Homeಮುಖಪುಟಎಂಎಸ್‌ಪಿ ಕಾಗದದಲ್ಲಿತ್ತು, ಕಾಗದದಲ್ಲಿ ಇದೆ ಮತ್ತು ಮುಂದೆಯೂ ಕಾಗದದಲ್ಲಿಯೇ ಇರಲಿದೆ ಹೊರತು ರೈತರಿಗೆ ಸಿಗುತ್ತಿಲ್ಲ: ಯೋಗೇಂದ್ರ...

ಎಂಎಸ್‌ಪಿ ಕಾಗದದಲ್ಲಿತ್ತು, ಕಾಗದದಲ್ಲಿ ಇದೆ ಮತ್ತು ಮುಂದೆಯೂ ಕಾಗದದಲ್ಲಿಯೇ ಇರಲಿದೆ ಹೊರತು ರೈತರಿಗೆ ಸಿಗುತ್ತಿಲ್ಲ: ಯೋಗೇಂದ್ರ ಯಾದವ್

- Advertisement -
- Advertisement -

ನಿನ್ನೆ ಬಳ್ಳಾರಿಯ ಎಪಿಎಂಸಿಗೆ ಭೇಟಿ ನೀಡಿದ್ದೇವು. ಮೆಕ್ಕೆ ಜೋಳಕ್ಕೆ ಒಂದು ಕ್ವಿಂಟಾಲ್‌ಗೆ ಎಂಎಸ್‌ಪಿ 1850 ರೂ ಇದೆ. ಆದರೆ ಬಳ್ಳಾರಿಯಲ್ಲಿ ಕೇವಲ 1459 ರೂ ನೀಡಲಾಗುತ್ತಿದೆ. ಅಂದರೆ ಪ್ರತಿ ಕ್ವಿಂಟಾಲ್‌ಗೆ ರೈತರಿಂದ 400 ರೂ ಲೂಟಿ ಹೊಡೆಯಲಾಗುತ್ತಿದೆ. ಜೋಳಕ್ಕೆ ಕ್ವಿಂಟಲ್‌ಗೆ 2600 ರೂ ಇದೆ. ಆದರೆ ಬಳ್ಳಾರಿಯಲ್ಲಿ 1728 ರೂ ನೀಡಲಾಗುತ್ತಿದೆ. ಕ್ವಿಂಟಾಲ್‌ಗೆ 900 ರೂ ಕಡಿಮೆ ನೀಡಲಾಗುತ್ತಿದೆ. ಇದು ನಾವು ಕೇವಲ ಕನಿಷ್ಟ ಬೆಂಬಲ ಬೆಲೆಯ ಬಗ್ಗೆ ಮಾತನಾಡುತ್ತಿದ್ದೇವೆ ಹೊರತು ಗರಿಷ್ಟ ಬೆಂಬಲ ಬೆಲೆಯ ಬಗ್ಗೆ ಅಲ್ಲ ಎಂದು ಸ್ವರಾಜ್ ಇಂಡಿಯಾ ಪಕ್ಷದ ಅಧ್ಯಕ್ಷರಾದ ಯೋಗೇಂದ್ರ ಯಾದವ್ ಅಸಮಾಧಾನ ವ್ಯಕ್ತಪಡಿಸಿದರು.

ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ದೆಹಲಿಯಲ್ಲಿ ರೈತ ಹೋರಾಟವನ್ನು ಮುನ್ನಡೆಸುತ್ತಿರುವ ಸಂಯುಕ್ತ ಕಿಸಾನ್ ಮೋರ್ಚಾದ 7 ಜನರ ಸಮನ್ವಯ ಸಮಿತಿಯ ಭಾಗವಾದ ನಾನು ಇಂದು ಇಂದು ಕರ್ನಾಟಕಕ್ಕೆ ಬಂದಿದ್ದೇನೆ. ಐತಿಹಾಸಿಕ ರೈತ ಹೋರಾಟವು ಸೆಂಚುರಿ ದಿನಗಳನ್ನು ಪೂರೈಸಿದೆ. ಇದರಿಂದ ನಮಗೆ ಸಂತೋಷವಾಗಿಲ್ಲ. ಏಕೆಂದರೆ ನಾವು ನೂರು ದಿನಗಳನ್ನು ಪೂರೈಸಲು ಹೋರಾಟ ನಡೆಸುತ್ತಿಲ್ಲ. ಬದಲಿಗೆ ನಮ್ಮ ಹಕ್ಕುಗಳನ್ನು ಪಡೆಯಲು ಹೋರಾಡುತ್ತಿದ್ದೇವೆ” ಎಂದರು.

ಕಡಲೆಗೆ ಕ್ವಿಂಟಾಲ್‌ಗೆ ಎಂಎಸ್‌ಪಿ 5100ರೂ ಇದೆ. ಆದರೆ ಕೇವಲ 4182 ರೂ ನೀಡುತ್ತಿದ್ದಾರೆ. ತೊಗರಿ ಬೆಳೆಗೆ ಕ್ವಿಂಟಾಲ್‌ಗೆ ಎಂಎಸ್‌ಪಿ 6000 ರೂ ಇದೆ. ಆದರೆ ಕೇವಲ 4943 ರೂ ನೀಡಲಾಗುತ್ತಿದೆ. ಇದು ಕೇವಲ ಒಂದು ಮಾರ್ಕೆಟ್‌ನ ಒಂದು ದಿನದ ಸ್ಯಾಂಪಲ್ ಅಷ್ಟೇ ನಾವು ಹೇಳುತ್ತಿರುವುದು. ಪ್ರಧಾನಿ ಮಂತ್ರಿ ಎಂಎಸ್‌ಪಿ ಇತ್ತು, ಇದೆ, ಇರಲಿದೆ ಎನ್ನುತ್ತಾರೆ. ನಾವು ಹೇಳುತ್ತೇವೆ ಎಂಎಸ್‌ಪಿ ಕಾಗದದಲ್ಲಿ ಇತ್ತು, ಕಾಗದಲ್ಲಿ ಇದೆ ಮತ್ತು ಕಾಗದದಲ್ಲಿಯೇ ಇರಲಿದೆ ಹೊರತು ರೈತರಿಗೆ ಸಿಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ನೂರು ದಿನಗಳಲ್ಲಿ ಕೇಂದ್ರ ಸರ್ಕಾರವು ರೈತರೊಂದಿಗೆ ಕಠಿಣವಾಗಿ ವರ್ತಿಸಿದೆ. ರೈತರ ಮೇಲೆ ದಬ್ಬಾಳಿಕೆ ನಡೆಸಿದೆ. ರೈತರ ವಿರುದ್ಧ ಪ್ರೊಪಗಂಡಾ ಯುದ್ದ ನಡೆಸಿದೆ. ಇದು ಸರ್ಕಾರದ ಉದ್ದಟತವನ್ನು ತೋರಿಸುತ್ತದೆ. ಕೇಂದ್ರ ಸರ್ಕಾರ ರೈತರ ವಿರುದ್ಧ ಸುಳ್ಳು ಹೇಳಿದ ನೂರು ದಿನಗಳಾಗಿವೆ. ಇದು ಸರ್ಕಾರದ ಅಹಂಕಾರದ ಮತ್ತು ರೈತರ ಸಂಕಲ್ಪದ ನೂರು ದಿನಗಳಾಗಿವೆ ಎಂದರು.

ಈ ಐತಿಹಾಸಿಕ ಹೋರಾಟವನ್ನು ಆರಂಭದಲ್ಲಿ ಇದು ಕೇವಲ ಪಂಜಾಬ್ ರೈತರ ಹೋರಾಟ ಎಂದರು. ನಂತರ ಇದು ಕೇವಲ ಪಂಜಾಬ್ ಮತ್ತು ಹರಿಯಾಣ ರೈತರ ಹೋರಾಟ ಎಂದರು. ಆನಂತರ ಇದು ಪಂಜಾಬ್, ಹರಿಯಾಣ, ರಾಜಸ್ಥಾನ, ಉತ್ತರಖಂಡ ಮತ್ತು ಉತ್ತರ ಪ್ರದೇಶದ ರೈತರ ಹೋರಾಟ ಎಂದರು. ಶೀಘ್ರದಲ್ಲಿಯೇ ಅವರು ಇದು ಕೇವಲ ಭಾರತದ ರೈತರ ಹೋರಾಟ ಎನ್ನುವ ಕಾಲ ಬರಲಿದೆ. ಈ ರೈತ ಹೋರಾಟ ಇಡೀ ದೇಶಕ್ಕೆ ಹರಡುತ್ತಿದೆ ಎಂದು ಯೋಗೇಂದ್ರ ಯಾದವ್ ತಿಳಿಸಿದರು.

ಸರ್ಕಾರ ಈ ಹೋರಾಟವನ್ನು ಕೊಲ್ಲಲು, ದಮನಿಸಲು ಯತ್ನಿಸುತ್ತಿದೆ. ಆದರೆ ಹೋರಾಟ ಮಾತ್ರ ದೊಡ್ಡದಾಗುತ್ತ ದೇಶಾದ್ಯಂತ ಹರಡುತ್ತಿದೆ. ಜನವರಿ 26ರ ನಂತರವಂತೂ ಈ ಹೋರಾಟವನ್ನು ಕೊನೆಗೊಳಿಸಲು ಸರ್ಕಾರ ಇನ್ನಿಲ್ಲದ ಯತ್ನ ಮಾಡಿತು. ದೆಹಲಿಯ ಗಡಿಗಳಲ್ಲಿ ರೈತರ ಸಂಖ್ಯೆ ಕರಗುತ್ತಿದೆ ಎಂದು ಮಾಧ್ಯಮಗಳು ತೋರಿಸುತ್ತಿವೆ. ಆದರೆ ಪಂಜಾಬ್‌ನ ಬರ್ನಾಲದಲ್ಲಿ, ಹರಿಯಾಣ ಖಂಡೇಲಾದಲ್ಲಿ, ರಾಜಸ್ಥಾನದ ಹಳ್ಳಿ ಹಳ್ಳಿಗಳಲ್ಲಿ ಬೃಹತ್ ಮಹಾಪಂಚಾಯತ್‌ಗಳು ನಡೆಯುತ್ತಿರುವುದನ್ನು ಅವು ಹೇಳುತ್ತಿಲ್ಲ. ಕರ್ನಾಟಕದಲ್ಲಿಯೂ ಮಹಾಪಂಚಾಯತ್ ನಡೆಸಲು ತಯಾರಿ ನಡೆದಿದೆ. ಕೇಂದ್ರ ಸಚಿವರೇ ಅವರ ಸ್ವಗ್ರಾಮಗಳಿಗೆ ಹೋಗಲು ಹೆದರುತ್ತಿದ್ದಾರೆ. ಹಳ್ಳಿ ಹಳ್ಳಿಗಳಲ್ಲಿ ಬಿಜೆಪಿಯನ್ನು ಬಹಿಷ್ಕರಿಸಲಾಗುತ್ತಿದೆ. ಮದುವೆ ಸಮಾರಂಭಗಳಿಗೆ ಅವರನ್ನು ಆಹ್ವಾನಿಸುತ್ತಿಲ್ಲ. ಒಟ್ಟಾರೆಯಾಗಿ ಈ ಹೋರಾಟ ದೇಶಾದ್ಯಂತ ಹಬ್ಬುತ್ತಿದೆ ಎಂದರು.

ಪ್ರಧಾನ ಮಂತ್ರಿಗಳು ಎಂಎಸ್‌ಪಿ ಇತ್ತು, ಈಗಲೂ ಇದೆ ಮತ್ತು ಮುಂದೆಯು ಇರಲಿದೆ ಎಂದು ಹೇಳಿದ್ದಾರೆ. ಅದು ಎಲ್ಲಿದೆ ತೋರಿಸಿ, ಅದರ ವಿಳಾಸ ಕೊಡಿ ಎಂದು ನಾವು ಕೇಳುತ್ತಿದ್ದೇವೆ. ಹಾಗಾಗಿ ರೈತರಿಗೆ ಎಂಎಸ್‌ಪಿ ಕೊಡಿಸಿ ಎಂಬ ರಾಷ್ಟ್ರೀಯ ಆಂದೋಲನವನ್ನು ಕರ್ನಾಟಕದಿಂದ ಆರಂಭಿಸುತ್ತಿದ್ದೇವೆ ಎಂದು ಯೋಗೇಂದ್ರ ಯಾದವ್ ಹೇಳಿದರು.

ಕರ್ನಾಟಕ ರೈತ ಹೋರಾಟದ ಹೆಮ್ಮೆಯ ಸಂಕೇತವಾಗಿದೆ. ಇಲ್ಲಿ ಕಾಗೋಡು ಸತ್ಯಾಗ್ರಹ ನಡೆದಿದೆ. ಶಾಂತವೇರಿ ಗೋಪಾಲಗೌಡರು, ಪ್ರೊ ನಂಜುಂಡಸ್ವಾಮಿಯವರು ಬೃಹತ್ ರೈತ ಚಳವಳಿ ಕಟ್ಟಿದ್ದಾರೆ. 2020ರ ಸೆಪ್ಟಂಬರ್ 21 ರಂದೇ ಕರ್ನಾಟಕದಲ್ಲಿ ಮೂರು ಕೃಷಿ ಕಾಯ್ದೆಗಳ ವಿರುದ್ಧ ಮತ್ತು ರಾಜ್ಯ ಸರ್ಕಾರದ ತಿದ್ದುಪಡಿಗಳ ವಿರುದ್ಧ ಹೋರಾಟ ನಡೆದಿದೆ. ಹಾಗಾಗಿ ಕರ್ನಾಟಕದ ಕಲಬುರ್ಗಿ, ಬಳ್ಳಾರಿಯಿಂದ ನಮ್ಮ ಎಂಎಸ್‌ಪಿ ದಿಲಾವೋ ಆಂದೋಲನ ಆರಂಭಿಸಿದ್ದೇವೆ ಎಂದರು.

72% ಕರ್ನಾಟಕದ ಬೆಲೆಗಳು ಕರ್ನಾಟಕದಲ್ಲಿ ಎಂಎಸ್‌ಪಿಗಿಂತ ಕಡಿಮೆ ಬೆಲೆಗೆ ಮಾರಾಟವಾಗುತ್ತಿದೆ. ಇದು ರೈತರ ಬಗೆಗಿನ ಕ್ರೂರ ಜೋಕ್ ಆಗಿದೆ. ಇದರಿಂದ ಕರ್ನಾಟಕ ಎಲ್ಲಾ ರೈತರಿಗೆ ಪ್ರತಿವರ್ಷ 3190 ಕೋಟಿ ರೂಗಳು ನಷ್ಟವಾಗುತ್ತಿದೆ. ಸ್ವಾಮಿನಾಥನ್‌ರವರ ಎಂಎಸ್‌ಪಿ ಲೆಕ್ಕಾಚಾರಲ್ಲಿ ಪ್ರತಿ ವರ್ಷ 2339 ಕೋಟಿ ರೂಗಳನ್ನು ರೈತರಿಂದ ಕಿತ್ತುಕೊಳ್ಳಲಾಗುತ್ತಿದೆ. ಕಿಸಾನ್ ಸಮ್ಮಾನ್ ಮೂಲಕ ಹಣ ಕೊಡುತ್ತಿದ್ದೇವೆ ಎಂದು ಸರ್ಕಾರ ಹೇಳುತ್ತಿದೆ. ಆದರೆ ಇನ್ನೊಂದು ಕೈಯಲ್ಲಿ ಇಷ್ಟು ಹಣವನ್ನು ಕಿತ್ತುಕೊಳ್ಳುತ್ತಿದೆ ಎಂದು ಯೋಗೇಂದ್ರ ಯಾದವ್ ಕಿಡಿಕಾರಿದರು.

ಅಷ್ಟೊಂದು ಎಂಎಸ್‌ಪಿ ಕೊಡಲಾಗುತ್ತದೆಯೇ ಎಂದು ಹಲವರು ಕೇಳುತ್ತಾರೆ. ಖಂಡಿತವಾಗಿಯೂ ಕೊಡಲು ಸಾಧ್ಯ. ಅದಕ್ಕೆ ರಾಜಕೀಯ ಇಚ್ಛಾಶಕ್ತಿ ಇರಬೇಕು ಅಷ್ಟೇ. ಅದಕ್ಕಾಗಿ ಕರ್ನಾಟಕದಲ್ಲಿ 10,000 ಕೋಟಿ ರೂಗಳು ಸಾಕು. ಎಲ್ಲರಿಗೂ ಎಂಎಸ್‌ಪಿ ನೀಡಬಹುದು ಎಂದರು.

ಹೋರಾಟಗಾರರಾದ ಡಾ.ವಾಸು ಎಚ್‌.ವಿ ಮಾತನಾಡಿ “ಕೇವಲ ಒಂದು ವರ್ಷದಲ್ಲಿ ಕರ್ನಾಟಕದಲ್ಲಿ 13 ಬೆಳೆಗಳಿಗೆ ಸಂಬಂಧಿಸಿದಂತೆ 20,000 ಕೋಟಿ ರೂ ನಷ್ಟವಾಗಿದೆ. ಇದರರ್ಥ ಕಳೆದ 20 ವರ್ಷದಲ್ಲಿ ಕರ್ನಾಟಕದ ರೈತರಿಗಾಗಿರುವ ನಷ್ಟ 4 ಲಕ್ಷ ಕೋಟಿ ರೂ. 2016 ರಲ್ಲಿ ಕರ್ನಾಟಕ ಸರ್ಕಾರ ಕೇಂದ್ರಕ್ಕೆ ವಿಶೇ‍ಷ ವರದಿ ಸಲ್ಲಿಸಿದೆ. ಅದರ ಪ್ರಕಾರ 2001 ರಿಂದ ಇಲ್ಲಿಯವರೆಗೆ ಬರ ಮತ್ತು ನೆರೆಯ ಕಾರಣಕ್ಕೆ ಆದ ನಷ್ಟ 4 ಲಕ್ಷ ಕೋಟಿ ರೂಗಳಾಗಿದೆ. ಅಂದರೆ ಬೆಳೆ ನಷ್ಟವೂ 4 ಲಕ್ಷ ಕೋಟಿ ರೂ ಮತ್ತು ಬರನಷ್ಟವು 4 ಲಕ್ಷ ಕೋಟಿ ರೂ ಆಗಿದೆ. ಇದನ್ನು ಕರ್ನಾಟಕದ ಗ್ರಾಮೀಣ ಭಾಗ 8 ಲಕ್ಷ ಕೋಟಿ ಸಬ್ಸಿಡಿ ಹಣವನ್ನು ಕೊಟ್ಟಿದೆ ಎಂದು ನಾವು ಅರ್ಥಮಾಡಿಕೊಳ್ಳಬೇಕು. ರೈತರಿಗೆ ಸಬ್ಸಿಡಿ ಎಂದು ಹೇಳಲಾಗುತ್ತಿರುವುದು ಸುಳ್ಳು. ಬದಲಿಗೆ ರೈತರೇ ಸರ್ಕಾರಕ್ಕೆ ಸಬ್ಸಿಡಿ ನೀಡುತ್ತಿದ್ದಾರೆ. ಅದಕ್ಕಾಗಿಯೇ ಈ ಹಿಂದೆ ಪ್ರೊ.ನಂಜುಂಡಸ್ವಾಮಿಯವರು ‘ರೈತ ಸಾಲಗಾರನಲ್ಲ, ಸರ್ಕಾರವೇ ಬಾಕಿದಾರ’ ಎಂಬ ಘೋಷಣೆ ನೀಡಿದ್ದರು” ಎಂದು ತಿಳಿಸಿದರು.

ಪತ್ರಿಕಾಗೋಷ್ಟಿಯ ವಿಡಿಯೋ ನೋಡಿ

ಪತ್ರಿಕಾಗೋಷ್ಠಿಯಲ್ಲಿ ಪಂಜಾಬಿನ ಹೋರಾಟಗಾರ ಸತ್ನಾಮ್ ಸಿಂಗ್, ಹರಿಯಾಣದ ದೀಪಕ್ ಲಂಬ, ಕೃಷಿ ಬೆಲೆ ಆಯೋಗದ ಮಾಜಿ ಅಧ್ಯಕ್ಷರಾದ ಡಾ.ಪ್ರಕಾಶ್ ಕಮ್ಮರಡಿ, ಕರ್ನಾಟಕ ರಾಜ್ಯ ರೈತ ಸಂಘದ ಬಡಗಲಪುರ ನಾಗೇಂದ್ರ, ಕೋಡಿಹಳ್ಳಿ ಚಂದ್ರಶೇಖರ್, ಚಾಮರಸಮಾಲೀ ಪಾಟೀಲ್, ಸಾಮಾಜಿಕ ಹೋರಾಟಗಾರ ಎಸ್.ಆರ್ ಹಿರೇಮಠ್, ದೊಡ್ಡಿಪಾಳ್ಯ ನರಸಿಂಹಮೂರ್ತಿ, ಕರ್ನಾಟಕ ಪ್ರಾಂತ ರೈತ ಸಂಘದ ಯಶವಂತ್, ಆರ್‌ಕೆಎಸ್‌ ಸಂಘಟನೆಯ ಶಿವಪ್ರಕಾಶ್ ಹಾಜರಿದ್ದರು.


ಇದನ್ನೂ ಓದಿ; ಪ್ರಧಾನಿಗಳೇ ಎಂಎಸ್‌ಪಿ ಎಲ್ಲಿದೆ ತೋರಿಸಿ?: ಇಂದಿನಿಂದ ರಾಜ್ಯದಲ್ಲಿ ಆಂದೋಲನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....