Homeಮುಖಪುಟಅಪ್ರಾಪ್ತ ಮಗಳನ್ನು ಕೊಲ್ಲಲು ನೇಮಿಸಿದ ವ್ಯಕ್ತಿಯಿಂದಲೆ ಕೊಲೆಗೀಡಾದ ತಾಯಿ!

ಅಪ್ರಾಪ್ತ ಮಗಳನ್ನು ಕೊಲ್ಲಲು ನೇಮಿಸಿದ ವ್ಯಕ್ತಿಯಿಂದಲೆ ಕೊಲೆಗೀಡಾದ ತಾಯಿ!

- Advertisement -
- Advertisement -

ತನ್ನ ಮಗಳ ಪ್ರೇಮ ಸಂಬಂಧದಿಂದ ಅಸಮಾಧಾನಗೊಂಡಿದ್ದ ತಾಯಿಯೊಬ್ಬರು, ಮಗಳನ್ನು ಕೊಲ್ಲಲು ಬಾಡಿಗೆ ಕೊಲೆಗಾರನನ್ನು ನೇಮಿಸಿದ್ದು, ಕೊನೆಗೆ ತಾಯಿ ಆತನಿಂದಲೇ ಕೊಲೆಯಾದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ವಿಪರ್ಯಾಸವೇನೆಂದರೆ, ತನ್ನ ಮಗಳನ್ನು ಕೊಲ್ಲಲು ತಾಯಿ ಸುಪಾರಿ ನೀಡಿದ್ದ ವ್ಯಕ್ತಿಯೆ ಮಗಳ ಪ್ರಿಯಕರನಾಗಿದ್ದ ಎಂಬುವುದು ಅವರಿಗೆ ತಿಳಿದಿರಲಿಲ್ಲ ಎಂದು ಎನ್‌ಡಿಟಿವಿ ವರದಿ ಮಾಡಿದೆ. ಮಗಳನ್ನು ಕೊಲ್ಲಲು ನೇಮಿಸಿದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಅಕ್ಟೋಬರ್ 6 ರಂದು ಉತ್ತರ ಪ್ರದೇಶದ ಇಟಾಹ್ ಜಿಲ್ಲೆಯ ಜಸ್ರತ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ರಾಗಿ ಗದ್ದೆಯಲ್ಲಿ ಅಲ್ಕಾ ಅವರ ಮೃತದೇಹ ಪತ್ತೆಯಾದಾಗ ಘಟನೆ ಬೆಳಕಿಗೆ ಬಂದಿತ್ತು. ಮಗಳನ್ನು ಕೊಲ್ಲಲು ನೇಮಿಸಿದ

ಕಳೆದ ವಾರ, ಅಕ್ಟೋಬರ್ 5 ರಂದು, ಅಲ್ಕಾ ದೇವಿ ಅವರು ತಮ್ಮ ಮಗಳ ಪ್ರೇಮ ಪ್ರಕರಣದ ವಿಚಾರದ ಬಗ್ಗೆ ಮಾತನಾಡಲು ಇಟಾಹ್‌ಗೆ ಹೋಗಿದ್ದರು. ಸಂಜೆಯವರೆಗೂ ಅವರು ವಾಪಸ್ ಬಾರದೆ ಇದ್ದಾಗ, ಅವರ ಪತಿ ರಮಾಕಾಂತ್ ಅವರು ಅಲ್ಕಾ ಅವರ ಮೊಬೈಲ್‌ಗೆ ಕರೆ ಮಾಡಿದ್ದರು. ಆದರೆ ಅವರ ಮೊಬೈಲ್ ಸ್ವಿಚ್ ಆಫ್ ಆಗಿತ್ತು. ಎಷ್ಟು ಹುಡುಕಿದರೂ ಸಿಗದಿದ್ದಾಗ ಪೊಲೀಸರಿಗೆ ದೂರು ನೀಡಿದ್ದರು.

ಇದನ್ನೂಓದಿ: ತಮಿಳುನಾಡು | ತಾಂತ್ರಿಕ ಸಮಸ್ಯೆ ಬಳಿಕ ಸುರಕ್ಷಿತವಾಗಿ ಲ್ಯಾಂಡ್ ಆದ ಏರ್‌ ಇಂಡಿಯಾ ವಿಮಾನ : ಪ್ರಯಾಣಿಕರು ಸೇಫ್

ಭಾನುವಾರ ಸಂಜೆಯ ನಂತರ ಮೃತ ದೇಹವೊಂದನ್ನು ಗುರುತಿಸಲು ಪೊಲೀಸರು ಕರೆಸಿದ್ದು, ಅಲ್ಲಿ ಅವರು ತನ್ನ ಪತ್ನಿ ಅಲ್ಕಾ ಅವರ ಮೃತದೇಹವನ್ನು ಗುರುತಿಸಿದ್ದರು. ನಂತರ, ಅಲ್ಕಾ ಅವರ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿತ್ತು.

ಪತ್ನಿಯ ಸಾವಿನ ಬಗ್ಗೆ ರಮಾಕಾಂತ್ ತನ್ನ ಗ್ರಾಮದ ಅಖಿಲೇಶ್ ಮತ್ತು ಅನಿಕೇತ್ ಎಂಬ ಇಬ್ಬರ ವಿರುದ್ಧ ಜಸ್ರತ್‌ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಈ ಇಬ್ಬರು ಹಿಂದೆ ಅವರ ಅಪ್ತಾಪ್ತ ಮಗಳನ್ನು ಆಮಿಷವೊಡ್ಡಿ ಅಪಹರಿಸಿದ್ದರು ಎಂಬ ಆರೋಪವಿತ್ತು. ಹಾಗಾಗಿ ಪೊಲೀಸರು ಅಖಿಲೇಶ್ ಅವರನ್ನು ಬಂಧಿಸಿ ಜೈಲಿಗೆ ಹಾಕಿದ್ದರು. ಜೊತೆಗೆ ಅಪ್ರಾಪ್ತ ಬಾಲಕಿಯನ್ನು ಸುರಕ್ಷಿತವಾಗಿ ರಕ್ಷಿಸಿ ಕುಟುಂಬಕ್ಕೆ ವರ್ಗಾಯಿಸಲಾಗಿತ್ತು.

ಮೇಲಿನ ಘಟನೆಯ ನಂತರ ಹೆದರಿದ್ದ ಅಲ್ಕಾ ದೇವಿ ಅವರು ತನ್ನ ಮಗಳನ್ನು ಫರೂಕಾಬಾದ್ ಜಿಲ್ಲೆಯ ಸಿಕಂದರಪುರ ಖಾಸ್ ಗ್ರಾಮದಲ್ಲಿರುವ ತನ್ನ ತಾಯಿಯ ಮನೆಗೆ ಕಳುಹಿಸಿದ್ದರು. ಇಲ್ಲಿ ಬಾಲಕಿ 38 ವರ್ಷದ ಸುಭಾಷ್ ಜೊತೆ ಸಂಬಂಧ ಬೆಳೆಸಿದ್ದರು. ಸುಭಾಷ್‌ ಈ ಹಿಂದೆ 10 ವರ್ಷ ಜೈಲು ಶಿಕ್ಷೆ ಅನುಭವಿಸಿದ್ದ ಅಪರಾಧಿಯಾಗಿದ್ದ. ಈತ ಬಾಲಕಿಗೆ ಮಾತನಾಡಲು ಮೊಬೈಲ್ ಫೋನ್ ಖರೀದಿಸಿಕೊಟ್ಟಿದ್ದ.

ಇದನ್ನೂ ಓದಿ: ಉತ್ತರ ಪ್ರದೇಶ | ಕೋಮು ಪ್ರಚೋದಕ ಘೋಷಣೆಗಳನ್ನು ಕೂಗಿ ರಸ್ತೆ ತಡೆ ಆರೋಪ : 1000 ಮಂದಿ ಅಪರಿಚಿತರ ವಿರುದ್ದ ಎಫ್‌ಐಆರ್

ಆದರೆ ಇದನ್ನು ಅರಿಯದ ಅಲ್ಕಾ ಮಗಳ ಪ್ರೇಮ ಪ್ರಕರಣದಿಂದ ಬೇಸತ್ತು ಬೇಸರಗೊಂಡಿದ್ದರು. ಹೀಗಾಗಿ ಮಗಳನ್ನು ಕೊಲ್ಲಲು ನಿರ್ಧರಿಸಿ, ಕೊಲೆ ಮಾಡಲು ಸುಭಾಷ್‌ಗೆ ₹ 50,000 ನೀಡಿದ್ದಾರೆ. ಆದರೆ, ತನ್ನ ಮಗಳೊಂದಿಗೆ ಪ್ರೇಮ ಸಂಬಂಧ ಹೊಂದಿದ್ದ ವ್ಯಕ್ತಿ ಸುಭಾಷ್ ಎಂಬುವುದು ತಾಯಿಗೆ ತಿಳಿದಿರಲಿಲ್ಲ ಎಂದು ವರದಿಯಾಗಿದೆ.

ತಾಯಿಯ ಯೋಜನೆಯನ್ನು ಸುಭಾಷ್ ಹುಡುಗಿಗೆ ಬಹಿರಂಗಪಡಿಸಿದ್ದು, ಈ ವೇಳೆ ಚುರುಕಾದ ಹುಡುಗಿ ತನ್ನ ತಾಯಿಯನ್ನು ಕೊಂದರೆ ಮದುವೆಯಾಗುವುದಾಗಿ ಹೇಳಿದ್ದಾರೆ. ನಂತರ ಒಟ್ಟಾಗಿ, ಮೂಲಕ ತಂತ್ರ ರೂಪಿಸಿ, ಕೊಲೆ ನಡೆಸಿದ ಹಾಗೆ ನಟಿಸಿ ಅಲ್ಕಾ ದೇವಿಯನ್ನು ಮೂರ್ಖರನ್ನಾಗಿಸಿದ್ದರು.

ಆದರೆ ಅಲ್ಕಾ ದೇವಿ ಭರವಸೆ ನೀಡಿದ ₹50,000 ಪಾವತಿಸದಿದ್ದಾಗ, ಸುಭಾಷ್ ಅವರನ್ನು ಆಗ್ರಾಕ್ಕೆ ಕರೆದು ಅವರ ಮಗಳ ಜೊತೆಗೆ ಭೇಟಿ ಮಾಡಿಸಿದ್ದಾರೆ. ಮೂವರು ಆಗ್ರಾದಿಂದ ಇಟಾಹ್‌ಗೆ ಪ್ರಯಾಣಿಸಿ ರಾಮಲೀಲಾ ಜಾತ್ರೆಗೆ ಹೋಗಿದ್ದಾರೆ. ಅಲ್ಲಿಂದ ಅಲಿಗಂಜ್‌ಗಿಂತ ಮೊದಲು ಇಳಿದು ಅಲ್ಕಾ ಅವರನ್ನು ನಾಗ್ಲಾ ಚಂದನ್‌ಗೆ ಕರೆದುಕೊಂಡು ಹೋಗಿ ಕತ್ತು ಹಿಸುಕಿ ಕೊಲೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ಮಗಳು ಮತ್ತು ಆಕೆಯ ಪ್ರಿಯಕರನನ್ನು ಬಂಧಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ವಿಡಿಯೊ ನೋಡಿ: ಒಂದು ಪಟಾಕಿ ಕೊಡೋ ಯೋಗ್ಯತೆ ಇಲ್ಲ, ಆನೆ ಓಡಿಸ್ತೀರೇನ್ರೀ ನೀವು?: ಕಳ್ಳಬೇಟೆ ನಿಗ್ರಹ ಶಿಬಿರಕ್ಕೆ ನುಗ್ಗಿದ ಸ್ಥಳೀಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...