Homeಮುಖಪುಟಎಂಎಸ್‌ಪಿ ಕಾಗದದಲ್ಲಿತ್ತು, ಕಾಗದದಲ್ಲಿ ಇದೆ ಮತ್ತು ಮುಂದೆಯೂ ಕಾಗದದಲ್ಲಿಯೇ ಇರಲಿದೆ ಹೊರತು ರೈತರಿಗೆ ಸಿಗುತ್ತಿಲ್ಲ: ಯೋಗೇಂದ್ರ...

ಎಂಎಸ್‌ಪಿ ಕಾಗದದಲ್ಲಿತ್ತು, ಕಾಗದದಲ್ಲಿ ಇದೆ ಮತ್ತು ಮುಂದೆಯೂ ಕಾಗದದಲ್ಲಿಯೇ ಇರಲಿದೆ ಹೊರತು ರೈತರಿಗೆ ಸಿಗುತ್ತಿಲ್ಲ: ಯೋಗೇಂದ್ರ ಯಾದವ್

- Advertisement -
- Advertisement -

ನಿನ್ನೆ ಬಳ್ಳಾರಿಯ ಎಪಿಎಂಸಿಗೆ ಭೇಟಿ ನೀಡಿದ್ದೇವು. ಮೆಕ್ಕೆ ಜೋಳಕ್ಕೆ ಒಂದು ಕ್ವಿಂಟಾಲ್‌ಗೆ ಎಂಎಸ್‌ಪಿ 1850 ರೂ ಇದೆ. ಆದರೆ ಬಳ್ಳಾರಿಯಲ್ಲಿ ಕೇವಲ 1459 ರೂ ನೀಡಲಾಗುತ್ತಿದೆ. ಅಂದರೆ ಪ್ರತಿ ಕ್ವಿಂಟಾಲ್‌ಗೆ ರೈತರಿಂದ 400 ರೂ ಲೂಟಿ ಹೊಡೆಯಲಾಗುತ್ತಿದೆ. ಜೋಳಕ್ಕೆ ಕ್ವಿಂಟಲ್‌ಗೆ 2600 ರೂ ಇದೆ. ಆದರೆ ಬಳ್ಳಾರಿಯಲ್ಲಿ 1728 ರೂ ನೀಡಲಾಗುತ್ತಿದೆ. ಕ್ವಿಂಟಾಲ್‌ಗೆ 900 ರೂ ಕಡಿಮೆ ನೀಡಲಾಗುತ್ತಿದೆ. ಇದು ನಾವು ಕೇವಲ ಕನಿಷ್ಟ ಬೆಂಬಲ ಬೆಲೆಯ ಬಗ್ಗೆ ಮಾತನಾಡುತ್ತಿದ್ದೇವೆ ಹೊರತು ಗರಿಷ್ಟ ಬೆಂಬಲ ಬೆಲೆಯ ಬಗ್ಗೆ ಅಲ್ಲ ಎಂದು ಸ್ವರಾಜ್ ಇಂಡಿಯಾ ಪಕ್ಷದ ಅಧ್ಯಕ್ಷರಾದ ಯೋಗೇಂದ್ರ ಯಾದವ್ ಅಸಮಾಧಾನ ವ್ಯಕ್ತಪಡಿಸಿದರು.

ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ದೆಹಲಿಯಲ್ಲಿ ರೈತ ಹೋರಾಟವನ್ನು ಮುನ್ನಡೆಸುತ್ತಿರುವ ಸಂಯುಕ್ತ ಕಿಸಾನ್ ಮೋರ್ಚಾದ 7 ಜನರ ಸಮನ್ವಯ ಸಮಿತಿಯ ಭಾಗವಾದ ನಾನು ಇಂದು ಇಂದು ಕರ್ನಾಟಕಕ್ಕೆ ಬಂದಿದ್ದೇನೆ. ಐತಿಹಾಸಿಕ ರೈತ ಹೋರಾಟವು ಸೆಂಚುರಿ ದಿನಗಳನ್ನು ಪೂರೈಸಿದೆ. ಇದರಿಂದ ನಮಗೆ ಸಂತೋಷವಾಗಿಲ್ಲ. ಏಕೆಂದರೆ ನಾವು ನೂರು ದಿನಗಳನ್ನು ಪೂರೈಸಲು ಹೋರಾಟ ನಡೆಸುತ್ತಿಲ್ಲ. ಬದಲಿಗೆ ನಮ್ಮ ಹಕ್ಕುಗಳನ್ನು ಪಡೆಯಲು ಹೋರಾಡುತ್ತಿದ್ದೇವೆ” ಎಂದರು.

ಕಡಲೆಗೆ ಕ್ವಿಂಟಾಲ್‌ಗೆ ಎಂಎಸ್‌ಪಿ 5100ರೂ ಇದೆ. ಆದರೆ ಕೇವಲ 4182 ರೂ ನೀಡುತ್ತಿದ್ದಾರೆ. ತೊಗರಿ ಬೆಳೆಗೆ ಕ್ವಿಂಟಾಲ್‌ಗೆ ಎಂಎಸ್‌ಪಿ 6000 ರೂ ಇದೆ. ಆದರೆ ಕೇವಲ 4943 ರೂ ನೀಡಲಾಗುತ್ತಿದೆ. ಇದು ಕೇವಲ ಒಂದು ಮಾರ್ಕೆಟ್‌ನ ಒಂದು ದಿನದ ಸ್ಯಾಂಪಲ್ ಅಷ್ಟೇ ನಾವು ಹೇಳುತ್ತಿರುವುದು. ಪ್ರಧಾನಿ ಮಂತ್ರಿ ಎಂಎಸ್‌ಪಿ ಇತ್ತು, ಇದೆ, ಇರಲಿದೆ ಎನ್ನುತ್ತಾರೆ. ನಾವು ಹೇಳುತ್ತೇವೆ ಎಂಎಸ್‌ಪಿ ಕಾಗದದಲ್ಲಿ ಇತ್ತು, ಕಾಗದಲ್ಲಿ ಇದೆ ಮತ್ತು ಕಾಗದದಲ್ಲಿಯೇ ಇರಲಿದೆ ಹೊರತು ರೈತರಿಗೆ ಸಿಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ನೂರು ದಿನಗಳಲ್ಲಿ ಕೇಂದ್ರ ಸರ್ಕಾರವು ರೈತರೊಂದಿಗೆ ಕಠಿಣವಾಗಿ ವರ್ತಿಸಿದೆ. ರೈತರ ಮೇಲೆ ದಬ್ಬಾಳಿಕೆ ನಡೆಸಿದೆ. ರೈತರ ವಿರುದ್ಧ ಪ್ರೊಪಗಂಡಾ ಯುದ್ದ ನಡೆಸಿದೆ. ಇದು ಸರ್ಕಾರದ ಉದ್ದಟತವನ್ನು ತೋರಿಸುತ್ತದೆ. ಕೇಂದ್ರ ಸರ್ಕಾರ ರೈತರ ವಿರುದ್ಧ ಸುಳ್ಳು ಹೇಳಿದ ನೂರು ದಿನಗಳಾಗಿವೆ. ಇದು ಸರ್ಕಾರದ ಅಹಂಕಾರದ ಮತ್ತು ರೈತರ ಸಂಕಲ್ಪದ ನೂರು ದಿನಗಳಾಗಿವೆ ಎಂದರು.

ಈ ಐತಿಹಾಸಿಕ ಹೋರಾಟವನ್ನು ಆರಂಭದಲ್ಲಿ ಇದು ಕೇವಲ ಪಂಜಾಬ್ ರೈತರ ಹೋರಾಟ ಎಂದರು. ನಂತರ ಇದು ಕೇವಲ ಪಂಜಾಬ್ ಮತ್ತು ಹರಿಯಾಣ ರೈತರ ಹೋರಾಟ ಎಂದರು. ಆನಂತರ ಇದು ಪಂಜಾಬ್, ಹರಿಯಾಣ, ರಾಜಸ್ಥಾನ, ಉತ್ತರಖಂಡ ಮತ್ತು ಉತ್ತರ ಪ್ರದೇಶದ ರೈತರ ಹೋರಾಟ ಎಂದರು. ಶೀಘ್ರದಲ್ಲಿಯೇ ಅವರು ಇದು ಕೇವಲ ಭಾರತದ ರೈತರ ಹೋರಾಟ ಎನ್ನುವ ಕಾಲ ಬರಲಿದೆ. ಈ ರೈತ ಹೋರಾಟ ಇಡೀ ದೇಶಕ್ಕೆ ಹರಡುತ್ತಿದೆ ಎಂದು ಯೋಗೇಂದ್ರ ಯಾದವ್ ತಿಳಿಸಿದರು.

ಸರ್ಕಾರ ಈ ಹೋರಾಟವನ್ನು ಕೊಲ್ಲಲು, ದಮನಿಸಲು ಯತ್ನಿಸುತ್ತಿದೆ. ಆದರೆ ಹೋರಾಟ ಮಾತ್ರ ದೊಡ್ಡದಾಗುತ್ತ ದೇಶಾದ್ಯಂತ ಹರಡುತ್ತಿದೆ. ಜನವರಿ 26ರ ನಂತರವಂತೂ ಈ ಹೋರಾಟವನ್ನು ಕೊನೆಗೊಳಿಸಲು ಸರ್ಕಾರ ಇನ್ನಿಲ್ಲದ ಯತ್ನ ಮಾಡಿತು. ದೆಹಲಿಯ ಗಡಿಗಳಲ್ಲಿ ರೈತರ ಸಂಖ್ಯೆ ಕರಗುತ್ತಿದೆ ಎಂದು ಮಾಧ್ಯಮಗಳು ತೋರಿಸುತ್ತಿವೆ. ಆದರೆ ಪಂಜಾಬ್‌ನ ಬರ್ನಾಲದಲ್ಲಿ, ಹರಿಯಾಣ ಖಂಡೇಲಾದಲ್ಲಿ, ರಾಜಸ್ಥಾನದ ಹಳ್ಳಿ ಹಳ್ಳಿಗಳಲ್ಲಿ ಬೃಹತ್ ಮಹಾಪಂಚಾಯತ್‌ಗಳು ನಡೆಯುತ್ತಿರುವುದನ್ನು ಅವು ಹೇಳುತ್ತಿಲ್ಲ. ಕರ್ನಾಟಕದಲ್ಲಿಯೂ ಮಹಾಪಂಚಾಯತ್ ನಡೆಸಲು ತಯಾರಿ ನಡೆದಿದೆ. ಕೇಂದ್ರ ಸಚಿವರೇ ಅವರ ಸ್ವಗ್ರಾಮಗಳಿಗೆ ಹೋಗಲು ಹೆದರುತ್ತಿದ್ದಾರೆ. ಹಳ್ಳಿ ಹಳ್ಳಿಗಳಲ್ಲಿ ಬಿಜೆಪಿಯನ್ನು ಬಹಿಷ್ಕರಿಸಲಾಗುತ್ತಿದೆ. ಮದುವೆ ಸಮಾರಂಭಗಳಿಗೆ ಅವರನ್ನು ಆಹ್ವಾನಿಸುತ್ತಿಲ್ಲ. ಒಟ್ಟಾರೆಯಾಗಿ ಈ ಹೋರಾಟ ದೇಶಾದ್ಯಂತ ಹಬ್ಬುತ್ತಿದೆ ಎಂದರು.

ಪ್ರಧಾನ ಮಂತ್ರಿಗಳು ಎಂಎಸ್‌ಪಿ ಇತ್ತು, ಈಗಲೂ ಇದೆ ಮತ್ತು ಮುಂದೆಯು ಇರಲಿದೆ ಎಂದು ಹೇಳಿದ್ದಾರೆ. ಅದು ಎಲ್ಲಿದೆ ತೋರಿಸಿ, ಅದರ ವಿಳಾಸ ಕೊಡಿ ಎಂದು ನಾವು ಕೇಳುತ್ತಿದ್ದೇವೆ. ಹಾಗಾಗಿ ರೈತರಿಗೆ ಎಂಎಸ್‌ಪಿ ಕೊಡಿಸಿ ಎಂಬ ರಾಷ್ಟ್ರೀಯ ಆಂದೋಲನವನ್ನು ಕರ್ನಾಟಕದಿಂದ ಆರಂಭಿಸುತ್ತಿದ್ದೇವೆ ಎಂದು ಯೋಗೇಂದ್ರ ಯಾದವ್ ಹೇಳಿದರು.

ಕರ್ನಾಟಕ ರೈತ ಹೋರಾಟದ ಹೆಮ್ಮೆಯ ಸಂಕೇತವಾಗಿದೆ. ಇಲ್ಲಿ ಕಾಗೋಡು ಸತ್ಯಾಗ್ರಹ ನಡೆದಿದೆ. ಶಾಂತವೇರಿ ಗೋಪಾಲಗೌಡರು, ಪ್ರೊ ನಂಜುಂಡಸ್ವಾಮಿಯವರು ಬೃಹತ್ ರೈತ ಚಳವಳಿ ಕಟ್ಟಿದ್ದಾರೆ. 2020ರ ಸೆಪ್ಟಂಬರ್ 21 ರಂದೇ ಕರ್ನಾಟಕದಲ್ಲಿ ಮೂರು ಕೃಷಿ ಕಾಯ್ದೆಗಳ ವಿರುದ್ಧ ಮತ್ತು ರಾಜ್ಯ ಸರ್ಕಾರದ ತಿದ್ದುಪಡಿಗಳ ವಿರುದ್ಧ ಹೋರಾಟ ನಡೆದಿದೆ. ಹಾಗಾಗಿ ಕರ್ನಾಟಕದ ಕಲಬುರ್ಗಿ, ಬಳ್ಳಾರಿಯಿಂದ ನಮ್ಮ ಎಂಎಸ್‌ಪಿ ದಿಲಾವೋ ಆಂದೋಲನ ಆರಂಭಿಸಿದ್ದೇವೆ ಎಂದರು.

72% ಕರ್ನಾಟಕದ ಬೆಲೆಗಳು ಕರ್ನಾಟಕದಲ್ಲಿ ಎಂಎಸ್‌ಪಿಗಿಂತ ಕಡಿಮೆ ಬೆಲೆಗೆ ಮಾರಾಟವಾಗುತ್ತಿದೆ. ಇದು ರೈತರ ಬಗೆಗಿನ ಕ್ರೂರ ಜೋಕ್ ಆಗಿದೆ. ಇದರಿಂದ ಕರ್ನಾಟಕ ಎಲ್ಲಾ ರೈತರಿಗೆ ಪ್ರತಿವರ್ಷ 3190 ಕೋಟಿ ರೂಗಳು ನಷ್ಟವಾಗುತ್ತಿದೆ. ಸ್ವಾಮಿನಾಥನ್‌ರವರ ಎಂಎಸ್‌ಪಿ ಲೆಕ್ಕಾಚಾರಲ್ಲಿ ಪ್ರತಿ ವರ್ಷ 2339 ಕೋಟಿ ರೂಗಳನ್ನು ರೈತರಿಂದ ಕಿತ್ತುಕೊಳ್ಳಲಾಗುತ್ತಿದೆ. ಕಿಸಾನ್ ಸಮ್ಮಾನ್ ಮೂಲಕ ಹಣ ಕೊಡುತ್ತಿದ್ದೇವೆ ಎಂದು ಸರ್ಕಾರ ಹೇಳುತ್ತಿದೆ. ಆದರೆ ಇನ್ನೊಂದು ಕೈಯಲ್ಲಿ ಇಷ್ಟು ಹಣವನ್ನು ಕಿತ್ತುಕೊಳ್ಳುತ್ತಿದೆ ಎಂದು ಯೋಗೇಂದ್ರ ಯಾದವ್ ಕಿಡಿಕಾರಿದರು.

ಅಷ್ಟೊಂದು ಎಂಎಸ್‌ಪಿ ಕೊಡಲಾಗುತ್ತದೆಯೇ ಎಂದು ಹಲವರು ಕೇಳುತ್ತಾರೆ. ಖಂಡಿತವಾಗಿಯೂ ಕೊಡಲು ಸಾಧ್ಯ. ಅದಕ್ಕೆ ರಾಜಕೀಯ ಇಚ್ಛಾಶಕ್ತಿ ಇರಬೇಕು ಅಷ್ಟೇ. ಅದಕ್ಕಾಗಿ ಕರ್ನಾಟಕದಲ್ಲಿ 10,000 ಕೋಟಿ ರೂಗಳು ಸಾಕು. ಎಲ್ಲರಿಗೂ ಎಂಎಸ್‌ಪಿ ನೀಡಬಹುದು ಎಂದರು.

ಹೋರಾಟಗಾರರಾದ ಡಾ.ವಾಸು ಎಚ್‌.ವಿ ಮಾತನಾಡಿ “ಕೇವಲ ಒಂದು ವರ್ಷದಲ್ಲಿ ಕರ್ನಾಟಕದಲ್ಲಿ 13 ಬೆಳೆಗಳಿಗೆ ಸಂಬಂಧಿಸಿದಂತೆ 20,000 ಕೋಟಿ ರೂ ನಷ್ಟವಾಗಿದೆ. ಇದರರ್ಥ ಕಳೆದ 20 ವರ್ಷದಲ್ಲಿ ಕರ್ನಾಟಕದ ರೈತರಿಗಾಗಿರುವ ನಷ್ಟ 4 ಲಕ್ಷ ಕೋಟಿ ರೂ. 2016 ರಲ್ಲಿ ಕರ್ನಾಟಕ ಸರ್ಕಾರ ಕೇಂದ್ರಕ್ಕೆ ವಿಶೇ‍ಷ ವರದಿ ಸಲ್ಲಿಸಿದೆ. ಅದರ ಪ್ರಕಾರ 2001 ರಿಂದ ಇಲ್ಲಿಯವರೆಗೆ ಬರ ಮತ್ತು ನೆರೆಯ ಕಾರಣಕ್ಕೆ ಆದ ನಷ್ಟ 4 ಲಕ್ಷ ಕೋಟಿ ರೂಗಳಾಗಿದೆ. ಅಂದರೆ ಬೆಳೆ ನಷ್ಟವೂ 4 ಲಕ್ಷ ಕೋಟಿ ರೂ ಮತ್ತು ಬರನಷ್ಟವು 4 ಲಕ್ಷ ಕೋಟಿ ರೂ ಆಗಿದೆ. ಇದನ್ನು ಕರ್ನಾಟಕದ ಗ್ರಾಮೀಣ ಭಾಗ 8 ಲಕ್ಷ ಕೋಟಿ ಸಬ್ಸಿಡಿ ಹಣವನ್ನು ಕೊಟ್ಟಿದೆ ಎಂದು ನಾವು ಅರ್ಥಮಾಡಿಕೊಳ್ಳಬೇಕು. ರೈತರಿಗೆ ಸಬ್ಸಿಡಿ ಎಂದು ಹೇಳಲಾಗುತ್ತಿರುವುದು ಸುಳ್ಳು. ಬದಲಿಗೆ ರೈತರೇ ಸರ್ಕಾರಕ್ಕೆ ಸಬ್ಸಿಡಿ ನೀಡುತ್ತಿದ್ದಾರೆ. ಅದಕ್ಕಾಗಿಯೇ ಈ ಹಿಂದೆ ಪ್ರೊ.ನಂಜುಂಡಸ್ವಾಮಿಯವರು ‘ರೈತ ಸಾಲಗಾರನಲ್ಲ, ಸರ್ಕಾರವೇ ಬಾಕಿದಾರ’ ಎಂಬ ಘೋಷಣೆ ನೀಡಿದ್ದರು” ಎಂದು ತಿಳಿಸಿದರು.

ಪತ್ರಿಕಾಗೋಷ್ಟಿಯ ವಿಡಿಯೋ ನೋಡಿ

ಪತ್ರಿಕಾಗೋಷ್ಠಿಯಲ್ಲಿ ಪಂಜಾಬಿನ ಹೋರಾಟಗಾರ ಸತ್ನಾಮ್ ಸಿಂಗ್, ಹರಿಯಾಣದ ದೀಪಕ್ ಲಂಬ, ಕೃಷಿ ಬೆಲೆ ಆಯೋಗದ ಮಾಜಿ ಅಧ್ಯಕ್ಷರಾದ ಡಾ.ಪ್ರಕಾಶ್ ಕಮ್ಮರಡಿ, ಕರ್ನಾಟಕ ರಾಜ್ಯ ರೈತ ಸಂಘದ ಬಡಗಲಪುರ ನಾಗೇಂದ್ರ, ಕೋಡಿಹಳ್ಳಿ ಚಂದ್ರಶೇಖರ್, ಚಾಮರಸಮಾಲೀ ಪಾಟೀಲ್, ಸಾಮಾಜಿಕ ಹೋರಾಟಗಾರ ಎಸ್.ಆರ್ ಹಿರೇಮಠ್, ದೊಡ್ಡಿಪಾಳ್ಯ ನರಸಿಂಹಮೂರ್ತಿ, ಕರ್ನಾಟಕ ಪ್ರಾಂತ ರೈತ ಸಂಘದ ಯಶವಂತ್, ಆರ್‌ಕೆಎಸ್‌ ಸಂಘಟನೆಯ ಶಿವಪ್ರಕಾಶ್ ಹಾಜರಿದ್ದರು.


ಇದನ್ನೂ ಓದಿ; ಪ್ರಧಾನಿಗಳೇ ಎಂಎಸ್‌ಪಿ ಎಲ್ಲಿದೆ ತೋರಿಸಿ?: ಇಂದಿನಿಂದ ರಾಜ್ಯದಲ್ಲಿ ಆಂದೋಲನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...