Homeಚಳವಳಿಚಳುವಳಿ ಮುಗಿದಿಲ್ಲ, ಇನ್ನೂ ತೀವ್ರಗೊಳ್ಳುತ್ತದೆ - ರೈತ ಮುಖಂಡರು

ಚಳುವಳಿ ಮುಗಿದಿಲ್ಲ, ಇನ್ನೂ ತೀವ್ರಗೊಳ್ಳುತ್ತದೆ – ರೈತ ಮುಖಂಡರು

- Advertisement -
- Advertisement -

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ಕೃಷಿ ಕಾನೂನುಗಳ ವಿರುದ್ಧ ನಡೆಯುತ್ತಿರುವ ರೈತ ಆಂದೋಲನವು ಶನಿವಾರ ತನ್ನ ನೂರನೇ ದಿನಕ್ಕೆ ಕಾಲಿಡುತ್ತಿದೆ. ಈ ಹಿನ್ನಲೆಯಲ್ಲಿ ರೈತ ಸಂಘಗಳ ಮುಖಂಡರು ತಮ್ಮ ಚಳುವಳಿ ಮುಗಿದಿಲ್ಲ, ಇದು ಇನ್ನೂ ತೀವ್ರಗೊಳ್ಳುತ್ತದೆ ಎಂದು ಪ್ರತಿಪಾದಿಸಿದ್ದಾರೆ.

ರೈತ ಆಂದೋಲನವು ಏಕತೆಯ ಸಂದೇಶವನ್ನು ರವಾನಿಸಿದ್ದು, ರಾಜಕೀಯವಾಗಿ ಮರಳಿ ರೈತರತ್ತ ನೋಡುವಂತೆ ಮಾಡಿದೆ ಎಂದು ಅವರು ಶುಕ್ರವಾರ ಹೇಳಿದ್ದಾರೆ.

ಮೂರು ತಿಂಗಳಿನಿಂದ, ಸಿಂಗು, ಟಿಕ್ರಿ ಮತ್ತು ಗಾಜಿಪುರದ ಗಡಿಗಳು, ದೇಶದ ವಿವಿಧ ಭಾಗಗಳ, ಮುಖ್ಯವಾಗಿ ಪಂಜಾಬ್, ಹರಿಯಾಣ ಮತ್ತು ಪಶ್ಚಿಮ ಉತ್ತರಪ್ರದೇಶದ ಸಾವಿರಾರು ರೈತರು ಆಕ್ರಮಿಸಿಕೊಂಡಿರುವ ಪಟ್ಟಣಗಳಾಗಿ ಮಾರ್ಪಟ್ಟಿವೆ.

ಭಾರತೀಯ ಕಿಸಾನ್ ಒಕ್ಕೂಟದ (ಬಿಕೆಯು) ರಾಕೇಶ್ ಟಿಕಾಯತ್‌ ಪ್ರತಿಭಟನೆ ಅಗತ್ಯವಿರುವವರೆಗೂ ಹೋರಾಟಕ್ಕೆ ಸಿದ್ಧರಿದ್ದೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪಂಚರಾಜ್ಯ ಚುನಾವಣೆ: ಬಿಜೆಪಿ ವಿರುದ್ಧ ಅಭಿಯಾನಕ್ಕೆ ಮುಂದಾದ ದೆಹಲಿ ರೈತ ಮುಖಂಡರು

“ನಾವು ಸಂಪೂರ್ಣವಾಗಿ ಸಿದ್ಧರಾಗಿದ್ದೇವೆ. ಸರ್ಕಾರವು ನಮ್ಮ ಮಾತುಗಳನ್ನು ಆಲಿಸಿ ನಮ್ಮ ಬೇಡಿಕೆಗಳನ್ನು ಈಡೇರಿಸುವವರೆಗೆ ನಾವು ಇಲ್ಲಿಂದ ಹೋಗುವುದಿಲ್ಲ” ಎಂದು ಚಳವಳಿಯ ಮುಂಚೂಣಿಯಲ್ಲಿರುವ ನಾಯಕರಾದ ಟಿಕಾಯತ್‌ ತಿಳಿಸಿದ್ದಾರೆ.

ಸರ್ಕಾರ ಮತ್ತು ರೈತ ಸಂಘಗಳ ನಡುವೆ ಹಲವಾರು ಸುತ್ತಿನ ಮಾತುಕತೆಗಳ ಹೊರತಾಗಿಯೂ, ಒಮ್ಮತಕ್ಕೆ ಬರಲು ವಿಫಲರಾಗಿದ್ದಾರೆ. ಇದುವರೆಗೂ ಒಟ್ಟು ಹನ್ನೊಂಡು ಸುತ್ತಿನ ಮಾತುಕತೆಗಳು ನಡೆದಿವೆ.

ಸೆಪ್ಟೆಂಬರ್‌ನಲ್ಲಿ ಜಾರಿಗೆ ಬಂದ ಮೂರು ಕೃಷಿ ಕಾನೂನುಗಳನ್ನು ಕೃಷಿ ಕ್ಷೇತ್ರದ ಪ್ರಮುಖ ಸುಧಾರಣೆಗಳೆಂದು ಕೇಂದ್ರವು ಹೇಳುತ್ತಿದ್ದು, ಅದು ಮಧ್ಯವರ್ತಿಗಳನ್ನು ತೆಗೆದುಹಾಕುತ್ತದೆ ಮತ್ತು ರೈತರು ತಮ್ಮ ಉತ್ಪನ್ನಗಳನ್ನು ದೇಶದಲ್ಲಿ ಎಲ್ಲಿ ಬೇಕಾದರೂ ಮಾರಾಟ ಮಾಡಲು ಅನುವು ಮಾಡಿಕೊಡುತ್ತದೆ ಎಂದು ಪ್ರತಿಪಾದಿಸಿದೆ.

ಈ ಹೊಸ ಕಾನೂನುಗಳು ಕನಿಷ್ಟ ಬೆಂಬಲ ಬೆಲೆ (ಎಂಎಸ್‌ಪಿ) ಯನ್ನು ಕಿತ್ತು ಹಾಕುತ್ತದೆ ಮತ್ತು “ಮಂಡಿ” (ಸಗಟು ಮಾರುಕಟ್ಟೆ) ವ್ಯವಸ್ಥೆ ಇಲ್ಲವಾಗಲು ದಾರಿ ಮಾಡಿಕೊಟ್ಟಂತಾಗುತ್ತವೆ ಎಂಬ ಆತಂಕವನ್ನು ಪ್ರತಿಭಟನಾ ನಿರತ ರೈತರು ವ್ಯಕ್ತಪಡಿಸಿದ್ದಾರೆ.

ರೈತ ಮುಖಂಡರ ಪ್ರಕಾರ, ಶನಿವಾರ ತನ್ನ 100 ನೇ ದಿನವನ್ನು ಪೂರ್ಣಗೊಳಿಸಲಿರುವ ಆಂದೋಲನವು ಪ್ರತಿಭಟನೆಯ ತಕ್ಷಣದ ವ್ಯಾಪ್ತಿಯನ್ನು ಮೀರಿ ಹೆಚ್ಚಿನದನ್ನು ಸಾಧಿಸಿದ್ದು, ಇದು ರೈತರಲ್ಲಿ ರಾಷ್ಟ್ರವ್ಯಾಪಿ ಐಕ್ಯತೆಯನ್ನು ಹುಟ್ಟುಹಾಕಿದೆ ಎಂದು ಪ್ರತಿಪಾದಿಸಿದ್ದಾರೆ.

ಇದನ್ನೂ ಓದಿ: ರೈತರನ್ನು ಸುತ್ತುವರಿಯಲು ನೋಡಿದರು, ಈಗ ರೈತರೇ ಸರ್ಕಾರವನ್ನು ಸುತ್ತುವರೆದಿದ್ದಾರೆ: ಡಾ. ಅಮಿತ್ ಬಾಧುರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...