Homeರಾಷ್ಟ್ರೀಯಸರ್ಕಾರಿ ಸಮಾರಂಭದಲ್ಲಿ ನಿರ್ಧಿಷ್ಟ ಧರ್ಮದ ಪೂಜೆಗೆ ತಡೆ; ಪುರೋಹಿತನನ್ನು ಹೊರಗೆ ಕಳುಹಿಸಿದ DMK ಸಂಸದ

ಸರ್ಕಾರಿ ಸಮಾರಂಭದಲ್ಲಿ ನಿರ್ಧಿಷ್ಟ ಧರ್ಮದ ಪೂಜೆಗೆ ತಡೆ; ಪುರೋಹಿತನನ್ನು ಹೊರಗೆ ಕಳುಹಿಸಿದ DMK ಸಂಸದ

ಇದು ಎಲ್ಲಾ ಜನರ ಸರ್ಕಾರ, ದ್ರಾವಿಡರ ಸರ್ಕಾರವಾಗಿದ್ದು, ಬೇರೆ ಸರ್ಕಾರದ ರೀತಿ ಈ ಸರ್ಕಾರ ಅಲ್ಲ ಎಂದು ಸಂಸದ ಡಾ. ಸೆಂತಿಲ್ ಕುಮಾರ್‌ ಹೇಳಿದ್ದಾರೆ

- Advertisement -
- Advertisement -

ತಮಿಳುನಾಡಿನ ಧರ್ಮಪುರಿಯ ಡಿಎಂಕೆ ಸಂಸದ ಡಾ. ಸೆಂತಿಲ್‌ಕುಮಾರ್ ಅವರು ಸರ್ಕಾರಿ ಸಮಾರಂಭದಲ್ಲಿ ಹಿಂದೂ ಸಂಪ್ರದಾಯದಂತೆ ನಡೆಯುತ್ತಿದ್ದ ಭೂಮಿ ಪೂಜೆಯನ್ನು ತಡೆದು ಅಧಿಕಾರಿಗಳನ್ನು ತರಾಟೆಗೆ ಪಡೆದು, ಅರ್ಚಕನನ್ನು ವಾಪಾಸು ಕಳುಹಿಸಿರುವ ಘಟನೆ ಇತ್ತೀಚೆಗೆ ನಡೆದಿದೆ. ಘಟನೆಯ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಸರ್ಕಾರಿ ಕಾರ್ಯಕ್ರಮದಲ್ಲಿ ಧಾರ್ಮಿಕತೆಯನ್ನು ದೂರ ಇಟ್ಟಿದ್ದಕ್ಕಾಗಿ ನೆಟ್ಟಿಗರು ಅವರನ್ನು ಶ್ಲಾಘಿಸಿದ್ದಾರೆ.

ಸರ್ಕಾರಿ ಕಾರ್ಯಕ್ರಮ ನಡೆಯುತ್ತಿದ್ದ ಸ್ಥಳಕ್ಕೆ ಆಗಮಿಸಿದ ಅವರು, ಭೂಮಿ ಪೂಜೆಯೂ ಹಿಂದೂ ಸಂಪ್ರದಾಯದಂತೆ ಮಾತ್ರ ನಡೆಯುತ್ತಿದ್ದುದನ್ನು ಪ್ರಶ್ನಿಸಿದ್ದಾರೆ. ಸ್ಥಳದಲ್ಲಿ ಇದ್ದ ಅಧಿಕಾರಿಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡ ಅವರು, ಸರ್ಕಾರಿ ಕಾರ್ಯಕ್ರಮದಲ್ಲಿ ಇವುಗಳನ್ನೆಲ್ಲಾ ನಡೆಸಬಾರದು ಎಂದು ನಿಮಗೆ ಸೂಚನೆ ಇದೆಯೆ ಇಲ್ಲವೆ ಎಂದು ಪ್ರಶ್ನಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಹಿಂದೂ ಧರ್ಮದ ಪ್ರಕಾರ ಭೂಮಿ ಪೂಜೆ ನಡೆಸುವುದಾದರೆ, ಉಳಿದ ಧರ್ಮಗಳ ಧರ್ಮಗುರುಗಳು ಎಲ್ಲಿ? ಕ್ರಿಶ್ಚಿಯನ್, ಮುಸ್ಲಿಂ, ದ್ರಾವಿಡರು ಎಲ್ಲಿ? ಧರ್ಮವನ್ನೇ ಆಚರಿಸದವರು ಎಲ್ಲಿ?” ಎಂದು ಅಧಿಕಾರಿಯೊಂದಿಗೆ ಸೆಂತಿಲ್ ಕುಮಾರ್‌ ಪ್ರಶ್ನಿಸಿದ್ದಾರೆ.

“ಮಸೀದಿಯ ಇಮಾಂ, ಚರ್ಚಿನ ಫಾದರ್‌ ಸೇರಿದಂತೆ ಎಲ್ಲರನ್ನೂ ಕರೆಯಿರಿ” ಎಂದು ಸ್ಥಳದಲ್ಲಿ ಇದ್ದ ಅರ್ಚಕನನ್ನು ತೆರಳುವಂತೆ ಸಂಸದರು ಕೇಳಿಕೊಂಡಿದ್ದಾರೆ.

ಸರ್ಕಾರಿ ಅಧಿಕಾರಿಯಾಗಿ ಇವೆಲ್ಲಾ ಮಾಡಬಾರದು ಎಂದು ನಿಮಗೆ ಗೊತ್ತಿಲ್ಲವೆ ಎಂದು ಸ್ಥಳದಲ್ಲಿದ್ದ ಅಧಿಕಾರಿಯನ್ನು ಪ್ರಶ್ನಿಸಿದ ಸಂಸದರು, ‘‘ನಿಮಗೆ ಸೂಚನೆ ಇದೆಯೆ-ಇಲ್ಲವೆ? ಈ ರೀತಿಯ ಕಾರ್ಯಕ್ರಮಕ್ಕೆ ನನ್ನನ್ನು ದಯವಿಟ್ಟು ಕರೆಯದಿರಿ. ಇದು ಎಲ್ಲಾ ಜನರ ಸರ್ಕಾರ, ದ್ರಾವಿಡರ ಸರ್ಕಾರ. ಬೇರೆ ಸರ್ಕಾರದ ರೀತಿ ಈ ಸರ್ಕಾರ ಅಲ್ಲ” ಎಂದು ಹೇಳಿದ್ದಾರೆ.

“ಈ ರೀತಿ ಮಾಡಬೇಡಿ ಎಂದು ಹೇಳುವುದಿಲ್ಲ. ಎಲ್ಲಾ ಧರ್ಮದವರನ್ನೂ ಕರೆಯಿರಿ, ಧರ್ಮ ನಂಬದವರನ್ನೂ ಕರೆಯಿರಿ, ಕ್ರಿಶ್ಚಿಯನ್, ಮುಸ್ಲಿಂ ಧರ್ಮಿಯರನ್ನೂ ಕರೆಯಿರಿ” ಎಂದು ಹೇಳಿದ್ದಾರೆ.

ತಮಿಳುನಾಡಿನ ಧರ್ಮಪುರಿ ಕ್ಷೇತ್ರವನ್ನು 2019ರಿಂದ ಸಂಸತ್ತಿನಲ್ಲಿ ಪ್ರತಿನಿಧಿಸಿಸುತ್ತಿರುವ ಡಾ. ಎಸ್. ಸೆಂಥಿಲ್‌ಕುಮಾರ್ ಅವರು ವೃತ್ತಿಯಲ್ಲಿ ವೈದ್ಯರಾಗಿದ್ದಾರೆ. ಅವರು 2019 ರ ಲೋಕಸಭೆ ಚುನಾವಣೆಯಲ್ಲಿ 70,753 ಮತಗಳ ಅಂತರದಿಂದ ಗೆದ್ದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

10 COMMENTS

  1. ಈ ಅಯೋಗ್ಯನಿಗೆ ಹಿಂದೂ ನೆಲೆಗಟ್ಟಿನ ಆದಾರದ ಮೇಲೆನೆ ಈ ಸಮಾಜ ನಿಂತಿರೋದು ಅನ್ನೋದು ತಿಳಿದಿರಬೇಕು,ಹಿಂದೂ ನೆಲೆಗಟ್ಟಿನಲ್ಲಿ ಇರಲು ಆಗದ ಆಯೋಗ್ಯರು ತೊಲಗಲಿ ಇಲ್ಲಿಂದ

  2. ಅಂದಾಜು ಪಟ್ಟಿಯಲ್ಲಿ ಈಬಗೆಯ ಪೂಜೆಮಾಡಲು ವೆಚ್ಚಕ್ಕೆ ಹಣಮೀಸಲಿಡುವುದಿಲ್ಲ. ಆದರೂ ಸಾವಿರಾರು ರುಪಾಯಿ ವೆಚ್ಚಮಾಡಿ ಪೂಜೆಮಾಡಲಾಗುತ್ತದೆ

  3. Height of stupidity displayed by DMK leader just for show off and minority votes appeasement

    Just for 5 minutes pooja so much hungammas but years together government projects gets delayed but these leaders are not seen in those times

  4. after inviting the priest at least you respect him. have a religious tolerance. sending back to priest and cancelling the pooja is not a good idea. he should allowed Pooja and next time he would have cancelled priorly. being a public representative he should be tolerant to religious activities

  5. ಹಿಂದೂ ಎನ್ನುವುದೇ ಇಲ್ಲಾ…. ಇದೆಲ್ಲಾ ಕಟ್ಟುಕಥೆ… ನಿಮ್ಮ ಕಟ್ಟು ಕಥೆಗಳನ್ನು ನಿಮ್ಮ ಮನೆಯವರಿಗೆ ಹೇಳಿ ಬೇರೆಯವರಿಗೆ ಅಲ್ಲಾ… ತಮ್ಮ ಹೊಟ್ಟೆ ಪಾಡಿಗಾಗಿ ಈ ರೀತಿಯಾಗಿ ಹಿಂದೂ ಹಿಂದೂ ಅಂತ ನಮ್ಮ ತಲೆಯಲ್ಲಿ ಹಾಕಿದ್ದಾರೆ….. ನಾವು ದ್ರಾವಿಡರು, ಮೂಲ ನಿವಾಸಿಗಳು….
    ಸೂಪರ್ ಸರ್…. ಹಿಂದೂ ಎಂಬ ನೆಪದಲ್ಲಿ ನಮ್ಮ ದೇಶದ ಸಂವಿಧಾನದ ಕಾನೂನುಗಳನ್ನು ಉಲ್ಲಂಘನೆ ಮಾಡುತ್ತಿದ್ದಾರೆ, ಅಸಮಾನತೆ ಉಂಟು ಮಾಡುತ್ತಿದ್ದಾರೆ, ಧಾರ್ಮಿಕ ಸ್ವಾತಂತ್ರ್ಯದ ಹಕ್ಕನ್ನು ಕಿತ್ತುಕೊಳ್ಳುತ್ತಿದ್ದಾರೆ, ವಾಕ್ ಸ್ವಾತಂತ್ರ್ಯದ ಹಕ್ಕನ್ನು ಕಿತ್ತುಕೊಳ್ಳುತ್ತಿದ್ದಾರೆ….. ಕಾನೂನಿನ ಅರಿವು ಮುಡಿಸಿದ್ದಕ್ಕಾಗಿ ತಮಗೆ ಅಭಿನಂದನೆಗಳು ಸರ್

  6. ಅವರು ಡಾಕ್ಟರ್ ಓಡಿದ್ದಕ್ಕೂ ಸಾರ್ಥಕ..! ತುಂಬಾ ವೈಜ್ಞಾನಿಕವಾದ ಒಂದು ಸಾಮಾಜಿಕ ಸರ್ವ ಸಮಾನತೆಯ ನಿರ್ಧಾರ.. ಎಲ್ಲಾಕಡೆಯೂ ಇಂತಹಾ ಗೊಡ್ಡು ಮೂಢನಂಬಿಕೆಯ ಆಚರಣೆಗನ್ನು ತಿರಸ್ಕರಿಸಿ ವೈಜ್ಞಾನಿಕ ಮನೋಧರ್ಮ ತಿಳಿಸಿ ಬೆಳೆಸುವ ಆಚರಣೆಗಳು ಬರಬೇಕು. ಆಗಲೇ ಬಾಬಾಸಾಹೇಬ್ ಅಂಬೇಡ್ಕರ್ ಅವರು ಕಂಡಿದ್ದ ಸರ್ವಧರ್ಮ ಸಮನ್ವಯ ಭಾವದ ಈ “ಪ್ರಬುದ್ಧ ಭಾರತದ” ದ ಕನಸು ನನಸಾಗಿ ಅಭಿವೃದ್ಧಿ, ಉನ್ನತಿ ಆಗಲು ಸಾಧ್ಯ. ಜೈಭೀಮ್…✊✊✊

    He is really worthy of being a doctor and worth appreciating wholeheartedly..! A very scientific Decision of bringing social equality.. There should be practices everywhere to reject such superstitious beliefs, practices and teach scientific thoughts among people. Then only Dr. Babasaheb Ambedkar’s dream of “Enlightened India” of interfaith harmony can become a reality and development and upliftment of the Country can be realized… Jai Bheem ✊✊✊

  7. ಕಾರ್ಯಕ್ರಮ ದ ಉದ್ದೇಶವೇ ಭೂಮಿ ಪೂಜೆ ಮಾಡುವುದು.. ಹೀಗಿರುವಾಗ ಪೂಜೆ ಗೆ ಬಂದ ಪುರೋಹಿತ ನನ್ನು ವಾಪಸ್ ಕಳಿಸುವಂತೆ ಮಾಡಿದ dmkಸಂಸದನೊಬ್ಬ ತನ್ನ ಅವಿವೇಕತನದ ಪ್ರದರ್ಶನ ಮಾಡಿ ಅನಾಗರಿಕತೆ ಮೆರೆದಿದ್ದಾನೆ.

  8. ಪ್ರಪಂಚದಲ್ಲಿ ಹಿಂದೂ ಸಮಾಜ ಒಂದೇ ಚೆನ್ನಾಗಿ ಬದುಕುತ್ತಿಲ್ಲ. ಬೇರೆ ಸಮಾಜಗಳು ಹಿಂದೂ ಸಮಾಜಕ್ಕಿಂತ ಚೆನ್ನಾಗೇ ಬದುಕುತ್ತಿವೆ. ಹಿಂದೂ ಧರ್ಮದಿಂದಲೇ ನಮ್ಮ ಸಮಾಜ ಸಾವಿರಾರು ವರ್ಷಗಳಿಂದ ತೆವೆಳುತ್ತಾ ಬಂದಿದೆ. ಇನ್ನೂ ಎಷ್ಟು ಶತಮಾನಗಳ ಕಾಲ ಹೀಗೇ ತೆವಳುತ್ತಾ ಬರುತ್ತದೋ?

LEAVE A REPLY

Please enter your comment!
Please enter your name here

- Advertisment -

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...

ಬಿಡದಿ ಟೌನ್‌ಶಿಪ್ ಸರ್ವೆಗೆ ರೈತರ ತೀವ್ರ ವಿರೋಧ: ಅಧಿಕಾರಿಗಳಿಗೆ ಪೊರಕೆ ಏಟು, ಕಾರುಗಳು ಜಖಂ

ರಾಮನಗರ: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಯನ್ನು ವಿರೋಧಿಸಿ ಸ್ಥಳೀಯ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸೋಮವಾರ (ಜುಲೈ 13) ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಂಡಲಹಳ್ಳಿ...

ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ : ಜೆಡಿಎಸ್ ಶಾಸಕ ಹೆಚ್​​​.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್​ ನೋಟಿಸ್​

ಮಹಿಳೆಯ ಘನತೆಗೆ ಧಕ್ಕೆ ಹಾಗೂ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಸೋಮವಾರ (ಜು.13) ಜೆಡಿಎಸ್‌...

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ...

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...