Homeಮುಖಪುಟಅಪ್ರಾಪ್ತ ಮಗಳನ್ನು ಕೊಲ್ಲಲು ನೇಮಿಸಿದ ವ್ಯಕ್ತಿಯಿಂದಲೆ ಕೊಲೆಗೀಡಾದ ತಾಯಿ!

ಅಪ್ರಾಪ್ತ ಮಗಳನ್ನು ಕೊಲ್ಲಲು ನೇಮಿಸಿದ ವ್ಯಕ್ತಿಯಿಂದಲೆ ಕೊಲೆಗೀಡಾದ ತಾಯಿ!

- Advertisement -
- Advertisement -

ತನ್ನ ಮಗಳ ಪ್ರೇಮ ಸಂಬಂಧದಿಂದ ಅಸಮಾಧಾನಗೊಂಡಿದ್ದ ತಾಯಿಯೊಬ್ಬರು, ಮಗಳನ್ನು ಕೊಲ್ಲಲು ಬಾಡಿಗೆ ಕೊಲೆಗಾರನನ್ನು ನೇಮಿಸಿದ್ದು, ಕೊನೆಗೆ ತಾಯಿ ಆತನಿಂದಲೇ ಕೊಲೆಯಾದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ವಿಪರ್ಯಾಸವೇನೆಂದರೆ, ತನ್ನ ಮಗಳನ್ನು ಕೊಲ್ಲಲು ತಾಯಿ ಸುಪಾರಿ ನೀಡಿದ್ದ ವ್ಯಕ್ತಿಯೆ ಮಗಳ ಪ್ರಿಯಕರನಾಗಿದ್ದ ಎಂಬುವುದು ಅವರಿಗೆ ತಿಳಿದಿರಲಿಲ್ಲ ಎಂದು ಎನ್‌ಡಿಟಿವಿ ವರದಿ ಮಾಡಿದೆ. ಮಗಳನ್ನು ಕೊಲ್ಲಲು ನೇಮಿಸಿದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಅಕ್ಟೋಬರ್ 6 ರಂದು ಉತ್ತರ ಪ್ರದೇಶದ ಇಟಾಹ್ ಜಿಲ್ಲೆಯ ಜಸ್ರತ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ರಾಗಿ ಗದ್ದೆಯಲ್ಲಿ ಅಲ್ಕಾ ಅವರ ಮೃತದೇಹ ಪತ್ತೆಯಾದಾಗ ಘಟನೆ ಬೆಳಕಿಗೆ ಬಂದಿತ್ತು. ಮಗಳನ್ನು ಕೊಲ್ಲಲು ನೇಮಿಸಿದ

ಕಳೆದ ವಾರ, ಅಕ್ಟೋಬರ್ 5 ರಂದು, ಅಲ್ಕಾ ದೇವಿ ಅವರು ತಮ್ಮ ಮಗಳ ಪ್ರೇಮ ಪ್ರಕರಣದ ವಿಚಾರದ ಬಗ್ಗೆ ಮಾತನಾಡಲು ಇಟಾಹ್‌ಗೆ ಹೋಗಿದ್ದರು. ಸಂಜೆಯವರೆಗೂ ಅವರು ವಾಪಸ್ ಬಾರದೆ ಇದ್ದಾಗ, ಅವರ ಪತಿ ರಮಾಕಾಂತ್ ಅವರು ಅಲ್ಕಾ ಅವರ ಮೊಬೈಲ್‌ಗೆ ಕರೆ ಮಾಡಿದ್ದರು. ಆದರೆ ಅವರ ಮೊಬೈಲ್ ಸ್ವಿಚ್ ಆಫ್ ಆಗಿತ್ತು. ಎಷ್ಟು ಹುಡುಕಿದರೂ ಸಿಗದಿದ್ದಾಗ ಪೊಲೀಸರಿಗೆ ದೂರು ನೀಡಿದ್ದರು.

ಇದನ್ನೂಓದಿ: ತಮಿಳುನಾಡು | ತಾಂತ್ರಿಕ ಸಮಸ್ಯೆ ಬಳಿಕ ಸುರಕ್ಷಿತವಾಗಿ ಲ್ಯಾಂಡ್ ಆದ ಏರ್‌ ಇಂಡಿಯಾ ವಿಮಾನ : ಪ್ರಯಾಣಿಕರು ಸೇಫ್

ಭಾನುವಾರ ಸಂಜೆಯ ನಂತರ ಮೃತ ದೇಹವೊಂದನ್ನು ಗುರುತಿಸಲು ಪೊಲೀಸರು ಕರೆಸಿದ್ದು, ಅಲ್ಲಿ ಅವರು ತನ್ನ ಪತ್ನಿ ಅಲ್ಕಾ ಅವರ ಮೃತದೇಹವನ್ನು ಗುರುತಿಸಿದ್ದರು. ನಂತರ, ಅಲ್ಕಾ ಅವರ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿತ್ತು.

ಪತ್ನಿಯ ಸಾವಿನ ಬಗ್ಗೆ ರಮಾಕಾಂತ್ ತನ್ನ ಗ್ರಾಮದ ಅಖಿಲೇಶ್ ಮತ್ತು ಅನಿಕೇತ್ ಎಂಬ ಇಬ್ಬರ ವಿರುದ್ಧ ಜಸ್ರತ್‌ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಈ ಇಬ್ಬರು ಹಿಂದೆ ಅವರ ಅಪ್ತಾಪ್ತ ಮಗಳನ್ನು ಆಮಿಷವೊಡ್ಡಿ ಅಪಹರಿಸಿದ್ದರು ಎಂಬ ಆರೋಪವಿತ್ತು. ಹಾಗಾಗಿ ಪೊಲೀಸರು ಅಖಿಲೇಶ್ ಅವರನ್ನು ಬಂಧಿಸಿ ಜೈಲಿಗೆ ಹಾಕಿದ್ದರು. ಜೊತೆಗೆ ಅಪ್ರಾಪ್ತ ಬಾಲಕಿಯನ್ನು ಸುರಕ್ಷಿತವಾಗಿ ರಕ್ಷಿಸಿ ಕುಟುಂಬಕ್ಕೆ ವರ್ಗಾಯಿಸಲಾಗಿತ್ತು.

ಮೇಲಿನ ಘಟನೆಯ ನಂತರ ಹೆದರಿದ್ದ ಅಲ್ಕಾ ದೇವಿ ಅವರು ತನ್ನ ಮಗಳನ್ನು ಫರೂಕಾಬಾದ್ ಜಿಲ್ಲೆಯ ಸಿಕಂದರಪುರ ಖಾಸ್ ಗ್ರಾಮದಲ್ಲಿರುವ ತನ್ನ ತಾಯಿಯ ಮನೆಗೆ ಕಳುಹಿಸಿದ್ದರು. ಇಲ್ಲಿ ಬಾಲಕಿ 38 ವರ್ಷದ ಸುಭಾಷ್ ಜೊತೆ ಸಂಬಂಧ ಬೆಳೆಸಿದ್ದರು. ಸುಭಾಷ್‌ ಈ ಹಿಂದೆ 10 ವರ್ಷ ಜೈಲು ಶಿಕ್ಷೆ ಅನುಭವಿಸಿದ್ದ ಅಪರಾಧಿಯಾಗಿದ್ದ. ಈತ ಬಾಲಕಿಗೆ ಮಾತನಾಡಲು ಮೊಬೈಲ್ ಫೋನ್ ಖರೀದಿಸಿಕೊಟ್ಟಿದ್ದ.

ಇದನ್ನೂ ಓದಿ: ಉತ್ತರ ಪ್ರದೇಶ | ಕೋಮು ಪ್ರಚೋದಕ ಘೋಷಣೆಗಳನ್ನು ಕೂಗಿ ರಸ್ತೆ ತಡೆ ಆರೋಪ : 1000 ಮಂದಿ ಅಪರಿಚಿತರ ವಿರುದ್ದ ಎಫ್‌ಐಆರ್

ಆದರೆ ಇದನ್ನು ಅರಿಯದ ಅಲ್ಕಾ ಮಗಳ ಪ್ರೇಮ ಪ್ರಕರಣದಿಂದ ಬೇಸತ್ತು ಬೇಸರಗೊಂಡಿದ್ದರು. ಹೀಗಾಗಿ ಮಗಳನ್ನು ಕೊಲ್ಲಲು ನಿರ್ಧರಿಸಿ, ಕೊಲೆ ಮಾಡಲು ಸುಭಾಷ್‌ಗೆ ₹ 50,000 ನೀಡಿದ್ದಾರೆ. ಆದರೆ, ತನ್ನ ಮಗಳೊಂದಿಗೆ ಪ್ರೇಮ ಸಂಬಂಧ ಹೊಂದಿದ್ದ ವ್ಯಕ್ತಿ ಸುಭಾಷ್ ಎಂಬುವುದು ತಾಯಿಗೆ ತಿಳಿದಿರಲಿಲ್ಲ ಎಂದು ವರದಿಯಾಗಿದೆ.

ತಾಯಿಯ ಯೋಜನೆಯನ್ನು ಸುಭಾಷ್ ಹುಡುಗಿಗೆ ಬಹಿರಂಗಪಡಿಸಿದ್ದು, ಈ ವೇಳೆ ಚುರುಕಾದ ಹುಡುಗಿ ತನ್ನ ತಾಯಿಯನ್ನು ಕೊಂದರೆ ಮದುವೆಯಾಗುವುದಾಗಿ ಹೇಳಿದ್ದಾರೆ. ನಂತರ ಒಟ್ಟಾಗಿ, ಮೂಲಕ ತಂತ್ರ ರೂಪಿಸಿ, ಕೊಲೆ ನಡೆಸಿದ ಹಾಗೆ ನಟಿಸಿ ಅಲ್ಕಾ ದೇವಿಯನ್ನು ಮೂರ್ಖರನ್ನಾಗಿಸಿದ್ದರು.

ಆದರೆ ಅಲ್ಕಾ ದೇವಿ ಭರವಸೆ ನೀಡಿದ ₹50,000 ಪಾವತಿಸದಿದ್ದಾಗ, ಸುಭಾಷ್ ಅವರನ್ನು ಆಗ್ರಾಕ್ಕೆ ಕರೆದು ಅವರ ಮಗಳ ಜೊತೆಗೆ ಭೇಟಿ ಮಾಡಿಸಿದ್ದಾರೆ. ಮೂವರು ಆಗ್ರಾದಿಂದ ಇಟಾಹ್‌ಗೆ ಪ್ರಯಾಣಿಸಿ ರಾಮಲೀಲಾ ಜಾತ್ರೆಗೆ ಹೋಗಿದ್ದಾರೆ. ಅಲ್ಲಿಂದ ಅಲಿಗಂಜ್‌ಗಿಂತ ಮೊದಲು ಇಳಿದು ಅಲ್ಕಾ ಅವರನ್ನು ನಾಗ್ಲಾ ಚಂದನ್‌ಗೆ ಕರೆದುಕೊಂಡು ಹೋಗಿ ಕತ್ತು ಹಿಸುಕಿ ಕೊಲೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ಮಗಳು ಮತ್ತು ಆಕೆಯ ಪ್ರಿಯಕರನನ್ನು ಬಂಧಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ವಿಡಿಯೊ ನೋಡಿ: ಒಂದು ಪಟಾಕಿ ಕೊಡೋ ಯೋಗ್ಯತೆ ಇಲ್ಲ, ಆನೆ ಓಡಿಸ್ತೀರೇನ್ರೀ ನೀವು?: ಕಳ್ಳಬೇಟೆ ನಿಗ್ರಹ ಶಿಬಿರಕ್ಕೆ ನುಗ್ಗಿದ ಸ್ಥಳೀಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...