Homeಮುಖಪುಟಎಂಎಸ್‌ಪಿ ಕಾಗದದಲ್ಲಿತ್ತು, ಕಾಗದದಲ್ಲಿ ಇದೆ ಮತ್ತು ಮುಂದೆಯೂ ಕಾಗದದಲ್ಲಿಯೇ ಇರಲಿದೆ ಹೊರತು ರೈತರಿಗೆ ಸಿಗುತ್ತಿಲ್ಲ: ಯೋಗೇಂದ್ರ...

ಎಂಎಸ್‌ಪಿ ಕಾಗದದಲ್ಲಿತ್ತು, ಕಾಗದದಲ್ಲಿ ಇದೆ ಮತ್ತು ಮುಂದೆಯೂ ಕಾಗದದಲ್ಲಿಯೇ ಇರಲಿದೆ ಹೊರತು ರೈತರಿಗೆ ಸಿಗುತ್ತಿಲ್ಲ: ಯೋಗೇಂದ್ರ ಯಾದವ್

- Advertisement -
- Advertisement -

ನಿನ್ನೆ ಬಳ್ಳಾರಿಯ ಎಪಿಎಂಸಿಗೆ ಭೇಟಿ ನೀಡಿದ್ದೇವು. ಮೆಕ್ಕೆ ಜೋಳಕ್ಕೆ ಒಂದು ಕ್ವಿಂಟಾಲ್‌ಗೆ ಎಂಎಸ್‌ಪಿ 1850 ರೂ ಇದೆ. ಆದರೆ ಬಳ್ಳಾರಿಯಲ್ಲಿ ಕೇವಲ 1459 ರೂ ನೀಡಲಾಗುತ್ತಿದೆ. ಅಂದರೆ ಪ್ರತಿ ಕ್ವಿಂಟಾಲ್‌ಗೆ ರೈತರಿಂದ 400 ರೂ ಲೂಟಿ ಹೊಡೆಯಲಾಗುತ್ತಿದೆ. ಜೋಳಕ್ಕೆ ಕ್ವಿಂಟಲ್‌ಗೆ 2600 ರೂ ಇದೆ. ಆದರೆ ಬಳ್ಳಾರಿಯಲ್ಲಿ 1728 ರೂ ನೀಡಲಾಗುತ್ತಿದೆ. ಕ್ವಿಂಟಾಲ್‌ಗೆ 900 ರೂ ಕಡಿಮೆ ನೀಡಲಾಗುತ್ತಿದೆ. ಇದು ನಾವು ಕೇವಲ ಕನಿಷ್ಟ ಬೆಂಬಲ ಬೆಲೆಯ ಬಗ್ಗೆ ಮಾತನಾಡುತ್ತಿದ್ದೇವೆ ಹೊರತು ಗರಿಷ್ಟ ಬೆಂಬಲ ಬೆಲೆಯ ಬಗ್ಗೆ ಅಲ್ಲ ಎಂದು ಸ್ವರಾಜ್ ಇಂಡಿಯಾ ಪಕ್ಷದ ಅಧ್ಯಕ್ಷರಾದ ಯೋಗೇಂದ್ರ ಯಾದವ್ ಅಸಮಾಧಾನ ವ್ಯಕ್ತಪಡಿಸಿದರು.

ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ದೆಹಲಿಯಲ್ಲಿ ರೈತ ಹೋರಾಟವನ್ನು ಮುನ್ನಡೆಸುತ್ತಿರುವ ಸಂಯುಕ್ತ ಕಿಸಾನ್ ಮೋರ್ಚಾದ 7 ಜನರ ಸಮನ್ವಯ ಸಮಿತಿಯ ಭಾಗವಾದ ನಾನು ಇಂದು ಇಂದು ಕರ್ನಾಟಕಕ್ಕೆ ಬಂದಿದ್ದೇನೆ. ಐತಿಹಾಸಿಕ ರೈತ ಹೋರಾಟವು ಸೆಂಚುರಿ ದಿನಗಳನ್ನು ಪೂರೈಸಿದೆ. ಇದರಿಂದ ನಮಗೆ ಸಂತೋಷವಾಗಿಲ್ಲ. ಏಕೆಂದರೆ ನಾವು ನೂರು ದಿನಗಳನ್ನು ಪೂರೈಸಲು ಹೋರಾಟ ನಡೆಸುತ್ತಿಲ್ಲ. ಬದಲಿಗೆ ನಮ್ಮ ಹಕ್ಕುಗಳನ್ನು ಪಡೆಯಲು ಹೋರಾಡುತ್ತಿದ್ದೇವೆ” ಎಂದರು.

ಕಡಲೆಗೆ ಕ್ವಿಂಟಾಲ್‌ಗೆ ಎಂಎಸ್‌ಪಿ 5100ರೂ ಇದೆ. ಆದರೆ ಕೇವಲ 4182 ರೂ ನೀಡುತ್ತಿದ್ದಾರೆ. ತೊಗರಿ ಬೆಳೆಗೆ ಕ್ವಿಂಟಾಲ್‌ಗೆ ಎಂಎಸ್‌ಪಿ 6000 ರೂ ಇದೆ. ಆದರೆ ಕೇವಲ 4943 ರೂ ನೀಡಲಾಗುತ್ತಿದೆ. ಇದು ಕೇವಲ ಒಂದು ಮಾರ್ಕೆಟ್‌ನ ಒಂದು ದಿನದ ಸ್ಯಾಂಪಲ್ ಅಷ್ಟೇ ನಾವು ಹೇಳುತ್ತಿರುವುದು. ಪ್ರಧಾನಿ ಮಂತ್ರಿ ಎಂಎಸ್‌ಪಿ ಇತ್ತು, ಇದೆ, ಇರಲಿದೆ ಎನ್ನುತ್ತಾರೆ. ನಾವು ಹೇಳುತ್ತೇವೆ ಎಂಎಸ್‌ಪಿ ಕಾಗದದಲ್ಲಿ ಇತ್ತು, ಕಾಗದಲ್ಲಿ ಇದೆ ಮತ್ತು ಕಾಗದದಲ್ಲಿಯೇ ಇರಲಿದೆ ಹೊರತು ರೈತರಿಗೆ ಸಿಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ನೂರು ದಿನಗಳಲ್ಲಿ ಕೇಂದ್ರ ಸರ್ಕಾರವು ರೈತರೊಂದಿಗೆ ಕಠಿಣವಾಗಿ ವರ್ತಿಸಿದೆ. ರೈತರ ಮೇಲೆ ದಬ್ಬಾಳಿಕೆ ನಡೆಸಿದೆ. ರೈತರ ವಿರುದ್ಧ ಪ್ರೊಪಗಂಡಾ ಯುದ್ದ ನಡೆಸಿದೆ. ಇದು ಸರ್ಕಾರದ ಉದ್ದಟತವನ್ನು ತೋರಿಸುತ್ತದೆ. ಕೇಂದ್ರ ಸರ್ಕಾರ ರೈತರ ವಿರುದ್ಧ ಸುಳ್ಳು ಹೇಳಿದ ನೂರು ದಿನಗಳಾಗಿವೆ. ಇದು ಸರ್ಕಾರದ ಅಹಂಕಾರದ ಮತ್ತು ರೈತರ ಸಂಕಲ್ಪದ ನೂರು ದಿನಗಳಾಗಿವೆ ಎಂದರು.

ಈ ಐತಿಹಾಸಿಕ ಹೋರಾಟವನ್ನು ಆರಂಭದಲ್ಲಿ ಇದು ಕೇವಲ ಪಂಜಾಬ್ ರೈತರ ಹೋರಾಟ ಎಂದರು. ನಂತರ ಇದು ಕೇವಲ ಪಂಜಾಬ್ ಮತ್ತು ಹರಿಯಾಣ ರೈತರ ಹೋರಾಟ ಎಂದರು. ಆನಂತರ ಇದು ಪಂಜಾಬ್, ಹರಿಯಾಣ, ರಾಜಸ್ಥಾನ, ಉತ್ತರಖಂಡ ಮತ್ತು ಉತ್ತರ ಪ್ರದೇಶದ ರೈತರ ಹೋರಾಟ ಎಂದರು. ಶೀಘ್ರದಲ್ಲಿಯೇ ಅವರು ಇದು ಕೇವಲ ಭಾರತದ ರೈತರ ಹೋರಾಟ ಎನ್ನುವ ಕಾಲ ಬರಲಿದೆ. ಈ ರೈತ ಹೋರಾಟ ಇಡೀ ದೇಶಕ್ಕೆ ಹರಡುತ್ತಿದೆ ಎಂದು ಯೋಗೇಂದ್ರ ಯಾದವ್ ತಿಳಿಸಿದರು.

ಸರ್ಕಾರ ಈ ಹೋರಾಟವನ್ನು ಕೊಲ್ಲಲು, ದಮನಿಸಲು ಯತ್ನಿಸುತ್ತಿದೆ. ಆದರೆ ಹೋರಾಟ ಮಾತ್ರ ದೊಡ್ಡದಾಗುತ್ತ ದೇಶಾದ್ಯಂತ ಹರಡುತ್ತಿದೆ. ಜನವರಿ 26ರ ನಂತರವಂತೂ ಈ ಹೋರಾಟವನ್ನು ಕೊನೆಗೊಳಿಸಲು ಸರ್ಕಾರ ಇನ್ನಿಲ್ಲದ ಯತ್ನ ಮಾಡಿತು. ದೆಹಲಿಯ ಗಡಿಗಳಲ್ಲಿ ರೈತರ ಸಂಖ್ಯೆ ಕರಗುತ್ತಿದೆ ಎಂದು ಮಾಧ್ಯಮಗಳು ತೋರಿಸುತ್ತಿವೆ. ಆದರೆ ಪಂಜಾಬ್‌ನ ಬರ್ನಾಲದಲ್ಲಿ, ಹರಿಯಾಣ ಖಂಡೇಲಾದಲ್ಲಿ, ರಾಜಸ್ಥಾನದ ಹಳ್ಳಿ ಹಳ್ಳಿಗಳಲ್ಲಿ ಬೃಹತ್ ಮಹಾಪಂಚಾಯತ್‌ಗಳು ನಡೆಯುತ್ತಿರುವುದನ್ನು ಅವು ಹೇಳುತ್ತಿಲ್ಲ. ಕರ್ನಾಟಕದಲ್ಲಿಯೂ ಮಹಾಪಂಚಾಯತ್ ನಡೆಸಲು ತಯಾರಿ ನಡೆದಿದೆ. ಕೇಂದ್ರ ಸಚಿವರೇ ಅವರ ಸ್ವಗ್ರಾಮಗಳಿಗೆ ಹೋಗಲು ಹೆದರುತ್ತಿದ್ದಾರೆ. ಹಳ್ಳಿ ಹಳ್ಳಿಗಳಲ್ಲಿ ಬಿಜೆಪಿಯನ್ನು ಬಹಿಷ್ಕರಿಸಲಾಗುತ್ತಿದೆ. ಮದುವೆ ಸಮಾರಂಭಗಳಿಗೆ ಅವರನ್ನು ಆಹ್ವಾನಿಸುತ್ತಿಲ್ಲ. ಒಟ್ಟಾರೆಯಾಗಿ ಈ ಹೋರಾಟ ದೇಶಾದ್ಯಂತ ಹಬ್ಬುತ್ತಿದೆ ಎಂದರು.

ಪ್ರಧಾನ ಮಂತ್ರಿಗಳು ಎಂಎಸ್‌ಪಿ ಇತ್ತು, ಈಗಲೂ ಇದೆ ಮತ್ತು ಮುಂದೆಯು ಇರಲಿದೆ ಎಂದು ಹೇಳಿದ್ದಾರೆ. ಅದು ಎಲ್ಲಿದೆ ತೋರಿಸಿ, ಅದರ ವಿಳಾಸ ಕೊಡಿ ಎಂದು ನಾವು ಕೇಳುತ್ತಿದ್ದೇವೆ. ಹಾಗಾಗಿ ರೈತರಿಗೆ ಎಂಎಸ್‌ಪಿ ಕೊಡಿಸಿ ಎಂಬ ರಾಷ್ಟ್ರೀಯ ಆಂದೋಲನವನ್ನು ಕರ್ನಾಟಕದಿಂದ ಆರಂಭಿಸುತ್ತಿದ್ದೇವೆ ಎಂದು ಯೋಗೇಂದ್ರ ಯಾದವ್ ಹೇಳಿದರು.

ಕರ್ನಾಟಕ ರೈತ ಹೋರಾಟದ ಹೆಮ್ಮೆಯ ಸಂಕೇತವಾಗಿದೆ. ಇಲ್ಲಿ ಕಾಗೋಡು ಸತ್ಯಾಗ್ರಹ ನಡೆದಿದೆ. ಶಾಂತವೇರಿ ಗೋಪಾಲಗೌಡರು, ಪ್ರೊ ನಂಜುಂಡಸ್ವಾಮಿಯವರು ಬೃಹತ್ ರೈತ ಚಳವಳಿ ಕಟ್ಟಿದ್ದಾರೆ. 2020ರ ಸೆಪ್ಟಂಬರ್ 21 ರಂದೇ ಕರ್ನಾಟಕದಲ್ಲಿ ಮೂರು ಕೃಷಿ ಕಾಯ್ದೆಗಳ ವಿರುದ್ಧ ಮತ್ತು ರಾಜ್ಯ ಸರ್ಕಾರದ ತಿದ್ದುಪಡಿಗಳ ವಿರುದ್ಧ ಹೋರಾಟ ನಡೆದಿದೆ. ಹಾಗಾಗಿ ಕರ್ನಾಟಕದ ಕಲಬುರ್ಗಿ, ಬಳ್ಳಾರಿಯಿಂದ ನಮ್ಮ ಎಂಎಸ್‌ಪಿ ದಿಲಾವೋ ಆಂದೋಲನ ಆರಂಭಿಸಿದ್ದೇವೆ ಎಂದರು.

72% ಕರ್ನಾಟಕದ ಬೆಲೆಗಳು ಕರ್ನಾಟಕದಲ್ಲಿ ಎಂಎಸ್‌ಪಿಗಿಂತ ಕಡಿಮೆ ಬೆಲೆಗೆ ಮಾರಾಟವಾಗುತ್ತಿದೆ. ಇದು ರೈತರ ಬಗೆಗಿನ ಕ್ರೂರ ಜೋಕ್ ಆಗಿದೆ. ಇದರಿಂದ ಕರ್ನಾಟಕ ಎಲ್ಲಾ ರೈತರಿಗೆ ಪ್ರತಿವರ್ಷ 3190 ಕೋಟಿ ರೂಗಳು ನಷ್ಟವಾಗುತ್ತಿದೆ. ಸ್ವಾಮಿನಾಥನ್‌ರವರ ಎಂಎಸ್‌ಪಿ ಲೆಕ್ಕಾಚಾರಲ್ಲಿ ಪ್ರತಿ ವರ್ಷ 2339 ಕೋಟಿ ರೂಗಳನ್ನು ರೈತರಿಂದ ಕಿತ್ತುಕೊಳ್ಳಲಾಗುತ್ತಿದೆ. ಕಿಸಾನ್ ಸಮ್ಮಾನ್ ಮೂಲಕ ಹಣ ಕೊಡುತ್ತಿದ್ದೇವೆ ಎಂದು ಸರ್ಕಾರ ಹೇಳುತ್ತಿದೆ. ಆದರೆ ಇನ್ನೊಂದು ಕೈಯಲ್ಲಿ ಇಷ್ಟು ಹಣವನ್ನು ಕಿತ್ತುಕೊಳ್ಳುತ್ತಿದೆ ಎಂದು ಯೋಗೇಂದ್ರ ಯಾದವ್ ಕಿಡಿಕಾರಿದರು.

ಅಷ್ಟೊಂದು ಎಂಎಸ್‌ಪಿ ಕೊಡಲಾಗುತ್ತದೆಯೇ ಎಂದು ಹಲವರು ಕೇಳುತ್ತಾರೆ. ಖಂಡಿತವಾಗಿಯೂ ಕೊಡಲು ಸಾಧ್ಯ. ಅದಕ್ಕೆ ರಾಜಕೀಯ ಇಚ್ಛಾಶಕ್ತಿ ಇರಬೇಕು ಅಷ್ಟೇ. ಅದಕ್ಕಾಗಿ ಕರ್ನಾಟಕದಲ್ಲಿ 10,000 ಕೋಟಿ ರೂಗಳು ಸಾಕು. ಎಲ್ಲರಿಗೂ ಎಂಎಸ್‌ಪಿ ನೀಡಬಹುದು ಎಂದರು.

ಹೋರಾಟಗಾರರಾದ ಡಾ.ವಾಸು ಎಚ್‌.ವಿ ಮಾತನಾಡಿ “ಕೇವಲ ಒಂದು ವರ್ಷದಲ್ಲಿ ಕರ್ನಾಟಕದಲ್ಲಿ 13 ಬೆಳೆಗಳಿಗೆ ಸಂಬಂಧಿಸಿದಂತೆ 20,000 ಕೋಟಿ ರೂ ನಷ್ಟವಾಗಿದೆ. ಇದರರ್ಥ ಕಳೆದ 20 ವರ್ಷದಲ್ಲಿ ಕರ್ನಾಟಕದ ರೈತರಿಗಾಗಿರುವ ನಷ್ಟ 4 ಲಕ್ಷ ಕೋಟಿ ರೂ. 2016 ರಲ್ಲಿ ಕರ್ನಾಟಕ ಸರ್ಕಾರ ಕೇಂದ್ರಕ್ಕೆ ವಿಶೇ‍ಷ ವರದಿ ಸಲ್ಲಿಸಿದೆ. ಅದರ ಪ್ರಕಾರ 2001 ರಿಂದ ಇಲ್ಲಿಯವರೆಗೆ ಬರ ಮತ್ತು ನೆರೆಯ ಕಾರಣಕ್ಕೆ ಆದ ನಷ್ಟ 4 ಲಕ್ಷ ಕೋಟಿ ರೂಗಳಾಗಿದೆ. ಅಂದರೆ ಬೆಳೆ ನಷ್ಟವೂ 4 ಲಕ್ಷ ಕೋಟಿ ರೂ ಮತ್ತು ಬರನಷ್ಟವು 4 ಲಕ್ಷ ಕೋಟಿ ರೂ ಆಗಿದೆ. ಇದನ್ನು ಕರ್ನಾಟಕದ ಗ್ರಾಮೀಣ ಭಾಗ 8 ಲಕ್ಷ ಕೋಟಿ ಸಬ್ಸಿಡಿ ಹಣವನ್ನು ಕೊಟ್ಟಿದೆ ಎಂದು ನಾವು ಅರ್ಥಮಾಡಿಕೊಳ್ಳಬೇಕು. ರೈತರಿಗೆ ಸಬ್ಸಿಡಿ ಎಂದು ಹೇಳಲಾಗುತ್ತಿರುವುದು ಸುಳ್ಳು. ಬದಲಿಗೆ ರೈತರೇ ಸರ್ಕಾರಕ್ಕೆ ಸಬ್ಸಿಡಿ ನೀಡುತ್ತಿದ್ದಾರೆ. ಅದಕ್ಕಾಗಿಯೇ ಈ ಹಿಂದೆ ಪ್ರೊ.ನಂಜುಂಡಸ್ವಾಮಿಯವರು ‘ರೈತ ಸಾಲಗಾರನಲ್ಲ, ಸರ್ಕಾರವೇ ಬಾಕಿದಾರ’ ಎಂಬ ಘೋಷಣೆ ನೀಡಿದ್ದರು” ಎಂದು ತಿಳಿಸಿದರು.

ಪತ್ರಿಕಾಗೋಷ್ಟಿಯ ವಿಡಿಯೋ ನೋಡಿ

ಪತ್ರಿಕಾಗೋಷ್ಠಿಯಲ್ಲಿ ಪಂಜಾಬಿನ ಹೋರಾಟಗಾರ ಸತ್ನಾಮ್ ಸಿಂಗ್, ಹರಿಯಾಣದ ದೀಪಕ್ ಲಂಬ, ಕೃಷಿ ಬೆಲೆ ಆಯೋಗದ ಮಾಜಿ ಅಧ್ಯಕ್ಷರಾದ ಡಾ.ಪ್ರಕಾಶ್ ಕಮ್ಮರಡಿ, ಕರ್ನಾಟಕ ರಾಜ್ಯ ರೈತ ಸಂಘದ ಬಡಗಲಪುರ ನಾಗೇಂದ್ರ, ಕೋಡಿಹಳ್ಳಿ ಚಂದ್ರಶೇಖರ್, ಚಾಮರಸಮಾಲೀ ಪಾಟೀಲ್, ಸಾಮಾಜಿಕ ಹೋರಾಟಗಾರ ಎಸ್.ಆರ್ ಹಿರೇಮಠ್, ದೊಡ್ಡಿಪಾಳ್ಯ ನರಸಿಂಹಮೂರ್ತಿ, ಕರ್ನಾಟಕ ಪ್ರಾಂತ ರೈತ ಸಂಘದ ಯಶವಂತ್, ಆರ್‌ಕೆಎಸ್‌ ಸಂಘಟನೆಯ ಶಿವಪ್ರಕಾಶ್ ಹಾಜರಿದ್ದರು.


ಇದನ್ನೂ ಓದಿ; ಪ್ರಧಾನಿಗಳೇ ಎಂಎಸ್‌ಪಿ ಎಲ್ಲಿದೆ ತೋರಿಸಿ?: ಇಂದಿನಿಂದ ರಾಜ್ಯದಲ್ಲಿ ಆಂದೋಲನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...