Homeಮುಖಪುಟಜಾರಿ ನಿರ್ದೇಶನಾಲಯವನ್ನು ‘ಸೇಡಿನ ದೂರುದಾರ’ ಎಂದು ಕರೆದ ಮುಂಬೈ ಕೋರ್ಟ್‌!

ಜಾರಿ ನಿರ್ದೇಶನಾಲಯವನ್ನು ‘ಸೇಡಿನ ದೂರುದಾರ’ ಎಂದು ಕರೆದ ಮುಂಬೈ ಕೋರ್ಟ್‌!

- Advertisement -
- Advertisement -

ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ(ಇಡಿ)ದಿಂದ ಬಂಧಿಸಲ್ಪಟ್ಟ ಇಬ್ಬರ ವಿರುದ್ಧದ ಆರೋಪಗಳನ್ನು ಸೋಮವಾರ ಖುಲಾಸೆಗೊಳಿಸಿರುವ ಮುಂಬೈ ವಿಶೇಷ ನ್ಯಾಯಾಲಯವು, ಜಾರಿ ನಿರ್ದೇಶನಾಲಯವನ್ನು “ಸೇಡಿನ ದೂರುದಾರ” ಎಂದು ಕರೆದಿದೆ ಎಂದು ಲೈವ್ ಲಾ ವರದಿ ಮಾಡಿದೆ.

ಓಂಕಾರ್ ರಿಯಲ್ಟರ್ಸ್ ಗ್ರೂಪ್ ಪ್ರವರ್ತಕರಾದ ಬಾಬುಲಾಲ್ ವರ್ಮಾ ಮತ್ತು ಕಮಲ್ ಕಿಶೋರ್ ಗುಪ್ತಾ ವಿರುದ್ಧ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿಯಲ್ಲಿ ನಿಗದಿತ ಅಪರಾಧ ಇಲ್ಲದೆ ವಿಚಾರಣೆಯನ್ನು ಮುಂದುವರಿಸಲು ಸಾಧ್ಯವಿಲ್ಲ, ಹಾಗೆ ಮಾಡುವುದು ವ್ಯರ್ಥ ಕೆಲಸವಲ್ಲದೆ ಬೇರೇನೂ ಅಲ್ಲ ಎಂದು ಕೋರ್ಟ್ ಹೇಳಿದೆ. ನ್ಯಾಯಾಲಯವು ಈ ಹಿಂದೆ ಆಗಸ್ಟ್ 8 ರಂದು ಇದೇ ಆಧಾರದ ಮೇಲೆ ಅವರಿಗೆ ಜಾಮೀನು ನೀಡಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮೋಸದ ಆದಾಯದ ಆರೋಪಗಳ ತನಿಖೆಗೆ ಮಾತ್ರ ಕಾಯಿದೆಯಡಿಯಲ್ಲಿ ಜಾರಿ ನಿರ್ದೇಶನಾಲಯವು ದೂರು ದಾಖಲಿಸಬಹುದು. ಆದಾಗ್ಯೂ, ಈ ಆದಾಯವನ್ನು ವ್ಯಕ್ತಿಯು ಮಾಡಿದ ಪ್ರತ್ಯೇಕ ಕ್ರಿಮಿನಲ್ ಅಪರಾಧಕ್ಕೆ (ನಿಗದಿತ ಅಪರಾಧ) ಲಿಂಕ್ ಮಾಡಬೇಕು ಎಂದು ಹೇಳಿದೆ.

ಇದನ್ನೂ ಓದಿ: ಮಲ್ಲಿಕಾರ್ಜುನ ಖರ್ಗೆಗೆ ಇಡಿ ಸಮನ್ಸ್‌: ‘ಮೋದಿಶಾಹಿ’ ಅಧೋಗತಿಗೆ ತಲುಪುತ್ತಿದೆ ಎಂದ ಕಾಂಗ್ರೆಸ್‌

“ಇತ್ತೀಚಿನ ಕಾನೂನನ್ನು ಕಡೆಗಣಿಸಿ, ನ್ಯಾಯಾಂಗ ಬಂಧನವನ್ನು ಮುಂದುವರಿಸುವ ಮೂಲಕ ಆರೋಪಿಗಳನ್ನು ಅವಮಾನಿಸಲು ಇಡಿ [ಜಾರಿ ನಿರ್ದೇಶನಾಲಯ] ಯಂತಹ ‘ಸೇಡಿನ ದೂರುದಾರ’ರೊಂದಿಗೆ ಕೈಜೋಡಿಸಲು ಸಾಧ್ಯವಿಲ್ಲ ಎಂದು ಈ ನ್ಯಾಯಾಲಯವು ತೀವ್ರವಾಗಿ ಭಾವಿಸುತ್ತದೆ” ಎಂದು ವಿಶೇಷ ನ್ಯಾಯಾಧೀಶ ಎಂ.ಜಿ. ದೇಶಪಾಂಡೆ ಹೇಳಿದ್ದಾರೆ.

ಮುಂಬೈ ರಿಯಲ್ ಎಸ್ಟೇಟ್ ಗ್ರೂಪ್‌ಗೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ವರ್ಮಾ ಮತ್ತು ಗುಪ್ತಾ ಅವರನ್ನು ಜನವರಿ 2021 ರಲ್ಲಿ ಬಂಧಿಸಲಾಗಿತ್ತು. ಜಿಮ್ಖಾನಾ ಮತ್ತು ಅದರ ನಿರ್ದೇಶಕರನ್ನು ವಂಚಿಸಿದ ಆರೋಪದ ಮೇಲೆ 2020 ರಲ್ಲಿ ಔರಂಗಾಬಾದ್‌ನಲ್ಲಿ ದಾಖಲಾದ ಎಫ್‌ಐಆರ್‌‌ ಅನ್ನು ಆಧರಿಸಿ ಅವರ ವಿರುದ್ಧ ಜಾರಿ ನಿರ್ದೇಶನಾಲಯ ಕ್ರಮ ಕೈಗೊಂಡಿತ್ತು.

ಔರಂಗಾಬಾದ್ ಪೊಲೀಸರು ಪ್ರಕರಣದ ಮುಕ್ತಾಯ ವರದಿಯನ್ನು ಸಲ್ಲಿಸಿದ್ದು, ಇಬ್ಬರ ವಿರುದ್ಧ ಆರೋಪ ಹೊರಿಸಲು ಯಾವುದೇ ಸಾಕ್ಷ್ಯಾಧಾರಗಳಿಲ್ಲ ಎಂದು ತಿಳಿಸಿದ್ದಾರೆ. ಫೆಬ್ರವರಿ 2021 ರಲ್ಲಿ, ನಗರದ ಸ್ಥಳೀಯ ನ್ಯಾಯಾಲಯವು ವರದಿಯನ್ನು ಗಮನಕ್ಕೆ ತೆಗೆದುಕೊಂಡು ತನಿಖೆಯ ಮುಕ್ತಾಯವನ್ನು ಒಪ್ಪಿಕೊಂಡಿತ್ತು.

ಇದನ್ನೂ ಓದಿ: ಯಂಗ್ ಇಂಡಿಯನ್ ಕಚೇರಿಗೆ ಇಡಿ ಸೀಲ್: ‘ನೀವು ಏನು ಬೇಕಾದರೂ ಮಾಡಿ; ಮೋದಿಗೆ ಹೆದರುವುದಿಲ್ಲ’ ಎಂದ ರಾಹುಲ್ ಗಾಂಧಿ

ಆದಾಗ್ಯೂ, ವರ್ಮಾ ಮತ್ತು ಗುಪ್ತಾ ಅವರ ನ್ಯಾಯಾಂಗ ಬಂಧನವನ್ನು ಕಾಲಕಾಲಕ್ಕೆ ವಿಸ್ತರಿಸಲಾಗಿತ್ತಯ. ಕಳೆದ ತಿಂಗಳ ಆರಂಭದಲ್ಲಿ ಅವರು ನ್ಯಾಯಾಂಗ ಬಂಧನದ ವಿಸ್ತರಣೆಯನ್ನು ವಿರೋಧಿಸಿ ವಿಶೇಷ ನ್ಯಾಯಾಲಯಕ್ಕೆ ತೆರಳಿದ್ದರು. ಸೋಮವಾರದ ವಿಚಾರಣೆಯ ಸಂದರ್ಭದಲ್ಲಿ, ಜಾರಿ ನಿರ್ದೇಶನಾಲಯವು ‘ವಿಲಕ್ಷಣ ಮತ್ತು ವಿಚಿತ್ರವಾಗಿ’ ಕಸ್ಟಡಿ ವಿಸ್ತರಣೆಯನ್ನು ಕೋರಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...