Homeಮುಖಪುಟಜಾರಿ ನಿರ್ದೇಶನಾಲಯವನ್ನು ‘ಸೇಡಿನ ದೂರುದಾರ’ ಎಂದು ಕರೆದ ಮುಂಬೈ ಕೋರ್ಟ್‌!

ಜಾರಿ ನಿರ್ದೇಶನಾಲಯವನ್ನು ‘ಸೇಡಿನ ದೂರುದಾರ’ ಎಂದು ಕರೆದ ಮುಂಬೈ ಕೋರ್ಟ್‌!

- Advertisement -
- Advertisement -

ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ(ಇಡಿ)ದಿಂದ ಬಂಧಿಸಲ್ಪಟ್ಟ ಇಬ್ಬರ ವಿರುದ್ಧದ ಆರೋಪಗಳನ್ನು ಸೋಮವಾರ ಖುಲಾಸೆಗೊಳಿಸಿರುವ ಮುಂಬೈ ವಿಶೇಷ ನ್ಯಾಯಾಲಯವು, ಜಾರಿ ನಿರ್ದೇಶನಾಲಯವನ್ನು “ಸೇಡಿನ ದೂರುದಾರ” ಎಂದು ಕರೆದಿದೆ ಎಂದು ಲೈವ್ ಲಾ ವರದಿ ಮಾಡಿದೆ.

ಓಂಕಾರ್ ರಿಯಲ್ಟರ್ಸ್ ಗ್ರೂಪ್ ಪ್ರವರ್ತಕರಾದ ಬಾಬುಲಾಲ್ ವರ್ಮಾ ಮತ್ತು ಕಮಲ್ ಕಿಶೋರ್ ಗುಪ್ತಾ ವಿರುದ್ಧ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿಯಲ್ಲಿ ನಿಗದಿತ ಅಪರಾಧ ಇಲ್ಲದೆ ವಿಚಾರಣೆಯನ್ನು ಮುಂದುವರಿಸಲು ಸಾಧ್ಯವಿಲ್ಲ, ಹಾಗೆ ಮಾಡುವುದು ವ್ಯರ್ಥ ಕೆಲಸವಲ್ಲದೆ ಬೇರೇನೂ ಅಲ್ಲ ಎಂದು ಕೋರ್ಟ್ ಹೇಳಿದೆ. ನ್ಯಾಯಾಲಯವು ಈ ಹಿಂದೆ ಆಗಸ್ಟ್ 8 ರಂದು ಇದೇ ಆಧಾರದ ಮೇಲೆ ಅವರಿಗೆ ಜಾಮೀನು ನೀಡಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮೋಸದ ಆದಾಯದ ಆರೋಪಗಳ ತನಿಖೆಗೆ ಮಾತ್ರ ಕಾಯಿದೆಯಡಿಯಲ್ಲಿ ಜಾರಿ ನಿರ್ದೇಶನಾಲಯವು ದೂರು ದಾಖಲಿಸಬಹುದು. ಆದಾಗ್ಯೂ, ಈ ಆದಾಯವನ್ನು ವ್ಯಕ್ತಿಯು ಮಾಡಿದ ಪ್ರತ್ಯೇಕ ಕ್ರಿಮಿನಲ್ ಅಪರಾಧಕ್ಕೆ (ನಿಗದಿತ ಅಪರಾಧ) ಲಿಂಕ್ ಮಾಡಬೇಕು ಎಂದು ಹೇಳಿದೆ.

ಇದನ್ನೂ ಓದಿ: ಮಲ್ಲಿಕಾರ್ಜುನ ಖರ್ಗೆಗೆ ಇಡಿ ಸಮನ್ಸ್‌: ‘ಮೋದಿಶಾಹಿ’ ಅಧೋಗತಿಗೆ ತಲುಪುತ್ತಿದೆ ಎಂದ ಕಾಂಗ್ರೆಸ್‌

“ಇತ್ತೀಚಿನ ಕಾನೂನನ್ನು ಕಡೆಗಣಿಸಿ, ನ್ಯಾಯಾಂಗ ಬಂಧನವನ್ನು ಮುಂದುವರಿಸುವ ಮೂಲಕ ಆರೋಪಿಗಳನ್ನು ಅವಮಾನಿಸಲು ಇಡಿ [ಜಾರಿ ನಿರ್ದೇಶನಾಲಯ] ಯಂತಹ ‘ಸೇಡಿನ ದೂರುದಾರ’ರೊಂದಿಗೆ ಕೈಜೋಡಿಸಲು ಸಾಧ್ಯವಿಲ್ಲ ಎಂದು ಈ ನ್ಯಾಯಾಲಯವು ತೀವ್ರವಾಗಿ ಭಾವಿಸುತ್ತದೆ” ಎಂದು ವಿಶೇಷ ನ್ಯಾಯಾಧೀಶ ಎಂ.ಜಿ. ದೇಶಪಾಂಡೆ ಹೇಳಿದ್ದಾರೆ.

ಮುಂಬೈ ರಿಯಲ್ ಎಸ್ಟೇಟ್ ಗ್ರೂಪ್‌ಗೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ವರ್ಮಾ ಮತ್ತು ಗುಪ್ತಾ ಅವರನ್ನು ಜನವರಿ 2021 ರಲ್ಲಿ ಬಂಧಿಸಲಾಗಿತ್ತು. ಜಿಮ್ಖಾನಾ ಮತ್ತು ಅದರ ನಿರ್ದೇಶಕರನ್ನು ವಂಚಿಸಿದ ಆರೋಪದ ಮೇಲೆ 2020 ರಲ್ಲಿ ಔರಂಗಾಬಾದ್‌ನಲ್ಲಿ ದಾಖಲಾದ ಎಫ್‌ಐಆರ್‌‌ ಅನ್ನು ಆಧರಿಸಿ ಅವರ ವಿರುದ್ಧ ಜಾರಿ ನಿರ್ದೇಶನಾಲಯ ಕ್ರಮ ಕೈಗೊಂಡಿತ್ತು.

ಔರಂಗಾಬಾದ್ ಪೊಲೀಸರು ಪ್ರಕರಣದ ಮುಕ್ತಾಯ ವರದಿಯನ್ನು ಸಲ್ಲಿಸಿದ್ದು, ಇಬ್ಬರ ವಿರುದ್ಧ ಆರೋಪ ಹೊರಿಸಲು ಯಾವುದೇ ಸಾಕ್ಷ್ಯಾಧಾರಗಳಿಲ್ಲ ಎಂದು ತಿಳಿಸಿದ್ದಾರೆ. ಫೆಬ್ರವರಿ 2021 ರಲ್ಲಿ, ನಗರದ ಸ್ಥಳೀಯ ನ್ಯಾಯಾಲಯವು ವರದಿಯನ್ನು ಗಮನಕ್ಕೆ ತೆಗೆದುಕೊಂಡು ತನಿಖೆಯ ಮುಕ್ತಾಯವನ್ನು ಒಪ್ಪಿಕೊಂಡಿತ್ತು.

ಇದನ್ನೂ ಓದಿ: ಯಂಗ್ ಇಂಡಿಯನ್ ಕಚೇರಿಗೆ ಇಡಿ ಸೀಲ್: ‘ನೀವು ಏನು ಬೇಕಾದರೂ ಮಾಡಿ; ಮೋದಿಗೆ ಹೆದರುವುದಿಲ್ಲ’ ಎಂದ ರಾಹುಲ್ ಗಾಂಧಿ

ಆದಾಗ್ಯೂ, ವರ್ಮಾ ಮತ್ತು ಗುಪ್ತಾ ಅವರ ನ್ಯಾಯಾಂಗ ಬಂಧನವನ್ನು ಕಾಲಕಾಲಕ್ಕೆ ವಿಸ್ತರಿಸಲಾಗಿತ್ತಯ. ಕಳೆದ ತಿಂಗಳ ಆರಂಭದಲ್ಲಿ ಅವರು ನ್ಯಾಯಾಂಗ ಬಂಧನದ ವಿಸ್ತರಣೆಯನ್ನು ವಿರೋಧಿಸಿ ವಿಶೇಷ ನ್ಯಾಯಾಲಯಕ್ಕೆ ತೆರಳಿದ್ದರು. ಸೋಮವಾರದ ವಿಚಾರಣೆಯ ಸಂದರ್ಭದಲ್ಲಿ, ಜಾರಿ ನಿರ್ದೇಶನಾಲಯವು ‘ವಿಲಕ್ಷಣ ಮತ್ತು ವಿಚಿತ್ರವಾಗಿ’ ಕಸ್ಟಡಿ ವಿಸ್ತರಣೆಯನ್ನು ಕೋರಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...