋಲಿಸಿದರೆ 14 ಹೊಸ ಅಥವಾ ಮಾರ್ಪಡಿಸಿದ ಪ್ರಶ್ನೆಗಳನ್ನು ಒಳಗೊಂಡಿರುತ್ತದೆ. ಈ ಪೈಕಿ ಹಲವು ಪ್ರಶ್ನೆಗಳು 2020ರಲ್ಲಿ ಅಧಿಸೂಚನೆ ಹೊರಡಿಸಲಾಗಿದ್ದ ರಾಷ್ಟ್ರೀಯ ಜನಸಂಖ್ಯಾ ನೋಂದಣಿ...

ಹಿಂಗೋಲಿ ಶಾಲೆಯಲ್ಲಿ ಪ್ರಾಂಶುಪಾಲರ ಮದ್ಯಪಾನ, ಶಿಕ್ಷಕರ ಅಭಾವ: ಕ್ರಮ ಕೈಗೊಳ್ಳದಿದ್ದರೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ಅಭಿಜೀತ್ ದೀಪ್ಕೆ

ಮಹಾರಾಷ್ಟ್ರದ ಹಿಂಗೋಲಿ ಜಿಲ್ಲೆಯ ಲಿಂಬಾಲಾ ಗ್ರಾಮದ ಸರ್ಕಾರಿ ಶಾಲೆಯೊಂದರಲ್ಲಿ ಶೈಕ್ಷಣಿಕ ವಾತಾವರಣ ಸಂಪೂರ್ಣವಾಗಿ ಕುಸಿದಿದ್ದು, ಶಾಲಾ ಪ್ರಾಂಶುಪಾಲರ ಹೊಣೆಗೇಡಿತನ ಮತ್ತು ಆಡಳಿತ ಮಂಡಳಿಯ ನಿರ್ಲಕ್ಷ್ಯದ ವಿರುದ್ಧ ಗ್ರಾಮಸ್ಥರ ಆಕ್ರೋಶ ಮುಗಿಲುಮುಟ್ಟಿದೆ. ಶಾಲೆಯ ಪ್ರಾಂಶುಪಾಲರು...

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ? CAG ವರದಿ

ದೇಶಾದ್ಯಂತ ನೆರೆ, ಬರ, ಭೂಕುಸಿತದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ ಭಾರಿ ಪ್ರಮಾಣದ ಕಡಿತವಾಗುತ್ತಿರುವುದು ಈಗ ನಿರೂಪಿತವಾಗಿದೆ. ರಾಷ್ಟ್ರೀಯ ವಿಪತ್ತು ಸ್ಪಂದನಾ ನಿಧಿ...

EFLU ವಿದ್ಯಾರ್ಥಿ ಸಂಘದ ಮುಖಂಡರು, NSUI ಸದಸ್ಯರ ಮೇಲೆ ರಾಡ್ ಮತ್ತು ಬಿಯರ್ ಬಾಟಲಿಗಳಿಂದ ಹಲ್ಲೆ; ABVP ಸದಸ್ಯರ ವಿರುದ್ಧ ಪ್ರಕರಣ ದಾಖಲು

ಹೈದರಾಬಾದ್‌ನ ಪ್ರತಿಷ್ಠಿತ ಇಂಗ್ಲಿಷ್ ಮತ್ತು ವಿದೇಶಿ ಭಾಷಾ ವಿಶ್ವವಿದ್ಯಾಲಯ (ಇಎಫ್‌ಎಲ್‌ಯು - EFLU) ಕ್ಯಾಂಪಸ್‌ನಲ್ಲಿ ಭೀಕರ ಹಿಂಸಾಚಾರ ಸಂಭವಿಸಿದ್ದು, ವಿದ್ಯಾರ್ಥಿ ಸಂಘದ ಮುಖಂಡರು ಹಾಗೂ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ (NSUI) ಸದಸ್ಯರ ಮೇಲೆ...

NALSAR ವಿವಾದ : ಕಾನೂನು ವಿದ್ಯಾರ್ಥಿಗಳಲ್ಲಿ ಕ್ಷಮೆಯಾಚಿಸಿದ ಬಿಸಿಐ ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ

ನಲ್ಸಾರ್ (NALSAR) ಕಾನೂನು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ವಿರುದ್ಧ ಹೊರಡಿಸಿದ್ದ ನಿರ್ದೇಶನಗಳ ಕುರಿತು ತೀವ್ರ ಟೀಕೆಗಳು ವ್ಯಕ್ತವಾದ ಹಿನ್ನೆಲೆಯಲ್ಲಿ, ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಥ) ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ ಕ್ಷಮೆಯಾಚಿಸಿದ್ದಾರೆ. ಹೈದರಾಬಾದ್‌ನ ನಲ್ಸಾರ್...

ವಿಮಲ್ ‘ಏಲೈಚಿ’ ಜಾಹೀರಾತು ವಿವಾದ: ಶಾರುಖ್ ಖಾನ್, ಅಜಯ್ ದೇವಗನ್ ಮತ್ತು ಟೈಗರ್ ಶ್ರಾಫ್‌ಗೆ ಮಹಾರಾಷ್ಟ್ರ ಎಫ್‌ಡಿಎ ಶೋಕಾಸ್ ನೋಟಿಸ್

ಬಾಲಿವುಡ್‌ನ ಖ್ಯಾತ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರುಗಳು ಇದೀಗ ಕಾನೂನು ಸಂಕಷ್ಟಕ್ಕೆ ಸಿಲುಕಿದ್ದಾರೆ. 'ವಿಮಲ್ ಏಲೈಚಿ' ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದಕ್ಕಾಗಿ ಮಹಾರಾಷ್ಟ್ರದ ಆಹಾರ ಮತ್ತು ಔಷಧ ಆಡಳಿತ...

ಹನೂರು ಶೂಟೌಟ್ ಪ್ರಕರಣ: ಅರಣ್ಯ ಇಲಾಖೆ ಸಿಬ್ಬಂದಿ ವಿರುದ್ಧ ಎಫ್‌ಐಆರ್‌ ದಾಖಲು

ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಶಾಗ್ಯ ಗ್ರಾಮ ಪಂಚಾಯತ್ ವಾಪ್ತಿಯ ಅರಣ್ಯ ಪ್ರದೇಶದಲ್ಲಿ ಮೂವರು ಗುಂಡೇಟಿಗೆ ಬಲಿಯಾದ ಪ್ರಕರಣ ಸಂಬಂಧ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಎಫ್​​​​ಐಆರ್ ದಾಖಲಾಗಿದೆ. ಅರಣ್ಯ ಸಿಬ್ಬಂದಿಯ ಗುಂಡೇಟಿಗೆ ಹನೂರು...