Homeಮುಖಪುಟಅಪ್ರಾಪ್ತ ಮಗಳನ್ನು ಕೊಲ್ಲಲು ನೇಮಿಸಿದ ವ್ಯಕ್ತಿಯಿಂದಲೆ ಕೊಲೆಗೀಡಾದ ತಾಯಿ!

ಅಪ್ರಾಪ್ತ ಮಗಳನ್ನು ಕೊಲ್ಲಲು ನೇಮಿಸಿದ ವ್ಯಕ್ತಿಯಿಂದಲೆ ಕೊಲೆಗೀಡಾದ ತಾಯಿ!

- Advertisement -
- Advertisement -

ತನ್ನ ಮಗಳ ಪ್ರೇಮ ಸಂಬಂಧದಿಂದ ಅಸಮಾಧಾನಗೊಂಡಿದ್ದ ತಾಯಿಯೊಬ್ಬರು, ಮಗಳನ್ನು ಕೊಲ್ಲಲು ಬಾಡಿಗೆ ಕೊಲೆಗಾರನನ್ನು ನೇಮಿಸಿದ್ದು, ಕೊನೆಗೆ ತಾಯಿ ಆತನಿಂದಲೇ ಕೊಲೆಯಾದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ವಿಪರ್ಯಾಸವೇನೆಂದರೆ, ತನ್ನ ಮಗಳನ್ನು ಕೊಲ್ಲಲು ತಾಯಿ ಸುಪಾರಿ ನೀಡಿದ್ದ ವ್ಯಕ್ತಿಯೆ ಮಗಳ ಪ್ರಿಯಕರನಾಗಿದ್ದ ಎಂಬುವುದು ಅವರಿಗೆ ತಿಳಿದಿರಲಿಲ್ಲ ಎಂದು ಎನ್‌ಡಿಟಿವಿ ವರದಿ ಮಾಡಿದೆ. ಮಗಳನ್ನು ಕೊಲ್ಲಲು ನೇಮಿಸಿದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಅಕ್ಟೋಬರ್ 6 ರಂದು ಉತ್ತರ ಪ್ರದೇಶದ ಇಟಾಹ್ ಜಿಲ್ಲೆಯ ಜಸ್ರತ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ರಾಗಿ ಗದ್ದೆಯಲ್ಲಿ ಅಲ್ಕಾ ಅವರ ಮೃತದೇಹ ಪತ್ತೆಯಾದಾಗ ಘಟನೆ ಬೆಳಕಿಗೆ ಬಂದಿತ್ತು. ಮಗಳನ್ನು ಕೊಲ್ಲಲು ನೇಮಿಸಿದ

ಕಳೆದ ವಾರ, ಅಕ್ಟೋಬರ್ 5 ರಂದು, ಅಲ್ಕಾ ದೇವಿ ಅವರು ತಮ್ಮ ಮಗಳ ಪ್ರೇಮ ಪ್ರಕರಣದ ವಿಚಾರದ ಬಗ್ಗೆ ಮಾತನಾಡಲು ಇಟಾಹ್‌ಗೆ ಹೋಗಿದ್ದರು. ಸಂಜೆಯವರೆಗೂ ಅವರು ವಾಪಸ್ ಬಾರದೆ ಇದ್ದಾಗ, ಅವರ ಪತಿ ರಮಾಕಾಂತ್ ಅವರು ಅಲ್ಕಾ ಅವರ ಮೊಬೈಲ್‌ಗೆ ಕರೆ ಮಾಡಿದ್ದರು. ಆದರೆ ಅವರ ಮೊಬೈಲ್ ಸ್ವಿಚ್ ಆಫ್ ಆಗಿತ್ತು. ಎಷ್ಟು ಹುಡುಕಿದರೂ ಸಿಗದಿದ್ದಾಗ ಪೊಲೀಸರಿಗೆ ದೂರು ನೀಡಿದ್ದರು.

ಇದನ್ನೂಓದಿ: ತಮಿಳುನಾಡು | ತಾಂತ್ರಿಕ ಸಮಸ್ಯೆ ಬಳಿಕ ಸುರಕ್ಷಿತವಾಗಿ ಲ್ಯಾಂಡ್ ಆದ ಏರ್‌ ಇಂಡಿಯಾ ವಿಮಾನ : ಪ್ರಯಾಣಿಕರು ಸೇಫ್

ಭಾನುವಾರ ಸಂಜೆಯ ನಂತರ ಮೃತ ದೇಹವೊಂದನ್ನು ಗುರುತಿಸಲು ಪೊಲೀಸರು ಕರೆಸಿದ್ದು, ಅಲ್ಲಿ ಅವರು ತನ್ನ ಪತ್ನಿ ಅಲ್ಕಾ ಅವರ ಮೃತದೇಹವನ್ನು ಗುರುತಿಸಿದ್ದರು. ನಂತರ, ಅಲ್ಕಾ ಅವರ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿತ್ತು.

ಪತ್ನಿಯ ಸಾವಿನ ಬಗ್ಗೆ ರಮಾಕಾಂತ್ ತನ್ನ ಗ್ರಾಮದ ಅಖಿಲೇಶ್ ಮತ್ತು ಅನಿಕೇತ್ ಎಂಬ ಇಬ್ಬರ ವಿರುದ್ಧ ಜಸ್ರತ್‌ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಈ ಇಬ್ಬರು ಹಿಂದೆ ಅವರ ಅಪ್ತಾಪ್ತ ಮಗಳನ್ನು ಆಮಿಷವೊಡ್ಡಿ ಅಪಹರಿಸಿದ್ದರು ಎಂಬ ಆರೋಪವಿತ್ತು. ಹಾಗಾಗಿ ಪೊಲೀಸರು ಅಖಿಲೇಶ್ ಅವರನ್ನು ಬಂಧಿಸಿ ಜೈಲಿಗೆ ಹಾಕಿದ್ದರು. ಜೊತೆಗೆ ಅಪ್ರಾಪ್ತ ಬಾಲಕಿಯನ್ನು ಸುರಕ್ಷಿತವಾಗಿ ರಕ್ಷಿಸಿ ಕುಟುಂಬಕ್ಕೆ ವರ್ಗಾಯಿಸಲಾಗಿತ್ತು.

ಮೇಲಿನ ಘಟನೆಯ ನಂತರ ಹೆದರಿದ್ದ ಅಲ್ಕಾ ದೇವಿ ಅವರು ತನ್ನ ಮಗಳನ್ನು ಫರೂಕಾಬಾದ್ ಜಿಲ್ಲೆಯ ಸಿಕಂದರಪುರ ಖಾಸ್ ಗ್ರಾಮದಲ್ಲಿರುವ ತನ್ನ ತಾಯಿಯ ಮನೆಗೆ ಕಳುಹಿಸಿದ್ದರು. ಇಲ್ಲಿ ಬಾಲಕಿ 38 ವರ್ಷದ ಸುಭಾಷ್ ಜೊತೆ ಸಂಬಂಧ ಬೆಳೆಸಿದ್ದರು. ಸುಭಾಷ್‌ ಈ ಹಿಂದೆ 10 ವರ್ಷ ಜೈಲು ಶಿಕ್ಷೆ ಅನುಭವಿಸಿದ್ದ ಅಪರಾಧಿಯಾಗಿದ್ದ. ಈತ ಬಾಲಕಿಗೆ ಮಾತನಾಡಲು ಮೊಬೈಲ್ ಫೋನ್ ಖರೀದಿಸಿಕೊಟ್ಟಿದ್ದ.

ಇದನ್ನೂ ಓದಿ: ಉತ್ತರ ಪ್ರದೇಶ | ಕೋಮು ಪ್ರಚೋದಕ ಘೋಷಣೆಗಳನ್ನು ಕೂಗಿ ರಸ್ತೆ ತಡೆ ಆರೋಪ : 1000 ಮಂದಿ ಅಪರಿಚಿತರ ವಿರುದ್ದ ಎಫ್‌ಐಆರ್

ಆದರೆ ಇದನ್ನು ಅರಿಯದ ಅಲ್ಕಾ ಮಗಳ ಪ್ರೇಮ ಪ್ರಕರಣದಿಂದ ಬೇಸತ್ತು ಬೇಸರಗೊಂಡಿದ್ದರು. ಹೀಗಾಗಿ ಮಗಳನ್ನು ಕೊಲ್ಲಲು ನಿರ್ಧರಿಸಿ, ಕೊಲೆ ಮಾಡಲು ಸುಭಾಷ್‌ಗೆ ₹ 50,000 ನೀಡಿದ್ದಾರೆ. ಆದರೆ, ತನ್ನ ಮಗಳೊಂದಿಗೆ ಪ್ರೇಮ ಸಂಬಂಧ ಹೊಂದಿದ್ದ ವ್ಯಕ್ತಿ ಸುಭಾಷ್ ಎಂಬುವುದು ತಾಯಿಗೆ ತಿಳಿದಿರಲಿಲ್ಲ ಎಂದು ವರದಿಯಾಗಿದೆ.

ತಾಯಿಯ ಯೋಜನೆಯನ್ನು ಸುಭಾಷ್ ಹುಡುಗಿಗೆ ಬಹಿರಂಗಪಡಿಸಿದ್ದು, ಈ ವೇಳೆ ಚುರುಕಾದ ಹುಡುಗಿ ತನ್ನ ತಾಯಿಯನ್ನು ಕೊಂದರೆ ಮದುವೆಯಾಗುವುದಾಗಿ ಹೇಳಿದ್ದಾರೆ. ನಂತರ ಒಟ್ಟಾಗಿ, ಮೂಲಕ ತಂತ್ರ ರೂಪಿಸಿ, ಕೊಲೆ ನಡೆಸಿದ ಹಾಗೆ ನಟಿಸಿ ಅಲ್ಕಾ ದೇವಿಯನ್ನು ಮೂರ್ಖರನ್ನಾಗಿಸಿದ್ದರು.

ಆದರೆ ಅಲ್ಕಾ ದೇವಿ ಭರವಸೆ ನೀಡಿದ ₹50,000 ಪಾವತಿಸದಿದ್ದಾಗ, ಸುಭಾಷ್ ಅವರನ್ನು ಆಗ್ರಾಕ್ಕೆ ಕರೆದು ಅವರ ಮಗಳ ಜೊತೆಗೆ ಭೇಟಿ ಮಾಡಿಸಿದ್ದಾರೆ. ಮೂವರು ಆಗ್ರಾದಿಂದ ಇಟಾಹ್‌ಗೆ ಪ್ರಯಾಣಿಸಿ ರಾಮಲೀಲಾ ಜಾತ್ರೆಗೆ ಹೋಗಿದ್ದಾರೆ. ಅಲ್ಲಿಂದ ಅಲಿಗಂಜ್‌ಗಿಂತ ಮೊದಲು ಇಳಿದು ಅಲ್ಕಾ ಅವರನ್ನು ನಾಗ್ಲಾ ಚಂದನ್‌ಗೆ ಕರೆದುಕೊಂಡು ಹೋಗಿ ಕತ್ತು ಹಿಸುಕಿ ಕೊಲೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ಮಗಳು ಮತ್ತು ಆಕೆಯ ಪ್ರಿಯಕರನನ್ನು ಬಂಧಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ವಿಡಿಯೊ ನೋಡಿ: ಒಂದು ಪಟಾಕಿ ಕೊಡೋ ಯೋಗ್ಯತೆ ಇಲ್ಲ, ಆನೆ ಓಡಿಸ್ತೀರೇನ್ರೀ ನೀವು?: ಕಳ್ಳಬೇಟೆ ನಿಗ್ರಹ ಶಿಬಿರಕ್ಕೆ ನುಗ್ಗಿದ ಸ್ಥಳೀಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...