Homeಮುಖಪುಟಅಪ್ರಾಪ್ತ ಮಗಳನ್ನು ಕೊಲ್ಲಲು ನೇಮಿಸಿದ ವ್ಯಕ್ತಿಯಿಂದಲೆ ಕೊಲೆಗೀಡಾದ ತಾಯಿ!

ಅಪ್ರಾಪ್ತ ಮಗಳನ್ನು ಕೊಲ್ಲಲು ನೇಮಿಸಿದ ವ್ಯಕ್ತಿಯಿಂದಲೆ ಕೊಲೆಗೀಡಾದ ತಾಯಿ!

- Advertisement -
- Advertisement -

ತನ್ನ ಮಗಳ ಪ್ರೇಮ ಸಂಬಂಧದಿಂದ ಅಸಮಾಧಾನಗೊಂಡಿದ್ದ ತಾಯಿಯೊಬ್ಬರು, ಮಗಳನ್ನು ಕೊಲ್ಲಲು ಬಾಡಿಗೆ ಕೊಲೆಗಾರನನ್ನು ನೇಮಿಸಿದ್ದು, ಕೊನೆಗೆ ತಾಯಿ ಆತನಿಂದಲೇ ಕೊಲೆಯಾದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ವಿಪರ್ಯಾಸವೇನೆಂದರೆ, ತನ್ನ ಮಗಳನ್ನು ಕೊಲ್ಲಲು ತಾಯಿ ಸುಪಾರಿ ನೀಡಿದ್ದ ವ್ಯಕ್ತಿಯೆ ಮಗಳ ಪ್ರಿಯಕರನಾಗಿದ್ದ ಎಂಬುವುದು ಅವರಿಗೆ ತಿಳಿದಿರಲಿಲ್ಲ ಎಂದು ಎನ್‌ಡಿಟಿವಿ ವರದಿ ಮಾಡಿದೆ. ಮಗಳನ್ನು ಕೊಲ್ಲಲು ನೇಮಿಸಿದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಅಕ್ಟೋಬರ್ 6 ರಂದು ಉತ್ತರ ಪ್ರದೇಶದ ಇಟಾಹ್ ಜಿಲ್ಲೆಯ ಜಸ್ರತ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ರಾಗಿ ಗದ್ದೆಯಲ್ಲಿ ಅಲ್ಕಾ ಅವರ ಮೃತದೇಹ ಪತ್ತೆಯಾದಾಗ ಘಟನೆ ಬೆಳಕಿಗೆ ಬಂದಿತ್ತು. ಮಗಳನ್ನು ಕೊಲ್ಲಲು ನೇಮಿಸಿದ

ಕಳೆದ ವಾರ, ಅಕ್ಟೋಬರ್ 5 ರಂದು, ಅಲ್ಕಾ ದೇವಿ ಅವರು ತಮ್ಮ ಮಗಳ ಪ್ರೇಮ ಪ್ರಕರಣದ ವಿಚಾರದ ಬಗ್ಗೆ ಮಾತನಾಡಲು ಇಟಾಹ್‌ಗೆ ಹೋಗಿದ್ದರು. ಸಂಜೆಯವರೆಗೂ ಅವರು ವಾಪಸ್ ಬಾರದೆ ಇದ್ದಾಗ, ಅವರ ಪತಿ ರಮಾಕಾಂತ್ ಅವರು ಅಲ್ಕಾ ಅವರ ಮೊಬೈಲ್‌ಗೆ ಕರೆ ಮಾಡಿದ್ದರು. ಆದರೆ ಅವರ ಮೊಬೈಲ್ ಸ್ವಿಚ್ ಆಫ್ ಆಗಿತ್ತು. ಎಷ್ಟು ಹುಡುಕಿದರೂ ಸಿಗದಿದ್ದಾಗ ಪೊಲೀಸರಿಗೆ ದೂರು ನೀಡಿದ್ದರು.

ಇದನ್ನೂಓದಿ: ತಮಿಳುನಾಡು | ತಾಂತ್ರಿಕ ಸಮಸ್ಯೆ ಬಳಿಕ ಸುರಕ್ಷಿತವಾಗಿ ಲ್ಯಾಂಡ್ ಆದ ಏರ್‌ ಇಂಡಿಯಾ ವಿಮಾನ : ಪ್ರಯಾಣಿಕರು ಸೇಫ್

ಭಾನುವಾರ ಸಂಜೆಯ ನಂತರ ಮೃತ ದೇಹವೊಂದನ್ನು ಗುರುತಿಸಲು ಪೊಲೀಸರು ಕರೆಸಿದ್ದು, ಅಲ್ಲಿ ಅವರು ತನ್ನ ಪತ್ನಿ ಅಲ್ಕಾ ಅವರ ಮೃತದೇಹವನ್ನು ಗುರುತಿಸಿದ್ದರು. ನಂತರ, ಅಲ್ಕಾ ಅವರ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿತ್ತು.

ಪತ್ನಿಯ ಸಾವಿನ ಬಗ್ಗೆ ರಮಾಕಾಂತ್ ತನ್ನ ಗ್ರಾಮದ ಅಖಿಲೇಶ್ ಮತ್ತು ಅನಿಕೇತ್ ಎಂಬ ಇಬ್ಬರ ವಿರುದ್ಧ ಜಸ್ರತ್‌ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಈ ಇಬ್ಬರು ಹಿಂದೆ ಅವರ ಅಪ್ತಾಪ್ತ ಮಗಳನ್ನು ಆಮಿಷವೊಡ್ಡಿ ಅಪಹರಿಸಿದ್ದರು ಎಂಬ ಆರೋಪವಿತ್ತು. ಹಾಗಾಗಿ ಪೊಲೀಸರು ಅಖಿಲೇಶ್ ಅವರನ್ನು ಬಂಧಿಸಿ ಜೈಲಿಗೆ ಹಾಕಿದ್ದರು. ಜೊತೆಗೆ ಅಪ್ರಾಪ್ತ ಬಾಲಕಿಯನ್ನು ಸುರಕ್ಷಿತವಾಗಿ ರಕ್ಷಿಸಿ ಕುಟುಂಬಕ್ಕೆ ವರ್ಗಾಯಿಸಲಾಗಿತ್ತು.

ಮೇಲಿನ ಘಟನೆಯ ನಂತರ ಹೆದರಿದ್ದ ಅಲ್ಕಾ ದೇವಿ ಅವರು ತನ್ನ ಮಗಳನ್ನು ಫರೂಕಾಬಾದ್ ಜಿಲ್ಲೆಯ ಸಿಕಂದರಪುರ ಖಾಸ್ ಗ್ರಾಮದಲ್ಲಿರುವ ತನ್ನ ತಾಯಿಯ ಮನೆಗೆ ಕಳುಹಿಸಿದ್ದರು. ಇಲ್ಲಿ ಬಾಲಕಿ 38 ವರ್ಷದ ಸುಭಾಷ್ ಜೊತೆ ಸಂಬಂಧ ಬೆಳೆಸಿದ್ದರು. ಸುಭಾಷ್‌ ಈ ಹಿಂದೆ 10 ವರ್ಷ ಜೈಲು ಶಿಕ್ಷೆ ಅನುಭವಿಸಿದ್ದ ಅಪರಾಧಿಯಾಗಿದ್ದ. ಈತ ಬಾಲಕಿಗೆ ಮಾತನಾಡಲು ಮೊಬೈಲ್ ಫೋನ್ ಖರೀದಿಸಿಕೊಟ್ಟಿದ್ದ.

ಇದನ್ನೂ ಓದಿ: ಉತ್ತರ ಪ್ರದೇಶ | ಕೋಮು ಪ್ರಚೋದಕ ಘೋಷಣೆಗಳನ್ನು ಕೂಗಿ ರಸ್ತೆ ತಡೆ ಆರೋಪ : 1000 ಮಂದಿ ಅಪರಿಚಿತರ ವಿರುದ್ದ ಎಫ್‌ಐಆರ್

ಆದರೆ ಇದನ್ನು ಅರಿಯದ ಅಲ್ಕಾ ಮಗಳ ಪ್ರೇಮ ಪ್ರಕರಣದಿಂದ ಬೇಸತ್ತು ಬೇಸರಗೊಂಡಿದ್ದರು. ಹೀಗಾಗಿ ಮಗಳನ್ನು ಕೊಲ್ಲಲು ನಿರ್ಧರಿಸಿ, ಕೊಲೆ ಮಾಡಲು ಸುಭಾಷ್‌ಗೆ ₹ 50,000 ನೀಡಿದ್ದಾರೆ. ಆದರೆ, ತನ್ನ ಮಗಳೊಂದಿಗೆ ಪ್ರೇಮ ಸಂಬಂಧ ಹೊಂದಿದ್ದ ವ್ಯಕ್ತಿ ಸುಭಾಷ್ ಎಂಬುವುದು ತಾಯಿಗೆ ತಿಳಿದಿರಲಿಲ್ಲ ಎಂದು ವರದಿಯಾಗಿದೆ.

ತಾಯಿಯ ಯೋಜನೆಯನ್ನು ಸುಭಾಷ್ ಹುಡುಗಿಗೆ ಬಹಿರಂಗಪಡಿಸಿದ್ದು, ಈ ವೇಳೆ ಚುರುಕಾದ ಹುಡುಗಿ ತನ್ನ ತಾಯಿಯನ್ನು ಕೊಂದರೆ ಮದುವೆಯಾಗುವುದಾಗಿ ಹೇಳಿದ್ದಾರೆ. ನಂತರ ಒಟ್ಟಾಗಿ, ಮೂಲಕ ತಂತ್ರ ರೂಪಿಸಿ, ಕೊಲೆ ನಡೆಸಿದ ಹಾಗೆ ನಟಿಸಿ ಅಲ್ಕಾ ದೇವಿಯನ್ನು ಮೂರ್ಖರನ್ನಾಗಿಸಿದ್ದರು.

ಆದರೆ ಅಲ್ಕಾ ದೇವಿ ಭರವಸೆ ನೀಡಿದ ₹50,000 ಪಾವತಿಸದಿದ್ದಾಗ, ಸುಭಾಷ್ ಅವರನ್ನು ಆಗ್ರಾಕ್ಕೆ ಕರೆದು ಅವರ ಮಗಳ ಜೊತೆಗೆ ಭೇಟಿ ಮಾಡಿಸಿದ್ದಾರೆ. ಮೂವರು ಆಗ್ರಾದಿಂದ ಇಟಾಹ್‌ಗೆ ಪ್ರಯಾಣಿಸಿ ರಾಮಲೀಲಾ ಜಾತ್ರೆಗೆ ಹೋಗಿದ್ದಾರೆ. ಅಲ್ಲಿಂದ ಅಲಿಗಂಜ್‌ಗಿಂತ ಮೊದಲು ಇಳಿದು ಅಲ್ಕಾ ಅವರನ್ನು ನಾಗ್ಲಾ ಚಂದನ್‌ಗೆ ಕರೆದುಕೊಂಡು ಹೋಗಿ ಕತ್ತು ಹಿಸುಕಿ ಕೊಲೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ಮಗಳು ಮತ್ತು ಆಕೆಯ ಪ್ರಿಯಕರನನ್ನು ಬಂಧಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ವಿಡಿಯೊ ನೋಡಿ: ಒಂದು ಪಟಾಕಿ ಕೊಡೋ ಯೋಗ್ಯತೆ ಇಲ್ಲ, ಆನೆ ಓಡಿಸ್ತೀರೇನ್ರೀ ನೀವು?: ಕಳ್ಳಬೇಟೆ ನಿಗ್ರಹ ಶಿಬಿರಕ್ಕೆ ನುಗ್ಗಿದ ಸ್ಥಳೀಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...