Homeಮುಖಪುಟಎಂಎಸ್‌ಪಿ ಕಾಗದದಲ್ಲಿತ್ತು, ಕಾಗದದಲ್ಲಿ ಇದೆ ಮತ್ತು ಮುಂದೆಯೂ ಕಾಗದದಲ್ಲಿಯೇ ಇರಲಿದೆ ಹೊರತು ರೈತರಿಗೆ ಸಿಗುತ್ತಿಲ್ಲ: ಯೋಗೇಂದ್ರ...

ಎಂಎಸ್‌ಪಿ ಕಾಗದದಲ್ಲಿತ್ತು, ಕಾಗದದಲ್ಲಿ ಇದೆ ಮತ್ತು ಮುಂದೆಯೂ ಕಾಗದದಲ್ಲಿಯೇ ಇರಲಿದೆ ಹೊರತು ರೈತರಿಗೆ ಸಿಗುತ್ತಿಲ್ಲ: ಯೋಗೇಂದ್ರ ಯಾದವ್

- Advertisement -
- Advertisement -

ನಿನ್ನೆ ಬಳ್ಳಾರಿಯ ಎಪಿಎಂಸಿಗೆ ಭೇಟಿ ನೀಡಿದ್ದೇವು. ಮೆಕ್ಕೆ ಜೋಳಕ್ಕೆ ಒಂದು ಕ್ವಿಂಟಾಲ್‌ಗೆ ಎಂಎಸ್‌ಪಿ 1850 ರೂ ಇದೆ. ಆದರೆ ಬಳ್ಳಾರಿಯಲ್ಲಿ ಕೇವಲ 1459 ರೂ ನೀಡಲಾಗುತ್ತಿದೆ. ಅಂದರೆ ಪ್ರತಿ ಕ್ವಿಂಟಾಲ್‌ಗೆ ರೈತರಿಂದ 400 ರೂ ಲೂಟಿ ಹೊಡೆಯಲಾಗುತ್ತಿದೆ. ಜೋಳಕ್ಕೆ ಕ್ವಿಂಟಲ್‌ಗೆ 2600 ರೂ ಇದೆ. ಆದರೆ ಬಳ್ಳಾರಿಯಲ್ಲಿ 1728 ರೂ ನೀಡಲಾಗುತ್ತಿದೆ. ಕ್ವಿಂಟಾಲ್‌ಗೆ 900 ರೂ ಕಡಿಮೆ ನೀಡಲಾಗುತ್ತಿದೆ. ಇದು ನಾವು ಕೇವಲ ಕನಿಷ್ಟ ಬೆಂಬಲ ಬೆಲೆಯ ಬಗ್ಗೆ ಮಾತನಾಡುತ್ತಿದ್ದೇವೆ ಹೊರತು ಗರಿಷ್ಟ ಬೆಂಬಲ ಬೆಲೆಯ ಬಗ್ಗೆ ಅಲ್ಲ ಎಂದು ಸ್ವರಾಜ್ ಇಂಡಿಯಾ ಪಕ್ಷದ ಅಧ್ಯಕ್ಷರಾದ ಯೋಗೇಂದ್ರ ಯಾದವ್ ಅಸಮಾಧಾನ ವ್ಯಕ್ತಪಡಿಸಿದರು.

ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ದೆಹಲಿಯಲ್ಲಿ ರೈತ ಹೋರಾಟವನ್ನು ಮುನ್ನಡೆಸುತ್ತಿರುವ ಸಂಯುಕ್ತ ಕಿಸಾನ್ ಮೋರ್ಚಾದ 7 ಜನರ ಸಮನ್ವಯ ಸಮಿತಿಯ ಭಾಗವಾದ ನಾನು ಇಂದು ಇಂದು ಕರ್ನಾಟಕಕ್ಕೆ ಬಂದಿದ್ದೇನೆ. ಐತಿಹಾಸಿಕ ರೈತ ಹೋರಾಟವು ಸೆಂಚುರಿ ದಿನಗಳನ್ನು ಪೂರೈಸಿದೆ. ಇದರಿಂದ ನಮಗೆ ಸಂತೋಷವಾಗಿಲ್ಲ. ಏಕೆಂದರೆ ನಾವು ನೂರು ದಿನಗಳನ್ನು ಪೂರೈಸಲು ಹೋರಾಟ ನಡೆಸುತ್ತಿಲ್ಲ. ಬದಲಿಗೆ ನಮ್ಮ ಹಕ್ಕುಗಳನ್ನು ಪಡೆಯಲು ಹೋರಾಡುತ್ತಿದ್ದೇವೆ” ಎಂದರು.

ಕಡಲೆಗೆ ಕ್ವಿಂಟಾಲ್‌ಗೆ ಎಂಎಸ್‌ಪಿ 5100ರೂ ಇದೆ. ಆದರೆ ಕೇವಲ 4182 ರೂ ನೀಡುತ್ತಿದ್ದಾರೆ. ತೊಗರಿ ಬೆಳೆಗೆ ಕ್ವಿಂಟಾಲ್‌ಗೆ ಎಂಎಸ್‌ಪಿ 6000 ರೂ ಇದೆ. ಆದರೆ ಕೇವಲ 4943 ರೂ ನೀಡಲಾಗುತ್ತಿದೆ. ಇದು ಕೇವಲ ಒಂದು ಮಾರ್ಕೆಟ್‌ನ ಒಂದು ದಿನದ ಸ್ಯಾಂಪಲ್ ಅಷ್ಟೇ ನಾವು ಹೇಳುತ್ತಿರುವುದು. ಪ್ರಧಾನಿ ಮಂತ್ರಿ ಎಂಎಸ್‌ಪಿ ಇತ್ತು, ಇದೆ, ಇರಲಿದೆ ಎನ್ನುತ್ತಾರೆ. ನಾವು ಹೇಳುತ್ತೇವೆ ಎಂಎಸ್‌ಪಿ ಕಾಗದದಲ್ಲಿ ಇತ್ತು, ಕಾಗದಲ್ಲಿ ಇದೆ ಮತ್ತು ಕಾಗದದಲ್ಲಿಯೇ ಇರಲಿದೆ ಹೊರತು ರೈತರಿಗೆ ಸಿಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ನೂರು ದಿನಗಳಲ್ಲಿ ಕೇಂದ್ರ ಸರ್ಕಾರವು ರೈತರೊಂದಿಗೆ ಕಠಿಣವಾಗಿ ವರ್ತಿಸಿದೆ. ರೈತರ ಮೇಲೆ ದಬ್ಬಾಳಿಕೆ ನಡೆಸಿದೆ. ರೈತರ ವಿರುದ್ಧ ಪ್ರೊಪಗಂಡಾ ಯುದ್ದ ನಡೆಸಿದೆ. ಇದು ಸರ್ಕಾರದ ಉದ್ದಟತವನ್ನು ತೋರಿಸುತ್ತದೆ. ಕೇಂದ್ರ ಸರ್ಕಾರ ರೈತರ ವಿರುದ್ಧ ಸುಳ್ಳು ಹೇಳಿದ ನೂರು ದಿನಗಳಾಗಿವೆ. ಇದು ಸರ್ಕಾರದ ಅಹಂಕಾರದ ಮತ್ತು ರೈತರ ಸಂಕಲ್ಪದ ನೂರು ದಿನಗಳಾಗಿವೆ ಎಂದರು.

ಈ ಐತಿಹಾಸಿಕ ಹೋರಾಟವನ್ನು ಆರಂಭದಲ್ಲಿ ಇದು ಕೇವಲ ಪಂಜಾಬ್ ರೈತರ ಹೋರಾಟ ಎಂದರು. ನಂತರ ಇದು ಕೇವಲ ಪಂಜಾಬ್ ಮತ್ತು ಹರಿಯಾಣ ರೈತರ ಹೋರಾಟ ಎಂದರು. ಆನಂತರ ಇದು ಪಂಜಾಬ್, ಹರಿಯಾಣ, ರಾಜಸ್ಥಾನ, ಉತ್ತರಖಂಡ ಮತ್ತು ಉತ್ತರ ಪ್ರದೇಶದ ರೈತರ ಹೋರಾಟ ಎಂದರು. ಶೀಘ್ರದಲ್ಲಿಯೇ ಅವರು ಇದು ಕೇವಲ ಭಾರತದ ರೈತರ ಹೋರಾಟ ಎನ್ನುವ ಕಾಲ ಬರಲಿದೆ. ಈ ರೈತ ಹೋರಾಟ ಇಡೀ ದೇಶಕ್ಕೆ ಹರಡುತ್ತಿದೆ ಎಂದು ಯೋಗೇಂದ್ರ ಯಾದವ್ ತಿಳಿಸಿದರು.

ಸರ್ಕಾರ ಈ ಹೋರಾಟವನ್ನು ಕೊಲ್ಲಲು, ದಮನಿಸಲು ಯತ್ನಿಸುತ್ತಿದೆ. ಆದರೆ ಹೋರಾಟ ಮಾತ್ರ ದೊಡ್ಡದಾಗುತ್ತ ದೇಶಾದ್ಯಂತ ಹರಡುತ್ತಿದೆ. ಜನವರಿ 26ರ ನಂತರವಂತೂ ಈ ಹೋರಾಟವನ್ನು ಕೊನೆಗೊಳಿಸಲು ಸರ್ಕಾರ ಇನ್ನಿಲ್ಲದ ಯತ್ನ ಮಾಡಿತು. ದೆಹಲಿಯ ಗಡಿಗಳಲ್ಲಿ ರೈತರ ಸಂಖ್ಯೆ ಕರಗುತ್ತಿದೆ ಎಂದು ಮಾಧ್ಯಮಗಳು ತೋರಿಸುತ್ತಿವೆ. ಆದರೆ ಪಂಜಾಬ್‌ನ ಬರ್ನಾಲದಲ್ಲಿ, ಹರಿಯಾಣ ಖಂಡೇಲಾದಲ್ಲಿ, ರಾಜಸ್ಥಾನದ ಹಳ್ಳಿ ಹಳ್ಳಿಗಳಲ್ಲಿ ಬೃಹತ್ ಮಹಾಪಂಚಾಯತ್‌ಗಳು ನಡೆಯುತ್ತಿರುವುದನ್ನು ಅವು ಹೇಳುತ್ತಿಲ್ಲ. ಕರ್ನಾಟಕದಲ್ಲಿಯೂ ಮಹಾಪಂಚಾಯತ್ ನಡೆಸಲು ತಯಾರಿ ನಡೆದಿದೆ. ಕೇಂದ್ರ ಸಚಿವರೇ ಅವರ ಸ್ವಗ್ರಾಮಗಳಿಗೆ ಹೋಗಲು ಹೆದರುತ್ತಿದ್ದಾರೆ. ಹಳ್ಳಿ ಹಳ್ಳಿಗಳಲ್ಲಿ ಬಿಜೆಪಿಯನ್ನು ಬಹಿಷ್ಕರಿಸಲಾಗುತ್ತಿದೆ. ಮದುವೆ ಸಮಾರಂಭಗಳಿಗೆ ಅವರನ್ನು ಆಹ್ವಾನಿಸುತ್ತಿಲ್ಲ. ಒಟ್ಟಾರೆಯಾಗಿ ಈ ಹೋರಾಟ ದೇಶಾದ್ಯಂತ ಹಬ್ಬುತ್ತಿದೆ ಎಂದರು.

ಪ್ರಧಾನ ಮಂತ್ರಿಗಳು ಎಂಎಸ್‌ಪಿ ಇತ್ತು, ಈಗಲೂ ಇದೆ ಮತ್ತು ಮುಂದೆಯು ಇರಲಿದೆ ಎಂದು ಹೇಳಿದ್ದಾರೆ. ಅದು ಎಲ್ಲಿದೆ ತೋರಿಸಿ, ಅದರ ವಿಳಾಸ ಕೊಡಿ ಎಂದು ನಾವು ಕೇಳುತ್ತಿದ್ದೇವೆ. ಹಾಗಾಗಿ ರೈತರಿಗೆ ಎಂಎಸ್‌ಪಿ ಕೊಡಿಸಿ ಎಂಬ ರಾಷ್ಟ್ರೀಯ ಆಂದೋಲನವನ್ನು ಕರ್ನಾಟಕದಿಂದ ಆರಂಭಿಸುತ್ತಿದ್ದೇವೆ ಎಂದು ಯೋಗೇಂದ್ರ ಯಾದವ್ ಹೇಳಿದರು.

ಕರ್ನಾಟಕ ರೈತ ಹೋರಾಟದ ಹೆಮ್ಮೆಯ ಸಂಕೇತವಾಗಿದೆ. ಇಲ್ಲಿ ಕಾಗೋಡು ಸತ್ಯಾಗ್ರಹ ನಡೆದಿದೆ. ಶಾಂತವೇರಿ ಗೋಪಾಲಗೌಡರು, ಪ್ರೊ ನಂಜುಂಡಸ್ವಾಮಿಯವರು ಬೃಹತ್ ರೈತ ಚಳವಳಿ ಕಟ್ಟಿದ್ದಾರೆ. 2020ರ ಸೆಪ್ಟಂಬರ್ 21 ರಂದೇ ಕರ್ನಾಟಕದಲ್ಲಿ ಮೂರು ಕೃಷಿ ಕಾಯ್ದೆಗಳ ವಿರುದ್ಧ ಮತ್ತು ರಾಜ್ಯ ಸರ್ಕಾರದ ತಿದ್ದುಪಡಿಗಳ ವಿರುದ್ಧ ಹೋರಾಟ ನಡೆದಿದೆ. ಹಾಗಾಗಿ ಕರ್ನಾಟಕದ ಕಲಬುರ್ಗಿ, ಬಳ್ಳಾರಿಯಿಂದ ನಮ್ಮ ಎಂಎಸ್‌ಪಿ ದಿಲಾವೋ ಆಂದೋಲನ ಆರಂಭಿಸಿದ್ದೇವೆ ಎಂದರು.

72% ಕರ್ನಾಟಕದ ಬೆಲೆಗಳು ಕರ್ನಾಟಕದಲ್ಲಿ ಎಂಎಸ್‌ಪಿಗಿಂತ ಕಡಿಮೆ ಬೆಲೆಗೆ ಮಾರಾಟವಾಗುತ್ತಿದೆ. ಇದು ರೈತರ ಬಗೆಗಿನ ಕ್ರೂರ ಜೋಕ್ ಆಗಿದೆ. ಇದರಿಂದ ಕರ್ನಾಟಕ ಎಲ್ಲಾ ರೈತರಿಗೆ ಪ್ರತಿವರ್ಷ 3190 ಕೋಟಿ ರೂಗಳು ನಷ್ಟವಾಗುತ್ತಿದೆ. ಸ್ವಾಮಿನಾಥನ್‌ರವರ ಎಂಎಸ್‌ಪಿ ಲೆಕ್ಕಾಚಾರಲ್ಲಿ ಪ್ರತಿ ವರ್ಷ 2339 ಕೋಟಿ ರೂಗಳನ್ನು ರೈತರಿಂದ ಕಿತ್ತುಕೊಳ್ಳಲಾಗುತ್ತಿದೆ. ಕಿಸಾನ್ ಸಮ್ಮಾನ್ ಮೂಲಕ ಹಣ ಕೊಡುತ್ತಿದ್ದೇವೆ ಎಂದು ಸರ್ಕಾರ ಹೇಳುತ್ತಿದೆ. ಆದರೆ ಇನ್ನೊಂದು ಕೈಯಲ್ಲಿ ಇಷ್ಟು ಹಣವನ್ನು ಕಿತ್ತುಕೊಳ್ಳುತ್ತಿದೆ ಎಂದು ಯೋಗೇಂದ್ರ ಯಾದವ್ ಕಿಡಿಕಾರಿದರು.

ಅಷ್ಟೊಂದು ಎಂಎಸ್‌ಪಿ ಕೊಡಲಾಗುತ್ತದೆಯೇ ಎಂದು ಹಲವರು ಕೇಳುತ್ತಾರೆ. ಖಂಡಿತವಾಗಿಯೂ ಕೊಡಲು ಸಾಧ್ಯ. ಅದಕ್ಕೆ ರಾಜಕೀಯ ಇಚ್ಛಾಶಕ್ತಿ ಇರಬೇಕು ಅಷ್ಟೇ. ಅದಕ್ಕಾಗಿ ಕರ್ನಾಟಕದಲ್ಲಿ 10,000 ಕೋಟಿ ರೂಗಳು ಸಾಕು. ಎಲ್ಲರಿಗೂ ಎಂಎಸ್‌ಪಿ ನೀಡಬಹುದು ಎಂದರು.

ಹೋರಾಟಗಾರರಾದ ಡಾ.ವಾಸು ಎಚ್‌.ವಿ ಮಾತನಾಡಿ “ಕೇವಲ ಒಂದು ವರ್ಷದಲ್ಲಿ ಕರ್ನಾಟಕದಲ್ಲಿ 13 ಬೆಳೆಗಳಿಗೆ ಸಂಬಂಧಿಸಿದಂತೆ 20,000 ಕೋಟಿ ರೂ ನಷ್ಟವಾಗಿದೆ. ಇದರರ್ಥ ಕಳೆದ 20 ವರ್ಷದಲ್ಲಿ ಕರ್ನಾಟಕದ ರೈತರಿಗಾಗಿರುವ ನಷ್ಟ 4 ಲಕ್ಷ ಕೋಟಿ ರೂ. 2016 ರಲ್ಲಿ ಕರ್ನಾಟಕ ಸರ್ಕಾರ ಕೇಂದ್ರಕ್ಕೆ ವಿಶೇ‍ಷ ವರದಿ ಸಲ್ಲಿಸಿದೆ. ಅದರ ಪ್ರಕಾರ 2001 ರಿಂದ ಇಲ್ಲಿಯವರೆಗೆ ಬರ ಮತ್ತು ನೆರೆಯ ಕಾರಣಕ್ಕೆ ಆದ ನಷ್ಟ 4 ಲಕ್ಷ ಕೋಟಿ ರೂಗಳಾಗಿದೆ. ಅಂದರೆ ಬೆಳೆ ನಷ್ಟವೂ 4 ಲಕ್ಷ ಕೋಟಿ ರೂ ಮತ್ತು ಬರನಷ್ಟವು 4 ಲಕ್ಷ ಕೋಟಿ ರೂ ಆಗಿದೆ. ಇದನ್ನು ಕರ್ನಾಟಕದ ಗ್ರಾಮೀಣ ಭಾಗ 8 ಲಕ್ಷ ಕೋಟಿ ಸಬ್ಸಿಡಿ ಹಣವನ್ನು ಕೊಟ್ಟಿದೆ ಎಂದು ನಾವು ಅರ್ಥಮಾಡಿಕೊಳ್ಳಬೇಕು. ರೈತರಿಗೆ ಸಬ್ಸಿಡಿ ಎಂದು ಹೇಳಲಾಗುತ್ತಿರುವುದು ಸುಳ್ಳು. ಬದಲಿಗೆ ರೈತರೇ ಸರ್ಕಾರಕ್ಕೆ ಸಬ್ಸಿಡಿ ನೀಡುತ್ತಿದ್ದಾರೆ. ಅದಕ್ಕಾಗಿಯೇ ಈ ಹಿಂದೆ ಪ್ರೊ.ನಂಜುಂಡಸ್ವಾಮಿಯವರು ‘ರೈತ ಸಾಲಗಾರನಲ್ಲ, ಸರ್ಕಾರವೇ ಬಾಕಿದಾರ’ ಎಂಬ ಘೋಷಣೆ ನೀಡಿದ್ದರು” ಎಂದು ತಿಳಿಸಿದರು.

ಪತ್ರಿಕಾಗೋಷ್ಟಿಯ ವಿಡಿಯೋ ನೋಡಿ

ಪತ್ರಿಕಾಗೋಷ್ಠಿಯಲ್ಲಿ ಪಂಜಾಬಿನ ಹೋರಾಟಗಾರ ಸತ್ನಾಮ್ ಸಿಂಗ್, ಹರಿಯಾಣದ ದೀಪಕ್ ಲಂಬ, ಕೃಷಿ ಬೆಲೆ ಆಯೋಗದ ಮಾಜಿ ಅಧ್ಯಕ್ಷರಾದ ಡಾ.ಪ್ರಕಾಶ್ ಕಮ್ಮರಡಿ, ಕರ್ನಾಟಕ ರಾಜ್ಯ ರೈತ ಸಂಘದ ಬಡಗಲಪುರ ನಾಗೇಂದ್ರ, ಕೋಡಿಹಳ್ಳಿ ಚಂದ್ರಶೇಖರ್, ಚಾಮರಸಮಾಲೀ ಪಾಟೀಲ್, ಸಾಮಾಜಿಕ ಹೋರಾಟಗಾರ ಎಸ್.ಆರ್ ಹಿರೇಮಠ್, ದೊಡ್ಡಿಪಾಳ್ಯ ನರಸಿಂಹಮೂರ್ತಿ, ಕರ್ನಾಟಕ ಪ್ರಾಂತ ರೈತ ಸಂಘದ ಯಶವಂತ್, ಆರ್‌ಕೆಎಸ್‌ ಸಂಘಟನೆಯ ಶಿವಪ್ರಕಾಶ್ ಹಾಜರಿದ್ದರು.


ಇದನ್ನೂ ಓದಿ; ಪ್ರಧಾನಿಗಳೇ ಎಂಎಸ್‌ಪಿ ಎಲ್ಲಿದೆ ತೋರಿಸಿ?: ಇಂದಿನಿಂದ ರಾಜ್ಯದಲ್ಲಿ ಆಂದೋಲನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...