Homeಮುಖಪುಟಎಂಎಸ್‌ಪಿ ಕಾಗದದಲ್ಲಿತ್ತು, ಕಾಗದದಲ್ಲಿ ಇದೆ ಮತ್ತು ಮುಂದೆಯೂ ಕಾಗದದಲ್ಲಿಯೇ ಇರಲಿದೆ ಹೊರತು ರೈತರಿಗೆ ಸಿಗುತ್ತಿಲ್ಲ: ಯೋಗೇಂದ್ರ...

ಎಂಎಸ್‌ಪಿ ಕಾಗದದಲ್ಲಿತ್ತು, ಕಾಗದದಲ್ಲಿ ಇದೆ ಮತ್ತು ಮುಂದೆಯೂ ಕಾಗದದಲ್ಲಿಯೇ ಇರಲಿದೆ ಹೊರತು ರೈತರಿಗೆ ಸಿಗುತ್ತಿಲ್ಲ: ಯೋಗೇಂದ್ರ ಯಾದವ್

- Advertisement -
- Advertisement -

ನಿನ್ನೆ ಬಳ್ಳಾರಿಯ ಎಪಿಎಂಸಿಗೆ ಭೇಟಿ ನೀಡಿದ್ದೇವು. ಮೆಕ್ಕೆ ಜೋಳಕ್ಕೆ ಒಂದು ಕ್ವಿಂಟಾಲ್‌ಗೆ ಎಂಎಸ್‌ಪಿ 1850 ರೂ ಇದೆ. ಆದರೆ ಬಳ್ಳಾರಿಯಲ್ಲಿ ಕೇವಲ 1459 ರೂ ನೀಡಲಾಗುತ್ತಿದೆ. ಅಂದರೆ ಪ್ರತಿ ಕ್ವಿಂಟಾಲ್‌ಗೆ ರೈತರಿಂದ 400 ರೂ ಲೂಟಿ ಹೊಡೆಯಲಾಗುತ್ತಿದೆ. ಜೋಳಕ್ಕೆ ಕ್ವಿಂಟಲ್‌ಗೆ 2600 ರೂ ಇದೆ. ಆದರೆ ಬಳ್ಳಾರಿಯಲ್ಲಿ 1728 ರೂ ನೀಡಲಾಗುತ್ತಿದೆ. ಕ್ವಿಂಟಾಲ್‌ಗೆ 900 ರೂ ಕಡಿಮೆ ನೀಡಲಾಗುತ್ತಿದೆ. ಇದು ನಾವು ಕೇವಲ ಕನಿಷ್ಟ ಬೆಂಬಲ ಬೆಲೆಯ ಬಗ್ಗೆ ಮಾತನಾಡುತ್ತಿದ್ದೇವೆ ಹೊರತು ಗರಿಷ್ಟ ಬೆಂಬಲ ಬೆಲೆಯ ಬಗ್ಗೆ ಅಲ್ಲ ಎಂದು ಸ್ವರಾಜ್ ಇಂಡಿಯಾ ಪಕ್ಷದ ಅಧ್ಯಕ್ಷರಾದ ಯೋಗೇಂದ್ರ ಯಾದವ್ ಅಸಮಾಧಾನ ವ್ಯಕ್ತಪಡಿಸಿದರು.

ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ದೆಹಲಿಯಲ್ಲಿ ರೈತ ಹೋರಾಟವನ್ನು ಮುನ್ನಡೆಸುತ್ತಿರುವ ಸಂಯುಕ್ತ ಕಿಸಾನ್ ಮೋರ್ಚಾದ 7 ಜನರ ಸಮನ್ವಯ ಸಮಿತಿಯ ಭಾಗವಾದ ನಾನು ಇಂದು ಇಂದು ಕರ್ನಾಟಕಕ್ಕೆ ಬಂದಿದ್ದೇನೆ. ಐತಿಹಾಸಿಕ ರೈತ ಹೋರಾಟವು ಸೆಂಚುರಿ ದಿನಗಳನ್ನು ಪೂರೈಸಿದೆ. ಇದರಿಂದ ನಮಗೆ ಸಂತೋಷವಾಗಿಲ್ಲ. ಏಕೆಂದರೆ ನಾವು ನೂರು ದಿನಗಳನ್ನು ಪೂರೈಸಲು ಹೋರಾಟ ನಡೆಸುತ್ತಿಲ್ಲ. ಬದಲಿಗೆ ನಮ್ಮ ಹಕ್ಕುಗಳನ್ನು ಪಡೆಯಲು ಹೋರಾಡುತ್ತಿದ್ದೇವೆ” ಎಂದರು.

ಕಡಲೆಗೆ ಕ್ವಿಂಟಾಲ್‌ಗೆ ಎಂಎಸ್‌ಪಿ 5100ರೂ ಇದೆ. ಆದರೆ ಕೇವಲ 4182 ರೂ ನೀಡುತ್ತಿದ್ದಾರೆ. ತೊಗರಿ ಬೆಳೆಗೆ ಕ್ವಿಂಟಾಲ್‌ಗೆ ಎಂಎಸ್‌ಪಿ 6000 ರೂ ಇದೆ. ಆದರೆ ಕೇವಲ 4943 ರೂ ನೀಡಲಾಗುತ್ತಿದೆ. ಇದು ಕೇವಲ ಒಂದು ಮಾರ್ಕೆಟ್‌ನ ಒಂದು ದಿನದ ಸ್ಯಾಂಪಲ್ ಅಷ್ಟೇ ನಾವು ಹೇಳುತ್ತಿರುವುದು. ಪ್ರಧಾನಿ ಮಂತ್ರಿ ಎಂಎಸ್‌ಪಿ ಇತ್ತು, ಇದೆ, ಇರಲಿದೆ ಎನ್ನುತ್ತಾರೆ. ನಾವು ಹೇಳುತ್ತೇವೆ ಎಂಎಸ್‌ಪಿ ಕಾಗದದಲ್ಲಿ ಇತ್ತು, ಕಾಗದಲ್ಲಿ ಇದೆ ಮತ್ತು ಕಾಗದದಲ್ಲಿಯೇ ಇರಲಿದೆ ಹೊರತು ರೈತರಿಗೆ ಸಿಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ನೂರು ದಿನಗಳಲ್ಲಿ ಕೇಂದ್ರ ಸರ್ಕಾರವು ರೈತರೊಂದಿಗೆ ಕಠಿಣವಾಗಿ ವರ್ತಿಸಿದೆ. ರೈತರ ಮೇಲೆ ದಬ್ಬಾಳಿಕೆ ನಡೆಸಿದೆ. ರೈತರ ವಿರುದ್ಧ ಪ್ರೊಪಗಂಡಾ ಯುದ್ದ ನಡೆಸಿದೆ. ಇದು ಸರ್ಕಾರದ ಉದ್ದಟತವನ್ನು ತೋರಿಸುತ್ತದೆ. ಕೇಂದ್ರ ಸರ್ಕಾರ ರೈತರ ವಿರುದ್ಧ ಸುಳ್ಳು ಹೇಳಿದ ನೂರು ದಿನಗಳಾಗಿವೆ. ಇದು ಸರ್ಕಾರದ ಅಹಂಕಾರದ ಮತ್ತು ರೈತರ ಸಂಕಲ್ಪದ ನೂರು ದಿನಗಳಾಗಿವೆ ಎಂದರು.

ಈ ಐತಿಹಾಸಿಕ ಹೋರಾಟವನ್ನು ಆರಂಭದಲ್ಲಿ ಇದು ಕೇವಲ ಪಂಜಾಬ್ ರೈತರ ಹೋರಾಟ ಎಂದರು. ನಂತರ ಇದು ಕೇವಲ ಪಂಜಾಬ್ ಮತ್ತು ಹರಿಯಾಣ ರೈತರ ಹೋರಾಟ ಎಂದರು. ಆನಂತರ ಇದು ಪಂಜಾಬ್, ಹರಿಯಾಣ, ರಾಜಸ್ಥಾನ, ಉತ್ತರಖಂಡ ಮತ್ತು ಉತ್ತರ ಪ್ರದೇಶದ ರೈತರ ಹೋರಾಟ ಎಂದರು. ಶೀಘ್ರದಲ್ಲಿಯೇ ಅವರು ಇದು ಕೇವಲ ಭಾರತದ ರೈತರ ಹೋರಾಟ ಎನ್ನುವ ಕಾಲ ಬರಲಿದೆ. ಈ ರೈತ ಹೋರಾಟ ಇಡೀ ದೇಶಕ್ಕೆ ಹರಡುತ್ತಿದೆ ಎಂದು ಯೋಗೇಂದ್ರ ಯಾದವ್ ತಿಳಿಸಿದರು.

ಸರ್ಕಾರ ಈ ಹೋರಾಟವನ್ನು ಕೊಲ್ಲಲು, ದಮನಿಸಲು ಯತ್ನಿಸುತ್ತಿದೆ. ಆದರೆ ಹೋರಾಟ ಮಾತ್ರ ದೊಡ್ಡದಾಗುತ್ತ ದೇಶಾದ್ಯಂತ ಹರಡುತ್ತಿದೆ. ಜನವರಿ 26ರ ನಂತರವಂತೂ ಈ ಹೋರಾಟವನ್ನು ಕೊನೆಗೊಳಿಸಲು ಸರ್ಕಾರ ಇನ್ನಿಲ್ಲದ ಯತ್ನ ಮಾಡಿತು. ದೆಹಲಿಯ ಗಡಿಗಳಲ್ಲಿ ರೈತರ ಸಂಖ್ಯೆ ಕರಗುತ್ತಿದೆ ಎಂದು ಮಾಧ್ಯಮಗಳು ತೋರಿಸುತ್ತಿವೆ. ಆದರೆ ಪಂಜಾಬ್‌ನ ಬರ್ನಾಲದಲ್ಲಿ, ಹರಿಯಾಣ ಖಂಡೇಲಾದಲ್ಲಿ, ರಾಜಸ್ಥಾನದ ಹಳ್ಳಿ ಹಳ್ಳಿಗಳಲ್ಲಿ ಬೃಹತ್ ಮಹಾಪಂಚಾಯತ್‌ಗಳು ನಡೆಯುತ್ತಿರುವುದನ್ನು ಅವು ಹೇಳುತ್ತಿಲ್ಲ. ಕರ್ನಾಟಕದಲ್ಲಿಯೂ ಮಹಾಪಂಚಾಯತ್ ನಡೆಸಲು ತಯಾರಿ ನಡೆದಿದೆ. ಕೇಂದ್ರ ಸಚಿವರೇ ಅವರ ಸ್ವಗ್ರಾಮಗಳಿಗೆ ಹೋಗಲು ಹೆದರುತ್ತಿದ್ದಾರೆ. ಹಳ್ಳಿ ಹಳ್ಳಿಗಳಲ್ಲಿ ಬಿಜೆಪಿಯನ್ನು ಬಹಿಷ್ಕರಿಸಲಾಗುತ್ತಿದೆ. ಮದುವೆ ಸಮಾರಂಭಗಳಿಗೆ ಅವರನ್ನು ಆಹ್ವಾನಿಸುತ್ತಿಲ್ಲ. ಒಟ್ಟಾರೆಯಾಗಿ ಈ ಹೋರಾಟ ದೇಶಾದ್ಯಂತ ಹಬ್ಬುತ್ತಿದೆ ಎಂದರು.

ಪ್ರಧಾನ ಮಂತ್ರಿಗಳು ಎಂಎಸ್‌ಪಿ ಇತ್ತು, ಈಗಲೂ ಇದೆ ಮತ್ತು ಮುಂದೆಯು ಇರಲಿದೆ ಎಂದು ಹೇಳಿದ್ದಾರೆ. ಅದು ಎಲ್ಲಿದೆ ತೋರಿಸಿ, ಅದರ ವಿಳಾಸ ಕೊಡಿ ಎಂದು ನಾವು ಕೇಳುತ್ತಿದ್ದೇವೆ. ಹಾಗಾಗಿ ರೈತರಿಗೆ ಎಂಎಸ್‌ಪಿ ಕೊಡಿಸಿ ಎಂಬ ರಾಷ್ಟ್ರೀಯ ಆಂದೋಲನವನ್ನು ಕರ್ನಾಟಕದಿಂದ ಆರಂಭಿಸುತ್ತಿದ್ದೇವೆ ಎಂದು ಯೋಗೇಂದ್ರ ಯಾದವ್ ಹೇಳಿದರು.

ಕರ್ನಾಟಕ ರೈತ ಹೋರಾಟದ ಹೆಮ್ಮೆಯ ಸಂಕೇತವಾಗಿದೆ. ಇಲ್ಲಿ ಕಾಗೋಡು ಸತ್ಯಾಗ್ರಹ ನಡೆದಿದೆ. ಶಾಂತವೇರಿ ಗೋಪಾಲಗೌಡರು, ಪ್ರೊ ನಂಜುಂಡಸ್ವಾಮಿಯವರು ಬೃಹತ್ ರೈತ ಚಳವಳಿ ಕಟ್ಟಿದ್ದಾರೆ. 2020ರ ಸೆಪ್ಟಂಬರ್ 21 ರಂದೇ ಕರ್ನಾಟಕದಲ್ಲಿ ಮೂರು ಕೃಷಿ ಕಾಯ್ದೆಗಳ ವಿರುದ್ಧ ಮತ್ತು ರಾಜ್ಯ ಸರ್ಕಾರದ ತಿದ್ದುಪಡಿಗಳ ವಿರುದ್ಧ ಹೋರಾಟ ನಡೆದಿದೆ. ಹಾಗಾಗಿ ಕರ್ನಾಟಕದ ಕಲಬುರ್ಗಿ, ಬಳ್ಳಾರಿಯಿಂದ ನಮ್ಮ ಎಂಎಸ್‌ಪಿ ದಿಲಾವೋ ಆಂದೋಲನ ಆರಂಭಿಸಿದ್ದೇವೆ ಎಂದರು.

72% ಕರ್ನಾಟಕದ ಬೆಲೆಗಳು ಕರ್ನಾಟಕದಲ್ಲಿ ಎಂಎಸ್‌ಪಿಗಿಂತ ಕಡಿಮೆ ಬೆಲೆಗೆ ಮಾರಾಟವಾಗುತ್ತಿದೆ. ಇದು ರೈತರ ಬಗೆಗಿನ ಕ್ರೂರ ಜೋಕ್ ಆಗಿದೆ. ಇದರಿಂದ ಕರ್ನಾಟಕ ಎಲ್ಲಾ ರೈತರಿಗೆ ಪ್ರತಿವರ್ಷ 3190 ಕೋಟಿ ರೂಗಳು ನಷ್ಟವಾಗುತ್ತಿದೆ. ಸ್ವಾಮಿನಾಥನ್‌ರವರ ಎಂಎಸ್‌ಪಿ ಲೆಕ್ಕಾಚಾರಲ್ಲಿ ಪ್ರತಿ ವರ್ಷ 2339 ಕೋಟಿ ರೂಗಳನ್ನು ರೈತರಿಂದ ಕಿತ್ತುಕೊಳ್ಳಲಾಗುತ್ತಿದೆ. ಕಿಸಾನ್ ಸಮ್ಮಾನ್ ಮೂಲಕ ಹಣ ಕೊಡುತ್ತಿದ್ದೇವೆ ಎಂದು ಸರ್ಕಾರ ಹೇಳುತ್ತಿದೆ. ಆದರೆ ಇನ್ನೊಂದು ಕೈಯಲ್ಲಿ ಇಷ್ಟು ಹಣವನ್ನು ಕಿತ್ತುಕೊಳ್ಳುತ್ತಿದೆ ಎಂದು ಯೋಗೇಂದ್ರ ಯಾದವ್ ಕಿಡಿಕಾರಿದರು.

ಅಷ್ಟೊಂದು ಎಂಎಸ್‌ಪಿ ಕೊಡಲಾಗುತ್ತದೆಯೇ ಎಂದು ಹಲವರು ಕೇಳುತ್ತಾರೆ. ಖಂಡಿತವಾಗಿಯೂ ಕೊಡಲು ಸಾಧ್ಯ. ಅದಕ್ಕೆ ರಾಜಕೀಯ ಇಚ್ಛಾಶಕ್ತಿ ಇರಬೇಕು ಅಷ್ಟೇ. ಅದಕ್ಕಾಗಿ ಕರ್ನಾಟಕದಲ್ಲಿ 10,000 ಕೋಟಿ ರೂಗಳು ಸಾಕು. ಎಲ್ಲರಿಗೂ ಎಂಎಸ್‌ಪಿ ನೀಡಬಹುದು ಎಂದರು.

ಹೋರಾಟಗಾರರಾದ ಡಾ.ವಾಸು ಎಚ್‌.ವಿ ಮಾತನಾಡಿ “ಕೇವಲ ಒಂದು ವರ್ಷದಲ್ಲಿ ಕರ್ನಾಟಕದಲ್ಲಿ 13 ಬೆಳೆಗಳಿಗೆ ಸಂಬಂಧಿಸಿದಂತೆ 20,000 ಕೋಟಿ ರೂ ನಷ್ಟವಾಗಿದೆ. ಇದರರ್ಥ ಕಳೆದ 20 ವರ್ಷದಲ್ಲಿ ಕರ್ನಾಟಕದ ರೈತರಿಗಾಗಿರುವ ನಷ್ಟ 4 ಲಕ್ಷ ಕೋಟಿ ರೂ. 2016 ರಲ್ಲಿ ಕರ್ನಾಟಕ ಸರ್ಕಾರ ಕೇಂದ್ರಕ್ಕೆ ವಿಶೇ‍ಷ ವರದಿ ಸಲ್ಲಿಸಿದೆ. ಅದರ ಪ್ರಕಾರ 2001 ರಿಂದ ಇಲ್ಲಿಯವರೆಗೆ ಬರ ಮತ್ತು ನೆರೆಯ ಕಾರಣಕ್ಕೆ ಆದ ನಷ್ಟ 4 ಲಕ್ಷ ಕೋಟಿ ರೂಗಳಾಗಿದೆ. ಅಂದರೆ ಬೆಳೆ ನಷ್ಟವೂ 4 ಲಕ್ಷ ಕೋಟಿ ರೂ ಮತ್ತು ಬರನಷ್ಟವು 4 ಲಕ್ಷ ಕೋಟಿ ರೂ ಆಗಿದೆ. ಇದನ್ನು ಕರ್ನಾಟಕದ ಗ್ರಾಮೀಣ ಭಾಗ 8 ಲಕ್ಷ ಕೋಟಿ ಸಬ್ಸಿಡಿ ಹಣವನ್ನು ಕೊಟ್ಟಿದೆ ಎಂದು ನಾವು ಅರ್ಥಮಾಡಿಕೊಳ್ಳಬೇಕು. ರೈತರಿಗೆ ಸಬ್ಸಿಡಿ ಎಂದು ಹೇಳಲಾಗುತ್ತಿರುವುದು ಸುಳ್ಳು. ಬದಲಿಗೆ ರೈತರೇ ಸರ್ಕಾರಕ್ಕೆ ಸಬ್ಸಿಡಿ ನೀಡುತ್ತಿದ್ದಾರೆ. ಅದಕ್ಕಾಗಿಯೇ ಈ ಹಿಂದೆ ಪ್ರೊ.ನಂಜುಂಡಸ್ವಾಮಿಯವರು ‘ರೈತ ಸಾಲಗಾರನಲ್ಲ, ಸರ್ಕಾರವೇ ಬಾಕಿದಾರ’ ಎಂಬ ಘೋಷಣೆ ನೀಡಿದ್ದರು” ಎಂದು ತಿಳಿಸಿದರು.

ಪತ್ರಿಕಾಗೋಷ್ಟಿಯ ವಿಡಿಯೋ ನೋಡಿ

ಪತ್ರಿಕಾಗೋಷ್ಠಿಯಲ್ಲಿ ಪಂಜಾಬಿನ ಹೋರಾಟಗಾರ ಸತ್ನಾಮ್ ಸಿಂಗ್, ಹರಿಯಾಣದ ದೀಪಕ್ ಲಂಬ, ಕೃಷಿ ಬೆಲೆ ಆಯೋಗದ ಮಾಜಿ ಅಧ್ಯಕ್ಷರಾದ ಡಾ.ಪ್ರಕಾಶ್ ಕಮ್ಮರಡಿ, ಕರ್ನಾಟಕ ರಾಜ್ಯ ರೈತ ಸಂಘದ ಬಡಗಲಪುರ ನಾಗೇಂದ್ರ, ಕೋಡಿಹಳ್ಳಿ ಚಂದ್ರಶೇಖರ್, ಚಾಮರಸಮಾಲೀ ಪಾಟೀಲ್, ಸಾಮಾಜಿಕ ಹೋರಾಟಗಾರ ಎಸ್.ಆರ್ ಹಿರೇಮಠ್, ದೊಡ್ಡಿಪಾಳ್ಯ ನರಸಿಂಹಮೂರ್ತಿ, ಕರ್ನಾಟಕ ಪ್ರಾಂತ ರೈತ ಸಂಘದ ಯಶವಂತ್, ಆರ್‌ಕೆಎಸ್‌ ಸಂಘಟನೆಯ ಶಿವಪ್ರಕಾಶ್ ಹಾಜರಿದ್ದರು.


ಇದನ್ನೂ ಓದಿ; ಪ್ರಧಾನಿಗಳೇ ಎಂಎಸ್‌ಪಿ ಎಲ್ಲಿದೆ ತೋರಿಸಿ?: ಇಂದಿನಿಂದ ರಾಜ್ಯದಲ್ಲಿ ಆಂದೋಲನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...