Homeಮುಖಪುಟಜಾರಿ ನಿರ್ದೇಶನಾಲಯವನ್ನು ‘ಸೇಡಿನ ದೂರುದಾರ’ ಎಂದು ಕರೆದ ಮುಂಬೈ ಕೋರ್ಟ್‌!

ಜಾರಿ ನಿರ್ದೇಶನಾಲಯವನ್ನು ‘ಸೇಡಿನ ದೂರುದಾರ’ ಎಂದು ಕರೆದ ಮುಂಬೈ ಕೋರ್ಟ್‌!

- Advertisement -
- Advertisement -

ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ(ಇಡಿ)ದಿಂದ ಬಂಧಿಸಲ್ಪಟ್ಟ ಇಬ್ಬರ ವಿರುದ್ಧದ ಆರೋಪಗಳನ್ನು ಸೋಮವಾರ ಖುಲಾಸೆಗೊಳಿಸಿರುವ ಮುಂಬೈ ವಿಶೇಷ ನ್ಯಾಯಾಲಯವು, ಜಾರಿ ನಿರ್ದೇಶನಾಲಯವನ್ನು “ಸೇಡಿನ ದೂರುದಾರ” ಎಂದು ಕರೆದಿದೆ ಎಂದು ಲೈವ್ ಲಾ ವರದಿ ಮಾಡಿದೆ.

ಓಂಕಾರ್ ರಿಯಲ್ಟರ್ಸ್ ಗ್ರೂಪ್ ಪ್ರವರ್ತಕರಾದ ಬಾಬುಲಾಲ್ ವರ್ಮಾ ಮತ್ತು ಕಮಲ್ ಕಿಶೋರ್ ಗುಪ್ತಾ ವಿರುದ್ಧ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿಯಲ್ಲಿ ನಿಗದಿತ ಅಪರಾಧ ಇಲ್ಲದೆ ವಿಚಾರಣೆಯನ್ನು ಮುಂದುವರಿಸಲು ಸಾಧ್ಯವಿಲ್ಲ, ಹಾಗೆ ಮಾಡುವುದು ವ್ಯರ್ಥ ಕೆಲಸವಲ್ಲದೆ ಬೇರೇನೂ ಅಲ್ಲ ಎಂದು ಕೋರ್ಟ್ ಹೇಳಿದೆ. ನ್ಯಾಯಾಲಯವು ಈ ಹಿಂದೆ ಆಗಸ್ಟ್ 8 ರಂದು ಇದೇ ಆಧಾರದ ಮೇಲೆ ಅವರಿಗೆ ಜಾಮೀನು ನೀಡಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮೋಸದ ಆದಾಯದ ಆರೋಪಗಳ ತನಿಖೆಗೆ ಮಾತ್ರ ಕಾಯಿದೆಯಡಿಯಲ್ಲಿ ಜಾರಿ ನಿರ್ದೇಶನಾಲಯವು ದೂರು ದಾಖಲಿಸಬಹುದು. ಆದಾಗ್ಯೂ, ಈ ಆದಾಯವನ್ನು ವ್ಯಕ್ತಿಯು ಮಾಡಿದ ಪ್ರತ್ಯೇಕ ಕ್ರಿಮಿನಲ್ ಅಪರಾಧಕ್ಕೆ (ನಿಗದಿತ ಅಪರಾಧ) ಲಿಂಕ್ ಮಾಡಬೇಕು ಎಂದು ಹೇಳಿದೆ.

ಇದನ್ನೂ ಓದಿ: ಮಲ್ಲಿಕಾರ್ಜುನ ಖರ್ಗೆಗೆ ಇಡಿ ಸಮನ್ಸ್‌: ‘ಮೋದಿಶಾಹಿ’ ಅಧೋಗತಿಗೆ ತಲುಪುತ್ತಿದೆ ಎಂದ ಕಾಂಗ್ರೆಸ್‌

“ಇತ್ತೀಚಿನ ಕಾನೂನನ್ನು ಕಡೆಗಣಿಸಿ, ನ್ಯಾಯಾಂಗ ಬಂಧನವನ್ನು ಮುಂದುವರಿಸುವ ಮೂಲಕ ಆರೋಪಿಗಳನ್ನು ಅವಮಾನಿಸಲು ಇಡಿ [ಜಾರಿ ನಿರ್ದೇಶನಾಲಯ] ಯಂತಹ ‘ಸೇಡಿನ ದೂರುದಾರ’ರೊಂದಿಗೆ ಕೈಜೋಡಿಸಲು ಸಾಧ್ಯವಿಲ್ಲ ಎಂದು ಈ ನ್ಯಾಯಾಲಯವು ತೀವ್ರವಾಗಿ ಭಾವಿಸುತ್ತದೆ” ಎಂದು ವಿಶೇಷ ನ್ಯಾಯಾಧೀಶ ಎಂ.ಜಿ. ದೇಶಪಾಂಡೆ ಹೇಳಿದ್ದಾರೆ.

ಮುಂಬೈ ರಿಯಲ್ ಎಸ್ಟೇಟ್ ಗ್ರೂಪ್‌ಗೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ವರ್ಮಾ ಮತ್ತು ಗುಪ್ತಾ ಅವರನ್ನು ಜನವರಿ 2021 ರಲ್ಲಿ ಬಂಧಿಸಲಾಗಿತ್ತು. ಜಿಮ್ಖಾನಾ ಮತ್ತು ಅದರ ನಿರ್ದೇಶಕರನ್ನು ವಂಚಿಸಿದ ಆರೋಪದ ಮೇಲೆ 2020 ರಲ್ಲಿ ಔರಂಗಾಬಾದ್‌ನಲ್ಲಿ ದಾಖಲಾದ ಎಫ್‌ಐಆರ್‌‌ ಅನ್ನು ಆಧರಿಸಿ ಅವರ ವಿರುದ್ಧ ಜಾರಿ ನಿರ್ದೇಶನಾಲಯ ಕ್ರಮ ಕೈಗೊಂಡಿತ್ತು.

ಔರಂಗಾಬಾದ್ ಪೊಲೀಸರು ಪ್ರಕರಣದ ಮುಕ್ತಾಯ ವರದಿಯನ್ನು ಸಲ್ಲಿಸಿದ್ದು, ಇಬ್ಬರ ವಿರುದ್ಧ ಆರೋಪ ಹೊರಿಸಲು ಯಾವುದೇ ಸಾಕ್ಷ್ಯಾಧಾರಗಳಿಲ್ಲ ಎಂದು ತಿಳಿಸಿದ್ದಾರೆ. ಫೆಬ್ರವರಿ 2021 ರಲ್ಲಿ, ನಗರದ ಸ್ಥಳೀಯ ನ್ಯಾಯಾಲಯವು ವರದಿಯನ್ನು ಗಮನಕ್ಕೆ ತೆಗೆದುಕೊಂಡು ತನಿಖೆಯ ಮುಕ್ತಾಯವನ್ನು ಒಪ್ಪಿಕೊಂಡಿತ್ತು.

ಇದನ್ನೂ ಓದಿ: ಯಂಗ್ ಇಂಡಿಯನ್ ಕಚೇರಿಗೆ ಇಡಿ ಸೀಲ್: ‘ನೀವು ಏನು ಬೇಕಾದರೂ ಮಾಡಿ; ಮೋದಿಗೆ ಹೆದರುವುದಿಲ್ಲ’ ಎಂದ ರಾಹುಲ್ ಗಾಂಧಿ

ಆದಾಗ್ಯೂ, ವರ್ಮಾ ಮತ್ತು ಗುಪ್ತಾ ಅವರ ನ್ಯಾಯಾಂಗ ಬಂಧನವನ್ನು ಕಾಲಕಾಲಕ್ಕೆ ವಿಸ್ತರಿಸಲಾಗಿತ್ತಯ. ಕಳೆದ ತಿಂಗಳ ಆರಂಭದಲ್ಲಿ ಅವರು ನ್ಯಾಯಾಂಗ ಬಂಧನದ ವಿಸ್ತರಣೆಯನ್ನು ವಿರೋಧಿಸಿ ವಿಶೇಷ ನ್ಯಾಯಾಲಯಕ್ಕೆ ತೆರಳಿದ್ದರು. ಸೋಮವಾರದ ವಿಚಾರಣೆಯ ಸಂದರ್ಭದಲ್ಲಿ, ಜಾರಿ ನಿರ್ದೇಶನಾಲಯವು ‘ವಿಲಕ್ಷಣ ಮತ್ತು ವಿಚಿತ್ರವಾಗಿ’ ಕಸ್ಟಡಿ ವಿಸ್ತರಣೆಯನ್ನು ಕೋರಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....